Niruta Publications
  • Home
  • About Us
  • Publication With Us
  • Editor's Blog
  • Niruta's Read & Write Initiative
  • Our Services
    • Translation & Typing
    • Publications >
      • Our Books
    • Human Resource
    • PoSH
    • NGO & CSR
    • Certificate Training Courses
  • Leaders Talk
  • Inviting Articles
  • Blog
  • HR Blog
  • Online Store
  • Videos
  • Join Our Online Groups
  • Search
  • Contact Us
  • Home
  • About Us
  • Publication With Us
  • Editor's Blog
  • Niruta's Read & Write Initiative
  • Our Services
    • Translation & Typing
    • Publications >
      • Our Books
    • Human Resource
    • PoSH
    • NGO & CSR
    • Certificate Training Courses
  • Leaders Talk
  • Inviting Articles
  • Blog
  • HR Blog
  • Online Store
  • Videos
  • Join Our Online Groups
  • Search
  • Contact Us
Niruta Publications

Blog

ನಿಮ್ಮ ಮುಂಜಾನೆಗೊಂದು ಮಧುರ ಕಾಣಿಕೆ

1/18/2023

0 Comments

 
ಉಬೂಂಟು

ಮದವಿಲ್ಲದ ಮನಸ್ಸಷ್ಟೇ ಮಧುರ
ಮುದವಾದ ಮಾತುಗಳನ್ನು ಕೂಡಾ ಆಡಲಾಗುವುದು ಅಹಂಕಾರದ ಅತಿರೇಕವಿಲ್ಲದಿದ್ದರೆ ಮಾತ್ರವೇ


ಇದಕ್ಕೆ ರೂಢಿಸಿಕೊಳ್ಳಬೇಕಾಗಿರುವುದು ಧೋರಣೆ. ಅಂತಹ ಧೋರಣೆಯ, ಸಂಕಲಿತ ಆಶಯದ ಒಂದು ಜೀವಂತ ಉದಾಹರಣೆ ನಮ್ಮ ಮುಂದಿದೆ. 
​
ದಕ್ಷಿಣ ಆಫ್ರಿಕಾದ ಕೆಲವು ಭಾಗಗಳಲ್ಲಿ ಉಬೂಂಟು ಎಂಬ ಬುಡಕಟ್ಟಿನ ಜನರಿದ್ದು ಅವರದೊಂದು ಸಕಾರಾತ್ಮಕ ಪದ್ಧತಿಯೊಂದು ಚಾಲ್ತಿಯಲ್ಲಿದೆ. ಅದೇನೆಂದರೆ ಯಾವುದೇ ವ್ಯಕ್ತಿಯು ಏನೇ ತಪ್ಪು ಮಾಡಿದರೂ ಅವನನ್ನು ಹಳ್ಳಿಯ ಮಧ್ಯಭಾಗಕ್ಕೆ ಕರೆದುಕೊಂಡು ಬರುತ್ತಾರೆ. ನಂತರ ಊರಿನ ಜನರೆಲ್ಲಾ ಸುತ್ತುವರೆದು, ಎರಡು ದಿನಗಳ ಕಾಲ ಅವನು ಮಾಡಿರುವ ಒಳ್ಳೆಯ ಕೆಲಸಗಳನ್ನೆಲ್ಲಾ ಹೇಳುತ್ತಿರುತ್ತಾರೆ. ಅವರ ಪ್ರಕಾರ ಯಾವುದೇ ವ್ಯಕ್ತಿಯು ಮೂಲದಲ್ಲಿ ಒಳ್ಳೆಯವನೇ ಆಗಿರುತ್ತಾನೆ. ಆದರೆ ಯಾವುದೋ ಒಂದು ಗಳಿಗೆಯಲ್ಲಿ ತಪ್ಪು ಮಾಡಿಬಿಡುತ್ತಾನೆ. ಆ ತಪ್ಪು ಮಾಡುವುದೆಂದರೆ ಅವನು ತನ್ನ ಒಳ್ಳೆಯತನವನ್ನು ಮರುಕಳಿಸೆಂಬ ಅವನ ಅಂತರಾಳದ ಕೂಗು ಅಥವಾ ಆತ್ಮದ ಅಳಲಾಗಿರುತ್ತದೆ. ಆದ್ದರಿಂದ ಹಾಡಿಯವರೆಲ್ಲಾ ಒಗ್ಗಟ್ಟಾಗಿ ತನ್ನ ಒಳ್ಳೆಯತನಕ್ಕಾಗಿ ಹಾತೊರೆಯುತ್ತಾ ಸಹಾಯ ಬೇಡುತ್ತಿರುವವನಿಗೆ ಸಹಕರಿಸಲೆಂದು ಅವನ ಒಳ್ಳೆಯ ಕೆಲಸಗಳನ್ನು, ಗುಣಗಳನ್ನು ಹೇಳುವಂತಹ ಕೆಲಸವನ್ನು ಮಾಡುತ್ತಾರೆ. ಈ ಆಚರಣೆಯ ಮೂಲಕ ತಪ್ಪು ಮಾಡಿರುವವನು ನಿಸರ್ಗದಿಂದ ಪಡೆದಿರುವ ಒಳ್ಳೆಯತನವನ್ನು ಮರಳಿಪಡೆಯುತ್ತಾನೆಂದು ಅವರ ನಂಬಿಕೆ. 

