ಈ ಪುಸ್ತಕವು ಸಮಾಜ ವಿಜ್ಞಾನ ಹಾಗೂ ಮಾನವಿಕ ಪರಿಭಾಷೆಗಳ ಕುರಿತಾದ ಪುಸ್ತಕವಾಗಿದೆ. ಇದು ವಿದ್ಯಾರ್ಥಿಗಳಿಗೆ ಮತ್ತು ಜನಸಾಮಾನ್ಯರಿಗೆ ಬಹಳ ಉಪಯುಕ್ತವಾದ ಪುಸ್ತಕವಾಗಿದೆ. ಸಾಮಾಜಿಕ ಮತ್ತು ಮಾನವಿಕ ಅಧ್ಯಯನ ಶಾಖೆಗಳಲ್ಲಿ ಆಸಕ್ತರಾಗಿರುವ ವಿದ್ಯಾರ್ಥಿಗಳು ಎದುರಿಸುತ್ತಿರುವ ಕೊರತೆಯೊಂದನ್ನು ನೀಗಿಸಲು ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಕೈಗೆತ್ತಿಕೊಂಡ ಯೋಜನೆಯ ಫಲಿತವೇ ಈ ಪುಸ್ತಕ. ಈ ಪುಸ್ತಕದ ಸಂಪಾದಕರು ಈ ಯೋಜನೆಯ ರೂಪುರೇಷೆಗಳನ್ನು ಅವರ ಬರೆಹದಲ್ಲಿ ವಿವರಿಸಿದ್ದಾರೆ. ಸಮಾಜ ಮತ್ತು ಸಂಸ್ಕೃತಿ ಸಂಶೋಧನೆಗಳಲ್ಲಿ ಸಿದ್ಧಾಂತ, ಪರಿಭಾಷೆ ಮತ್ತು ಭಾಷೆಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ. ಅದರಲ್ಲೂ ಪರಿಭಾಷೆಗಳು ಇನ್ನೂ ಹೆಚ್ಚಿನ ಮಹತ್ವವನ್ನು ಹೊಂದಿವೆ. ಏಕೆಂದರೆ ಇವು ಸಿದ್ಧಾಂತಕ್ಕೆ ಜೀವ ತುಂಬುತ್ತವೆ. ಆದುದರಿಂದ ಪರಿಭಾಷೆಗಳನ್ನು ಅರ್ಥಮಾಡಿಕೊಂಡು ಬಳಸಲು ಕಲಿಯುವುದು ಜ್ಞಾನದ ಗಳಿಕೆಗೆ ಹಾಗೂ ಸೃಷ್ಟಿಗೆ ಅನಿವಾರ್ಯ. ಈ ನಿಟ್ಟಿನಲ್ಲಿ ಈ ಪುಸ್ತಕವು ಬಹಳ ಅತ್ಯಮೂಲ್ಯವಾದದ್ದು ಎಂದರೆ ತಪ್ಪಾಗಲಾರದು. ಇಂದಿನ ಸಮಾಜ ವಿಜ್ಞಾನದ ಓದು ಮತ್ತು ಬೋಧನೆಯಲ್ಲಿ ಪರಿಭಾಷೆಗಳನ್ನು ರೂಪಿಸಿಕೊಂಡು ಬಳಸುವುದರ ಮೇಲೆ ಪ್ರತ್ಯೇಕವಾಗಿ ಗಮನ ಹರಿಸುವ ಪರಿಪಾಠ ಕಡಿಮೆ. ಇದು ಜ್ಞಾನ ಸಂಪಾದನೆಗೆ ಬಹುದೊಡ್ಡ ತೊಡಕಾಗಿದೆ. ಈ ತೊಡಕನ್ನು ನಿವಾರಿಸಲು ಈ ಪುಸ್ತಕವು ನೆರವಾಗಲು ಯತ್ನಿಸುತ್ತದೆ. ಈ ಪುಸ್ತಕದಲ್ಲಿ ಈ ಕೆಳಕಂಡ ಪರಿಕಲ್ಪನೆಗಳನ್ನು ವಿವರಿಸಲಾಗಿದೆ.
ಈ ಮೇಲಿನ ಪರಿಕಲ್ಪನೆಗಳನ್ನು ಒಳಗೊಂಡಂತೆ ಇನ್ನೂ ಅನೇಕ ಪರಿಕಲ್ಪನೆಗಳನ್ನೂ ಸಹ ಈ ಪುಸ್ತಕ ಒಳಗೊಂಡಿದೆ. ಈ ಪುಸ್ತಕವು ಸಮಾಜವಿಜ್ಞಾನ ವಿದ್ಯಾರ್ಥಿಗಳಿಗೆ ಮತ್ತು ಜನಸಾಮಾನ್ಯರಿಗೆ ಅತ್ಯುಪಯುಕ್ತವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಪುಸ್ತಕದ ಸಂಪಾದಕರಾದ ಡಾ. ಎಂ. ಚಂದ್ರ ಪೂಜಾರಿ, ಡಾ. ಟಿ.ಆರ್. ಚಂದ್ರಶೇಖರ್, ಡಾ. ವಿ.ಎಸ್. ಶ್ರೀಧರ ರವರಿಗೆ ಮತ್ತು ಈ ಪುಸ್ತಕದ ಪ್ರಕಾಶನ ಮಾಡಿದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದವರಿಗೆ ಸಮಾಜವಿಜ್ಞಾನ ವಿದ್ಯಾರ್ಥಿಗಳ ಮತು ಜನಸಾಮಾನ್ಯರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಮಹದೇವ್ ಎಂ
1 Comment
Dr. Hanumanthappa D G
10/18/2018 11:36:26 pm
I want this book, please send details where it's available
Reply
Leave a Reply. |
Categories
All
Social Work Learning AcademyMHR LEARNING ACADEMYGet it on Google Play store
30,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |
SITE MAP
SiteTRAININGnIRATHANKA CITIZENS CONNECTJOB |
HR SERVICES
OTHER SERVICES |
NIRATHANKAPOSHOUR OTHER WEBSITESSubscribe |