In an article in Bits and Pieces,(Source : Carnegie, Dale. How to Win Friends and Influence People)4/15/2022 In an article in Bits and Pieces,* some suggestions are made on how to keep a disagreement from becoming an argument: Welcome the disagreement. Remember the slogan,“When two partners always agree, one of them is not necessary.” If there is some point you haven’t thought about, be thankful if it is brought to your attention. Perhaps this disagreement is your opportunity to be corrected before you make a serious mistake. Distrust your first instinctive impression. Our first natural reaction in a disagreeable situation is to be defensive. Be careful. Keep calm and watch out for your first reaction. It may be you at your worst, not your best. Control your temper. Remember, you can measure the size of a person by what makes him or her angry. Listen first. Give your opponents a chance to talk. Let them finish. Do not resist, defend or debate. This only raises barriers. Try to build bridges of understanding. Don’t build higher barriers of misunderstanding. Look for areas of agreement. When you have heard your opponents out, dwell first on the points and areas on which you agree. Be honest. Look for areas where you can admit error and say so. Apologize for your mistakes. It will help disarm your opponents and reduce defensiveness. Promise to think over your opponents’ ideas and study them carefully. And mean it. Your opponents may be right. It is a lot easier at this stage to agree to think about their points than to move rapidly ahead and find yourself in a position where your opponents can say: “We tried to tell you, but you wouldn’t listen.” Thank your opponents sincerely for their interest. Anyone who takes the time to disagree with you is interested in the same things you are. Think of them as people who really want to help you, and you may turn your opponents into friends. Postpone action to give both sides time to think through the problem. Suggest that a new meeting be held later that day or the next day, when all the facts may be brought to bear. In preparation for this meeting, ask yourself some hard questions: Could my opponents be right? Partly right? Is there truth or merit in their position or argument? Is my reaction one that will relieve the problem, or will it just relieve any frustration? Will my reaction drive my opponents further away or draw them closer to me? Will my reaction elevate the estimation good people have of me? Will I win or lose? IN AN ARTICLE IN BITS AND PIECES, (SOURCE : CARNEGIE, DALE. HOW TO WIN FRIENDS AND INFLUENCE PEOPLE)
0 Comments
ಒಂದು ದಿನ ಬುದ್ಧನು ಸ್ವಲ್ಪ ಸಮಯದವರೆಗೆ ಒಬ್ಬನೇ ಹೋಗಲು ನಿರ್ಧರಿಸಿದನು. ಅವನು ತನ್ನ ಮುಖ್ಯ ಶಿಷ್ಯರಾದ ಆನಂದ, ಶಾರಿಪುತ್ರ ಮತ್ತು ಇತರರನ್ನು ಆಶ್ರಮದಲ್ಲಿಯೇ ಇರುವಂತೆ ಕೇಳಿಕೊಂಡನು. ಇದು ಅತ್ಯಂತ ಅಸಾಮಾನ್ಯವಾಗಿತ್ತು. ಏಕೆಂದರೆ ಸಾಮಾನ್ಯವಾಗಿ ಬುದ್ಧನು ಎಲ್ಲಿಗೆ ಹೋದರೂ, ಅವನ ಭಕ್ತರು ಮತ್ತು ಶಿಷ್ಯರು ಅವನೊಂದಿಗೆ ಇರುತ್ತಿದ್ದರು ಮತ್ತು ಅವರನ್ನು ತಮ್ಮ ಪ್ರಾಣಕ್ಕಿಂತ ಹೆಚ್ಚಾಗಿ ಗೌರವಿಸುತ್ತಿದ್ದರು. ಅವರು ಯಾವಾಗಲೂ ಅವರ ಸುಂದರ ರೂಪವನ್ನು ನೋಡಲು, ಅವರ ಶಾಂತವಾದ ಮಾತುಗಳನ್ನು ಕೇಳಲು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅವರ ಸೇವೆ ಮಾಡಲು ಬಯಸುತ್ತಾರೆ. ಆದರೆ, ಈ ಸಮಯದಲ್ಲಿ, ಬುದ್ಧನು ಅವರು ಬೇರೆ ರೀತಿಯಲ್ಲಿ ಹೇಳುವವರೆಗೆ ಅವರನ್ನು ಅನುಸರಿಸಬೇಡಿ ಎಂದು ಅವರಿಗೆ ಸೂಚಿಸಿದರು. ಹೊಸ ಸ್ಥಳಗಳನ್ನು ಅನ್ವೇಷಿಸುತ್ತಾ, ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಅನೇಕ ಜನರು ಅವನನ್ನು ಗುರುತಿಸಲಿಲ್ಲ. ಪರಿವಾರವಿಲ್ಲದ ಕಾರಣ, ಜನಸಂದಣಿ ಇಲ್ಲದ ಕಾರಣ ಅವರು ಗೌತಮ ಬುದ್ಧ ಎಂದು ಭಾವಿಸಿರಲಿಲ್ಲ. ಅವನು ಇತರ ಸನ್ಯಾಸಿಗಳಂತೆ ಏಕಾಂಗಿಯಾಗಿ ಅಲೆದಾಡುತ್ತಿದ್ದನು. ದಾರಿಯಲ್ಲಿ, ಬುದ್ಧನು ಭಿಕ್ಷೆಗಾಗಿ ಒಬ್ಬ ವ್ಯಕ್ತಿಯನ್ನು ಸಂಪರ್ಕಿಸಿದನು. ಆದಾಗ್ಯೂ, ಮನುಷ್ಯನು ವಿಚಲಿತನಾಗಿದ್ದನು ಮತ್ತು ತನ್ನ ಏಕೈಕ ಹಸು ಕೆಲವು ನಿಮಿಷಗಳ ಹಿಂದೆ ಸತ್ತಿದ್ದರಿಂದ ಕೋಪಗೊಂಡಿದ್ದನು. ಕೋಪದ ಭರದಲ್ಲಿ, ಅವರು ಬುದ್ಧನ ಮೇಲೆ ಕೂಗಲು ಪ್ರಾರಂಭಿಸಿದರು ಮತ್ತು ಅವನ ಮೇಲೆ ನಿಂದನೆಗಳನ್ನು ಎಸೆದರು. ಋಷಿ ಸುಮ್ಮನೆ ಹೊರನಡೆದರು. ಆದರೆ, ಹತ್ತಿರದ ಹಳ್ಳಿಗನೊಬ್ಬ ಬುದ್ಧನ ಅಸ್ಪಷ್ಟ ಉಪಸ್ಥಿತಿಯನ್ನು ಅನುಭವಿಸಿದನು ಮತ್ತು ಅವನನ್ನು ಗುರುತಿಸಿದನು. ಅವರು ನಿಂದಿಸಿದವರನ್ನು ಸಮಾಧಾನ ಪಡಿಸಿದರು ಮತ್ತು "ಅವರು ಯಾರೆಂದು ನಿಮಗೆ ತಿಳಿದಿದೆಯೇ?" ಎಂದು ಪ್ರಶ್ನಿಸಿದರು. "ಅವರು ಯಾರಾದರೆ ನನಗೇನು ?" ಎಂದು ಆ ವ್ಯಕ್ತಿ ಹೇಳಿದರು.
"ಇಲ್ಲ, ಅವರು ಯಾರೆಂಬುದನ್ನು ನೀವು ಅರಿತುಕೊಳ್ಳಬೇಕು, ಅವರೇ ಗೌತಮ ಬುದ್ಧ". "ನೀವು ಏನು ಹೇಳುತ್ತಿದ್ದೀರಾ?" ಎಂದು ಆ ವ್ಯಕ್ತಿ ಉದ್ಗರಿಸಿದರು. "ಅದು ಸಾಧ್ಯವಿಲ್ಲ, ಏಕೆಂದರೆ ಅವರನ್ನು ಯಾವಾಗಲೂ ದೊಡ್ಡ ಜನ ಸಮೂಹ ಹಿಂಬಾಲಿಸುತ್ತದೆ. ಅವರ ಶಿಷ್ಯರು ಎಲ್ಲಿದ್ದಾರೆ?" "ನನಗೆ ಗೊತ್ತಿಲ್ಲ, ಆದರೆ ಅವರು ಬುದ್ಧನೆಂದು ನಾನು ನಿಮಗೆ ಹೇಳಬಲ್ಲೆ. ಅವರು ಮುಂದಿನ ಸ್ವಲ್ಪ ಸಮಯದವರೆಗೆ ಏಕಾಂತದಲ್ಲಿ ಪ್ರಯಾಣಿಸುತ್ತಾರೆಂದು ನಾನು ಕೇಳಲ್ಪಟ್ಟೆ." ಆ ವ್ಯಕ್ತಿಯ ತಪ್ಪು ಆತನಿಗೆ ಅರಿವಾಗಿ ಪಶ್ಚಾತ್ತಾಪ ಪಟ್ಟು ಬುದ್ಧನನ್ನು ಹುಡುಕಲು ನಿರ್ಧರಿಸಿದನು. ಮರುದಿನ, ಅವನು ಬುದ್ಧನನ್ನು ಪತ್ತೆ ಹಚ್ಚಿ ಅವರ ಕಾಲಿಗೆ ಬಿದ್ದನು. "ನನ್ನನ್ನು ಕ್ಷಮಿಸಿ, ಮಹಾಸ್ವಾಮಿ!" ಎಂದು ಆ ವ್ಯಕ್ತಿ ಕೇಳಿದರು. "ನಿಮ್ಮನ್ನು ಹೆಸರಿಸಲು ನನಗೆ ನಾಚಿಕೆಯಾಗುತ್ತಿದೆ. ದಯವಿಟ್ಟು ನನ್ನನ್ನು ಶಿಕ್ಷಿಸಿ, ಇದರಿಂದ ನಾನು ಶುದ್ಧನಾಗುತ್ತೇನೆ." "ನಿನ್ನನ್ನು ಯಾವುದಕ್ಕಾಗಿ ಶಿಕ್ಷಿಸಲಿ?" ಬುದ್ಧ ಶಾಂತವಾಗಿ ಹೇಳಿದರು. "ನನ್ನ ಸ್ವಾಮಿ, ನಿಮ್ಮನ್ನು ನಿಂದಿಸಿದ್ದಕ್ಕಾಗಿ." "ನೀನು ಯಾವಾಗ ನಿಂದಿಸಿದೆ?" ಎಂದು ಬುದ್ಧ ಹೇಳಿದರು. "ನಿನ್ನೆ" ಎಂದು ಆ ವ್ಯಕ್ತಿ ಹೇಳಿದರು. "ನನಗೆ ನಿನ್ನೆ ಗೊತ್ತಿಲ್ಲ, ನನಗೆ ಇಂದು ಮಾತ್ರ ತಿಳಿದಿದೆ” ಎಂದು ಬುದ್ಧ ಹೇಳಿದರು. ನೋಡಿ ಜೀವನದಲ್ಲಿ...... ಎಲ್ಲಾ ಮಾನವ ಭಾವನೆಗಳಲ್ಲಿ ಕಠಿಣವಾದದ್ದು ಕ್ಷಮೆ. ಅನುಭವಿಸಲು ಮತ್ತು ಕಾರ್ಯನಿರ್ವಹಿಸಲು ಅತ್ಯಂತ ಕಷ್ಟಕರವಾದ ಮಾನವ ಭಾವನೆ ಕ್ಷಮೆಯಾಗಿದೆ. ಇದು ಆಧ್ಯಾತ್ಮಿಕ ಸಾಧನೆಯ ಪರಾಕಾಷ್ಠೆ. ಬುದ್ಧನ ಈ ಕಥೆಯು ನಮಗೆಲ್ಲರಿಗೂ ಬಹಳ ಮುಖ್ಯವಾದ ಸಂದೇಶವನ್ನು ಹೊಂದಿದೆ. ನಾವು ಆಗಾಗ್ಗೆ ನಮ್ಮ ಜೀವನದಲ್ಲಿ ದ್ವೇಷಗಳನ್ನು ಹಿಡಿದಿಟ್ಟುಕೊಳ್ಳುತ್ತೇವೆ. ಆಗ ನಮ್ಮ ಕೋಪ, ದುಃಖ, ಅಸೂಯೆ ಮತ್ತು ದುಃಖದ ಭಾವನೆಗಳಿಗೆ ನಾವು ಬಲವನ್ನು ನೀಡುತ್ತೇವೆ ಮತ್ತು ಅವುಗಳನ್ನು ಬಲಗೊಳಿಸುತ್ತೇವೆ. ಇವು ನಮ್ಮ ವ್ಯಕ್ತಿತ್ವವನ್ನು ಆಳುತ್ತದೆ. ಇದರಿಂದ ನಿಮ್ಮ ನೆಮ್ಮದಿಯು ನಶಿಸಿಹೋಗುತ್ತದೆ. ಇದರ ಬದಲಾಗಿ, ಜೀವನವು ನಿರಂತರವಾಗಿ ಬದಲಾಗುತ್ತಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ನಮ್ಮ ಭಾವನೆಗಳನ್ನು ನಿರ್ಬಂಧಿಸುವ ಮೂಲಕ ನಾವು ಅದನ್ನು ಕಠಿಣಗೊಳಿಸುತ್ತೇವೆ. ಕ್ಷಮಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ನಮ್ಮ ಜೀವನದಲ್ಲಿ ಕ್ಷಮಾಪಣ ಗುಣವನ್ನು ಬೆಳೆಸಿಕೊಂಡು ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮದ-ಮಾತ್ಸರ್ಯಗಳನ್ನು ತ್ಯಜಿಸಬೇಕು. ದಿನದ ಕೊನೆಯಲ್ಲಿ, ಎಲ್ಲವನ್ನೂ ಸುಮ್ಮನೆ ಬಿಟ್ಟು ಬಿಡಿ.. ಯಾರಾದರೂ ನಿನಗೆ ಬೈದು ಬುದ್ಧಿ ಹೇಳಬಹುದು. ಆದರೆ ತಾಳ್ಮೆ ಕಳೆದುಕೊಳ್ಳಬೇಡ, ಪ್ರತಿಕ್ರಿಯಿಸಬೇಡ, ಅವರು ಬೈಯುವ ಸಂದರ್ಭದಲ್ಲಿ ನಿನ್ನ ವಾದ ಮಂಡಿಸಬೇಡ, ಮೌನ ವಹಿಸು, ಸಹಿಸಿಕೊ, ನೋವಾಗಬಹುದು.