Read More
0 Comments

‘ಮನಸ್ಸು ಮತ್ತು ಅದರ ನಿಗ್ರಹ’ - ಸ್ವಾಮಿ ಬುಧಾನಂದ

4/28/2022

0 Comments

 
1. ಮನೋನಿಗ್ರಹವಿಲ್ಲದೆ ಯಾವ ಕೆಲಸವನ್ನು ಮಾಡಲಾಗುವುದಿಲ್ಲ. ವ್ಯಕ್ತಿಯ ಉದ್ಧಾರ, ಸಮಾಜದ ಉದ್ಧಾರ ಮನೋನಿಗ್ರಹದಿಂದ.
  • ಭಗವಂತನಲ್ಲಿ ಭಕ್ತಿ ಇದ್ದವರಿಗೆ ಮನೋನಿಗ್ರಹ ಸುಲಭ. ಸಮಸ್ಯೆಗಳು ಬೇಗ ಬಗೆಹರಿಯುತ್ತವೆ.
  • ಮನೋನಿಗ್ರಹ ಕಷ್ಟ, ಆದರೆ ಸಾಧ್ಯ.
  • ಮನೋನಿಗ್ರಹಕ್ಕೆ ಕುಶಲತೆ ಬೇಕು, ಎಚ್ಚರ ಬೇಕು, ವಿನೋದ ಪ್ರಜ್ಞೆ ಬೇಕು, ಹೃದಯವಂತಿಕೆ ಬೇಕು, ಚತುರತೆ ಬೇಕು, ತಾಳ್ಮೆ ಬೇಕು, ಸೋಲುಗಳ ಸಮ್ಮುಖದಲ್ಲಿಯೂ ಎದೆಗುಂದದ ಧೀರೋದಾತ್ತತೆ ಬೇಕು.
  • ಮನಸ್ಸನ್ನು ಅಭ್ಯಾಸ ಮತ್ತು ವೈರಾಗ್ಯದಿಂದ ನಿಗ್ರಹಿಸಬಹುದು ಗೀತೆ 6.35 ಇದೇ ಅಭ್ಯಾಸಯೋಗ.
  • ಬಂಧನ ಹಾಗೂ ಬಿಡುಗಡೆ ಮನಸ್ಸಿಗೆ ಸಂಬಂಧಿಸಿದ್ದು.
  • ಮನೋನಿಗ್ರಹವನ್ನು ಸಾಧಿಸುವುದು ಹೇಗೆ?
1. ದೃಢ ಸಂಕಲ್ಪ ಬೆಳೆಸಿಕೊಳ್ಳಿ.
2. ಮನಸ್ಸಿನ ಸ್ವರೂಪವನ್ನು ಅರ್ಥಮಾಡಿಕೊಳ್ಳಿ.
3. ತಂತ್ರಗಳನ್ನು ತಿಳಿದುಕೊಂಡು ಬಳಸುವುದನ್ನು ಕಲಿಯಿರಿ.​

Read More
0 Comments

ಶ್ರೇಷ್ಠ ಪುಸ್ತಕಗಳ ಒಡನಾಟವಿದ್ದರೆ ನಮ್ಮ ನಾಯಕರ ನಡೆ ನುಡಿಗಳು ಕೊಂಚ ನೆಟ್ಟಗಾಗಬಲ್ಲವು

12/31/2021

0 Comments

 
ಪುಸ್ತಕಗಳ ಸಂಗ ಬಿಡದ ಡೈನಮಿಕ್ ನಾಯಕಿ ಜೆಸಿಂದಾ ಕಳೆದ ವರ್ಷ ತಾವು ಮೆಚ್ಚಿದ ಪುಸ್ತಕಗಳ ಪಟ್ಟಿ ಕೊಟ್ಟರು. ನ್ಯೂಜಿಲೆಂಡಿನಲ್ಲಿ ರಾಜಕಾರಣಿಗಳಿಗೆ ಒಳ್ಳೆಯ ಪುಸ್ತಕಗಳನ್ನು ಕೊಡುವ ಸಂಸ್ಥೆಗಳೇ ಇವೆ. ಜೆಸಿಂದಾ ಪಟ್ಟಿಯ ಜೊತೆಗೇ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಕಾಲಕಾಲಕ್ಕೆ ಕೊಟ್ಟ ನೂರು ಪುಸ್ತಕಗಳ ಪಟ್ಟಿ ಗಮನಿಸಿದೆ. ಜೆಸಿಂದಾರಂತೆ ಒಬಾಮ ಕೂಡ ತಮ್ಮ ಆಯ್ಕೆಯ ಪುಸ್ತಕಗಳನ್ನು ಓದಿದ್ದಾರೆ. ಕೊರೊನಾ ಕಾಲದಲ್ಲಿ ಪುಸ್ತಕ, ಸಂಗೀತ ತಮ್ಮನ್ನು ಪೊರೆದಿದ್ದನ್ನು ನೆನೆದಿದ್ದಾರೆ. ಒಬಾಮರ ಪ್ರಿಯ ಪುಸ್ತಕಗಳ ಪಟ್ಟಿಯಲ್ಲಿ ಚಿನುವ ಅಚಿಬೆ, ಟೋನಿ ಮಾರಿಸನ್, ಅಡಿಚಿಯರ ಕಾದಂಬರಿಗಳು, ಆರ್ಥಿಕ, ರಾಜಕೀಯ ಲೋಕದ ಪುಸ್ತಕಗಳಿವೆ. ಪುಸ್ತಕ ಓದಿ ಹುಟ್ಟಿದ ಸೂಕ್ಷ್ಮತೆ ಜೆಸಿಂದಾ, ಒಬಾಮರ ಮಾತು, ನಡವಳಿಕೆಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ. ಲಿಂಕನ್, ಫಿಡೆಲ್ ಕ್ಯಾಸ್ಟ್ರೊ, ನೆಹರೂ ಸೇರಿದಂತೆ ಪುಸ್ತಕಗಳ ಸಖ್ಯದಲ್ಲಿದ್ದ ದೊಡ್ಡ ನಾಯಕರುಗಳ ಎದುರು ಯಾವ ಪುಸ್ತಕಗಳನ್ನೂ ಓದದೆ ಪಶುಗಳಂತೆ ವರ್ತಿಸುವ ಲೀಡರುಗಳನ್ನು ಹೋಲಿಸಿ: ಒಳ್ಳೆಯ ಪುಸ್ತಕಗಳ ಸಂಗದಲ್ಲಿರುವ ರಾಜಕಾರಣಿಗಳು ದೇಶದ ಆರೋಗ್ಯಕ್ಕೆ ಎಷ್ಟು ಅತ್ಯಗತ್ಯ ಎನ್ನುವುದು ತಂತಾನೇ ಹೊಳೆಯುತ್ತದೆ.

