ಅಭಿವೃದ್ಧಿ ಸಂಬಂಧ ಪ್ರಾದೇಶಿಕ ಅಸಮಾನತೆ ಎಂಬುದು ಕರ್ನಾಟಕವನ್ನು 1956 ರಿಂದಲೂ ಕಾಡುತ್ತಿರುವ ಬಾಲಗ್ರಹ ಪೀಡೆಯಾಗಿದೆ. ಕರ್ನಾಟಕದ ಹುಟ್ಟಿನೊಂದಿಗೆ ಜನ್ಮತಳೆದ ರೋಗ ಇದಾಗಿದೆ. ವಾಸ್ತವವಾಗಿ ಇದು ಕರ್ನಾಟಕಕ್ಕೆ ವಿಶಿಷ್ಟವಾದ ಸಮಸ್ಯೆಯೇನೂ ಅಲ್ಲ. ಆಂದ್ರಪ್ರದೇಶದಲ್ಲಿ (ತೆಲಂಗಾಣ), ಮಹಾರಾಷ್ಟ್ರದಲ್ಲಿ (ಮರಾಠವಾಡ), ಗುಜರಾತ್ ನಲ್ಲಿ (ಕಚ್ ಪ್ರದೇಶ), ಒರಿಸ್ಸಾದಲ್ಲಿ (ಪಶ್ಚಿಮ ಭಾಗ) ಇಂತಹ ಸಮಸ್ಯೆಗಳು ಇರುವುದು ಕಂಡುಬರುತ್ತದೆ. ಕರ್ನಾಟಕದಲ್ಲಿನ ಅಭಿವೃದ್ಧಿ ಸಂಬಂಧ ಪ್ರಾದೇಶಿಕ ಅಸಮಾನತೆಯನ್ನು ಚಾರಿತ್ರಿಕವಾಗಿ ಪರಿಭಾವಿಸಿಕೊಳ್ಳಬೇಕಾಗುತ್ತದೆ. ಇಂದು ನಾವು ಯಾವ ಜಿಲ್ಲೆಗಳನ್ನು ಅತ್ಯಂತ ಹಿಂದುಳಿದವುಗಳೆಂದು ವರ್ಗೀಕರಿಸುತ್ತಿದ್ದೇವೆಯೋ ಅವು ಒಂದು ರೀತಿಯ ಚಾರಿತ್ರಿಕ ವಿಕಲತೆಗೆ ಒಳಗಾಗಿರುವುದು ಸ್ಪಷ್ಟವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ವಸಾಹತುಶಾಹಿ ಆಡಳಿತಕ್ಕೆ ಮತ್ತು ಅಭಿವೃದ್ಧಿಗೆ ಒಳಪಡದಿದ್ದ ಪ್ರದೇಶಗಳೇ ಇಂದು ಹಿಂದುಳಿದಿರುವ ಸ್ಥಿತಿಯಲ್ಲಿವೆ.
