ಹತ್ತಿರವಿದ್ದರೂ ದೂರ ನಿಲ್ಲುವೆವು,
ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆಯೆಂಬುದು ನಾಲ್ಕು ದಿನದ ಈ ಬದುಕಿನಲ್ಲಿ - ಜಿ.ಎಸ್. ಶಿವರುದ್ರಪ್ಪ ದೂರವಿದ್ದರೂ ಮುಖ ನೋಡದೆ, ಭೇಟಿಯಾಗದೆ, ನನ್ನನ್ನು ಅವರ ಮಗನಂತೆ ಕಂಡು ಮಾರ್ಗದರ್ಶನ ಮಾಡಿದ ಟಿ.ಕೆ. ನೈಯ್ಯರ್ ರವರ ವ್ಯಕ್ತಿತ್ವಕ್ಕೆ ನಾನು ಮಾರು ಹೋದೆ. ಬೆಳಿಗ್ಗೆಯಿಂದ ರಾತ್ರಿವರೆಗಿನ ಜೊತೆಯಲ್ಲಿರುತ್ತೇವೆ, ಕಾಫಿ ಕುಡಿಯುತ್ತೇವೆ, ಜೊತೆಯಲ್ಲಿ ಊಟ ಮಾಡುತ್ತೇವೆ ಆದರೆ ದೂರ ನಿಲ್ಲುತ್ತೇವೆ, ಮನಸ್ಸಿನಲ್ಲಿ ಮೆಚ್ಚುಗೆಯ ಮಮಕಾರವಿರುವುದಿಲ್ಲ.
0 Comments
ನಾವು ಬದುಕಿ ಮಣ್ಣಾಗುವ ಈ ನಾಲ್ಕಾರು ವರ್ಷಗಳ ಜೀವನದಲ್ಲಿ ಯಾವುದು ಮುಖ್ಯ? ಇದಲ್ಲ, ಇದಲ್ಲ ಎಂದು ಹಣ, ಆಸ್ತಿ-ಪಾಸ್ತಿಗಳನ್ನು ಅಂತಸ್ತು ಅಧಿಕಾರಗಳನ್ನು ಹೊಡೆದು ಪಟ್ಟಿಯಿಂದ ತೆಗೆದು ಬಿಡಬಹುದು. ಹಾಗಾದರೆ ಕಡೆಯಲ್ಲಿ ಉಳಿಯುವುದಾದರೂ ಯಾವುದು? ಈ ಹುಡುಗಿ ಹೇಳಿದಳು `ಮನುಷ್ಯ ಸಂಬಂಧಗಳು' ಈಕೆ ಹೀಗೆ ಹೇಳಲು ಕಾರಣವಿತ್ತು. ಮೂವತ್ತು ವರ್ಷಗಳ ಹಿಂದೆ ತನ್ನ ಹೆತ್ತವರ ಹೆಸರನ್ನೂ ಸಹ ನೆನಪಿಟ್ಟುಕೊಳ್ಳಲಾರದಷ್ಟು ಚಿಕ್ಕವಳಾಗಿದ್ದಾಗ ನಿಂತಿದ್ದ ರೈಲನ್ನು ಹತ್ತಿದಳು. ರೈಲು ಹೊರಟೇ ಬಿಟ್ಟಿತು. ದೂರದ ಊರು ಸೇರಿತು. ಆನಂತರ ಅನಾಥಾಶ್ರಮಗಳ ವಾಸ, ಬುದ್ದಿ ತಿಳಿದಾಗ ಮನುಷ್ಯ ಸಂಬಂಧಗಳ ಹುಡುಕಾಟ. ಹೀಗೆ ಬದುಕು ಸಾಗಿತು. ತನ್ನ ಜೊತೆ ಬೆಳೆದ ಸ್ನೇಹಿತರು ಅಕಸ್ಮಾತ್ತಾಗಿ ಸಿಕ್ಕಿದರಂತೂ ಈಕೆಯ ಮನಸ್ಸಿನಲ್ಲಿ ಭಾವದ ಹೊಳೆಯೇ ಹರಿದುಬಿಡುತ್ತಿತ್ತು. ಹಳೆಯ ದುಗುಡ ದುಮ್ಮಾನಗಳ ನಡುವೆ ಒಂದೋ ಎರಡೋ ಮಧುರ ನೆನಪುಗಳಿಗೆ ಸಾಕ್ಷಿಯಾಗಿ ಎದುರಾಗುತ್ತಿದ್ದರು ಈ ಸ್ನೇಹಿತರು. ಒಟ್ಟಿನಲ್ಲಿ ಒಬ್ಬರು ಮತ್ತೊಬ್ಬರಿಗೆ ಆಸರೆಯಾಗಿ ನಿಂತದ್ದು ಅಥವಾ ಸಂತೋಷದಲ್ಲಿ ಭಾಗಿಯಾಗಿದ್ದು - ಈ ನೆನಪುಗಳನ್ನು ಬಿಟ್ಟರೆ ಇನ್ನೇನು ತಾನೆ ಉಳಿದೀತು? ಇದೇ ಮುಖ್ಯವಲ್ಲ ಎಂದು ಹೊಡೆದುಹಾಕಲು ಸಾಧ್ಯವೇ? ಹಾಗಾಗಿ ಅವಳು ಸರಿಯಾಗಿಯೇ ಗುರುತಿಸಿದ್ದಳು `ಬದುಕಿನಲ್ಲಿ ಬಹು ಮುಖ್ಯವಾದದ್ದು ಸಂಬಂಧಗಳು.'
ಲಿಂಕನ್ನ ಹೆಸರನ್ನು ನೀವು ಕೇಳಿರಬೇಕು, ಕೆಲಸವನ್ನು ಕಳೆದುಕೊಂಡ, ವಿಧಾನ ಸಭೆಯ ಚುನಾವಣೆಯಲ್ಲಿ ಸೋತ, ವ್ಯಾಪಾರಪ್ರಾರಂಭಿಸಿ ಅದರಲ್ಲಿ ನಷ್ಟ ಹೊಂದಿದ, ಪತ್ನಿ ಖಾಯಿಲೆ ಬಿದ್ದು ಸತ್ತಳು, ನರಗಳ ದೌರ್ಬಲ್ಯವನ್ನು ಅನುಭವಿಸಿದ, ಸ್ಪೀಕರ್ ಹುದ್ದೆಯಚುನಾವಣೆಗೆ ನಿಂತು ಸೋತ, ಒಂದು ರಾಜಕೀಯ ಪಕ್ಷದ ಮೂಲಕ ಚುನಾವಣೆಗೆ ಸ್ಪರ್ಧಿಸಿ ಸೋತ, ಲ್ಯಾಂಡ್ ಆಫಿಸರ್ ಹುದ್ದೆಗೆ ಅರ್ಜಿಸಲ್ಲಿಸಿ ಸೋತ, `ಸೆನೆಟ್' ಶಾಸನ ಸಭೆಗೆ ಚುನಾವಣೆಯಲ್ಲಿ ಸೋತ, `ಉಪರಾಷ್ಟ್ರಪತಿ' ಪದವಿಗೆ ಸ್ಪರ್ಧಿಸಿ ಸೋತ, ಮತ್ತೆ `ಸೆನೆಟ್'ಗೆಸ್ಪರ್ಧಿಸಿ ಸೋತ.
`ಚಿನ್ಮಯ' ಕೃಷ್ಣಶಾಸ್ತ್ರಿಗಳ ಅಭಿಮಾನಿಗಳು ಅವರಿಗೆ 1979 ರಲ್ಲಿ ಅರ್ಪಿಸಿದ ಸಂಭಾವನಾಗ್ರಂಥ. ಪ್ರೊ.ಎಂ.ವಿ. ಶ್ರೀನಿವಾಸ್ ಮತ್ತು ಡಾ.ಕೃಷ್ಣಮೂರ್ತಿ ಹಾನೂರು ಈ ಗ್ರಂಥದ ಸಂಪಾದಕರು. ಪುಸ್ತಕವನ್ನು ಕುರಿತ ಪತ್ರಿಕೆಗಳು ತಮ್ಮ ಪ್ರಶಂಸೆಯನ್ನು ವ್ಯಕ್ತಪಡಿಸಿವೆ.ಡಾ.ಹಾಮಾನಾಯಕರು `ಕಾಡು ಬೆಳದಿಂಗಳು' ಎಂಬ ಸೊಗಸಾದ ಲೇಖನವನ್ನು ಬರೆದು ಬೆಳಗೆರೆ ಕೃಷ್ಣಶಾಸ್ತ್ರಿಗಳ ಸೇವೆಯನ್ನುಶ್ಲಾಘಿಸಿದ್ದಾರೆ.