ರಾಜಕಾರಣಿಗಳಿರಲಿ, ಲಕ್ಷಗಟ್ಟಲೆ ಸಂಬಳ ಪಡೆಯುವ ಅಧ್ಯಾಪಕರು ಕೂಡ ತಂತಮ್ಮ ವಿಷಯಗಳಿಗೆ ಸಂಬಂಧಿಸಿದ ಒಂದೆರಡು ಹೊಸ ಪುಸ್ತಕಗಳನ್ನಾದರೂ ಪ್ರತೀ ತಿಂಗಳು ಕೊಳ್ಳದಿರುವ ಬೇಜವಾಬ್ದಾರಿತನ ಕೂಡ ಇಲ್ಲಿದೆ. ಡಿಜಿಟಲ್ ಮಂದಿ ಕಿಂಡಲ್, ಇ-ಪುಸ್ತಕ, ಕೇಳು ಪುಸ್ತಕಗಳಲ್ಲಿ ಮುಳುಗಿದ್ದಾರೆ. ಆದರೂ ಕೈಯಲ್ಲಿ ಪುಸ್ತಕ ಹಿಡಿಯುವ ಪುಳಕ, ಪುಸ್ತಕಗಳೊಡನೆ ಗಂಟೆಗಟ್ಟಲೆ ಬದುಕುವ ಸುಖ ಇತರ ಬಗೆಯ ಓದಿನಲ್ಲಿರುವಂತಿಲ್ಲ. ಶ್ರೇಷ್ಠ ಪುಸ್ತಕಗಳ ಒಡನಾಟದಲ್ಲಿರುವುದೆಂದರೆ ನಮ್ಮೊಳಗಿನ ವಿಕಾರಗಳನ್ನು ಮೀರಿ ಇತರರನ್ನು, ಲೋಕದ ಕಷ್ಟಗಳನ್ನು ಅರಿಯುವುದು.

ಹೊಸ ವರ್ಷದಲ್ಲಾದರೂ ಈ ಸರಳ ಸುಂದರ ದಿನಚರಿ ಎಲ್ಲರ ಬದುಕಿನ ಭಾಗವಾಗಲಿ. ಒಳ್ಳೆಯ ಪುಸ್ತಕಗಳ ಪಟ್ಟಿ ಸಿದ್ಧವಾಗಲಿ! ಚಿಯರ್ಸ್!
ಪುಸ್ತಕಗಳ ಸಂಗ ಬಿಡದ ಡೈನಮಿಕ್ ನಾಯಕಿ ಜೆಸಿಂದಾ ಕಳೆದ ವರ್ಷ ತಾವು ಮೆಚ್ಚಿದ ಪುಸ್ತಕಗಳ ಪಟ್ಟಿ ಕೊಟ್ಟರು. ನ್ಯೂಜಿಲೆಂಡಿನಲ್ಲಿ ರಾಜಕಾರಣಿಗಳಿಗೆ ಒಳ್ಳೆಯ ಪುಸ್ತಕಗಳನ್ನು ಕೊಡುವ ಸಂಸ್ಥೆಗಳೇ ಇವೆ. ಜೆಸಿಂದಾ ಪಟ್ಟಿಯ ಜೊತೆಗೇ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಕಾಲಕಾಲಕ್ಕೆ ಕೊಟ್ಟ ನೂರು ಪುಸ್ತಕಗಳ ಪಟ್ಟಿ ಗಮನಿಸಿದೆ. ಜೆಸಿಂದಾರಂತೆ ಒಬಾಮ ಕೂಡ ತಮ್ಮ ಆಯ್ಕೆಯ ಪುಸ್ತಕಗಳನ್ನು ಓದಿದ್ದಾರೆ. ಕೊರೊನಾ ಕಾಲದಲ್ಲಿ ಪುಸ್ತಕ, ಸಂಗೀತ ತಮ್ಮನ್ನು ಪೊರೆದಿದ್ದನ್ನು ನೆನೆದಿದ್ದಾರೆ. ಒಬಾಮರ ಪ್ರಿಯ ಪುಸ್ತಕಗಳ ಪಟ್ಟಿಯಲ್ಲಿ ಚಿನುವ ಅಚಿಬೆ, ಟೋನಿ ಮಾರಿಸನ್, ಅಡಿಚಿಯರ ಕಾದಂಬರಿಗಳು, ಆರ್ಥಿಕ, ರಾಜಕೀಯ ಲೋಕದ ಪುಸ್ತಕಗಳಿವೆ. ಪುಸ್ತಕ ಓದಿ ಹುಟ್ಟಿದ ಸೂಕ್ಷ್ಮತೆ ಜೆಸಿಂದಾ, ಒಬಾಮರ ಮಾತು, ನಡವಳಿಕೆಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ. ಲಿಂಕನ್, ಫಿಡೆಲ್ ಕ್ಯಾಸ್ಟ್ರೊ, ನೆಹರೂ ಸೇರಿದಂತೆ ಪುಸ್ತಕಗಳ ಸಖ್ಯದಲ್ಲಿದ್ದ ದೊಡ್ಡ ನಾಯಕರುಗಳ ಎದುರು ಯಾವ ಪುಸ್ತಕಗಳನ್ನೂ ಓದದೆ ಪಶುಗಳಂತೆ ವರ್ತಿಸುವ ಲೀಡರುಗಳನ್ನು ಹೋಲಿಸಿ: ಒಳ್ಳೆಯ ಪುಸ್ತಕಗಳ ಸಂಗದಲ್ಲಿರುವ ರಾಜಕಾರಣಿಗಳು ದೇಶದ ಆರೋಗ್ಯಕ್ಕೆ ಎಷ್ಟು ಅತ್ಯಗತ್ಯ ಎನ್ನುವುದು ತಂತಾನೇ ಹೊಳೆಯುತ್ತದೆ.