0 Comments
ಮುನ್ನುಡಿ
ಭಾರತೀಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಶರಣ ಚಿಂತನೆ ಮತ್ತು ಸಮಾಜಕಾರ್ಯದ ತೌಲನಿಕ ಚೌಕಟ್ಟಿನಲ್ಲಿ ನನ್ನೀ ಪ್ರಸ್ತಾವನೆಯನ್ನು ಮಂಡಿಸಲು ಬಯಸುತ್ತೇನೆ. ಸಕಲ ಜೀವಾತ್ಮರಿಗೆ ಬಯಸುವ ಲೇಸಿನ ಮಾರ್ಗವನ್ನು ಹನ್ನೆರಡನೆಯ ಶತಮಾನದ ಶಿವಶರಣರು ಹಿಡಿದರು. ಹತ್ತೊಂಬತ್ತು-ಇಪ್ಪತ್ತನೆಯ ಶತಮಾನದಲ್ಲಿ ರೂಪುತಳೆದ ಆಧುನಿಕ ಸಮಾಜಕಾರ್ಯವು ಮಾನವರ ಕಲ್ಯಾಣ ಮತ್ತು ಅಭ್ಯುದಯವನ್ನು ತನ್ನ ಗುರಿಯಾಗಿಸಿಕೊಂಡಿತು. ಈ ಎರಡೂ ಮಾರ್ಗಗಳ ಗುರಿಯು, ಒಟ್ಟಿನಲ್ಲಿ, ಲೋಕದಲೇಸು, ಒಳಿತು, ಕಲ್ಯಾಣ ಮತ್ತು ಅಭ್ಯುದಯ. ಈ ಎರಡೂ ಮಾರ್ಗಗಳ ಗುರಿಯಾದ ಲೇಸು ಅಂದರೇನು ಎಂಬುದನ್ನು ನಾವು ನಿರ್ವಚಿಸಬೇಕಾಗಿದೆ. ಜೊತೆಗೆ, ಈ ಲೇಸನ್ನು ಅಳೆಯುವುದು ಹೇಗೆ, ಮತ್ತು ಅಳೆಯುವ ಮಾಪಕಗಳಾವುವು, ಎಂಬುದನ್ನು ನಾವು ನಿರ್ಧರಿಸಬೇಕಾಗಿದೆ. ಸಮಾಜಕಾರ್ಯಕರ್ತರನ್ನು ಆಯ್ದುಕೊಳ್ಳುವ ಸರಿಯಲ್ಲದ ಕ್ರಮ
ಸಮಾಜಕಾರ್ಯದ ಅವಿಭಾಜ್ಯ ಅಂಗ ಕ್ಷೇತ್ರಕಾರ್ಯ. ಕ್ಷೇತ್ರಕಾರ್ಯವನ್ನು ಪ್ರಾಮುಖ್ಯವಾಗಿರಿಸಿಕೊಂಡು ಈ ಸಂಚಿಕೆ ಹೊರತರಲಾಗಿದೆ. ಕ್ಷೇತ್ರಕಾರ್ಯದ ಪ್ರಾಮುಖ್ಯತೆಯನ್ನು ಮತ್ತು ಅದರಲ್ಲಿನ ಪ್ರಯೋಗಗಳನ್ನು ಸಮಾಜಕಾರ್ಯಕ್ಷೇತ್ರದ ಹಿರಿಯರಾದ ಶಂಕರ ಎಚ್ ಪಾಠಕ (ನಿವೃತ್ತ ಪ್ರಾಧ್ಯಾಪಕರು, ಸಮಾಜಕಾರ್ಯ ವಿಭಾಗ, ದಿಲ್ಲಿ ವಿಶ್ವವಿದ್ಯಾಲಯ), ಹಾಗೂ ಡಾ. ಎಚ್.