ಬೆಳಗೆರೆ ಕೃಷ್ಣಶಾಸ್ತ್ರಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮದಲ್ಲಿ 1916ರಲ್ಲಿ ಜನಿಸಿದರು, ಅವರ ತಂದೆ ಚಂದ್ರಶೇಖರ ಶಾಸ್ತ್ರಿಗಳು ಪ್ರಸಿದ್ದ ಆಶುಕವಿಗಳು, ದಾರ್ಶನಿಕರೂ ಆಗಿದ್ದರು, ಅವರ ಸರಳತೆ, ಸಾಹಿತ್ಯಾಸಕ್ತಿ ಮುಗ್ಧ ಮನೋಭಾವ ಹೊಂದಲು ಅವಕಾಶಮಾಡಿಕೊಟ್ಟಿದ್ದಿತು. ಕೃಷ್ಣಶಾಸ್ತ್ರಿಗಳ ತಾತ ಅಪ್ಪಣ್ಣ ಭಟ್ಟರು ಪ್ರಸಿದ್ಧ ಸಂಸ್ಕೃತ ವಿದ್ವಾಂಸರಾಗಿ ವಿದ್ವತ್ ಸಭೆಗಳಲ್ಲಿ ಸನ್ಮಾನವನ್ನು ಗಳಿಸಿಕೊಂಡಿದ್ದರು. ಗತೀಕರಣ, ನಗರೀಕರಣಗಳು ವ್ಯಕ್ತಿ-ಪ್ರತಿಷ್ಟೆ ಸಮಾಜವನ್ನು ಅಲ್ಲೋಲಕಲ್ಲೋಲ ಮಾಡುತ್ತಿವೆ. `ಅಭಿವೃದ್ಧಿಯ' ಬೆನ್ನಹತ್ತಿರುವ ಮನುಷ್ಯನಿಗೆ ಬೇರೇನೂ ಕಾಣದಾಗಿದೆ. ಇನ್ನು ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅವ್ಯವಸ್ಥೆಗಳಿಗಂತೂ ಲೆಕ್ಕವೇ ಇಲ್ಲ. ಈ ಅಭಿವೃದ್ಧಿಯ ಪ್ರತಿಫಲಗಳು ಜನರಿಗೆ ಎಷ್ಟು, ಹೇಗೆ ತಲುಪುತ್ತಿವೆಯೋ ಗೊತ್ತಿಲ್ಲ. ಆದರೆ, ಪರಿಸರದ ಮೇಲೆ ಅತ್ಯಾಚಾರವೆಸಗುತ್ತಿರುವುದಂತೂ ನಿಜ. `ಅಭಿವೃದ್ಧಿ'ಯೆಂಬ ಮಾಯೆಯಿಂದ ಹೊರಸೂಸುವ ಮಾಲಿನ್ಯದಿಂದ ಇಂದು ಜೀವಿಗಳು ಜೀವಿಸಲೂ ಕೂಡ ತತ್ಪಾರವೇರ್ಪಟ್ಟಿದೆ.
ಆದಿನ ಬೆಳಗ್ಗೆ ಏಳುವಾಗಲೇ ಅನ್ನಿಸಿತು, ಇವತ್ತು ಏನೋ ವಿಶೇಷವಿರುತ್ತದೆ ಎಂದು. ರೇಡಿಯೋದಲ್ಲಿ 'ಮಹಿಳೆಯರ ಪಾತ್ರ' ಎಂದು ಸಮಾಜಸೇವಕಿಯ ಮಾತು ನಡೆಯುತ್ತಿತ್ತು. ಜಯಳಿಗೆ ಆ ದಿನ ಎನೋ ಒಂದು ತರಹದ ಭಾವನೆಗಳು. ರೇಡಿಯೋದಲ್ಲಿ ಹೇಳುವುದನ್ನು ಕೇಳುವಾಗ ಹೌದು, ಹೀಗೇ ಮಾಡಬೇಕು ಅನ್ನಿಸಿತು. ಮಹಿಳೆಯ ಸ್ಥಾನದ ಬಗ್ಗೆ ಜಾಗೃತಿ ರಿಸರ್ವೇಶನ್ ಬಗ್ಗೆ ವಿವಾದಗಳು ಎಲ್ಲ ಕೇಳಿದ ಮಾತುಗಳೇ ಯಾವುದೂ ಹೊಸದಲ್ಲ.
ಅವಳಿಗೆ ಅತ್ತೆಯ ಮಾತು ಜ್ಞಾಪಕಕ್ಕೆ ಬಂತು, ಇಂತದೆಲ್ಲ ಕೇಳಲು ಚಂದ, ಹೇಳಲೂ ಚಂದ. ಆದರೆ ಕಾರ್ಯರೂಪಕ್ಕೆ ತರಲು ಇನ್ನೂ ಎಷ್ಟು ಶತಮಾನವೋ? ಭಾರತದಂತಹ ಬೃಹತ್ ರಾಷ್ಟ್ರದಲ್ಲಿ ಯಾವುದೇ ಒಂದು ಕಾಯಿದೆ/ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದು ಸುಲಭದ ಕೆಲಸವಲ್ಲ. ಸಂಪನ್ಮೂಲ, ನುರಿತ ತಜ್ಞರು ಮತ್ತು ತಾಂತ್ರಿಕತೆಯ ಲಭ್ಯತೆ ಎಷ್ಟೇ ಇದ್ದರೂ ಕೂಡ ಸಂಬಂಧಿಸಿದ ಯೋಜನೆಯ ಬಗ್ಗೆ ಶ್ರೀಸಾಮಾನ್ಯರಲ್ಲಿ ಅರಿವಿಲ್ಲದಿದ್ದಲ್ಲಿ ನಿಗದಿತ ಯೋಜನೆ ಯಶಸ್ವಿಯಾಗಲಾರದು. ಒಂದು ವೇಳೆ ಈ ಮೇಲಿನ ಅಂಶಗಳಿಂದ ಅಭಿವೃದ್ಧಿ ಸಾಧ್ಯವಾಗಿದ್ದರೆ ಅಥವಾ ದೇಶದ ಸ್ಥಿತಿಗತಿಗಳು ಬದಲಾಗುವಂತಿದ್ದರೆ "Incredible India" ಎಂಬ ಘೋಷಣೆಯನ್ನು ಇಂದು ನಾವು ಕೇವಲ ಜಾಹಿರಾತುಗಳಲ್ಲಿ ನೋಡುವಂತಹ ಸ್ಥಿತಿ ಬರುತ್ತಿರಲಿಲ್ಲ. ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ಒಪ್ಪಿ ಸಹಿ ಮಾಡಿ ಸುಮಾರು 18 ವರ್ಷಗಳೇ ಸಂದಿವೆ. ಆದರೆ ಭಾರತದಲ್ಲಿರುವ ಮಕ್ಕಳ ಸ್ಥಿತಿಗತಿಗಳು ಹೇಳಿಕೊಳ್ಳುವಂತಹ ಸುಧಾರಣೆಯೇನನ್ನು ಕಂಡಿಲ್ಲ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಶೋಷಣೆ ಮತ್ತು ಸಾಗಾಣಿಕೆಯ ನಿರ್ಮೂಲನೆಗಾಗಿ ಜಾರಿಗೆ ಬಂದ ಕಾನೂನುಗಳು ಕಡತಗಳಿಗೆ ಸೀಮಿತವಾಗಿವೆಯೇ ವಿನಃ ಪರಿಣಾಮಕಾರಿಯಾಗಿ ಜಾರಿಗೆ ಬರುತ್ತಿಲ್ಲ. ಅಸ್ತಿತ್ವದಲ್ಲಿರುವ ಕಾನೂನು ಮತ್ತು ಯೋಜನೆಗಳು ನೇರವಾಗಿ ನಿರ್ದಿಷ್ಟ ಪದ್ಧತಿಯನ್ನು ತೊಲಗಿಸುವ ಉದ್ದೇಶದಿಂದ ಜಾರಿಗೆ ಬಂದರೂ ಅವುಗಳ ತೀಕ್ಷ್ಣತೆ ಕೇವಲ ಕಡತಗಳಲ್ಲಿ ಕೇಳಿಬರುತ್ತಿದೆಯೇ ಹೊರತು ಆಚರಣೆಯಲ್ಲಿ ಅಲ್ಲ. ಕಾನೂನುಗಳು ಯಾವುದೇ ಪದ್ಧತಿಯನ್ನು ಖಂಡಿಸುವುದಕ್ಕಿಂತ ಅದರ ನಿರ್ಮೂಲನೆಗಾಗಿ ಪರ್ಯಾಯ ಮಾರ್ಗಗಳನ್ನು ಕಂಡುಕೊಂಡಲ್ಲಿ ಕಾನೂನಿನ ಉದ್ದೇಶ ಈಡೇರುವುದರ ಜೊತೆಗೆ ಸಮಾಜದಲ್ಲಿ ಬೇರುಬಿಟ್ಟಿರುವ ದುಷ್ಟ ಪದ್ಧತಿಗಳನ್ನು ಕಿತ್ತೊಗೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ "ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ 2009 ಮತ್ತು ಭಾಗ್ಯಲಕ್ಷ್ಮಿ ಯೋಜನೆ"ಗಳು ಬಹಳ ಸೂಕ್ತವಾಗಿವೆ ಎನ್ನುವುದರಲ್ಲಿ ಎರಡು ಮಾತಿಲ್ಲ. 6-14 ವಯೋಮಾನದ ಪ್ರತಿಯೊಂದು ಮಗುವಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಮುಖ್ಯ ಗುರಿಯನ್ನು ಹೊಂದಿರುವ ಈ ಕಾಯಿದೆಯ ಜೊತೆಗೆ ಬಾಲಕಾರ್ಮಿಕ, ಬಾಲ್ಯವಿವಾಹ, ಮಕ್ಕಳ ಸಾಗಾಣಿಕೆ ಮತ್ತು ದೌರ್ಜನ್ಯಗಳನ್ನು ತಡೆಯುವಂತಹ ಮಹದೋದ್ದೇಶವನ್ನೂ ಹೊಂದಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಕಾರಣ 6-14 ವಯೋಮಾನದ ಎಲ್ಲಾ ಮಕ್ಕಳು ಶಾಲೆಯಲ್ಲಿದ್ದರೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ಮಕ್ಕಳ ಮೇಲಾಗುವಂತಹ ದೌರ್ಜನ್ಯಗಳು ಮುಂದುವರೆಯಲು ಸಾಧ್ಯವಿಲ್ಲ.
ಈ ಕಥೆಯು 100 ವರ್ಷಗಳಿಗಿಂತಲೂ ಹಳೆಯದಾಗಿರಬಹುದು. ಆದರೆ ಪ್ರಸ್ತುತ ದಿನಗಳಿಗೂ ಅನ್ವಯವಾಗುವ ವಾಸ್ತವದ ಚಿತ್ರಣ.