ಎಲ್ಲರೂ ನಿನ್ನನ್ನು ಸರಿಯಾಗಿಯೇ ಅರ್ಥೈಸಿಕೊಳ್ಳಬೇಕೆಂಬ ನಿಯಮವಿಲ್ಲ. ಬೈದವರನ್ನು ದ್ವೇಷಿಸಬೇಡ, ಅನುಮಾನಿಸಬೇಡ, ಅವಮಾನಿಸಬೇಡ, ಇರಲಿ, ಅವರಿಗೆ ಎಂದಾದರೂ ಒಂದು ದಿನ ಸತ್ಯದ ಅರಿವು ಅವರಿಗಾಗುತ್ತದೆ ಎಂದು ತಿಳಿದು ನಕ್ಕು ಸುಮ್ಮನಾಗು. ಅವರಿಗೆ ಅರಿವಾಗಲಿಲ್ಲವೆಂದರೂ ಪರವಾಗಿಲ್ಲ. ನಿನ್ನಲ್ಲಿ ದ್ವೇಷದ ಮೊಳಕೆಯೊಡೆದರೆ ನಿನಗೆ ಅದರಿಂದಾಗುವ ಲಾಭವೇನಿದೆ, ದ್ವೇಷ ವಿಷದಂತೆ ನಿನ್ನನ್ನು ಹಾಳು ಮಾಡುತ್ತದೆ, ದ್ವೇಷ ಒಡಲಲಿ ಇಟ್ಟುಕೊಂಡ ಬೆಂಕಿಯಂತೆ, ನಿನ್ನನ್ನು ಸುಟ್ಟ ನಂತರ ಪರರ ಸುಡುತ್ತದೆ ಅಲ್ಲವೆ. ನಡೆಯುತ್ತಿರುವ ಘಟನೆಯನ್ನು ನಿಯಂತ್ರಿಸಲು ನಿನಗೆ ಸಾಧ್ಯವಿಲ್ಲ ಎಂದು ಕಂಡುಬಂದರೆ, ಆ ಘಟನೆಗೆ ನೀನು ಹೇಗೆ ಪ್ರತಿಕ್ರಯಿಸಬೇಕು ಎಂಬ ಜಾಣ್ಮೆಯನ್ನಾದರೂ ತೋರಿಸು, ಅದೇ ನಿನ್ನ ಸಾಮರ್ಥ್ಯ. ಬೋಧಿಸುವುದು ಸುಲಭ, ಆದರೆ ಆಚರಿಸುವುದು ಕಷ್ಟ. 'Respect different shades of opinions. Remember what's 6 to you will appear 9 to someone facing you.' ಆತ್ಮೀಯರಿಗೂ, ಪರಿಚಿತರಿಗೂ, ಎದುರಾಳಿಗಳಿಗೂ ಹಲವು ವ್ಯತ್ಯಾಸಗಳಿರುವುದನ್ನು ನಾವು ನಮ್ಮ ಬದುಕಿನ ಓಟದಲ್ಲಿ ಗುರು1/29/2022 ಬದುಕಿನ ಓಟದಲ್ಲಿ ಹಲವಾರು ಜನ ನಮ್ಮನ್ನು ಸಂಧಿಸುತ್ತಾರೆ. ಕೆಲವರು ಆತ್ಮೀಯರಾಗುತ್ತಾರೆ, ಇನ್ನೂ ಹಲವರು ಪರಿಚಿತರಾಗುತ್ತಾರೆ, ಇನ್ನೂ ಕೆಲವರು ನಮ್ಮ ಎದುರಾಳಿಗಳಾಗಿಬಿಡುತ್ತಾರೆ. ಆತ್ಮೀಯರಿಗೂ, ಪರಿಚಿತರಿಗೂ, ಎದುರಾಳಿಗಳಿಗೂ ಹಲವು ವ್ಯತ್ಯಾಸಗಳಿರುವುದನ್ನು ನಾವು ನಮ್ಮ ಬದುಕಿನ ಓಟದಲ್ಲಿ ಗುರುತಿಸಬೇಕಾಗುತ್ತದೆ. ಪರಿಚಿತರಿಗೆ ಹಾಗೂ ಎದುರಾಳಿಗಳಿಗೆ ಕಾರಣಗಳನ್ನು ಹುಡುಕುತ್ತಾ, ಅವರ ಬಗ್ಗೆ ಚಿಂತಿಸುತ್ತಾ ಕೂರಲು ಸಮಯವಿರುವುದಿಲ್ಲ. ನಾವು ಚಿಂತಿಸಬೇಕಾಗಿರುವುದು ನಮ್ಮ ಆತ್ಮೀಯರಿಗೆ ಮಾತ್ರ. ನಮ್ಮ ಆತ್ಮೀಯರಿಂದ ಕಲಿಯುವುದು ಬಹಳಷ್ಟಿರುತ್ತದೆ.
ಆತ್ಮೀಯ ಹಂತಕ್ಕೆ ಒಂದೇ ಸಲ ಸ್ನೇಹಿತರಾಗಲು ಆಗುವುದಿಲ್ಲ. ಹಲವಾರು ವರ್ಷಗಳ ಗೆಳೆತನ, ಸಂದರ್ಭಗಳ ಒಡನಾಟ, ಇಬ್ಬರ ಅಭಿರುಚಿಗಳ ಮೇಲೆ ಮತ್ತೊಬ್ಬರ ಆತ್ಮೀಯ ಬಳಗದಲ್ಲಿ ಸೇರಿಕೊಳ್ಳಬಹುದೇ ಅಥವಾ ಬೇಡವೇ ಎಂಬ ಜಿಜ್ಞಾಸೆಯ ಹಂತ ದಾಟಿದ ನಂತರ ಒಬ್ಬರ ಆತ್ಮೀಯರಾಗಿ ಮತ್ತೊಬ್ಬರು ಸೇರಿಕೊಳ್ಳುತ್ತಾರೆ. ಆತ್ಮೀಯರಾದಾಗ ನಂಬಿಕೆ ಗಾಢವಾಗಿ ಬೆಳೆಯುತ್ತದೆ. ಯಾವುದೇ ಮುಲಾಜಿಲ್ಲದೆ ನಮ್ಮ ಕಷ್ಟ ಸುಖಗಳನ್ನು ಹಂಚಿಕೊಳ್ಳಬಹುದಾಗಿದೆ. ಆತ್ಮೀಯರಿಗೆ ಮುಲಾಜಿಲ್ಲದೆ ಟೀಕಿಸುವ ಅಥವಾ ತಪ್ಪುಗಳನ್ನು ಸರಿಪಡಿಸುವ ಅಧಿಕಾರವಿರುತ್ತದೆ. ಆತ್ಮೀಯರಲ್ಲಿ ನನಗೆ ಈ ಕೆಲಸ ಆಗಬೇಕು, ನಿನ್ನ ಕಷ್ಟ ಸುಖಗಳು ನನಗೆ ಗೊತ್ತಿಲ್ಲ ಎಂದು ಹೇಳಿ ಕೆಲಸ ಮಾಡಿಸಿಕೊಳ್ಳಬಹುದು. ಒಟ್ಟಿಗೆ ಓದಿರುತ್ತೇವೆ, ಒಂದೇ ಕಡೆ ಕೆಲಸ ಮಾಡುತ್ತಿರುತ್ತೇವೆ, ಒಂದೇ ಕುಟುಂಬದ ಸದಸ್ಯರಾಗಿರುತ್ತೇವೆ ಆದರೆ ಹಲವು ಸಲ ಈ ಆತ್ಮೀಯತೆಯ ಕೊರತೆ ನಮ್ಮಲ್ಲಿ ಎದ್ದು ಕಾಣುತ್ತದೆ.
ಪ್ರತಿ ವರುಷದಂತೆ ಈ 2020 ಸಹ ಮುಕ್ತಾಯವಾಗಿದೆ. ಹೊಸ ವರುಷಕ್ಕೆ ಕಾಲಿಡುತ್ತಿದ್ದೇವೆ. ಕಳೆದ ವರುಷವು ನಮಗೆ ಹಲವು ಪಾಠ ಕಲಿಸಿತು. ಮತ್ತೆ ಹೊಸ ವರುಷದಲ್ಲಿ ಕೆಲವೊಂದು ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಪ್ರಮುಖವಾಗಿ 2 ಪುಸ್ತಕಗಳನ್ನು ಬರೆಯುವುದು. ನನಗೆಂದೇ ಒಂದು ಪ್ರತ್ಯೇಕ ವೆಬ್ಸೈಟ್ ರಚಿಸಿದ್ದೇನೆ (www.rameshaniratanka.com). ನನ್ನ ಎಲ್ಲ ಚಟುವಟಿಕೆಗಳು ನನ್ನ ವೆಬ್ ಜಾಲತಾಣದಲ್ಲಿ ದಾಖಲಾಗುತ್ತಾ ಹೋಗುತ್ತವೆ.''
ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ರಮೇಶ ಎಂ.ಎಚ್. ನಿರಾತಂಕ www.rameshaniratanka.com https://www.mhrspl.com http://nirutapublications.org https://www.hrkancon.com ಇತ್ತೀಚೆಗೆ ಪ್ರೊ. ವೆಂಕಟ್ ಪುಲ್ಲಾ ಭಾರತದಲ್ಲಿ ಸಮಾಜಕಾರ್ಯ ವಿಷಯದಲ್ಲಿ ಡಾಕ್ಟರೇಟ್ ಪಡೆದರು. ಆಸ್ಟ್ರೇಲಿಯಾದಲ್ಲಿ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಹಲವು ವರ್ಷಗಳ ಹಿಂದೆ (ಸುಮಾರು 90ರ ದಶಕದಲ್ಲಿ) TISS (Tata Institute of Social Science) ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಒಬ್ಬ ಅರ್ಹ ವಿದ್ಯಾರ್ಥಿಗೆ 500/- ಗಳ ಸಹಾಯವನ್ನು ನೀಡಿದ್ದರಂತೆ. ಪ್ರೊ. ವೆಂಕಟ್ ಪುಲ್ಲಾ ರವರಿಗೂ ಬರುತ್ತಿದ್ದ ಸಂಬಳ ಐದಾರು ಸಾವಿರವಿದ್ದಿರಬಹುದು. ಆ 500/- ರೂ.ಗಳು ಸಹಾಯ ಪಡೆದ ವಿದ್ಯಾರ್ಥಿ ಮುಂದೊಂದು ದಿನ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಪಡೆದ ನಂತರ ಪ್ರೊ. ವೆಂಕಟ್ ಪುಲ್ಲಾ ರವರಿಗೆ ತಾನು ಪಡೆದ ಸಹಾಯಧನವನ್ನು ಹಿಂತಿರುಗಿಸಲು ಭೇಟಿಯಾದರು. ಆಗ ಪ್ರೊ. ವೆಂಕಟ್ ಪುಲ್ಲಾ ರವರು ನಾನು ನಿನಗೆ ಸಹಾಯ ಮಾಡಿದಂತೆ ನೀನು ಒಬ್ಬ ಅರ್ಹ ವಿದ್ಯಾರ್ಥಿಯನ್ನು ಹುಡುಕಿ ಅವನಿಗೆ ನಿನ್ನ ಕೈಲಾದ ಮಟ್ಟಿಗೆ ಸಹಾಯ ಮಾಡು ಎಂದು ಸಲಹೆ ಇತ್ತರಂತೆ. ಈ ರೀತಿಯಾಗಿ ಸಹಾಯ ಪಡೆದವರು ಇಂದು ವಿಶ್ವದಾದ್ಯಂತ ಸುಮಾರು 400ಕ್ಕೂ ಹೆಚ್ಚು ಮಂದಿ ಇದ್ದಾರಂತೆ. ಪ್ರೊ. ವೆಂಕಟ್ ಪುಲ್ಲಾ ರವರಿಂದ ಮೊದಲು ಸಹಾಯ ಪಡೆದ ವ್ಯಕ್ತಿ ತಾನು ಸಹಾಯ ನೀಡಿದ ವ್ಯಕ್ತಿಯೊಂದಿಗೆ ಮಾತನಾಡಿ ಅದೇ ರೀತಿ ಒಬ್ಬರಿಂದ ಒಬ್ಬರು ಮಾತನಾಡಿಕೊಂಡು ಎಲ್ಲರೂ ಇತ್ತೀಚಿಗೊಮ್ಮೆ ಪ್ರೊ. ವೆಂಕಟ್ ಪುಲ್ಲಾ ರವರನ್ನು ಆಹ್ವಾನಿಸಿದರಂತೆ. ಆಗ ಪ್ರೊ. ವೆಂಕಟ್ ಪುಲ್ಲಾ ರವರಿಗೆ ತಾನು ಸಹಾಯ ನೀಡಿದ ತನ್ನ ಶಿಷ್ಯ ಮಾತ್ರ ಗೊತ್ತಿತ್ತು. ಅದೇ ರೀತಿ ಅಲ್ಲಿದ್ದ ಎಲ್ಲರಿಗೂ ಅವರವರು ಸಹಾಯ ನೀಡಿದ ವ್ಯಕ್ತಿಗಳು ಮಾತ್ರ ಗೊತ್ತಿತ್ತು. ಆದರೆ ಅಲ್ಲಿ ಒಟ್ಟಿಗೆ ಸೇರಿದ್ದು 300 ಕ್ಕೂ ಹೆಚ್ಚು ಜನರು ಇದ್ದರು. ಪ್ರೊ. ವೆಂಕಟ್ ಪುಲ್ಲಾ ರವರು ಅವರೆಲ್ಲರನ್ನೂ ಉದ್ದೇಶಿಸಿ ಮಾತನಾಡಿದರಂತೆ. ಒಂದು ಪುಟ್ಟ ಸಹಾಯ ಯಾವ ರೀತಿ ಇತರರ ಬದುಕನ್ನು ಬದಲಾಯಿಸಬಲ್ಲದು ಎಂಬುದು ಇದಕ್ಕೆ ನಿದರ್ಶನವಾಗಿದೆ. ಹಾಗಾಗಿ ಅಗತ್ಯವಿರುವವರಿಗೆ ಸಹಾಯ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ಒಂದು ಪುಟ್ಟ ಸಹಾಯದಿಂದ ಸುಮಾರು 400 ಕ್ಕೂ ಹೆಚ್ಚು ಜನರು ಪ್ರೊ. ವೆಂಕಟ್ ಪುಲ್ಲಾ ರವರ ವ್ಯಕ್ತಿತ್ವಕ್ಕೆ ಮಾರುಹೋದರು. ಹಾಗೆಯೇ ಇಂದು ಪ್ರೊ. ವೆಂಕಟ್ ಪುಲ್ಲಾ ರವರು ಸಮಾಜಕಾರ್ಯ ವಿಶ್ವವಿದ್ಯಾಲಯ ಮಾಡಬೇಕೆಂದು ಹೊರಟರೆ ಇಂತಹ ಮಹತ್ವದ ಕೆಲಸಕ್ಕೆ 400 ಜನರು ಪ್ರೊ. ವೆಂಕಟ್ ಪುಲ್ಲಾ ರವರ ಬೆಂಬಲಕ್ಕೆ ನಿಲ್ಲುವುದರಲ್ಲಿ ಆಶ್ಚರ್ಯವೇನಿಲ್ಲವಲ್ಲ.
ರಮೇಶ ಎಂ.ಎಚ್. ನಿರಾತಂಕ www.mhrspl.com www.nirutapublications.org ನೆಲ್ಸನ್ ಮಂಡೇಲಾ ದಕ್ಷಿಣ ಆಫ್ರಿಕಾ ದೇಶಕ್ಕೆ ಮೊದಲನೆಯ ಸಲ ರಾಷ್ಟ್ರಪತಿ ಆದ ನಂತರ ತನ್ನ ಸುರಕ್ಷೆಯ ಸೈನಿಕರ ಜೊತೆಯಲ್ಲಿ ಒಂದು ಹೊಟೇಲಿಗೆ ಊಟ ಮಾಡುವುದಕ್ಕೆ ಹೋಗಿದ್ದರು. ಎಲ್ಲರೂ ತಮಗೆ ಇಷ್ಟವಾದ ಊಟವನ್ನು ಆರ್ಡರ್ ಮಾಡಿದರು.
ಅದೇ ಸಮಯದಲ್ಲಿ ಮಂಡೇಲಾ ಅವರ ಕುರ್ಚಿಯ ಎದುರುಗಡೆ ಒಬ್ಬ ವ್ಯಕ್ತಿ ಊಟಕ್ಕೆ ಅಪ್ಪಣೆ ಕೊಟ್ಟು ಎದುರು ನೋಡುತ್ತಿದ್ದನು. ನೆಲ್ಸನ್ ಮಂಡೇಲಾರವರು ತನ್ನ ಸುರಕ್ಷೆಯ ಸೈನಿಕರಿಗೆ ಈ ರೀತಿ ಹೇಳಿದರು: “ಆ ವ್ಯಕ್ತಿಯನ್ನು ಕರೆಯಿಸಿ, ಇಲ್ಲಿ ನನ್ನ ಟೇಬಲ್ ಬಳಿಯಲ್ಲಿಯೇ ಕುಳಿತುಕೊಳ್ಳಲಿ.” ಆ ವ್ಯಕ್ತಿ ಬಂದು ನೆಲ್ಸನ್ ಮಂಡೇಲಾರವರ ಎದುರು ಕುಳಿತುಕೊಂಡನು. ಎಲ್ಲರೂ ಊಟ ಮಾಡಲು ಶುರು ಮಾಡಿದರು. ಆ ವ್ಯಕ್ತಿಯೂ ಕೂಡ ಊಟ ಮಾಡಲು ಶುರು ಮಾಡಿದನು. ಆದರೆ ಆ ವ್ಯಕ್ತಿಯ ಕೈಗಳು ನಡುಗುತ್ತಿದ್ದವು. ಬೇಗನೆ ಊಟ ಮಾಡಿದ ಆ ವ್ಯಕ್ತಿ ತಲೆ ತಗ್ಗಿಸಿಕೊಂಡು ಹೊಟೇಲ್ನಿಂದ ಹೊರಟು ಹೋದ. ಆ ವ್ಯಕ್ತಿ ಹೊರಗಡೆ ಹೋದ ನಂತರ ಸುರಕ್ಷೆಯ ಅಧಿಕಾರಿ ಮಂಡೇಲಾರನ್ನು ಕೇಳಿದನು: “ಸರ್ ಆತನಿಗೆ ಜ್ವರ ಬಂದಿರಬಹುದು, ಹಾಗಾಗಿ ಊಟ ಮಾಡುವಾಗ ಅವನ ಕೈಗಳು ನಡುಗುತ್ತಿದ್ದವು.” ನೆಲ್ಸನ್ ಮಂಡೇಲಾ ನಸುನಗುತ್ತಾ ಹೇಳಿದರು: “ಆ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾನೆ, ರೋಗಗ್ರಸ್ತನಲ್ಲ. ನಾನು ಯಾವ ಜೈಲಿನಲ್ಲಿ ಬಂಧಿಯಾಗಿದ್ದೆನೋ ಆ ಜೈಲಿನ ಜೈಲರ್ ಆಗಿದ್ದವನು ಆ ವ್ಯಕ್ತಿ. ನನಗೆ ಬಹಳ ಹಿಂಸೆ ಕೊಟ್ಟಿದ್ದನು. ನಾನು ಏಟು ತಿಂದೂ ಸುಸ್ತಾಗಿ ನೀರು ಕೇಳಿದಾಗ ಆ ವ್ಯಕ್ತಿ ನೀರು ಬೇಕಾ…? ಕುಡಿ ಎಂದು, ನನ್ನ ಮುಖದ ಮೇಲೆ ಮೂತ್ರ ಮಾಡುತ್ತಿದ್ದನು. ಈಗ ನಾನು ರಾಷ್ಟ್ರಪತಿ ಆಗಿದ್ದೇನೆ…!! ಆ ವ್ಯಕ್ತಿಗೆ ಮನವರಿಕೆ ಆಗಿದೆ, ತಾನು ಮಾಡಿದ ಕೆಲಸಕ್ಕೆ ಈಗ ತನಗೆ ಭಯಂಕರ ಶಿಕ್ಷೆ ಆಗಬಹುದು ಎಂದು. ಆದರೆ ಅದು ನನ್ನ ಸಂಸ್ಕಾರವಲ್ಲ. ನನಗೆ ಅನಿಸುತ್ತದೆ ದ್ವೇಷದ ಭಾವನೆಯಿಂದ ಕೆಲಸ ಮಾಡಿದರೆ ಅದು ವಿನಾಶಕ್ಕೆ ದಾರಿ ಮಾಡಿಕೊಡುತ್ತದೆ. ಧೈರ್ಯ ಮತ್ತು ಸಹಿಷ್ಣುತೆ ಇದ್ದರೆ ಮಾನಸಿಕ ಪರಿಪಕ್ವತೆ ಪೂರ್ಣವಾಗಿ ಸಾಧಿಸುತ್ತದೆ.’ ನೋಡಿ! ಎಂತಹ ವ್ಯಕ್ತಿತ್ವ ನೆಲ್ಸನ್ ಮಂಡೇಲಾರದ್ದು. ಮಹಾನ್ ವ್ಯಕ್ತಿಗಳ ಈ ತರಹದ ಕ್ಷಮಾಗುಣ, ಉದಾರತೆಗಳೇ ಅವರನ್ನು ಆ ಮೇರುತನಕ್ಕೆ ಕೊಂಡೊಯ್ಯುವವು ಅಲ್ಲವೆ? Courtesy : Whatsapp ಅನಿವಾರ್ಯವಾಗಿ ನಮ್ಮ ರಾಜಕೀಯದ (ಎಲ್ಲಾ ಪಕ್ಷಗಳಿಗೂ ಅನ್ವಯ) ದೊಂಬರಾಟಗಳನ್ನು ನಾವು ಗಮನಿಸುವುದಾದರೆ ನಾವು ಮೂರ್ಖರ ಆಳ್ವಿಕೆಯಲ್ಲಿ ಬದುಕುತ್ತಿರುವ ಬುದ್ಧಿಜೀವಿಗಳಲ್ಲದಿದ್ದರೂ ಸಾಮಾನ್ಯರಾಗಿದ್ದೇವೆ. ಜನಸಾಮಾನ್ಯರು ಮೌನವಾಗಿ ಕಾಸು ಪಡೆದು, ಮತ ಚಲಾಯಿಸಿದ್ದರ ಪರಿಣಾಮ ಇಂದು ಸರಿಯಾದ ಆರೋಗ್ಯಕರ ಸಮಾಜ, ಆಸ್ಪತ್ರೆಗಳು ನಮಗೆ ಇಲ್ಲವಾಗಿವೆ. ಬರಿ ನಮ್ಮ ಮನೆ, ನಾನು ಸರಿಯಾಗಿ ಕಾಸು ಕೂಡಿಟ್ಟುಕೊಂಡರೆ ಸಾಕು ಎಂದು ಬದುಕಿದ್ದರ ಪ್ರತಿಫಲ ಇಂದು ಕಾಸು ಕೆಲಸಕ್ಕೆ ಬಾರದ ಸಂಗತಿಯಾಗಿದೆ. ಸಣ್ಣ ಸಣ್ಣ ವಿಷಯಗಳಲ್ಲೂ ನಾವು ಅಪ್ರಾಮಾಣಿಕರಾಗಿ ಬದುಕಿದ್ದರ ಫಲ ಪ್ರಕೃತಿ ಇಂದು ಪಾಠ ಕಲಿಸಲು ಮುಂದಾಗಿದೆ. ಪಾಠ ಕಲಿತು ಪ್ರಾಮಾಣಿಕವಾಗಿ ಬದುಕದಿದ್ದರೆ ಮನುಜ ಕುಲದ ವಿನಾಶ ಖಂಡಿತ. ಇತರೆ ಜೀವಿಗಳನ್ನು ಹೊರತುಪಡಿಸಿ ಮನುಜ ಕುಲಕ್ಕೆ ಮಾತ್ರ ಕೊರೋನ ಅಂದರೆ ಮನುಷ್ಯ ಜೀವಿಯಷ್ಟು ಪ್ರಕೃತಿಯಲ್ಲಿ ಇನ್ನೊಂದು ಅಪ್ರಾಮಾಣಿಕ ಜೀವಿಯನ್ನು ನಾವೂ ಕಾಣಲಾರೆವು...