ರಾಜಕಾರಣಿಗಳಿರಲಿ, ಲಕ್ಷಗಟ್ಟಲೆ ಸಂಬಳ ಪಡೆಯುವ ಅಧ್ಯಾಪಕರು ಕೂಡ ತಂತಮ್ಮ ವಿಷಯಗಳಿಗೆ ಸಂಬಂಧಿಸಿದ ಒಂದೆರಡು ಹೊಸ ಪುಸ್ತಕಗಳನ್ನಾದರೂ ಪ್ರತೀ ತಿಂಗಳು ಕೊಳ್ಳದಿರುವ ಬೇಜವಾಬ್ದಾರಿತನ ಕೂಡ ಇಲ್ಲಿದೆ. ಡಿಜಿಟಲ್ ಮಂದಿ ಕಿಂಡಲ್, ಇ-ಪುಸ್ತಕ, ಕೇಳು ಪುಸ್ತಕಗಳಲ್ಲಿ ಮುಳುಗಿದ್ದಾರೆ. ಆದರೂ ಕೈಯಲ್ಲಿ ಪುಸ್ತಕ ಹಿಡಿಯುವ ಪುಳಕ, ಪುಸ್ತಕಗಳೊಡನೆ ಗಂಟೆಗಟ್ಟಲೆ ಬದುಕುವ ಸುಖ ಇತರ ಬಗೆಯ ಓದಿನಲ್ಲಿರುವಂತಿಲ್ಲ. ಶ್ರೇಷ್ಠ ಪುಸ್ತಕಗಳ ಒಡನಾಟದಲ್ಲಿರುವುದೆಂದರೆ ನಮ್ಮೊಳಗಿನ ವಿಕಾರಗಳನ್ನು ಮೀರಿ ಇತರರನ್ನು, ಲೋಕದ ಕಷ್ಟಗಳನ್ನು ಅರಿಯುವುದು.

ಹೊಸ ವರ್ಷದಲ್ಲಾದರೂ ಈ ಸರಳ ಸುಂದರ ದಿನಚರಿ ಎಲ್ಲರ ಬದುಕಿನ ಭಾಗವಾಗಲಿ. ಒಳ್ಳೆಯ ಪುಸ್ತಕಗಳ ಪಟ್ಟಿ ಸಿದ್ಧವಾಗಲಿ! ಚಿಯರ್ಸ್!


https://www.prajavani.net/columns/nataraj-huliyar-column-new-book-for-the-new-year-897910.html?fbclid=IwAR1RxdFkBzf2nfvk3p8bwlpnWlLkZNNZZuSGI9ZbL5-uTjFYAxNnUcfbX9A​
0 Comments

ಮಾನಸಿಕ ಅನಾರೋಗ್ಯ ಒಂದು ಸಮಸ್ಯೆ ವಿನಃ ಸವಾಲಲ್ಲ...