1892ರ ಇಸವಿ ಸ್ಟಾನ್ಫೋರ್ಡ್ ವಿಶ್ವವಿದ್ಯಾಲಯದ 18 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಕಾಲೇಜಿನ ಶುಲ್ಕವನ್ನು ಕಟ್ಟಲು ಪರದಾಡುತ್ತಿದ್ದ. ಆತನೊಬ್ಬ ಅನಾಥನಾಗಿದ್ದು ಈ ಹಣವನ್ನು ಹೇಗೆ ಹೊಂದಿಸುವುದು ಎಂಬುದೂ ಸಹ ಅವನಿಗೆ ಗೊತ್ತಿರಲಿಲ್ಲ. ಹೀಗೆ ಯೋಚನೆಯಲ್ಲಿರುವಾಗ ತಕ್ಷಣ ಆತನಿಗೆ ಒಂದು ಉಪಾಯ ಹೊಳೆಯಿತು. ತನ್ನ ಸ್ನೇಹಿತನೊಡಗೂಡಿ ಕಾಲೇಜಿನಲ್ಲಿ ಒಂದು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿ ಅದರಿಂದ ಬರುವ ಹಣವನ್ನು ತನ್ನ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳಲು ತೀರ್ಮಾನಿಸಿದನು. ಈ ಯೋಜನೆಯನ್ನು ಕಾರ್ಯರೂಪಗೊಳಿಸಲು ಅಂದಿನ ಪ್ರಸಿದ್ಧ ಪಿಯಾನೋ ವಾದಕರಾಗಿ ಹೆಸರು ಮಾಡಿದ್ದ ಇಗ್ನೇಸಿ.ಜೆ.ಪೆಡೆರ್ವಸ್ಕಿ ಎಂಬುವರನ್ನು ಭೇಟಿ ಮಾಡಿ ತಮ್ಮ ಯೋಜನೆಗಳನ್ನು ತಿಳಿಸಿದರು. ಪೆಡೆರ್ವಸ್ಕಿಯ ವ್ಯವಸ್ಥಾಪಕರು ಹಣದ ಮೊತ್ತವನ್ನು ಗೊತ್ತುಪಡಿಸಿದರು. ಆ ಮೊತ್ತವು 2000 ಅಮೇರಿಕನ್ ಡಾಲರ್ಗಳಾಗಿತ್ತು. ಈ ಶರತ್ತಿಗೆ ಒಪ್ಪಿದ ಯುವಕರು ಕಾರ್ಯಕ್ರಮವನ್ನು ಆಯೋಜಿಸಿಯೇ ಬಿಟ್ಟರು. ಭಾರತೀಯ ನಂಬಿಕೆ ಹಾಗೂ ಸಂಸ್ಕೃತಿಯಲ್ಲಿ ಜನರು ವಿವಿಧ ರಿತೀಯ ಶಕ್ತಿಗಳಿಂದ ಸ್ವಾಧೀನ/ ಸ್ವಾಮ್ಯಕ್ಕೊಳಪಡುವುದನ್ನು ನಾವೆಲ್ಲ ಕೇಳಿದ್ದೇವೆ. ಹಲವಾರು ಬಾರಿ ನೋಡಿರುತ್ತೇವೆ. ಸ್ವಾಧೀನ(ದೈವಾವೇಶ)ದಲ್ಲಿರುವವರು, ತಾವು ಬೇರೆ ಶಕ್ತಿ\ಆತ್ಮದ ವಶದಲ್ಲಿರುವಂತೆ ಬೇರೆ ರೀತಿಯ ಆವಭಾವ, ಮಾತು, ವರ್ತನೆಯನ್ನು ತೋರಿಸುತ್ತಾರೆ. ಅವರ ವರ್ತನೆಯು ಅವರ ನೈಜ ವರ್ತನೆಗಿಂತ ಭಿನ್ನವಾಗಿರುತ್ತದೆ. ನನಗೆ ಈ ರೀತಿಯ ವರ್ತನೆಯ ಪರಿಚಯವಾಗಿದ್ದು ಮೂವತ್ತು ವರ್ಷಗಳ ಹಿಂದೆ ನಮ್ಮ ನಾಡಿನ ಪ್ರತಿಷ್ಠಿತ ಮಾನಸಿಕ ಆರೋಗ್ಯ ಸಂಸ್ಥೆಯಾದ `ನಿಮ್ಹಾನ್ಸ್', ಬೆಂಗಳೂರಿನಲ್ಲಿ, ಮನೋವೈದ್ಯಕೀಯ ಸಮಜಕಾಯ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೊಮ ಪದವಿ ಮಾಡುತ್ತಿದ್ದಾಗ. ಆ ಸಮಯದಲ್ಲಿ ಕೆಲವು ರೋಗಿಗಳು ಜೋರಾಗಿ ಬೈದಾಡುತ್ತ, ಕೂಗಾಡುತ್ತಿದ್ದರು. ಅವರನ್ನು ಮೈಮೇಲೆ ದೆವ್ವ/ಗಾಳಿ ಬಂದಿದೆಯೆಂದು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಗಿದೆ ಎಂದು ಉತ್ತರ ಬರತ್ತಿತ್ತು. ಈ ವಿಷಯ ಕೇಳಿ ನನಗೆ ಆಶ್ಚರ್ಯವಾಗಿತ್ತು.
ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಮತ್ತು ಮಕ್ಕಳ ಹಕ್ಕುಗಳನ್ನು ಸಂರಕ್ಷಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ ‘ಚಿರಾಗ್’ (CHIRAG’) ಆ್ಯಪ್ ಅಭಿವೃದ್ಧಿಪಡಿಸಿದೆ.
ರಾಜ್ಯದ ಯಾವುದೇ ಮೂಲೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಮಾಹಿತಿಯನ್ನು ಈ ಆ್ಯಪ್ಗೆ ಭರ್ತಿ ಮಾಡಿದ ಕೂಡಲೇ ಅದು ಮಕ್ಕಳ ಸಹಾಯವಾಣಿ ಕೇಂದ್ರಗಳು ಮತ್ತು ಪೊಲೀಸರಿಗೆ ರವಾನೆಯಾಗುತ್ತದೆ. ನಂತರ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ರಕ್ಷಣೆ ಮಾಡುತ್ತಾರೆ. ದೂರು ನೀಡಿದ ನಾಗರಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಈ ಆ್ಯಪ್ನಲ್ಲಿ ದೂರು ದಾಖಲಾದ ಕೆಲವೇ ಕ್ಷಣಗಳಲ್ಲಿ ಮಾಹಿತಿಯು ರಾಜ್ಯದ ಎಲ್ಲಾ ಪೊಲೀಸ್ ಠಾಣೆ ಮತ್ತು ಮತ್ತು ಮಕ್ಕಳ ಸಹಾಯವಾಣಿ ಕೇಂದ್ರಗಳಿಗೆ ರವಾನೆಯಾಗುತ್ತದೆ. ಜಿಪಿಆರ್ಎಸ್ ತಂತ್ರಜ್ಞಾನದ ಮೂಲಕ ದೂರು ನೀಡಿದ ವ್ಯಕ್ತಿಯ ಸ್ಥಳವನ್ನು ಪತ್ತೆ ಮಾಡಿ ಕಾರ್ಯಾಚರಣೆ ನಡೆಸಲಾಗುತ್ತದೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು, ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಮತ್ತು ಕಳೆದು ಹೋದ ಮಕ್ಕಳನ್ನು ಹುಡುಕುಲೂ ಈ ಆ್ಯಪ್ ನೆರವಾಗಲಿದೆ. chirag-app ಕೃಪೆ ಪ್ರಜಾವಾಣಿ 23-11-2016, ಬುಧವಾರ ಅಧ್ಯಾಯ-ಒಂದು
ಗುಣತ್ರಯಗಳು ಮತ್ತು ಜೀವನ ಪದ್ಧತಿ ಪೀಠಿಕೆ ಯಾವುದೇ ಸಮಾಜದಲ್ಲಿ ಆಗಲಿ ಅನೇಕ ರೀತಿಯ ಜನರನ್ನು ನಾವು ಗುರುತಿಸುತ್ತೇವೆ. ಕೆಲವರು ತುಂಬಾ ಮೃದು ಸ್ವಭಾವದವರಾಗಿರುತ್ತಾರೆ. ಜ್ಞಾನವಂತರಾಗಿರುತ್ತಾರೆ. ತುಂಬಾ ಸರಳ ಜೀವನ ನಡೆಸುತ್ತಿರುತ್ತಾರೆ. ಸರಳ ಜೀವನ ಮತ್ತು ಉದಾತ್ತ ಧ್ಯೇಯ ಹೊಂದಿದವರಾಗಿರುತ್ತಾರೆ. ನೇರ ನಡೆ -ನೇರ ನುಡಿ ಅವರ ಜೀವನದ ಮಂತ್ರವಾಗಿರುತ್ತದೆ. ಅಂತಹವರು ತುಂಬಾ ಸುಸಂಸ್ಕೃತ ಕುಟುಂಬದಿಂದ, ಪರಿಸರದಿಂದ ಬಂದವರಾಗಿರುತ್ತಾರೆ. ಅವರು ಹೆಚ್ಚಿನ ತಿಳುವಳಿಕೆಯಿಂದ ಕೂಡಿದ್ದು ಇನ್ನೊಬ್ಬರಿಗೆ ಸಹಾಯ ಮಾಡುವ ಮನೋಭಾವವನ್ನು ಹೊಂದಿದವರಾಗಿರುತ್ತಾರೆ. ಅವರು ಎಲ್ಲರಿಗೂ ಬೇಕಾದವರಾಗಿರುತ್ತಾರೆ. ಅಂತಹವರು ಎಲ್ಲರನ್ನೂ ಪ್ರೀತಿಸುವ, ಎಲ್ಲರನ್ನೂ ಆತ್ಮೀಯತೆಯಿಂದ ಕಾಣುವ ಪ್ರವೃತ್ತಿಯವರಾಗಿರುತ್ತಾರೆ. ಅಂತಹವರ ಸಂಪರ್ಕ ಸಂತೋಷವನ್ನೂ ಹಾಗೂ ಸಮಾಧಾನವನ್ನೂ ತರುತ್ತದೆ. ಅವರು ಸಮಷ್ಟಿ ಹಿತವನ್ನು ಕಾಪಾಡುವಲ್ಲಿ ಆಸಕ್ತಿಯನ್ನು ಹೊಂದಿದವರಾಗಿರುತ್ತಾರೆ. ಡಿಸೆಂಬರ್ 16, 2012 ರಂದು ರಾತ್ರಿ ರಾಜಧಾನಿ ದೆಹಲಿಯಲ್ಲಿ ನಡೆದ ಒಂದು ಲೈಂಗಿಕ ಅತ್ಯಾಚಾರ ಭಾರತದ ಇತಿಹಾಸದಲ್ಲಿ ಒಂದು ದುರ್ಭರ ಘಟನೆ. ಅಂದು, 23 ವರ್ಷದ ಮೆಡಿಕಲ್ ಕಾಲೇಜ್ ಫಿಜಿಯೊತೆರಪಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಆರು ಜನ ದುರುಳರು ಚಲಿಸುತ್ತಿರುವ ಬಸ್ಸಿನಲ್ಲಿ ಅತ್ಯಾಚಾರವೆಸಗಿದರು, ಬರೆಯಬಾರದಷ್ಟು ಅಸಹ್ಯವಾಗಿ ಅವಳನ್ನು ಗಾಯಗೊಳಿಸಿದರು, ಸಹಾಯಕ್ಕೆ ಬಂದ ಅವಳ ಮಿತ್ರನನ್ನು ಗಾಯಗೊಳಿಸಿದರು. ನಂತರ ಯುವತಿ ಮತ್ತು ಅವಳ ಮಿತ್ರನನ್ನು ನಗ್ನಗೋಳಿಸಿ ರಸ್ತೆಯಲ್ಲಿ ಎಸೆದು ಪರಾರಿಯಾದರು. ಯುವತಿಯ ಮಿತ್ರನ ಹೇಳಿಕೆಯ ಪ್ರಕಾರ, ಅಲ್ಲಿದ್ದ ಯಾರೂ ಅವರಿಗೆ ಸಹಾಯ ಮಾಡಲು ಮುಂದೆ ಬರಲಿಲ್ಲ. ಸುಮಾರು ಎರಡು ಗಂಟೆಗಳ ನಂತರ ಪೋಲೀಸರು ಬಂದರು, ಬಂದವರು ಈ ಕೇಸ್ ಯಾರ ವ್ಯಾಪ್ತಿಗೆ ಸೇರುತ್ತದೆಂಬುದನ್ನು ತೀರ್ಮಾನಿಸಲು ಕಾಲ ತೆಗೆದುಕೊಂಡರೇ ಹೊರತು ನೊಂದವರಿಗೆ ಸಹಾಯ ಮಾಡಲು ಮುಂದಾಗಲಿಲ್ಲ. ಅವಳ ಮಿತ್ರನ ಹೇಳಿಕೆಗಳು ಮತ್ತು ಮಾಧ್ಯಮಗಳು ಘಟನೆಗೆ ಕೊಟ್ಟ ಪ್ರಾಮುಖ್ಯತೆ, ದೆಹಲಿಯ ನಾಗರಿಕರ ಮನಸಿನ ಮೇಲೆ ಬಹಳ ಪರಿಣಾಮ ಬೀರಿತು. ಜನರು, ಪ್ರಮುಖವಾಗಿ ಯುವಜನರು, ಬೀದಿಗಿಳಿದು ಪ್ರತಿಭಟಿಸಿದರು. ಪ್ರತಿಭಟನೆ ದೇಶದ ಉದ್ದಗಲಕ್ಕೂ ಹರಡಿತು. ಇರುಕಲಿಗೆ ಸಿಕ್ಕಿದ ದೇಶದ ಆಡಳಿತ ಕಾರ್ಯೋನ್ಮುಖವಾಗಬೇಕಾಯಿತು. ನಿಧಾನವಾಗಿ ವಿಚಾರಣೆ ಆರಂಭವಾಗಿದೆ. ಅದು ಎಲ್ಲಿಗೆ ಹೋಗುವುದೋ ತಿಳಿಯದು. ಇದೆಲ್ಲ ನಡೆಯುತ್ತಿರುವಾಗಲೇ ಆ ಯುವತಿಯನ್ನು ವಿಶೇಷ ಚಿಕಿತ್ಸೆಗೆಂದು ಸಿಂಗಪುರಕ್ಕೆ ಕಳಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಅವಳು ಮರಣ ಹೊಂದಿದಳು. ಇಂಥ ಘಟನೆ ಇದೇ ಮೊದಲನೆಯದೇನಲ್ಲ. ಇಂಥವು ಹಲವಾರು ಜರುಗಿವೆ. ಏನು ಕಾರಣವೋ ಅವೆಲ್ಲಕ್ಕೂ ಜನ ಈ ಮಟ್ಟದಲ್ಲಿ ಪ್ರತಿಭಟಿಸಿರಲಿಲ್ಲ. ಅದೃಷ್ಟವಶಾತ್ ಡಿಸೆಂಬರ್ ಘಟನೆ ನಿಧಾನವಾಗಿಯಾದರೂ ಜನರ ಕಣ್ಣು ತೆರಸಿತು. ಆಡಳಿತಗಾರರನ್ನು ಎಚ್ಚರಿಸಿತು.
ನಾನು ಎಂಬುದು ಪ್ರತಿಯೊಬ್ಬ ಮನುಷ್ಯನಲ್ಲಿಯೂ ಇರುವಂಥಹದ್ದು. ನಾನೂ ಇದಕ್ಕೆ ಹೊರತಾಗಿಲ್ಲ. ಯಾರಾದರೂ ನನ್ನನ್ನು ಹೊಗಳಿದರೆ ತಕ್ಷಣವೇ ಪುಳಕಗೊಳ್ಳುತ್ತೇನೆ. ಆದರೆ ಹೊರ ಪ್ರಪಂಚಕ್ಕೆ ತೋರ್ಪಡಿಸದಂತಿರುವ ಕಲೆ ಸಿದ್ಧಿಸಿಕೊಂಡಿದ್ದೇನೆ.
ಹೀಗೆಯೇ ಕೆಲ ವರ್ಷಗಳ ಹಿಂದೆ ಬೇಸರ ಕಳೆಯಲೆಂದು ರಾಜ್ಯ ಪರ್ಯಟನೆಗೆ ಹೊರಟೆ. ಸುಮಾರು ದಿನಗಳ ಪಯಣದ ನಂತರ ನಗರವೊಂದರಲ್ಲಿ ಮ್ಯೂಸಿಯಂ ನೋಡುವ ಅವಕಾಶ ಒದಗಿ ಬಂತು. ಅಲ್ಲಿ ಕಲಾವಿದನೊಬ್ಬನ ಪರಿಚಯವಾಯಿತು. ಆತ ನಿಜಕ್ಕೂ ಬಹಳ ಅದ್ಭುತ ಶಿಲ್ಪಿ. ಅಲ್ಲಿ ಆತನೇ ಕೆತ್ತಿನ ಅನೇಕ ಮೂರ್ತಿಗಳು ಅನಾವರಣಗೊಂಡಿದ್ದವು. ಆ ಮೂರ್ತಿಗಳು ಅದೆಷ್ಟು ಮನಮೋಹಕವಾಗಿದ್ದವೆಂದರೆ ಅವು ನಿಜವಾಗಿಯೂ ಜೀವತಳೆದು ನಿಂತಿವೆಯೇನೋ ಎಂಬಷ್ಟು ! ನಮ್ಮ ಹಳ್ಳಿಗಳ ಎಷ್ಟೋ ಹೆಣ್ಣುಮಕ್ಕಳು ಧೈರ್ಯವಾಗಿ ಶಾಲಾ ಕಾಲೇಜುಗಳಿಗೆ ಹೋಗಿಬರಲು ಆಗುತ್ತಿಲ್ಲ. ಭಯ ಅಥವಾ ರಕ್ಷಣೆಯ ಕೊರತೆಯಿಂದಾಗಿ ಅವರು ಶಿಕ್ಷಣ ತೊರೆಯುತ್ತಿದ್ದಾರೆ. ಒಂದು ಕಡೆ ಹೆಣ್ಣುಮಕ್ಕಳು ಕಲಿಯಬೇಕು, 18ರೊಳಗೆ ಮದುವೆಯಾಗಬಾರದು ಎಂದು ಸರ್ಕಾರ ಹೇಳುತ್ತಿದೆ. ಆದರೆ, ಅವರು ಕಾಲೇಜು ಬಿಟ್ಟರೆ, ಮನೆಯವರು ಮದುವೆಯಾಗು ಎನ್ನುತ್ತಾರೆ. ಶಾಲೆಗೆ ಕಾಲೇಜಿಗೆ ಒಂಟಿಯಾಗಿ ಬಸ್ನಲ್ಲಿ ಹೋಗಿಬರುವುದಕ್ಕೇ ಅಡ್ಡಿಗಳಿವೆ. ಬೀದಿ ಕಾಮಣ್ಣರು, ಅತ್ಯಾಚಾರಿಗಳು ಕೊಡುವ ಕೊಟಲೆಗಳನ್ನು ದಿನವೂ ನಾವು ಪತ್ರಿಕೆಗಳಲ್ಲಿ ಓದುತ್ತಿರುತ್ತೇವೆ. ಮನೆಗಳಲ್ಲಿರುವ ಪೋಷಕರೂ ಹೀಗೇ ಯೋಚಿಸುತ್ತಾರೆ. ಶಾಲೆಗೆ ಹೋಗಲೇಬೇಡ ಎನ್ನುತ್ತಾರೆ. ಇವನ್ನು ಬಗೆಹರಿಸುವುದು ಹೇಗೆ? ಮಕ್ಕಳ ಹಕ್ಕುಗಳಿಗಾಗಿ ಶಾಸಕರ ವೇದಿಕೆ ಮತ್ತು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಆಯೋಜಿಸಿದ್ದ ರಾಜ್ಯ ಮಟ್ಟದ ಮಕ್ಕಳ ಸಂಸತ್ ಮತ್ತು ವಿಧಾನಸೌಧದಲ್ಲಿ ರಾಜ್ಯದ ಮುಖ್ಯಮಂತ್ರಿಗಳೊಡನೆ ಮಕ್ಕಳ ಸಮಾಲೋಚನೆಯಲ್ಲಿ ಮಕ್ಕಳ ಪ್ರತಿನಿಧಿಗಳು ಮುಂದಿಟ್ಟಿದ್ದ ವಿಚಾರ (ನವೆಂಬರ್ 17, 2015). ಇದೇ ರೀತಿ ಹಲವು ವಿಚಾರಗಳು ಮುಖ್ಯಮಂತ್ರಿಗಳ ಮುಂದೆ ಮಕ್ಕಳು ಮಂಡಿಸುತ್ತಿದ್ದರು. ಮಕ್ಕಳ ಅಂಗವಿಕಲತೆ ತಡೆ, ಶಿಕ್ಷಣ, ಒಟ್ಟಾರೆಯಾಗಿ ಮಕ್ಕಳ ರಕ್ಷಣೆ, ಪೌಷ್ಟಿಕತೆ, ಆರೋಗ್ಯ, ಹೆಚ್.ಐ.ವಿ. ಏಡ್ಸ್ ಬಾಧಿತ ಮಕ್ಕಳು, ಮಕ್ಕಳ ಸಾಗಣೆ, ಮಕ್ಕಳ ಮೇಲೆ ಆಗುವ ತೊಂದರೆಗಳು, ಇತ್ಯಾದಿ.