#ನಿರಾತಂಕಕವನ ಶೇಖರ್ ಗಣಗಲೂರು ರವರ ವ್ಯಕ್ತಿತ್ವ ವಿಕಾಸದ ಪುಸ್ತಕ “ಗೆಲುವು” ನಮ್ಮ ನಿರುತ ಪ್ರಕಾಶನದಿಂದ ಇನ್ನೂ ಕೆಲವೇ ದಿನಗಳಲ್ಲಿ ಲೋಕಾರ್ಪಣೆಯಾಗುತ್ತಿದೆ. ಶೇಖರ್ ರವರ ಮೊದಲನೆಯ ಪುಸ್ತಕ “ಬದುಕು ಬದಲಾಯಿಸಿದ ಕಥನಗಳು” ಈಗಾಗಲೇ ಮಾರುಕಟ್ಟೆಯಲ್ಲಿ ಯಶಸ್ವಿಯಾಗಿ 2000 ಪ್ರತಿಗಳು ಮಾರಾಟವಾಗಿ ಮೂರನೆಯ ಆವೃತ್ತಿಗೆ ಸಜ್ಜುಗೊಂಡಿದೆ.
ಶೇಖರ್ ರವರು ತಮ್ಮ ಎರಡನೆಯ ಪುಸ್ತಕದಲ್ಲಿ “ಗೆಲುವಿನ ವಲಯ” ಮತ್ತು “ಗೆಲುವಿನ ವಲಯದ ಸ್ವಯಂ-ಮೌಲ್ಯಮಾಪನದ ಸಾಧನ” ಎಂಬ ಹೊಸ ಪರಿಕಲ್ಪನೆಗಳನ್ನು ಪರಿಚಯಿಸುವುದರ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಬಲ್ಲ ಪ್ರಭಲವಾದ 9 ಸಾಧನಗಳನ್ನು ನೀಡಿದ್ದಾರೆ. ಈ ರೀತಿಯ ಸಾಧನಗಳು ಕನ್ನಡದಲ್ಲಿ ಬಹಳ ವಿರಳ ಹಾಗೂ ಇವು ಪ್ರತಿಯೊಬ್ಬರೂ ತಮ್ಮನ್ನು ತಾವು ಅರಿತುಕೊಳ್ಳಲು ದಾರಿದೀಪವಾಗಬಲ್ಲವು. ಶೇಖರ್ ರವರ ಈ ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿರುವುದು ಶ್ರೀಯುತ ರವಿ ಡಿ. ಚನ್ನಣ್ಣನವರ್ ರವರು. ಇವರಿಗೆ ನಮ್ಮ ನಿರುತ ಪ್ರಕಾಶನದಿಂದ ಹಾಗೂ ಲೇಖಕರ ವತಿಯಿಂದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ರೀತಿಯ ಅಮೂಲ್ಯವಾದ ಕೃತಿಯನ್ನು ಗೆಳೆಯ ಶೇಖರ್ ನಮಗೆ ಪ್ರಕಾಶನ ಮಾಡಲು ನೀಡಿರುವುದಕ್ಕಾಗಿ ಗೆಳೆಯ ಶೇಖರ್ ರವರಿಗೆ ಋಣಿಯಾಗಿದ್ದೇನೆ. ಈ ಪುಸ್ತಕದ ಮುಖಪುಟವನ್ನು ಶ್ರೀಯುತ ಹಾದಿಮನಿ ಯವರು ಅಚ್ಚುಕಟ್ಟಾಗಿ ಹಾಗೂ ಅತ್ಯಂತ ಸುಂದರವಾಗಿ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಿರುತ ಪ್ರಕಾಶನದ ಪುಸ್ತಕಗಳನ್ನು ಕೊಂಡು ಓದಲು ನಮ್ಮ ವೆಬ್ ಸೈಟ್ ಗೆ ಭೇಟಿ ನೀಟಿ: www.nirutapublications.org ನಮ್ಮ ಪುಸ್ತಕದ FACEBOOK GROUP ಗೆ ಸದಸ್ಯರಾಗಿ ಎಲ್ಲ ರೀತಿಯ ಪುಸ್ತಕಗಳ ಕುರಿತು ಮಾಹಿತಿ ಪಡೆದುಕೊಳ್ಳಿ :- https://www.facebook.com/groups/socialworkbooks ರಮೇಶ ಎಂ.ಎಚ್. ನಿರಾತಂಕ ನಾನು ಓದಿದ್ದು ನ್ಯಾಷನಲ್ ಕಾಲೇಜ್ ಬಸವನಗುಡಿಯಲ್ಲಿ. ನಮಗೆ ದಿನನಿತ್ಯ ಎಚ್. ನರಸಿಂಹಯ್ಯ ರವರ ದರ್ಶನವಾಗುತ್ತಿತ್ತು. ಎಚ್.ಎನ್. ಹಾಲ್ ನಲ್ಲಿ ದೊಡ್ಡದಾಗಿ ಅವರ ಒಂದು ವಾಕ್ಯ ಬರೆಸಿದ್ದಾರೆ. "ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ ಎಂದು" ಆದರೆ ಕೆಲವೊಮ್ಮೆ ಪ್ರಶ್ನೆಗಳಿಗೆ ಉತ್ತರ ದೊರಕುವುದಿಲ್ಲ ಎಂಬ ಸತ್ಯದ ಅರಿವಾಗುತ್ತಿದೆ. ಆದರೆ ಪ್ರಶ್ನಿಸುವುದನ್ನು ನಿಲ್ಲಿಸಬಾರದು. ಯಾರಿಗೋ ಹೆದರಿ ಮನಸ್ಸಿನ ಭಾವನೆ ಹೊರಗೆ ಹಾಕದಿದ್ದರೆ ಹೇಡಿ ಅನಿಸುತ್ತದೆ. ನಮ್ಮ ನಮ್ಮ ಅನುಕೂಲಗಳಿಗೆ ತಕ್ಕಂತೆ ಬದುಕುವುದು ಕಲಿತರೆ ಸಮಾಜ ಹಾಳಾಗುತ್ತದೆ. ಹಾಳಾದ ಸಮಾಜದಲ್ಲಿ ನಮ್ಮ ಮುಂದಿನ ಜನಾಂಗ ಹಾಗೂ ನಮ್ಮದೇ ಮಕ್ಕಳು ಬದುಕಬೇಕಾಗುತ್ತದೆ. ಸತ್ಯಶೋಧನೆಯ ಹುಡುಕಾಟದ ಪ್ರಯಾಣದಲ್ಲಿ ಹೆದರುವ ಅವಶ್ಯಕತೆ ಇಲ್ಲ. ರಮೇಶ ಎಂ.ಎಚ್. ನಿರಾತಂಕ ನ್ಯಾಷನಲ್ ಕಾಲೇಜಿನ ದಿನಗಳ ಸವಿ ಸವಿ ನೆನಪುಗಳು
ಐ.ಎ.ಎಸ್. ಅಧಿಕಾರ ಮತ್ತು ಸಾಮಾಜಿಕ ಸ್ಥಾನಮಾನ, ಎದುರಲ್ಲಿ ಕಂಡರೆ ಸಾಕು ಎದ್ದು ನಿಂತು ಕೈ ಮುಗಿವ ಜನ, ಅಬ್ಬಾ! ನೆನೆಸಿಕೊಂಡರೆ ಏನೋ ಒಂದು ತರಹದ ಸಂತೋಷ. ಇಂತಹ ಅಧಿಕಾರ, ಗೌರವ, ಮನ್ನಣೆಗಳನ್ನು ಬೇಡವೆನ್ನುವುದು ಯಾರಿಗಾದರು ಸಾಧ್ಯವೇ? ಇಲ್ಲಪ್ಪ ಎನ್ನುವುದು ಸಾಮಾನ್ಯವಾಗಿ ಎಲ್ಲರ ಬಾಯಿಯಿಂದ ಕೇಳಿಬರುವ ಉತ್ತರ. ಆ ರೀತಿಯ ತೀರ್ಮಾನ ತೆಗೆದುಕೊಳ್ಳುವ ದಿಟ್ಟತನ ಕೇವಲ ಅಪರೂಪ ಮತ್ತು ಅಸಾಧ್ಯರು ಎನಿಸುವಂತಹ ಕೆಲವೇ ಕೆಲವು ವ್ಯಕ್ತಿಗಳಿಗೆ ಮಾತ್ರ ಸಾಧ್ಯ.