7/28/2020

0 Comments

 
ಆತ್ಮೀಯರೆ…ಓಡುತ್ತಿರುವ ಈ ಕಾಲದಲ್ಲಿ ಕಾಡುತ್ತಿರುವ ಸಮಸ್ಯೆಗಳ ಸಂಖ್ಯೆಯೇ ಹೆಚ್ಚು. ಜವಾಬ್ದಾರಿಗಳ ಮೂಟೆ ಹೊತ್ತು ಕಂಡ ಕನಸ್ಸುಗಳನ್ನು ನನಸಾಗಿಸಲು ಮನುಷ್ಯ ಸೆಣಸುತ್ತಾನೆ. ಜೀವನದಲ್ಲಿ ಉದ್ಭವಿಸಿದ ಭಾಧೆಗಳನ್ನು ಬದಿಗೊತ್ತಿ ಜೀವನ ನಿರ್ವಹಣೆಯ ಉದ್ದೇಶದಿಂದ ಕೈಗೆ ಸಿಕ್ಕ ಉದ್ಯೋಗವನ್ನು ಮಾಡುತ್ತಾ ಜೀವನ ಸಾಗಿಸುವಂತಹ ಜನಸಾಮಾನ್ಯರ ಜೀವನದಲ್ಲಿ ಎಂದೂ ಕಾಣದ ಕೇಳದ ಕೊರೋನಾ ವೈರಸ್ ಎಂಬ ಮಹಾಮಾರಿ ದುತ್ ಎಂದು ಉದ್ಬವಿಸಿ ಕಂಡ ಕನಸುಗಳನ್ನ ದಿಕ್ಕಾಪಾಲಾಗಿಸಿ ಪ್ರತಿಯೊಬ್ಬರ ಜೀವನದಲ್ಲೂ ಒಂದಿಲ್ಲೊಂದು ರೀತಿಯಲ್ಲಿ ಸಮಸ್ಯೆಗಳನ್ನು ಸೃಷ್ಟಿಸಿರುವುದು ಎಲ್ಲರೂ ತಿಳಿದಿರುವ ಸತ್ಯಸಂಗತಿ ಅದು ಅವರವರ ಅನುಭವಕ್ಕೆ ಬಂದಿರುತ್ತದೆ.

Read More
0 Comments

    Categories

    All
    Conference
    English Books
    Kannada Articles
    Kannada Books
    Niruta Books
    Others
    Registration
    Social Work
    SWFP
    Women


    Picture

    Inviting Articles

    WhatsApp Group

    30,000 HR PROFESSIONALS ARE CONNECTED THROUGH OUR NIRATHANKA HR GROUPS.
    YOU CAN ALSO JOIN AND PARTICIPATE IN OUR GROUP DISCUSSIONS.
    Join HR Online Groups



    RSS Feed


SITE MAP


Site

  • HOME
  • ABOUT US
  • EDITOR'S BLOG
  • BLOG
  • ONLINE STORE
  • VIDEOS
  • TRANSLATION & TYPING

TRAINING

  • TRAINING PROGRAMMES
  • CERTIFICATE TRAINING COURSES

NGO & CSR

  • POSH
  • CSR

Human Resource

  • MHR LEARNING ACADEMY
  • RECRUITMENT SERVICES
  • DOMESTIC ENQUIRY
  • TRADEMARK
  • CONSULTING

JOB

  • FIND FREELANCE JOBS
  • CURRENT JOB OPENINGS

OUR OTHER WEBSITES

  • WWW.MHRSPL.COM
  • WWW.NIRATANKA.ORG
  • WWW.HRKANCON.COM

Subscribe


Subscribe to Newsletter


JOIN OUR ONLINE GROUPS


JOIN WHATSAPP BROADCAST


ONLINE STORE


Copyright Niruta Publications 2021,    Website Designing & Developed by: www.mhrspl.com