ಎನ್.ವಿ. ವಾಸುದೇವ ಶರ್ಮಾ ಕಾರ್ಯಕಾರಿ ನಿರ್ದೇಶಕ, ಚೈಲ್ಡ್ ರೈಟ್ಸ್ ಟ್ರಸ್ಟ್, ಬೆಂಗಳೂರು ಆಧುನಿಕ ಯುಗದಲ್ಲಿ ದಲಿತರು ಎದುರಿಸುತ್ತಿರುವ ಹಲವಾರು ಸವಾಲುಗಳಲ್ಲಿ ಜಾಗತೀಕರಣವೂ ಒಂದಾಗಿದೆ. 20ನೇ ಶತಮಾನದ ಅಮೇರಿಕಾ ನೇತೃತ್ವದ ಜಾಗತೀಕರಣ ಶ್ರೀಮಂತರ ಮತ್ತು ಬಡವರ ನಡುವಿನ ಕಂದಕವನ್ನು ಹೆಚ್ಚಿಸಿದೆ. ಇಡೀ ಮನುಕುಲವನ್ನು ಪ್ರಸ್ತುತ ಸಂದರ್ಭದಲ್ಲಿ ಭ್ರಾತೃತ್ವ, ಸಮಾನತೆ, ಸ್ವಾತಂತ್ರ್ಯ ಮತ್ತು ಸಬಲೀಕರಣದೆಡೆಗೆ ಮುನ್ನಡೆಸುವ ನಿಟ್ಟಿನಲ್ಲಿ ಬುದ್ಧಮಾರ್ಗ ಮತ್ತು ಭೀಮಸಂದೇಶ ಪ್ರಸ್ತುತವಾಗಿದೆ. ಇಂದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸಾಮಾಜಿಕವಾಗಿ ಹೀನಾಯ ಸ್ಥಿತಿಯಲ್ಲಿದ್ದಾರೆ. ತುಳಿತಕ್ಕೊಳಗಾದ ಈ ವರ್ಗಗಳು ರಾಜಕೀಯವಾಗಿಯೂ ಇಂದು ಮಾರುಕಟ್ಟೆ ಶಕ್ತಿಗಳ ಹುನ್ನಾರದಿಂದಾಗಿ ಅತಂತ್ರರಾಗಿದ್ದಾರೆ.
ಶ್ರೀನಿವಾಸ ಡಿ. ಪ್ರಾಜೆಕ್ಟ್ ಫೆಲೊ, ಯುಜಿಸಿ-ಯುಪಿಇ ಫೋಕಸ್ ಏರಿಯ-, ಸಮಾಜಕಾರ್ಯ ವಿಭಾಗ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ನಿಂಗರಾಜು ಆರ್. ಅತಿಥಿ ಬೋಧಕರು, ಈವನಿಂಗ್ ಮಹಾರಾಜ ಕಾಲೇಜು, ಸಮಾಜಶಾಸ್ತ್ರ ವಿಭಾಗ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ಮಹಾದೇವಸ್ವಾಮಿ ಡಿ. ಸಂಶೋಧನಾ ವಿದ್ಯಾರ್ಥಿ, ಇತಿಹಾಸ ವಿಭಾಗ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ಪ್ರಶಾಂತ್ ನಾಯರ್ ಒಂದಾನೊಂದು ಕಾಲದಲ್ಲಿ ಒಬ್ಬ ಒಳ್ಳೆಯ ರಾಜ ಇದ್ದನಂತೆ. ಅವನು, ಅವನ ರಾಜ್ಯದ ಹಸಿದವರಿಗೆ, ಬಡವರಿಗೆ ಆಹಾರ ಒದಗಿಸಲು ಎಲ್ಲೆಂದರಲ್ಲಿ ಅನ್ನ ಛತ್ರಗಳನ್ನು ಸ್ಥಾಪಿಸಿದ್ದನಂತೆ. ಅವನ ರಾಜ್ಯದಲ್ಲಿ ಹಸಿವಿನ ಸೊಲ್ಲು ಸೋತು ಉಡುಗಿತ್ತಂತೆ. ನಾವೆಲ್ಲರೂ ಎಲ್ಲೋ ಕೇಳಿರಬಹುದಾದ ಒಂದು ಜನಪದ ಕಥೆ ಎಂದುಕೊಂಡಿರಾ ? ಊಹುಂ, ಇದು ನಮ್ಮ ಕಾಲದಲ್ಲೇ ಯಾವುದೇ ಅಡೆತಡೆ ಇಲ್ಲದೆ, ಒಂದು ಪವಿತ್ರ ರಿಚ್ಯುವಲ್ನಂತೆ ನಡೆಯುತ್ತಿರುವ ಒಂದು ಮಹಾನ್ ಅನ್ನಯಜ್ಞದ ಕಥೆ.
ಸ್ನೇಹಿತರೇ,
ಸಮಾಜಕಾರ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಿರಾತಂಕ ತಂಡವು ಹಲವಾರು ಪ್ರಯತ್ನಗಳನ್ನು ಮಾಡುತ್ತಾ ಬಂದಿದೆ. ಇದರ ಮುಂದುವರಿದ ಭಾಗವಾಗಿ ಹಲವಾರು ಸಮಾಜಕಾರ್ಯಕ್ಕೆ ಸಂಬಂಧಿಸಿದ ವಿನೂತನ ಪ್ರಯೋಗಗಳನ್ನು ಚರ್ಚಿಸುವ ಸಲುವಾಗಿ ಸೆಪ್ಟೆಂಬರ್ 4, 2016 ಭಾನುವಾರದಂದು ಬೆಂಗಳೂರಿನಲ್ಲಿ ಸಭೆ ಸೇರಲು ನಿರ್ಧರಿಸಲಾಗಿದೆ. ತಮ್ಮದೇ ಆದ ಭಾಷೆ ಮತ್ತು ಸಂಸ್ಕೃತಿಯನ್ನು ಹೊಂದಿರುವ ಸ್ಥಳೀಯ ಸಮುದಾಯಗಳ ಸಮೂಹವನ್ನು ಬುಡಕಟ್ಟು ಜನಾಂಗ, ಆದಿವಾಸಿ ಸಮಾಜ ಎಂದು ಕರೆಯುತ್ತಾರೆ. ಈ ಸಮುದಾಯಗಳ ಜನರು ತಮ್ಮದೇ ಆದ ಆಚಾರ, ವಿಚಾರ, ಪರಂಪರೆ, ನಂಬಿಕೆಗಳು, ಪದ್ಧತಿಗಳು, ಸಂಪ್ರದಾಯಗಳು, ಸಾಹಿತ್ಯ, ಸಂಗೀತ, ನೃತ್ಯಕಲೆ, ಕುಶಲಕಲೆ ಮುಂತಾದ ಹಲವಾರು ಅಂಶಗಳಿಂದ ಮುಖ್ಯ ಸಾಂಸ್ಕೃತಿಕ ವಾಹಿನಿಯಿಂದ ಭಿನ್ನವಾಗಿರುತ್ತಾರೆ. ಅವರು ಈ ಬುಡಕಟ್ಟು ಜನಾಂಗಗಳಿಗೆ ಅಳವಡಿಸಿಕೊಳ್ಳುವಂತಹ ಅಂತರ ಸಮುದಾಯ ರಚನೆ, ಸಂಸ್ಕಾರಗಳು, ರೀತಿ-ರಿವಾಜು, ವೇಷ-ಭೂಷಣ, ಆಹಾರ-ಪಾನೀಯ ಪದ್ಧತಿಗಳು, ಹವ್ಯಾಸಗಳು, ಅಭ್ಯಾಸಗಳನ್ನು ಹೊಂದಿರುತ್ತಾರೆ. ಈ ಕಾರಣಗಳಿಗಾಗಿ ಅವರು ಇತರೆ ಸಾಂಸ್ಕೃತಿಕ ಸಮುದಾಯಗಳಿಂದ, ಸಮಾಜಗಳಿಂದ ಬೇರೆಯದೇ ಆದ ಜೀವನ ಪದ್ಧತಿಯನ್ನು ಅನುಸರಿಸುತ್ತಾರೆ. ಕರ್ನಾಟಕದಲ್ಲಿ ಇಂತಹ ಅನೇಕ ಸಮುದಾಯಗಳು, ಸಮಾಜಗಳು ಅಲ್ಲಲ್ಲಿ ಕಾಣಸಿಗುತ್ತವೆ. ಅವುಗಳಲ್ಲಿ ಕಾಡುಗೊಲ್ಲರು, ಕೊರಗರು, ಕುರುಬರು, ಜೇನುಕುರುಬರು, ವಡ್ಡರು, ಮ್ಯಾಸನಾಯಕರು ಹೀಗೆ ಅನೇಕ ಬುಡಕಟ್ಟು ಜನಾಂಗಗಳನ್ನು ಗುರುತಿಸಬಹುದಾಗಿದೆ. ಇಂತಹ ಬುಡಕಟ್ಟು ಜನಾಂಗಗಳಲ್ಲಿ ಲಂಬಾಣಿ ಬುಡಕಟ್ಟು ಜನಾಂಗವೂ ಒಂದು.