ಅಂತಹ ಅಸಮಾನ್ಯರ ಸಾಲಿನಲ್ಲಿ ಸೇರಿಸಬಹುದಾದಂತ ಹೆಸರೇ “ಅರುಣಾರಾಯ್”. ಇವರನ್ನು ಸಮಾಜ ಕಾರ್ಯದ ಅರುಣೋದಯ ಎಂದರೆ ತಪ್ಪಾಗಲಾರದು. ಇವರು ತಮ್ಮ ಜಾಣ್ಮೆ, ಬುದ್ದಿಶಕ್ತಿಗೆ ದೊರೆತ ಐ.ಎ.ಎಸ್. ಅಧಿಕಾರ ತೊರೆದು ಸಾಮಾಜಿಕ ಕಾರ್ಯಕರ್ತೆಯಾಗಿ ಸಲ್ಲಿಸಿದ ಸೇವೆ, ಕೊಡುಗೆ ಅಪಾರ. ಚೆನ್ನೈನಲ್ಲಿ ಹುಟ್ಟಿ, ದೆಹಲಿಯಲ್ಲಿ ಬೆಳೆದ ಅರುಣಾ 1968ರಲ್ಲಿ ಐ.ಎ.ಎಸ್. ಪಾಸು ಮಾಡಿ. ಆರು ವರ್ಷಗಳ ಕಾಲ ಅಧಿಕಾರಿಯಾಗಿ ಸೇವೆಸಲ್ಲಿಸಿದರು. ನಂತರ ತನ್ನ ಪತಿ ಸಂಜಿತ್ `ಬಂಕರ್' ರಾಯ್ ಅವರು ರಾಜಾಸ್ತಾನದ ತಿಲೋನಿಯಾದಲ್ಲಿ ನಡೆಸುತ್ತಿದ್ದ ಸಾಮಾಜಿಕ ಕಲ್ಯಾಣ ಸಂಶೋಧನಾ ಸಂಸ್ಥೆಯನ್ನು ಸೇರಿದರು. ನಂತರ 1983ರಲ್ಲಿ ಸಾಮಾಜಿಕ ಕಲ್ಯಾಣ ಸಂಶೋಧನಾ ಸಂಸ್ಥೆಯನ್ನು ತೊರೆದು 80ರ ದಶಕದ ಕೊನೆಯ ಭಾಗದಲ್ಲಿ ಅರುಣಾ ಮತ್ತು ಅವರ ಸಹೋದ್ಯೋಗಿ ಶಂಕರ್ ಸಿಂಗ್ರು “ಮಜ್ದೂರ್ ಕಿಸಾನ್ ಶಕ್ತಿ ಸಂಘಟನ್”ಸ್ಥಾಪಿಸಿದರು. ಗ್ರಾಮೀಣ ಜನತೆಗೆ ಅವರ ಹಕ್ಕುಗಳನ್ನು ತಿಳಿಸಲು ಈ ಸಂಘಟನೆ ಪ್ರಯತ್ನಿಸಿತು. ಈ ಪ್ರಕ್ರಿಯೆಯಲ್ಲಿಯೇ ಮಾಹಿತಿ ಹಕ್ಕು ಎಂಬ ಪರಿಕಲ್ಪನೆಯೂ ಹುಟ್ಟಿಕೊಂಡಿತು. ಈ ಸಂಘಟನೆಯ ನೇತೃತ್ವದಲ್ಲಿ ಹಲವಾರು ಹೋರಾಟಗಳು ಧರಣಿಗಳನ್ನು ನಡೆಸಲಾಯಿತು. ಸಮಾಜಕಾರ್ಯ ಅಧ್ಯಾಪನದಿಂದ ನಿವೃತ್ತಿ ಹೊಂದಿಯೇ ಹದಿನಾರು ವರ್ಷಗಳು ಉರುಳಿದವು. ನನ್ನ ಜೀವನವನ್ನು ಸಿಂಹಾವಲೋಕನ ಮಾಡಿದರೆ ಕಾಣುವುದೇನು? ಸಮಾಜಕಾರ್ಯದ ಮತ್ತು ನನ್ನ ಜೀವನಾನುಭವದ ಹೆಜ್ಜೆಗುರುತುಗಳೇನು? ಈ ಪ್ರಶ್ನೆಗಳ ಸುತ್ತಲೇ ತಿರುಗುತ್ತಿರುವ ಸ್ಥೂಲಾವಲೋಕನ ಈ ಮುಂದಿನದ್ದು.
ಪ್ರವೇಶ ಆಕಸ್ಮಿಕ ಸಮಾಜಕಾರ್ಯಕ್ಕೆ ನಾನು ಪ್ರವೇಶಿಸಿದ್ದು ಆಶ್ಚರ್ಯಕರ ರೀತಿಯಲ್ಲಿ, ಬಹುಶಃ ನನ್ನ ಅರಿವಿಲ್ಲದಂತೆಯೇ' ಗುರುತಿಸಬಹುದಾದರೆ ಸದಾಶಯ ಹೊಂದಿದ್ದ ಹಿರಿಯರೊಬ್ಬರ ಸಲಹೆ ಸೂಚನೆಯ ಮೇರೆಗೆ, ಕನ್ನಡ ಸಾಹಿತ್ಯದ ಆರಾಧಕ ಅಥವಾ ಕೃಷಿಕ ಆಗಬೇಕು ಎಂಬುದು ನನ್ನ ಅಪೇಕ್ಷೆಯಾಗಿತ್ತು. ಪ್ರೌಢಶಾಲೆಯಲ್ಲಿ ಓದುತ್ತಿದ್ದಾಗಲೇ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡು, ಕವನ ಪ್ರಬಂಧ ರಚನೆಯಲ್ಲಿ ತೊಡಗಿದ್ದು, ಕನ್ನಡ ಸಾಹಿತ್ಯ ಕೃತಿಗಳನ್ನೇ ಓದುವುದರಲ್ಲಿ ಹೆಚ್ಚಿನ ಆಸಕ್ತಿ, ಆಸ್ಥೆಯನ್ನು ತಳೆದಿದ್ದೆ. ಅಂದಿನ ಮದ್ರಾಸು ಪ್ರಾಂತ್ಯಕ್ಕೆ ಎಸ್.ಎಸ್.ಎಲ್.ಸಿ., ಪರೀಕ್ಷೆಯಲ್ಲಿ ಕನ್ನಡದಲ್ಲಿ ಪ್ರಥಮ ಸ್ಥಾನ ಪಡೆದಿದ್ದೆ. ನನ್ನ ಗುರುಗಳೂ ನನಗೆ ಪ್ರೋತ್ಸಾಹದ ನೆರವು ನೀಡುತ್ತಿದ್ದರು. ಇದೂ ನನ್ನ ಕನ್ನಡ ದುಡಿಮೆಗೆ ಒತ್ತಾಸೆಯಾಯ್ತು. (ಆರ್ಥಿಕ ಅನನುಕೂಲ ಮತ್ತು ಇತರ ತೊಂದರೆಗಳ ಕಾರಣದಿಂದ ಒಂದು ವರ್ಷ ನನ್ನ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದಿದ್ದುದರಿಂದ ಪತ್ರಿಕೋದ್ಯಮಿಯಾಗಿ ಹುಬ್ಬಳ್ಳಿ, ದಾವಣಗೆರೆ ನಗರಗಳಲ್ಲಿ ಕೆಲಸ ಮಾಡಬೇಕಾಯ್ತು) ಪ್ರೌಢಶಾಲಾ ಶಿಕ್ಷಣದ ನಂತರ ನನ್ನ ಅಣ್ಣ ಹಿ.ಮ. ನಾಗಯ್ಯನವರ ಸಹಾಯದಿಂದ ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಇಂಟರ್ ಮೀಡಿಯಟ್ ಸೇರಿದೆ. ಅಲ್ಲಿ ಓದುವಾಗ ಪ್ರೊ. ಕೆ.ಎಸ್. ಕೃಷ್ಣಮೂರ್ತಿ, ಪ್ರೊ. ಗೋಪಾಲಕೃಷ್ಣ ಅಡಿಗ, ಇಂಗ್ಲೆಂಡಿನ ಡೇವಿಡ್ ಹಾರ್ಸ್ ಬರೋ ಇಂಥವರ ನೆರವು ದೊರೆಯಿತು. ಅಲ್ಲಿಯೇ ಕರುಣಾಮಯಿ ಫಾದರ್ ಮುತಡಂ ಕಷ್ಟಕಾಲದಲ್ಲಿ ನೆರವಾದರು. ಆ ಅಧ್ಯಯನ ಕಾಲದಲ್ಲಿಯೇ ಕನ್ನಡದ ಕೃಷಿ ನಡೆದು ಅಂತಿಮ ಪರೀಕ್ಷೆಯಲ್ಲಿ ಒಂಭತ್ತನೆಯ ರ್ಯಾಂಕ್ ಪಡೆದುದಲ್ಲದೆ ಮೈಸೂರು ವಿಶ್ವವಿದ್ಯಾಲಯಕ್ಕೆ ಕನ್ನಡದಲ್ಲಿ ಪ್ರಥಮ ಸ್ಥಾನ ದೊರೆಕಿಸಿಕೊಂಡೆ ಎಂದು ನೆನಪು. ಆದುದರಿಂದಲೂ ಮಹಾರಾಜ ಕಾಲೇಜಿನಲ್ಲಿ ಕನ್ನಡ ಆನರ್ಸ್ ಓದಲು ನನಗೆ ಸಹಜವಾಗಿಯೇ ಅವಕಾಶ ಸಿಕ್ಕಿದುದಲ್ಲದೆ ಮೆರಿಟ್ ಸ್ಕಾಲರ್ಷಿಪ್ ಕೂಡಾ ದೊರೆಯಿತು. ವೇದಿಕೆಯ ಮೇಲೆ ಆಸೀನರಾಗಿರುವ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿರವರಾದ ಪ್ರೊ. ನರಸಿಂಹಮೂರ್ತಿ. ಎನ್, ಮಾರ್ಗದರ್ಶಕರಾದ ಪ್ರೊ. ಕೆ ಭೈರಪ್ಪ, ಇಂದಿನ ಕಾರ್ಯಕ್ರಮದ ಕೇಂದ್ರಬಿಂದುವಾದ ಡಾ|| ಸಿ.ಆರ್.ಗೋಪಾಲ್, ನನ್ನ ಆತ್ಮೀಯ ಸ್ನೇಹಿತರಾದ ಶ್ರೀ. ಸಿದ್ಧರಾಮಣ್ಣ.ಎಸ್, ಆತ್ಮೀಯರು, ಹಿರಿಯರಾದ ಪ್ರೊ. ರಾಜೇಂದ್ರಕುಮಾರ್, ನಮ್ಮ ಪ್ರೀತಿಯ ಪ್ರೊ. ರಮೇಶ್ ಬಿ., ಅನುಪಸ್ಥಿತಿಯಲ್ಲಿ ಪ್ರೊ. ಆರ್.ಶಿವಪ್ಪ, ಹಿರಿಯ ಸಾಹಿತಿಗಳಾದ ಡಾ. ಎಸ್.ಹೆಚ್. ಸತ್ಯನಾರಾಯಣ, ನಿರಾತಂಕದ ಟ್ರಸ್ಟಿಯವರಾದ ಶ್ರೀಮತಿ. ಕುಸುಮ, ನನ್ನ ಆತ್ಮೀಯ ಗೆಳೆಯರಾದ ಡಾ. ಬಿ.ಕೆ. ಕೆಂಪೇಗೌಡ ರವರೇ
ಗಂಭೀರವಾಗಿ ಪುಸ್ತಕಗಳನ್ನು ಓದುವವರು, ಬರೆಯುವವರು ವಿರಳವಾಗಿರುವ ಸಂದರ್ಭದಲ್ಲಿ ಪುಸ್ತಕ ಪ್ರಕಾಶನ ಅತ್ಯಂತ ಲಾಭ ತಂದು ಕೊಡುವ ಉದ್ದಿಮೆಯಲ್ಲ. ಆದರೂ ಸಮಾಜಕಾರ್ಯ ಕ್ಷೇತ್ರಕ್ಕೆ ಸಾಹಿತ್ಯ ಸೃಷ್ಟಿ ಮಾಡಬೇಕು ಎಂಬ ಸದುದ್ದೇಶದಿಂದ ನಿರುತ ಪ್ರಕಾಶನ ಸಂಸ್ಥೆಯನ್ನು ಹುಟ್ಟುಹಾಕಲಾಯಿತು. ಇದುವರೆಗೂ 100 ಕ್ಕೂ ಹೆಚ್ಚು ಕೃತಿಗಳನ್ನು ನಿರುತ ಪ್ರಕಾಶನದಿಂದ ಹೊರತರಲಾಗಿದೆ. ಈ ಪ್ರಯತ್ನದಲ್ಲಿ ಸಮಾಜಕಾರ್ಯ ಕ್ಷೇತ್ರಕ್ಕೆ ವಿಶೇಷವಾದ ಆದ್ಯತೆ ನೀಡಿ ಹತ್ತು-ಹಲವು ಸಮಾಜಕಾರ್ಯ ಕ್ಷೇತ್ರದ ಕೃತಿಗಳನ್ನು ಹೊರತಂದಿರುವುದು ನಮ್ಮ ಸಂಸ್ಥೆಗೆ ಹೆಮ್ಮೆಯ ಸಂಗತಿ. ನಾನೇನು ತಪ್ಪು ಮಾಡದ ಪರಮಾತ್ಮನಲ್ಲ
ಒಮ್ಮೊಮ್ಮೆ ತಪ್ಪುಗಳನ್ನು ಎತ್ತಿ ತೋರಿದಾಗ ತಲೆ ಬಾಗುವುದಿಲ್ಲ ನನ್ನ ತಪ್ಪು ತಿದ್ದು ನನ್ನಗೆಳೆಯ, ನಾ ನಿನ್ನ ತಪ್ಪು ತಿಳಿಯುವುದಿಲ್ಲ ತಪ್ಪು ಹೇಳಲು ಕೇಳಲು ಒಂದು ರೀತಿ ಇದೆ, ಸಮಯವಿದೆ ಸಂಯಮದಿ ಕಾದು ಹೇಳದ ವಿಷಯ ಜಗದಿ ಮತ್ತೆ ಏನಿದೆ ನನ್ನ ಆರು ನಿನಗೆ ಒಂಬತ್ತರಂತೆ ಕಾಣಬಹುದು ನನ್ನ ದೃ ಷ್ಟಿಯಿಂದ ಒಮ್ಮೆ ನೋಡು ಸತ್ಯ ಕಾಣ ಸಿಗುವುದು ನಾ ತಪ್ಪು ಮಾಡಿದರೆ ಕ್ಷಮಿಸಿ ಬಿಡು ಮನವ ಬಿಚ್ಚಿ ಮಾತನಾಡು ನಿನ್ನ ಅನಿಸಿಕೆಯನ್ನು ತಿಳಿಸಿಬಿಡು ಮಿಗಿಲಲ್ಲ ತಪ್ಪು ಸ್ನೇಹಕಿಂತ ಮನದಿ ಕೊರಗಿ ಕೊರಗಿ ಅನುಭವಿಸದಿರು ಏಕಾಂತ ತಪ್ಪು ಮಾಡದವರು ಯಾರಿಲ್ಲ ಜಗದಲಿ ಎಲ್ಲರೂ ಸ್ವಾರ್ಥಿಗಳೆ ಮನದಲಿ ರಮೇಶ ಎಂ.ಎಚ್. ನಿರಾತಂಕ ರಮೇಶ ಎಂ.ಎಚ್. ನಿರಾತಂಕ ನಿರಾತಂಕ ಸಂಸ್ಥೆ 2007 ರಲ್ಲಿ ಆರಂಭಿಸಿ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಸಮಾಜಕಾರ್ಯದ ತತ್ವ ಸಿದ್ಧಾಂತಗಳ ಅಡಿಯಲ್ಲಿ ಆಯೋಜಿಸಿಕೊಂಡು ಬರುತ್ತಿದ್ದೇವೆ. “ಸಮಾಜಕಾರ್ಯದ ಹೆಜ್ಜೆಗಳು”ಪತ್ರಿಕೆ ಹಾಗೂ ಹಲವಾರು ಪುಸ್ತಕಗಳನ್ನು ಪ್ರಕಟಿಸಿ 100 ಕ್ಕೂ ಹೆಚ್ಚು ಸಾಹಿತ್ಯಲೋಕಕ್ಕೆ ಹಾಗೂ 10ಕ್ಕೂ ಹೆಚ್ಚು ಕೃತಿಗಳನ್ನು ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ನಿರಾತಂಕವನ್ನು ಅತ್ಯಂತ ದೂರದೃಷ್ಟಿಯಿಂದ ಕಟ್ಟಿದ ಸಂಸ್ಥೆಯಾಗಿದೆ.
ಆತಂಕವನ್ನು ದೂರ ಸರಿಸಿ, ವಿಶ್ವಮಾನವ ಸಂದೇಶವ ಪಸರಿಸಿ, ನೆಮ್ಮದಿಯ ಬದುಕು ನಮ್ಮದಾಗಲಿ ಎನುತ, ಸಮಾನ ಮನಸ್ಕ ಗೆಳೆಯರೆಲ್ಲರೂ ಸೇರಿ ಕಟ್ಟಿದ ಸಹೃದಯಿಗಳ ತಂಡ ನಿರಾತಂಕ. ಭಾಷೆ, ನೆಲ, ಕೈಗಾರಿಕೆ ಹಾಗೂ ಮಾನವ ಸಂಪನ್ಮೂಲಗಳು ಕೂಡಾ ಸಹ ಅವಿನಾಭಾವವಾಗಿ ಬೆಸೆದುಕೊಂಡಿವೆ. ಆಧುನಿಕವಾಗಿ ನಮಗೆ ದಿನನಿತ್ಯದ ಒಡನಾಟದಲ್ಲಿ ಆಂಗ್ಲ ಭಾಷೆ ಅನಿವಾರ್ಯ ಹಾಗೂ ಮಹತ್ವ ಎಂದು ಎನಿಸಿದರೂ ಕೂಡ ತಾಯಿ ಭಾಷೆ ನಮ್ಮ ಮನದಲ್ಲಿ ಅಗ್ರಸ್ಥಾನ ಪಡೆದಿರುತ್ತದೆ. ಅವನು ನನ್ನ ಆತ್ಮೀಯ ಗೆಳೆಯ, ಮಹೇಶ್ ಚುನಾವಣಾ ಪ್ರಚಾರದ ವೇಳೆ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ಹಾಕುವಂತೆ ಕೇಳಿಕೊಂಡೆ. ಅವನು ಆನಂದದಿಂದ ನಮ್ಮ ಲೇಔಟ್ ನವರನ್ನೆಲ್ಲಾ ಸೇರಿಸುತ್ತೇನೆ. ನಾನೆ ಆ ಲೇಔಟ್ ನ ಸಂಘದ ಅಧ್ಯಕ್ಷ, ಒಮ್ಮೆ ಅಭ್ಯರ್ಥಿಯನ್ನು ಕರೆದುಕೊಂಡು ಬನ್ನಿ ಎಂದರು. ನಾನು ಸರಿ ಎಂದು ನನ್ನ ಇನ್ನೂ ಕೆಲವು ಗೆಳೆಯರಿಗೆ ಹೇಳಿ ಆ ಲೇಔಟ್ ಗೆ ಪ್ರಚಾರಕ್ಕೆ ಹೋದೆ. ಅಲ್ಲಿ ನನ್ನ ಇನ್ನೊಬ್ಬ ಪ್ರಾಣ ಸ್ನೇಹಿತ ಕೂಡ ಆ ಸಭೆಗೆ ಬಂದಿದ್ದ. ಅವನನ್ನು ನಮ್ಮ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಪ್ಪ ಎಂದು ವಿನಂತಿಸಿದೆ. ಅದಕ್ಕೆ ಅವನು ಸಮ್ಮತಿಸಿದ, ಈ ನನ್ನ ಪ್ರಾಣ ಸ್ನೇಹಿತನಿಗೆ ಹಲವು ಉಪಕಾರಗಳನ್ನು ನಾನು ಮಾಡಿದ್ದೆ. ಅವನ ಮಗನಿಗೆ ಒಂದು ಪ್ರಮುಖ ಶಾಲೆಯಲ್ಲಿ ಸೀಟು, ಅವನ ಪುಸ್ತಕ ಪ್ರಕಟಣೆ ಮಾಡಿದ್ದೆ ಹಾಗೂ ನಾನು ಅವನಿಗೆ ಒಂದು ಸೈಟು ತೋರಿಸಿ ಖರೀದಿ ಮಾಡಲು ನೆರವಾಗಿದ್ದೆ. ಹೀಗೆ ಹತ್ತು ಹಲವು ಉಪಕಾರ ಮಾಡಿದ್ದೆ. ಹಾಗಾಗಿ ಅವನು ನನ್ನ ಪರ ಪ್ರಚಾರ ಮಾಡುತ್ತಾನೆ ಎಂದು ನಂಬಿದ್ದೆ ಕೂಡ.
ಕೆಲವು ದಿನಗಳು ಕಳೆದ ನಂತರ ನನ್ನ ಸ್ನೇಹಿತ ಮಹೇಶ ಸಿಕ್ಕಿದ್ದ. ನಾನು ಎಂದಿನಂತೆ ಪ್ರಚಾರ ಹೇಗೆ ನಡೆಯುತ್ತಿದೆ ಎಂದು ಕೇಳಿದೆ ಹಾಗೂ ನನ್ನ ಪ್ರಾಣಕ್ಕಿಂತ ಶಶಿಧರನೂ ನಿನಗೆ ಸಹಾಯ ಮಾಡುತ್ತಿರುವನೆ ಎಂದೆ? ಅದಕ್ಕೆ ಅವನು ಸಹಾಯ ಮಾಡುವುದು ಹಾಗಿರಲಿ, ನೀನು ಅಂದು ಸಭೆ ಮಾಡಿ ಹೊರಟ ನಂತರ ನಿನ್ನ ಎದುರಾಳಿ ಪಕ್ಷದ ಅಭ್ಯರ್ಥಿಯನ್ನು ಕರೆಸಿ ನಿನ್ನ ಅಭ್ಯರ್ಥಿ ವಿರುದ್ಧ ಪ್ರಚಾರ ನಡೆಸಿದ ಎಂದನು! ನನಗೆ ಕೇಳಿ ಆಶ್ಚರ್ಯವಾಯಿತು….. ಕೆಲವೊಮ್ಮೆ ನಮ್ಮ ಅನಿಸಿಕೆ ಸರಿ ಎಂದು ನಾವು ಹೇಳಿದರೆ ಅದನ್ನು ಒಪ್ಪದ ನನ್ನ ಸ್ನೇಹಿತ ಅದು ಹೀಗೂ ಇರಬಹುದು, ಅದು ಹಾಗೂ ಇರಬಹುದು ಎಂದು ರಾತ್ರಿಯಿಂದ ಬೆಳಗ್ಗಿನ ಜಾವದ ತನಕ ಚರ್ಚೆ ನಡೆಸಿ, ನಂತರ ನಿನ್ನ ಅನಿಸಿಕೆ ನಿನಗೆ ಇರಲಿ, ನನ್ನ ಅನಿಸಿಕೆ ನನಗಿರಲಿ ಗೆಳೆಯ ಎಂದು ವಿಷಯಗಳ ಚರ್ಚೆ ನಿಲ್ಲಿಸಿಬಿಡುತ್ತೇವೆ. ಕೊನೆಗೆ ನನ್ನನ್ನು ಅವನು ಒಪ್ಪಲಿಲ್ಲ, ಅವನನ್ನು ನಾನು ಒಪ್ಪಲಿಲ್ಲ. ಇಬ್ಬರ ನಡುವೆ ಮತ್ತೆ ನೂರು ಪ್ರಶ್ನೆಗಳು ಎದ್ದು, ಆ ನೂರು ಪ್ರಶ್ನೆಗಳು ತಲೆಯಲ್ಲಿ ಕೊರೆಯುತ್ತವೆ. ನನ್ನ ಸ್ನೇಹಿತ ನನ್ನ ವಾದವನ್ನು ಒಪ್ಪಿಕೊಳ್ಳದಿದ್ದರಿಂದ ಅವನ ಬಗೆಗೆ ಅಸಮಾಧಾನ ಹೆಚ್ಚಾಗತೊಡಗುತ್ತವೆ. ಮತ್ತೆ ನನ್ನ ಸ್ನೇಹಿತನಿಗೂ ಅದೇ ರೀತಿಯ ಅನುಭವ ಆಗಿದೆ. ಇದಕ್ಕೆ ಪರಿಹಾರವೆಂಬಂತೆ ಇತ್ತೀಚಿಗೆ ನಾನು ಅಂತಿಮವಾಗಿ ನನ್ನ ಸ್ನೇಹಿತನನ್ನು ಒಪ್ಪಿಸಲು ಜೋತು ಬೀಳುವುದು. ನಿನ್ನ ಅನಿಸಿಕೆ, ನನ್ನ ಅನಿಸಿಕೆ ಎರಡೂ ತಪ್ಪಿರಬಹುದು, ಆದರೆ ಬುದ್ಧನು ಕಂಡುಕೊಂಡ ಸತ್ಯದ ಬೆಳಕಿನಲ್ಲಿ ನಮ್ಮ ವಾದವನ್ನು ಮಾಡೋಣ ಎನ್ನುತ್ತ ಬುದ್ಧ ಈ ರೀತಿ ಹೇಳಿರುತ್ತಾನೆ ಎಂದು ಬುದ್ಧನ ಎರಡು ವಾಕ್ಯ Quote ಮಾಡಿ ಹೇಳಿದರೆ ತಕ್ಷಣ ನನ್ನ ಸ್ನೇಹಿತ ಇರಬಹುದು ಎಂದು ಒಪ್ಪಿ ವಾದಗಳಿಗೆ ತೆರೆ ಎಳೆದುಬಿಡುತ್ತಾನೆ. ಹಲವು ಸಂದರ್ಭಗಳಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಬುದ್ಧನ ದಾರಿ ಹೊರತು ಅನ್ಯಮಾರ್ಗವಿಲ್ಲ ಎನಿಸಿಬಿಡುತ್ತದೆ.