ಸಾರಾಂಶ
ಪ್ರತಿಯೊಂದು ರಾಷ್ಟ್ರ, ಸಮಾಜ, ವ್ಯಕ್ತಿಗಳ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣವು ಒಂದು ಪ್ರಮುಖ ಸಾಧನವಾಗಿದೆ. ಶಿಕ್ಷಣದ ಹಂತಗಳಲ್ಲಿ ಪದವಿ-ಪೂರ್ವ ಶಿಕ್ಷಣ ಹಂತದ ನಂತರ ಬರುವ ಶಿಕ್ಷಣವೇ ಉನ್ನತ ಶಿಕ್ಷಣ ಅಥವಾ ವಿಶ್ವವಿದ್ಯಾಲಯ ಶಿಕ್ಷಣವೆನ್ನುತ್ತೇವೆ. ಈ ಉನ್ನತ ಶಿಕ್ಷಣವು ಮಾನವ ಜನಾಂಗ ಇಂದು ಎದುರಿಸುತ್ತಿರುವ ಸಂದಿಗ್ಧವಾದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ನೈತಿಕ ಹಾಗು ಆಧ್ಯಾತ್ಮಿಕ ಸಮಸ್ಯೆಗಳ ಬಗ್ಗೆ ಚಿಂತನ-ಮಂಥನ ಮಾಡುವುದರ ಜೊತೆಗೆ ಸೃಜನಾತ್ಮಕ ಜ್ಞಾನ ಮತ್ತು ಕೌಶಲ್ಯಗಳನ್ನು ಬೆಳೆಸುವುದರ ಮೂಲಕ ರಾಷ್ಟ್ರೀಯ ಅಭಿವೃದ್ಧಿಗೆ ತನ್ನ ಕೊಡುಗೆಯನ್ನು ನೀಡಬೇಕು. ಈ ನಿಟ್ಟಿನಲ್ಲಿ ಯೋಚಿಸಿದಾಗ ನಮ್ಮ ಭಾರತ ದೇಶದ ಉನ್ನತ ಶಿಕ್ಷಣವು ಇಂದು ಬಹುತೇಕವಾಗಿ ನಿರುದ್ಯೋಗಿ ಪದವೀಧರರನ್ನು ಸೃಷ್ಟಿಸಿ ಆ ಅಭ್ಯರ್ಥಿಗಳು ಕೇವಲ ಪರೀಕ್ಷೆಗೆ ಸಂಬಂಧಪಟ್ಟ ಜ್ಞಾನವನ್ನು ಮಾತ್ರ ಪಡೆಯುವಂತೆ ಮಾಡುತ್ತಿದೆ. ಇದಕ್ಕೆ ಕಾರಣ ನಮ್ಮ ದೇಶದ ಕೆಲವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಅತ್ಯಾಧುನಿಕ ಎಲ್ಲಾ ಸೌಲಭ್ಯಗಳನ್ನು ಪಡೆದಿದ್ದರೆ, ಇನ್ನೂ ಕೆಲವು ವಿಶ್ವವಿದ್ಯಾಲಯಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವುದು ಒಂದು ದೊಡ್ಡ ವೈಪರೀತ್ಯವಾಗಿದೆ. ಇನ್ನೂ ಈ ಉನ್ನತ ಶಿಕ್ಷಣದ ಒಟ್ಟು ದಾಖಲಾತಿ ಅನುಪಾತವು ಪ್ರಪಂಚದ ಕೆಲವು ರಾಷ್ಟ್ರಗಳಿಗೆ ಹೋಲಿಸಿದಾಗ ನಮ್ಮ ಒಟ್ಟು ದಾಖಲಾತಿಯ ಅನುಪಾತ ತುಂಬಾ ಕಡಿಮೆಯಿದೆ ಹಾಗೂ ಕ್ಯೂ ಎಸ್ ನ ಶ್ರೇಷ್ಠ ಮಟ್ಟದ ವಿಶ್ವವಿದ್ಯಾಲಯದ ರ್ಯಾಂಕ್ನಲ್ಲಿ ನಮ್ಮ ದೇಶದ ವಿಶ್ವವಿದ್ಯಾಲಯಗಳು ತುಂಬಾ ಕೆಳಮಟ್ಟದಲ್ಲಿವೆ ಹಾಗೂ ಗುಣಾತ್ಮಕ ಶಿಕ್ಷಣ ಸಂಸ್ಥೆಗಳು ರ್ಯಾಂಕ್ಗೆ ಹೋಲಿಕೆ ಮಾಡಿದಾಗ ಭಾರತ ಕೆಳಮಟ್ಟದ ರ್ಯಾಂಕ್ನಲ್ಲಿದೆ. ಈ ನಿಟ್ಟಿನಲ್ಲಿ ಪ್ರಸ್ತುತ ಲೇಖನವು ನಮ್ಮ ಭಾರತದ ಶಿಕ್ಷಣದ ರಚನೆ, ದಾಖಲಾತಿ, ಸಮತೆ, ಗುಣಾತ್ಮಕತೆ, ವಿದ್ಯಾರ್ಥಿ ಮತ್ತು ಶಿಕ್ಷಕರ ಅನುಪಾತ, ಸಂಶೋಧನೆಗಳ ಅಭಿವೃದ್ಧಿ ವಿಶ್ಲೇಷಣೆ ಮತ್ತು ಉನ್ನತ ಶಿಕ್ಷಣದ ಪ್ರಮುಖ ಸಮಸ್ಯೆಗಳಿಗೆ ಪರಿಹಾರಗಳ ಪೂರಕವಾದ ಅಂಶಗಳನ್ನು ಇಲ್ಲಿ ಅವಲೋಕಿಸಲಾಗಿದೆ. ಮಾನವನನ್ನು ಪ್ರಗತಿಪಥದೆಡೆಗೆ ಕೊಂಡೊಯ್ಯುವ ಪ್ರಮುಖ ಸಾಧನವೇ ಜ್ಞಾನ. ಇಂತಹ ಜ್ಞಾನವನ್ನು ಮಾನವನು ಹುಟ್ಟಿನಿಂದಲೇ ಹಂತ-ಹಂತವಾಗಿ ಕುಟುಂಬದ ಸದಸ್ಯರೊಂದಿಗೆ ನೆರೆಹೊರೆಯವರೊಂದಿಗೆ ಕಲಿತಿರುತ್ತಾನೆ. ಹೀಗೆ ಸಂಪಾದಿಸಿದ ಜ್ಞಾನವನ್ನು ವ್ಯವಸ್ಥಿತ ರೀತಿಯಲ್ಲಿ ಮಾರ್ಪಡಿಸಿ ಅಡಗಿರುವ ಜ್ಞಾನ ಸಂಪತ್ತಿನ ಪ್ರಭೆಯನ್ನು ಹೊರತಂದು ಪ್ರಜ್ವಲಿಸುವಂತೆ ಮಾಡುವದೇ ಶಿಕ್ಷಣವಾಗಿದೆ. ಶಿಕ್ಷಣ ಎಂಬುದು ಇಂದು ನಿನ್ನೆಯದಲ್ಲ, ಮಾನವನ ಉಗಮದೊಂದಿಗೇನೇ ಹುಟ್ಟಿಕೊಂಡ ವ್ಯವಸ್ಥೆಯಾಗಿದೆ. ಔಪಚಾರಿಕ ಶಿಕ್ಷಣದ ವಿಧಾನವೇ ವ್ಯವಸ್ಥಿತ ಕ್ರಮಬದ್ಧವಾದ ಜ್ಞಾನದ ಜೋಡಣೆಯಾಗಿದೆ. ವ್ಯಕ್ತಿಯ ಚಟುವಟಿಕೆ, ವರ್ತನೆ, ನಡವಳಿಕೆ ಹಾಗೂ ಅವನು ಪಡೆದಿರುವ ಜ್ಞಾನವನ್ನು ಪ್ರತಿನಿಧಿಸುವುದಲ್ಲದೆ, ಸಮಾಜದಲ್ಲಿ ಅವನ ಸ್ಥಾನಮಾನ ಮುಂತಾದ ಅವನ ಸಂಪೂರ್ಣ ವ್ಯಕ್ತಿತ್ವದ ಪ್ರತೀಕವಾಗುತ್ತದೆ. ಆದ್ದರಿಂದ ವ್ಯಕ್ತಿಯು ಮೌಲ್ಯಯುತವಾದ ಸ್ಥಾನಮಾನ ಹೊಂದಬೇಕಾದರೆ, ನಯ, ವಿನಯ, ಗುರು ಹಿರಿಯರನ್ನು ಗೌರವಿಸುವುದು ಮುಂತಾದ ಸದ್ಗುಣಗಳು ವ್ಯಕ್ತಿಯಲ್ಲಿ ನೆಲೆಸುವಂತೆ ಮಾಡುವುದೇ ಶಿಕ್ಷಣವಾಗಿದೆ. ಶಿಕ್ಷಣವು ಅಸತ್ಯದಿಂದ-ಸತ್ಯದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವುದಾಗಿದೆ.
ರವೀಂದ್ರನಾಥ ಚಕ್ರವರ್ತಿ. ಎಸ್. ಪಿ.ಎಚ್.ಡಿ. ವಿದ್ಯಾರ್ಥಿ, ಸಮಾಜಶಾಸ್ತ್ರ ಮತ್ತು ಸಂಶೋಧನಾ ವಿಭಾಗ, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ-577451 ಡಾ. ಚಂದ್ರಶೇಖರ್ ಪ್ರಾಧ್ಯಾಪಕರು, ಸಮಾಜಶಾಸ್ತ್ರ ಮತ್ತು ಸಂಶೋಧನಾ ವಿಭಾಗ, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ-577451 ಸಮಾಜ ವಿಜ್ಞಾನಿಗೆ ಸಮಾಜ ಕಾರ್ಯದ್ದೇ ಧ್ಯಾನ. ತಾನಿರುವ ಸ್ಥಳ, ಊರು ಅಷ್ಟೆ ಏಕೆ ಇಡೀ ರಾಷ್ಟ್ರವೇ ಸ್ವಚ್ಚವಾಗಿರಬೇಕೆಂದು ಶ್ರಮಿಸುತ್ತಾನೆ. ಅದಕ್ಕೆ ಭೂಮಿಕೆಯಾಗಿ ತನ್ನ ಅಂತರಂಗ ಬಹಿರಂಗಗಳಲ್ಲಿ ನಿಷ್ಪಕ್ಷಪಾತವನ್ನು, ನಿಸ್ವಾರ್ಥ ಸೇವೆಯ ಕಂಕೈರ್ಯವನ್ನು ಮೈಗೂಡಿಸಿಕೊಂಡು ಸಮಾನತೆಯ ಮಂತ್ರವನ್ನು ಜಪಿಸುತ್ತಾನೆ. ತನ್ನನ್ನು ತಾನು ಮೊದಲು ಬದಲಾವಣೆಗೆ ಒಡ್ಡಿಕೊಳ್ಳುತ್ತಾನೆ. ಆಗ ಮಾತ್ರ ನಿಜವಾದ ಸಮಾಜ ಸೇವಕನಾಗಲು ಶಕ್ತನಾಗುತ್ತಾನೆ. ಕೆಲಮೊಮ್ಮೆ ಪ್ರಯೋಗದ ಬಲಿಪಶುವೂ ಆಗಬೇಕಾಗುತ್ತದೆ. ಆದರೂ ಎದೆಗುಂದದೆ ಸಿಂಹ ಸದೃಶವಾದ ಗುಂಡಿಗೆಯನ್ನು ಹೊಂದಿರಬೇಕಾಗಿರುತ್ತದೆ. ಹೀಗಿದ್ದರೆ ಮಾತ್ರ ಭಯೋತ್ಪಾದನೆಯಂತೆ ವರ್ತಿಸುತ್ತಿರುವ ಜಾತಿ ವ್ಯವಸ್ಥೆಯನ್ನು, ರಸ್ತೆಗೆ ಕಸ ಎಸೆಯುತ್ತಿರುವ ನಾಗರೀಕ ಸಂಸ್ಕೃತಿಯನ್ನು, ಸಮಾಜಕಾರ್ಯವೆಂದರೆ ತರಗತಿಯಲ್ಲಿ ಬೋಧಿಸುವುದು ಎಂದು ಭ್ರಮಿಸಿರುವವರನ್ನು, ಸಂಪತ್ತನ್ನು ಕ್ರೋಡೀಕರಿಸಿಕೊಂಡು ಅಧಿಕಾರದ ಮಧವೇರಿದವರನ್ನು, ಯೋಜನೆಗಳ ನೆಪದಲ್ಲಿ ಹಣ ಸ್ವಾಹ ಮಾಡುತ್ತಿರುವ ನುಂಗಣ್ಣರನ್ನು ಈ ಮೊದಲಾದ ಎಲ್ಲಾ ವರ್ಗದವರ ಮನಸ್ಸನ್ನು ಒಳ್ಳೆಯ ಕಾರ್ಯಕ್ಕೆ ಅಣಿಗೊಳಿಸಲು ಸಾಧ್ಯವಿದೆ.
ಸಾರಾಂಶ
ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳ ವಾಸ್ತವ್ಯವಿರುವ ಕುಲಾಲರ ಯಾನೆ ಮೂಲ್ಯರ ಬಗೆಗಿನ ಒಂದು ಅಧ್ಯಯನವು ಇದಾಗಿದೆ. ಕುಲಾಲ ಸಮುದಾಯದಲ್ಲಿ ಒಳಜಾತಿಗಳಿದ್ದು ಅವು ಅವುಗಳದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಅದರಲ್ಲಿ ಶೋಷಣೆಗೊಳಪಟ್ಟ ಉಪ್ಯಾನ್ ಒಳಜಾತಿಯ ಬಗೆಗೆ ನಡೆಸಿದ ಅಧ್ಯಯನವು ಇದಾಗಿದ್ದು, ಕುಲಾಲ ಸಮಾಜದ ತಪ್ಪು ಕಲ್ಪನೆಯನ್ನು ಹೊಡೆದೋಡಿಸುವಲ್ಲಿ ಈ ಅಧ್ಯಯನದ ಪಾತ್ರ ಪ್ರಮುಖವಾದುದೂ, ಕುಲಾಲ ಸಮುದಾಯದ ಹಿರಿಯರಲ್ಲಿ, ಮುಖಂಡರಲ್ಲಿ ಹಾಗೂ ಕುಲಾಲ ಸಮಾಜದ ಉಪ್ಯಾನ್ ಒಳಜಾತಿಯ ಹೆಣ್ಣು ಮಕ್ಕಳಿಂದ ಅಧ್ಯಯನಕ್ಕೆ ಬೇಕಾದ ಮಾಹಿತಿಯನ್ನು ಸಂದರ್ಶಕ ಸ್ನೇಹಿ ಸಂದರ್ಶನದ ಮೂಲಕ ಸಂಗ್ರಹಿಸಲಾಗಿದೆ. ಈ ಅಧ್ಯಯನವು ಮುಂದಿನ ಅಧ್ಯಯನಕ್ಕೆ ಪೂರಕವಾದ ಪ್ರಶ್ನೆ ಮತ್ತು ವೇದಿಕೆಯನ್ನು ಒದಗಿಸಿರುವುದರಿಂದ ಇದರ ಅಧ್ಯಯನ ವ್ಯಾಪ್ತಿ ವಿಶಾಲವಾದುದಾಗಿದೆ. ಮೂಢನಂಬಿಕೆಯನ್ನು ಮೀರಿದ ಕೆಲವು ಕುಲಾಲ ಕುಟುಂಬಗಳು ಈಗಲೂ ಉತ್ತಮ ಜೀವನವನ್ನು ನಡೆಸುತ್ತಿರುವುದರಿಂದ ಮುಂದೆ ಈ ಮೌಢ್ಯತೆಯು ತೆರೆಮರೆಗೆ ಸರಿಯಬಹುದೆಂದು ಲೇಖಕರ ಅಭಿಪ್ರಾಯದಾಗಿದೆ. ಪ್ರಮುಖ ಪದಗಳು:- ಒಳಜಾತಿ, ಉಪ್ಯಾನ್ ಬರಿ, ಉಪ್ಪು, ಸಾಧುಸ್ವಭಾವ, ತುಳು ಪೀಠಿಕೆ:
ಭಾರತೀಯ ಸಮಾಜವು ಸಾಂಸ್ಕೃತಿಕವಾಗಿ ಬಹುಮುಖಿ ಸಮಾಜವಾಗಿದ್ದು, ತನ್ನದೆ ಆದ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಹಾಗೆಯೇ ಭಾರತದಲ್ಲಿ ವಿಭಿನ್ನ ಧಾರ್ಮಿಕ ಸಮೂಹಗಳು ಅಸ್ತಿತ್ವದಲ್ಲಿದ್ದು, ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿವೆ. ಭಾರತೀಯ ಸಮಾಜವು ಸ್ತರವಿನ್ಯಾಸಯುಕ್ತ ಸಮಾಜವಾಗಿದ್ದು ಏಣಿಶ್ರೇಣಿಗಳಿಂದ, ನಿರ್ಬಂಧಗಳಿಂದ ಮತ್ತು ಅಸಮಾನತೆಯಿಂದ ಕೂಡಿದೆ. ಈ ಅಸಮಾನತೆಯ ಮೂಲ ಜಾತಿ ಸಮೂಹಗಳಲ್ಲಿರುವ ವೈವಿಧ್ಯತೆಗೆ ಕಾರಣವಾಗಿದೆ. ಭಾರತದಲ್ಲಿ ಗ್ರೀಕರು/ಹೂಣರು, ಕುಶಾನರು, ಮಂಗೋಲರು, ತುರುಕರು, ಮೊಘಲರು ಮುಂತಾದ ಜನಾಂಗೀಯ ಮೂಲನಿವಾಸಿ, ಆದಿವಾಸಿ ಬುಡಕಟ್ಟು ಜನಾಂಗದೊಂದಿಗೆ ಸಮ್ಮಿಶ್ರಣಗೊಂಡಿದ್ದಾರೆ. ಭಾರತದ ಮೂಲನಿವಾಸಿಗಳಾಗಿ ಆದಿವಾಸಿ ಬುಡಕಟ್ಟು ಜನಾಂಗದವರನ್ನು ಗುರುತಿಸಲಾಗಿದೆ. ಭಾರತದಲ್ಲಿ 461 ಬುಡಕಟ್ಟು ಸಮುದಾಯಗಳಿವೆ. 2011ರ ಜನಗಣತಿಯಂತೆ 9.50 ಕೋಟಿ ಜನಸಂಖ್ಯೆ ಬುಡಕಟ್ಟು ಸಮುದಾಯದವರಾಗಿದ್ದಾರೆ. ಭಾರತದಲ್ಲಿ ಕೆಲವು ಬುಡಕಟ್ಟಿನ ಜನರು ಗ್ರಾಮ-ನಗರ ಸಂಸ್ಕೃತಿಗೂ ಸೇರಿಕೊಳ್ಳದೆ ತಮ್ಮದೇ ಆದ ವಿಶಿಷ್ಠ ಸಂಸ್ಕೃತಿ ಪರಂಪರೆಯ ವಿಭಿನ್ನತೆಯನ್ನು ಹೊಂದಿದ್ದಾರೆ. ಪ್ರೊ|| ಕೇಶವಮೂರ್ತಿ ಟಿ.ಎನ್. ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಗೇಪಲ್ಲಿ ಅಪರಿಮಿತ ಮಾನವ ಸಂಪನ್ಮೂಲವುಳ್ಳ ಭಾರತದಂತಹ ಸಂಪ್ರದಾಯಸ್ಥ ರಾಷ್ಟ್ರದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಡತನದ ಬೇಗೆಯಲ್ಲಿ ಸಿಲುಕಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಮಾತ್ರ ಮರೀಚಿಕೆಯೇ ಆಗಿದೆ. ಇತ್ತೀಚಿಗಷ್ಟೆ ಭಾರತದಲ್ಲಿ ಮಕ್ಕಳ ಅಪೌಷ್ಟಿಕತೆಯ ಸ್ಥಿತಿ ಗತಿ ಕುರಿತು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿರುವ ವರದಿಯನ್ನು ಬಿಡುಗಡೆ ಮಾಡಿದ ಪ್ರಧಾನ ಮಂತ್ರಿಗಳಾದ ಡಾ|| ಮನಮೋಹನ್ ಸಿಂಗ್ ಇದೊಂದು ರಾಷ್ಟ್ರೀಯ ಅಪಮಾನ ಎಂದು ಕರೆದಿದ್ದಾರೆ. ವಿಪರ್ಯಾಸದ ಸಂಗತಿಯೆಂದರೆ ಅವರದೇ ನೇತೃತ್ವದ ಪೌಷ್ಟಿಕತೆಯ ಸವಾಲುಗಳಿಗೆ ಸಂಬಂಧಿಸಿದ ಪ್ರಧಾನಮಂತ್ರಿ ರಾಷ್ಟ್ರೀಯ ಮಂಡಳಿ ಕಳೆದ ಮೂರು ವರ್ಷಗಳಲ್ಲಿ ಸಭೆ ಸೇರಿರುವುದು ಕೇವಲ ಒಂದೇ ಬಾರಿಯಷ್ಟೆ. ರಾಷ್ಟ್ರದಲ್ಲಿ ಐದು ವರ್ಷದೊಳಗಿನ ಶೇ. 42 ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ಈ ವರದಿ ಬಹಿರಂಗ ಪಡಿಸಿದೆ. ಇನ್ನೂ ಕೆಲವು ನಂಬಲರ್ಹ ಸಂಸ್ಥೆಗಳ ಅಂದಾಜಿನ ಪ್ರಕಾರ ಈ ಪ್ರಮಾಣವು ಶೇ.52 ರಿಂದ 54 ರಷ್ಟಿದೆ (ಡಾ||. ಆರ್. ಬಾಲಸುಬ್ರಹ್ಮಣ್ಯಂ 2012).
ಸಮಾಜಕಾರ್ಯ ಅಧ್ಯಾಪನದಿಂದ ನಿವೃತ್ತಿ ಹೊಂದಿಯೇ ಹದಿನಾರು ವರ್ಷಗಳು ಉರುಳಿದವು. ನನ್ನ ಜೀವನವನ್ನು ಸಿಂಹಾವಲೋಕನ ಮಾಡಿದರೆ ಕಾಣುವುದೇನು? ಸಮಾಜಕಾರ್ಯದ ಮತ್ತು ನನ್ನ ಜೀವನಾನುಭವದ ಹೆಜ್ಜೆಗುರುತುಗಳೇನು? ಈ ಪ್ರಶ್ನೆಗಳ ಸುತ್ತಲೇ ತಿರುಗುತ್ತಿರುವ ಸ್ಥೂಲಾವಲೋಕನ ಈ ಮುಂದಿನದ್ದು.
ಪ್ರವೇಶ ಆಕಸ್ಮಿಕ ಸಮಾಜಕಾರ್ಯಕ್ಕೆ ನಾನು ಪ್ರವೇಶಿಸಿದ್ದು ಆಶ್ಚರ್ಯಕರ ರೀತಿಯಲ್ಲಿ, ಬಹುಶಃ ನನ್ನ ಅರಿವಿಲ್ಲದಂತಯೇ ಗುರುತಿಸಬಹುದಾದರೆ ಸದಾಶ ಯ ಹೊಂದಿದ್ದ ಹಿರಿಯರೊಬ್ಬರ ಸಲಹೆ ಸೂಚನೆಯ ಮೇರೆಗೆ, ಕನ್ನಡ ಸಾಹಿತ್ಯದ ಆರಾಧಕ ಅಥವಾ ಕೃಷಿಕ ಆಗಬೇಕು ಎಂಬುದು ನನ್ನ ಅಪೇಕ್ಷೆಯಾಗಿತ್ತು. ಪ್ರೌಢಶಾಲೆಯಲ್ಲಿ ಓದುತ್ತಿದ್ದಾಗಲೇ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡು, ಕವನ ಪ್ರಬಂಧ ರಚನೆಯಲ್ಲಿ ತೊಡಗಿದ್ದು, ಕನ್ನಡ ಸಾಹಿತ್ಯ ಕೃತಿಗಳನ್ನೇ ಓದುವುದರಲ್ಲಿ ಹೆಚ್ಚಿನ ಆಸಕ್ತಿ, ಆಸ್ಥೆಯನ್ನು ತಳೆದಿದ್ದೆ. ಅಂದಿನ ಮದ್ರಾಸು ಪ್ರಾಂತ್ಯಕ್ಕೆ ಎಸ್.ಎಸ್.ಎಲ್.ಸಿ., ಪರೀಕ್ಷೆಯಲ್ಲಿ ಕನ್ನಡದಲ್ಲಿ ಪ್ರಥಮ ಸ್ಥಾನ ಪಡೆದಿದ್ದೆ. ನನ್ನ ಗುರುಗಳೂ ನನಗೆ ಪ್ರೋತ್ಸಾಹದ ನೆರವು ನೀಡುತ್ತಿದ್ದರು. ಇದೂ ನನ್ನ ಕನ್ನಡ ದುಡಿಮೆಗೆ ಒತ್ತಾಸೆಯಾಯ್ತು. (ಆರ್ಥಿಕ ಅನನುಕೂಲ ಮತ್ತು ಇತರ ತೊಂದರೆಗಳ ಕಾರಣದಿಂದ ಒಂದು ವರ್ಷ ನನ್ನ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದಿದ್ದುದರಿಂದ ಪತ್ರಿಕೋದ್ಯಮಿಯಾಗಿ ಹುಬ್ಬಳ್ಳಿ, ದಾವಣಗೆರೆ ನಗರಗಳಲ್ಲಿ ಕೆಲಸ ಮಾಡಬೇಕಾಯ್ತು) ಪ್ರೌಢಶಾಲಾ ಶಿಕ್ಷಣದ ನಂತರ ನನ್ನ ಅಣ್ಣ ಹಿ.ಮ. ನಾಗಯ್ಯನವರ ಸಹಾಯದಿಂದ ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಇಂಟರ್ ಮೀಡಿಯಟ್ ಸೇರಿದೆ. ಅಲ್ಲಿ ಓದುವಾಗ ಪ್ರೊ. ಕೆ.ಎಸ್. ಕೃಷ್ಣಮೂರ್ತಿ, ಪ್ರೊ. ಗೋಪಾಲಕೃಷ್ಣ ಅಡಿಗ, ಇಂಗ್ಲೆಂಡಿನ ಡೇವಿಡ್ ಹಾರ್ಸ್ ಬರೋ ಇಂಥವರ ನೆರವು ದೊರೆಯಿತು. ಅಲ್ಲಿಯೇ ಕರುಣಾಮಯಿ ಫಾದರ್ ಮುತಡಂ ಕಷ್ಟಕಾಲದಲ್ಲಿ ನೆರವಾದರು. ಆ ಅಧ್ಯಯನ ಕಾಲದಲ್ಲಿಯೇ ಕನ್ನಡದ ಕೃಷಿ ನಡೆದು ಅಂತಿಮ ಪರೀಕ್ಷೆಯಲ್ಲಿ ಒಂಭತ್ತನೆಯ ರ್ಯಾಂಕ್ ಪಡೆದುದಲ್ಲದೆ ಮೈಸೂರು ವಿಶ್ವವಿದ್ಯಾಲಯಕ್ಕೆ ಕನ್ನಡದಲ್ಲಿ ಪ್ರಥಮ ಸ್ಥಾನ ದೊರೆಕಿಸಿಕೊಂಡೆ ಎಂದು ನೆನಪು. ಆದುದರಿಂದಲೂ ಮಹಾರಾಜ ಕಾಲೇಜಿನಲ್ಲಿ ಕನ್ನಡ ಆನರ್ಸ್ ಓದಲು ನನಗೆ ಸಹಜವಾಗಿಯೇ ಅವಕಾಶ ಸಿಕ್ಕಿದುದಲ್ಲದೆ ಮೆರಿಟ್ ಸ್ಕಾಲರ್ಷಿಪ್ ಕೂಡಾ ದೊರೆಯಿತು. |
Categories
All
Social Work Learning AcademyMHR LEARNING ACADEMYGet it on Google Play store
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |
SITE MAP
SiteTRAININGnIRATHANKA CITIZENS CONNECTJOB |
HR SERVICES
OTHER SERVICES |
NIRATHANKAPOSHOUR OTHER WEBSITESSubscribe |
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|