ರಮೇಶ ಎಂ.ಎಚ್. ನಿರಾತಂಕ ಅದೊಮ್ಮೆ ಅಂತರ್ಜಾಲ ತಾಣದಲ್ಲಿ ಓದಿದ ನೆನಪು. ಒಬ್ಬ ಗೃಹಿಣಿ ಒಂದು ಸುಂದರವಾದ ಹೂವಿನ ಗಿಡವನ್ನು ಮನೆಗೆ ತರುತ್ತಾರೆ. ಸುಮಾರು 2 ವರ್ಷಗಳ ಕಾಲ ನೀರನ್ನು ಹಾಕುತ್ತಾ ಪೋಷಣೆ ಮಾಡುತ್ತಾರೆ. ಆದರೆ ಆ ಹೂವಿನ ಗಿಡದಲ್ಲಿ ಯಾವುದೇ ಬೆಳವಣಿಗೆ ಕಂಡುಬರುವುದಿಲ್ಲ. ಅವರು ಆ ಹೂವಿನ ಗಿಡದಲ್ಲಿ ಯಾವುದೇ ಬದಲಾವಣೆ ಕಂಡುಬಾರದಿದ್ದಾಗ ಅನುಮಾನ ಬಂದು ಗಿಡವನ್ನು ಕುಂಡದಿಂದ ಬೇರ್ಪಡಿಸಿ ನೋಡುತ್ತಾರೆ. ಆಗ ಅವರಿಗೆ ತಿಳಿದದ್ದು ಅವರು ಮನೆಗೆ ತಂದು ಬೆಳೆಸಿದ್ದು ಪ್ಲಾಸ್ಟಿಕ್ ನಿಂದ ಮಾಡಿದ ನೈಜ ಹೂ ಗಿಡದಂತೆ ಭಾಸವಾಗುವ ಪ್ಲಾಸ್ಟಿಕ್ ಹೂವಿನ ಗಿಡ. ಆದರೆ ನೈಜ ಹೂವಿನ ಗಿಡದಂತೆ ಕಾಣಿಸುತ್ತಿರುತ್ತದೆ. ನೈಜ ಗಿಡದ ಪಕ್ಕ ಅದನ್ನು ಇಟ್ಟು ಹೋಲಿಸಿ ನೋಡಿದರೆ ಅದು ಪ್ಲಾಸ್ಟಿಕ್ ಗಿಡ ಎಂಬಂತೆ ಯಾವುದೇ ಅನುಮಾನ ಬಾರದಿರುವುದು ಅಚ್ಚರಿ ಮೂಡಿಸುತ್ತದೆ.
ಅದೊಂದು ದಿನ ಬಸವನಗುಡಿ ನ್ಯಾಷನಲ್ ಕಾಲೇಜಿನ ಬಿ.ಎ. ತರಗತಿಯಲ್ಲಿ ಸಮಾಜಶಾಸ್ತ್ರ ಪಾಠ ಮಾಡುತ್ತಿದ್ದ ನಮ್ಮ ಗುರುಗಳು ಒಂದು ನೈಜ ಕಥೆಯನ್ನು ಹೇಳಿದ್ದರು. ಅವರ ಸ್ನೇಹಿತ ಶೇಖರ್ (ಅವರ ಹೆಸರು ಮರೆತಿದ್ದೇನೆ) ವೈಚಾರಿಕ ಪ್ರಜ್ಞೆಯಿಂದ ಕೂಡಿದ್ದರಂತೆ. ಅವರು ಯಾವುದೇ ಅವೈಜ್ಞಾನಿಕ ಪದ್ಧತಿಯನ್ನು ಆಚರಣೆ ಮಾಡುತ್ತಿರಲಿಲ್ಲವಂತೆ. ಯಾವುದೇ ಶ್ರಾದ್ಧ, ತಿಥಿಗಳಿಗೆ ಕುರಿತಂತೆ ಅವರಿಗೆ ಯಾವುದೇ ನಂಬಿಕೆ ಇರಲಿಲ್ಲವಂತೆ. ಅದನ್ನು ಆಚರಿಸುವವರನ್ನು ಕಂಡರೆ ಅವರಿಗೆ ವಿರೋಧಿಸುತ್ತಿದ್ದರಂತೆ.
ಕೆಲವು ವರ್ಷಗಳ ನಂತರ ಶೇಖರ್ ರವರ ತಂದೆ ಮರಣ ಹೊಂದಿದರು. ಆಗ ಶೇಖರ್ ತಂದೆಯ ಶ್ರಾದ್ಧ, ತಿಥಿ, ಪುಣ್ಯ ನೆರವೇರಿಸಬೇಕಾದ ಅನಿವಾರ್ಯತೆ ಒದಗಿಬಂತು. ಆಗ ಶೇಖರ್ ತಂದೆಯ ತಿಥಿಯ ನಂತರ ತಲೆಯ ಕೂದಲನ್ನು ತೆಗೆಸಿದರಂತೆ. ಇದು ಕಾಲೇಜಿನ ಇತರ ಸಹೋದ್ಯೋಗಿಗಳಿಗೆ ಇದುವರೆಗೂ ವೈಚಾರಿಕ ಪ್ರಜ್ಞೆ ಎಂದು ಬೋಧನೆ ನೀಡುತ್ತಿದ್ದ ಶೇಖರ್ ತಾವೇ ಅಂಧಾನುಕರಣೆ ಮಾಡುತ್ತಿದ್ದಾರೆ ಎಂದು ಗುಸುಗುಸು ಶುರುವಾಯಿತು. ಅವರ ಆತ್ಮೀಯ ಸ್ನೇಹಿತರು ಅಲ್ಲ ಶೇಖರ್, ನೀನು ಇಷ್ಟು ದಿವಸ ಅಂಧಾನುಕರಣೆ ಮಾಡಬಾರದು ಎಂದು ವಿರೋಧ ವ್ಯಕ್ತಪಡಿಸಿ ಅತ್ಯಂತ ವೈಚಾರಿಕನೆಂಬಂತೆ ಬಿಂಬಿಸಿಕೊಂಡು ಇಂದು ನೀನೇ ತಿಥಿ, ಶ್ರಾದ್ಧ ಮಾಡಿ ತಲೆ ಬೋಳಿಸಿಕೊಂಡು ಬಂದಿರುವೆ. ಈ ರೀತಿ ಹೇಳುವುದೊಂದು, ಮಾಡುವುದೊಂದು ನಿನ್ನ ಘನತೆಗೆ ತಕ್ಕುದಾದುದೆ ಎಂದು ಪ್ರಶ್ನಿಸಿದರಂತೆ. ಇದಕ್ಕೆ ಉತ್ತರಿಸಿದ ಶೇಖರ್ ಹೌದಪ್ಪ, ನಾನು ವೈಚಾರಿಕನಾಗಿಯೇ ಇದ್ದೇನೆ. ಆದರೆ ನಾನು ಸಂಪ್ರದಾಯ ಆಚರಿಸದೆ ಹಾಗೆಯೇ ನನ್ನ ಇಷ್ಟ ಬಂದ ಹಾಗೆ ಇದ್ದರೆ ನನ್ನ ವೃದ್ಧಾಪ್ಯದಲ್ಲಿರುವ ತಾಯಿ ಹಾಗೂ ನನ್ನ ಕುಟುಂಬದವರಿಗೆ ಬೇಸರ ತರಿಸಿದಂತಾಗುತ್ತದೆ. ನನ್ನ ವೈಚಾರಿಕತೆ ಏನಿದ್ದರೂ ನನ್ನ ವೈಯಕ್ತಿಕವಾದದ್ದು. ಇದನ್ನು ನನ್ನ ವೃದ್ಧ ತಾಯಿಗೆ ತಿಳಿಹೇಳಿ ಅರ್ಥ ಮಾಡಿಸಲು ಹೋಗಿ ಅವರು ಹಿಂಸೆ ಪಡುವುದನ್ನು ಹಾಗೂ ಸಂಕಟ ಪಡುವುದನ್ನು ನಾನು ನೋಡಲಾರೆ. ನನ್ನ ವೈಚಾರಿಕ ಪ್ರಜ್ಞೆ ಅವರಿಗೆ ನೋವು ನೀಡುವುದಾದರೆ ಮಾನಸಿಕವಾಗಿ ನಾನು ವೈಚಾರಿಕವಾಗಿದ್ದು ಲೌಕಿಕವಾಗಿ ವೈಚಾರಿಕತೆ ಬದಿಗಿಟ್ಟು ಅವರ ಸಂತಸಕ್ಕಾಗಿ ನಾನು ಮಾಡಬೇಕಾದ ಆಚರಣೆಗಳೆಲ್ಲವನ್ನೂ ಮಾಡಿ ಮುಗಿಸುತ್ತೇನೆ. ಅದು ತಪ್ಪೇ ಎಂದರಂತೆ. ಎಷ್ಟೋ ಸಂದರ್ಭಗಳಲ್ಲಿ ವ್ಯಕ್ತಿಗಳ ಹಲವು ಸಂಕೀರ್ಣ ಕಾಲಘಟ್ಟಗಳಲ್ಲಿ ಅವರಿಗೆ ಸರಿ ಎನಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅವರನ್ನು ಟೀಕಿಸಿ, ಅವರನ್ನು ಅನುಮಾನದಿಂದ ನೋಡುವ ಬದಲು ವ್ಯಕ್ತಿಯನ್ನು ಕೇಳಿ ಅವರು ಇರುವ ಸ್ಥಿತಿಯನ್ನು ಅರ್ಥೈಸಿಕೊಳ್ಳುವುದು ಒಳಿತಲ್ಲವೇ. ವಂದನೆಗಳೊಂದಿಗೆ ರಮೇಶ ಎಂ.ಎಚ್. ಒಂದು ಪುಸ್ತಕ ನಮ್ಮ ಚಿಂತನೆಯ ವಿಧಾನವನ್ನು ಬದಲಿಸಿಬಿಡಬಲ್ಲದು. ಅದೇ ಒಂದು ಪುಸ್ತಕವೇಕೆ, ಒಂದು ಪುಸ್ತಕದೊಳಗಿನ ವಾಕ್ಯದಿಂದಲೂ ನಮ್ಮ ಜೀವನ ಬದಲಾಯಿಸಿಕೊಂಡುಬಿಡಬಹುದು. ಆದರೆ ನಮಗೆ ಬದಲಾಯಿಸಿಕೊಳ್ಳುವ ತಾಕತ್ತು ಇರಬೇಕು ಅಷ್ಟೆ. ಒಂದು ದೀಪ ಸುತ್ತಲೂ 4 ಅಡಿ ಬೆಳಕು ನೀಡುತ್ತದೆ. ಅದೇ ದೀಪವನ್ನು ಹಿಡಿದು ಕತ್ತಲಲ್ಲಿ ನಡೆಯುತ್ತಾ ಸಾಗಿದರೆ ದಾರಿಯುದ್ದಕ್ಕೂ ಬೆಳಕು ನೀಡಬಲ್ಲದು. ನಾವು ತಲುಪಬೇಕಾಗಿರುವ ಜಾಗವನ್ನು ದೀಪದ ಬೆಳಕಿನಿಂದ ತಲುಪಿಬಿಡಬಹುದು. ಅಂತೆಯೇ ಒಂದು ಪುಸ್ತಕದಲ್ಲಿನ ವಿಚಾರಗಳು ಹಲವು ವಿಭಿನ್ನ ವಿಚಾರ, ಚಿಂತನೆ, ಪ್ರಶ್ನೆಗಳನ್ನು ನಮ್ಮ ತಲೆಯೊಳಗೆ ಬಿತ್ತುತ್ತವೆ ಎಂದರೆ ತಪ್ಪಾಗಲಾರದು. ಇದರಿಂದಾಗಿ ಮತ್ತೆ ಹಲವು ಪುಸ್ತಕಗಳನ್ನು ಓದಲೇಬೇಕಾದ ಅನಿವಾರ್ಯತೆ ಒದಗಿಬಂದು ಬಿಡುತ್ತದೆ.
ಡಾ. ಸಿ.ಆರ್. ಗೋಪಾಲ್ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸ್ಮಯೋರ್ (SMIORE) “Dear Ramesh, Can you do me a favour. You know me for the last 10 years. In my books, as a publisher you have written me few good things about me. You have never got a chance to analyze my personality. Now you can do it here. You can talk to me or you can put it on paper. You should be analysis my personality, my positives and negatives without any hesitation, so that I can correct myself. Feel free to do it, I will not misuse.” ಡಾ. ಸಿ.ಆರ್ ಗೋಪಾಲ್ ಹಾಗೂ ನನ್ನ ಪರಿಚಯವಾಗಿ ಸುಮಾರು 10 ವರ್ಷ ಕಳೆದಿವೆ. ಅವರಿಗೆ ಈಗ 67 ವರ್ಷಗಳು. ಅವರು MSW ಸ್ನಾತಕೋತ್ತರ ಪದವಿಯನ್ನು ಪಡೆದು, ಬೆಂಗಳೂರು ವಿಶ್ವವಿದ್ಯಾಲಯ ದಿಂದ Ph.D. ಅನ್ನು ಪಡೆದಿದ್ದಾರೆ. ದಿ ಸೊಂಡೂರು ಮ್ಯಾಂಗನೀಸ್ ಅಂಡ್ ಐರನ್ ಓರ್ಸ್ (ಲಿ) ರಲ್ಲಿ ಕೆಲಸ ನಿರ್ವಹಿಸಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಇದುವರೆಗೂ 10 ಪುಸ್ತಕಗಳನ್ನು ರಚಿಸಿದ್ದಾರೆ. ಅತ್ಯಂತ ಸೌಮ್ಯ, ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದವರು. ನನಗೂ ಡಾ. ಸಿ.ಆರ್. ಗೋಪಾಲ್ ರವರಿಗೂ ಎಚ್.ಎಂ. ಮರುಳಸಿದ್ಧಯ್ಯ ರವರ ಮನೆಯಲ್ಲಿ ಆಗಾಗ ಭೇಟಿ ಆಗುತ್ತಿತ್ತು ಹಾಗೂ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ನಂತರದ ದಿನಗಳಲ್ಲಿ ನಮ್ಮ ಪತ್ರಿಕೆಯ ಸಂಪಾದಕ ಮಂಡಳಿಯಲ್ಲಿ ಇರಲು ಕೋರಿಕೊಂಡೆವು. ನಂತರ ಪತ್ರಿಕೆಯ ಸಂಪೂರ್ಣ ಜವಾಬ್ದಾರಿ ಹೊತ್ತು ಅದನ್ನು ಹೊರತರಲು ನಮ್ಮ ಸಂಸ್ಥೆ ಹಾಗೂ ತಂಡಕ್ಕೆ ಸಹಕಾರ ನೀಡುತ್ತಾ, ಸಹಕರಿಸಿದರು.
ಎಲ್ಲರ ಕಣ್ಣುಗಳು ಒಂದೇ ಆದರೆ ನೋಡುವ ನೋಟ ಬೇರೆ ಬೇರೆ
ಎಲ್ಲರ ಮನಸ್ಸು ಒಂದೇ ಆದರೆ ವಿಷಯ ಅರ್ಥೈಸುವ ಬಗೆ ಬೇರೆ ಬೇರೆ ಎಲ್ಲರ ಕಿವಿಗಳ ಬಗೆ ಒಂದೇ ಆದರೆ ಗ್ರಹಿಸುವ ವಿಧಾನ ಬೇರೆ ಬೇರೆ ಕೇಳಿದ್ದು ನೋಡಿದ್ದು, ಹೊಗಳಿದ್ದು, ತೆಗಳಿದ್ದು ಸುಳ್ಳಾಗಬಹುದು ಜೀವನದ ಕೊನೆಯವರೆಗೂ ಭ್ರಮೆಯಲ್ಲೇ ಬದುಕಬಹುದು ಜೀವನದ ಗುರಿ ಇದೆ ಎಂದು ನಂಬಿ ಕೊನೆಗೆ ಗುರಿ ತಲುಪದಿರಬಹುದು ಸಂಭ್ರಮ, ಸಂತಸವೆಂದು ಆಚರಿಸಿದ ಆಚರಣೆಗಳು ಅರ್ಥ ಕಳೆದುಕೊಳ್ಳಬಹುದು ಬುದ್ಧ ಎಂಬ ಪದ ಕಿವಿಗೆ ಬಿದ್ದೊಡನೆ ಬುದ್ಧನೇ ನಾನಾದಂತೆ ಭ್ರಮಿಸಬಹುದು ಧ್ಯಾನಿಸಿ, ಶ್ರಮಿಸಿ ಬುದ್ಧನಂತೆ ನಮ್ಮದೇ ಮಾರ್ಗವ ಕಂಡುಕೊಳ್ಳದಿದ್ದರೆ ಬುದ್ಧನಂತೆ ಜೀವನದ ಸಾರ ಕಳೆದುಕೊಂಡಂತೆ ಬದುಕಿನ ದಿನಗಳ ಸವೆಸಿದರೂ ಬದುಕಿದ್ದು ಸತ್ತಂತೆ ರಮೇಶ ಎಂ.ಎಚ್. ನಿರಾತಂಕ ಗೆಲ್ಲಲು ಹೊರಟವರು ನಾವು
ಯಾರನ್ನು ಗೆಲ್ಲಬೇಕು ನಾವು ನೀವು ಸ್ನೇಹಿತರ ಮನಸ್ಸನ್ನು ಸಮಾಜದಲ್ಲಿರುವ ಜನರನ್ನು ಜಗತ್ತಿಗೆ ಹೊತ್ತು ತಂದ ಜನ್ಮದಾತರನ್ನು ಜೀವನ ಹಂಚಿಕೊಂಡ ಜೀವನ ಸಂಗಾತಿಯನ್ನು ಜನ್ಮ ನೀಡಿದ ಮಕ್ಕಳನ್ನು ಹೊನ್ನು, ಹೆಣ್ಣು, ಮಣ್ಣನ್ನು ಯಾವುದು ಮೊದಲು ಯಾವುದು ಆನಂತರ ಎಲ್ಲವನ್ನು ಗೆಲ್ಲಬೇಕು ಎಂಬರು ಹಲವರು ಕೆಲವು ಗೆದ್ದರೆ ಸಾಕು ಎಂಬುತ ಸಾಗುವರು ಕೆಲವರು ಗೆಲ್ಲಲು ಮತ್ತಷ್ಟಿವೆ ಎಂಬ ದಾವಂತದಲ್ಲಿ ಹೆಜ್ಜೆ ಹಾಕುವರು ಕೆಲವರು ಕಣ್ಣ ಮುಂದಿನ ಕೆಲಸವನ್ನು ಕಂಡು ಕಾಣದಂತೆ ಕುಂತಿಹರು ಹಲವರು ಅಹಂಕಾರವನ್ನು ಗೆಲ್ಲಲು ಗೊತ್ತಿಲ್ಲ ಪ್ರೀತಿಯಿಂದ ಬದುಕಲು ಕಲಿಯಲಿಲ್ಲ ಸ್ನೇಹದ ಅರ್ಥ ಹುಡುಕಲಿಲ್ಲ ಸಮಾಜದ ನೋವು ತಿಳಿಯಲಿಲ್ಲ ಗೆಲ್ಲಲು ನೀನು ಯಾರು? ಯಾವ ಊರು? ಹೇಗೆ ಬಂದೆ, ಎಲ್ಲಿಗೆ ಹೊರಟಿರುವೆ ? ಪ್ರಶ್ನೆಗಳು ಸಾವಿರಾರು ಕೆಲವರು ಒಗಟಿನ ಪ್ರಶ್ನೆಗಳ ಹುಡುಕಲು ಹೊರಡುವರು ಹಲವರು ಆಟವಾಡಿಕೊಂಡು ಸುಮ್ಮನೆ ಕಾಲಕಳೆಯುವರು ಉತ್ತರ ಸಿಕ್ಕವರು ಮೌನದಲ್ಲಿ ಕುಂತು ಧ್ಯಾನಿಸುವರು ಉತ್ತರ ಸಿಗದವರು ಜಗದ ನಾಟಕ ನೋಡುತ ಆಡುತ ನಿದ್ರಿಸುವರು ಅವರವರ ದಾರಿ ಅವರವರೆ ಕಂಡುಕೊಂಡ ಜಾಣರು ನಾವು ಕಂಡುಕೊಂಡದ್ದೇ ದಾರಿ ಸತ್ಯವೆಂದುಕೊಂಡು ಸಾಗುತಿರುವೆವು ರಮೇಶ ಎಂ.ಎಚ್. #ನಿರಾತಂಕಕವನ |
CERTIFICATE COURSE ON
'DISCIPLINARY PROCEEDINGS AND DOMESTIC ENQUIRY' RAMESHA NIRATANKA |
Site
|
Vertical Divider
|
HR Online Groups
20,000 HR PROFESSIONALS ARE CONNECTED THROUGH OUR NIRATHANKA HR GROUPS.
|
Vertical Divider
|
Contact us
080-23213710
+91-8073067542 Mail-nirutapublications@gmail.com Our Other Websites
|
MHR LEARNING ACADEMY
|
Receive email updates on the new books & offers
for the subjects of interest to you. |