ಎಂ. ಮರುಳಸಿದ್ಧಯ್ಯ ಅವರ ಸಂದರ್ಶನದಲ್ಲಿ ಹೊರತರಲಾಗಿದೆ. ಈ ವಿಧವಾಗಿ ಸಂಚಿಕೆ ಹೊರತರಬೇಕೆಂದು 3 ತಿಂಗಳ ಹಿಂದೆ ನಮ್ಮ ಪತ್ರಿಕೆಯ ಮೂಲಕ ತಿಳಿಸಲಾಯಿತು ಹಾಗೂ ಹಲವಾರು ಹಿರಿಯ ವೃತ್ತಿಪರರು ಈ ವಿಷಯದ ಕುರಿತಾಗಿ ಬರೆಯಿರಿ ಎಂದು ವಿನಂತಿಸಲಾಯಿತು. ಆದರೆ ಪ್ರತಿಕ್ರಿಯೆಗಳು ಕಡಮೆ ಹಾಗೂ ಬರೆದವರು ಬೆರಳೇಣಿಕೆಯಷ್ಟು. ಇದು ನಮ್ಮ ವೃತ್ತಿಯ ದುರಂತ. ಬರೆಯುವುದಿಲ್ಲ, ಒಂದು ಕಡೆ ಸೇರಿ ಚರ್ಚಿಸುವುದಿಲ್ಲ, ವೃತ್ತಿಯಿಂದ ಅವರವರ ಹೊಟ್ಟೆ ತುಂಬಿದರೆ ಸಾಕು. ಸಮಾಜಕಾರ್ಯ ಕ್ಷೇತ್ರ ಒಂದು ವೃತ್ತಿಯಾಗಿ ಬೆಳೆಯಬೇಕಾದ ಮಟ್ಟ ಇಂದು ಬೆಳೆದಿಲ್ಲ ಎಂದರೆ ತಪ್ಪಾಗಲಾರದು. ಕಾರ್ಯಕ್ಷೇತ್ರದಲ್ಲಿ ಸಂವಹನ ಎಂಬುದು ನಮ್ಮ ಉತ್ತಮ ಮಿತ್ರನು ಅಥವಾ ವೈರಿಯು ಆಗಬಹುದು ಉತ್ತಮ ರೀತಿಯಿಂದ ನಿರ್ವಹಿಸಿದರೆ ಕಾರ್ಯಕ್ಷೇತ್ರದಲ್ಲಿ ಸಂಸ್ಕೃತಿಯನ್ನು ಬಿಂಬಿಸಬಹುದು. ಆದ್ದರಿಂದ ಉತ್ತಮ ಹಾಗೂ ಬಲವಾದ ಸಂಸ್ಥೆಗಳು ಕೆಲಸದ ಸ್ಥಳದಲ್ಲಿ ಅಡೆತಡೆಗಳನ್ನು ನಿವಾರಿಸಿ ಸಮಸ್ಯೆಗಳನ್ನು ಬಗೆಹರಿಸುತ್ತದೆ, ಕಾರ್ಯಕ್ಷೇತ್ರದ ಉತ್ತಮ ಸಂಬಂಧಗಳು ಒಳ್ಳೆಯ ಉತ್ಪಾದಕತೆಯನ್ನು ನೀಡಬಲ್ಲವು.
ಸಾರಾಂಶ
ಲೈಂಗಿಕ ಶೋಷಣೆ ಎಂಬ ಸಂದರ್ಭವು ವಿಭಿನ್ನ ರೀತಿಯ ಆಯಾಮಗಳನ್ನು ಹೊಂದಿದ್ದು ಅದರಲ್ಲಿ ವೇಶ್ಯಾವಾಟಿಕೆಯೂ ಒಂದಾಗಿದೆ. ಕಾಲಘಟ್ಟಗಳಲ್ಲಿ ಈ ವಿಷಯವನ್ನು ಅವಲೋಕಿಸಿದರೆ ಒಂದು ಹಂತದಲ್ಲಿ ತುಂಬಾ ಗೌರವದ ಸ್ಥಾನವನ್ನು ಪಡೆದುಕೊಂಡಿದ್ದೂ ಉಂಟು. ಆದರೆ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಿಗೆ ಅನುಸರಿಸಿ ಮತ್ತು ದೇಶದಲ್ಲಿ ರಾಜ್ಯದಲ್ಲಿ ಆದಂತಹ ರಾಜಕೀಯ ವ್ಯವಸ್ಥೆಯಿಂದಾಗಿ ಇದು ಸಾಕಷ್ಟು ಸಂದರ್ಭಗಳಲ್ಲಿ ಸ್ಥಿತ್ಯಂತರಕ್ಕೆ ಒಳಪಟ್ಟಿದ್ದೂ ಉಂಟು. ಮೂಲದಲ್ಲಿ ಸಾಂಪ್ರದಾಯಿಕವಾಗಿ ಹುಟ್ಟಿಕೊಂಡ ಒಂದು ವ್ಯವಸ್ಥೆಯು ಪ್ರಸ್ತುತ ಫ್ಲೆಶ್ ಟ್ರೇಡ್ ಎಂಬ ಹೆಸರಿನಿಂದ ಗುರುತಿಸುವ ಮಟ್ಟದವರೆಗೂ ವಾಣಿಜ್ಯೀಕರಣಗೊಂಡಿದೆ. ಇಂಥ ಸಂದರ್ಭದಲ್ಲಿ ಲೈಂಗಿಕ ಶೋಷಣೆಯ ಸಾಂಪ್ರದಾಯಿಕ ಮತ್ತು ವ್ಯವಹಾರಿಕ ಆಯಾಮವನ್ನು ಗುರುತಿಸಲು ಪ್ರಸ್ತುತ ಲೇಖನದಲ್ಲಿ ಪ್ರಯತ್ನಿಸಲಾಗಿದೆ. ಭಾರತದ ಎರಡನೆಯ ಶಾಂತಿನಿಕೇತನ ಎಂದೇ ಖ್ಯಾತಿ ಪಡೆದ ಒರಿಸ್ಸಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್ ಸಂಸ್ಥೆಯು (KISS) ಇಂದು 15.000 ಕ್ಕೂ ಅಧಿಕ ಆದಿವಾಸಿ ಮಕ್ಕಳಿಗೆ ಉಚಿತ ಊಟ, ಶಿಕ್ಷಣ ಮತ್ತು ವಸತಿಯನ್ನು ನೀಡುತ್ತಿದೆ. ಇಂದು ಜಗತ್ತಿನ ಅತಿ ದೊಡ್ಡ ವಸತಿ ವಿದ್ಯಾಲಯವಾಗಿದೆ. ಶ್ರೀಯುತ ಅಚ್ಯುತ ಸಮಂತ ಈ ಸಂಸ್ಥೆಯನ್ನು ಪ್ರಾರಂಭಿಸಿದವರು. ವಿದ್ಯಾಭ್ಯಾಸದ ಮೂಲಕ ಸಬಲೀಕರಣ ಮಾಡುವುದು ಇವರ ಪ್ರಮುಖ ಧ್ಯೇಯವಾಗಿದೆ. ಇಲ್ಲಿ ಎಲ್.ಕೆ.ಜಿ ಯಿಂದ ಸ್ನಾತಕೋತ್ತರ ಪದವಿಯವರೆಗೆ ವಿದ್ಯಾಭ್ಯಾಸ ನೀಡಲಾಗುತ್ತದೆ. ಇಲ್ಲಿನ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉದ್ಯೋಗ ತರಬೇತಿ ನೀಡಲಾಗುತ್ತದೆ.
ಇದ್ದಕಿದ್ದ ಹಾಗೆ ಮಾರ್ಚ್ 2012 ರ 4ರಂದು ಭಾನುವಾರ ಡಾ.ಆರ್.ಶಿವಣ್ಣನವರು ನನಗೆ ದೂರವಾಣಿ ಕರೆಮಾಡಿ, ನಿಮ್ಮ ಮನೆಕಡೆ ಬರುತ್ತಿದ್ದೇನೆ; ಇನ್ನು ಹತ್ತು- ಹದಿನೈದು ನಿಮಿಷಗಳಲ್ಲಿ ನಿಮ್ಮಲ್ಲಿರುತ್ತೇನೆ; ಪ್ರೊ.ಎಲ್.ಎಸ್.ಶೇಷಗಿರಿರಾವ್ ಕಡೆಹೋಗಿ, ಅವರನ್ನು ನೋಡಿಕೊಂಡು ಬರೋಣ; ಅವರ ಆರೋಗ್ಯ ಅಷ್ಟೇನೂ ಚೆನ್ನಾಗಿಲ್ಲವಂತೆ ಹೀಗೆ ಹೇಳಿದರು. ನಮ್ಮ ಮನೆಗೆ ತೀರಾ ಹತ್ತಿರದಲ್ಲಿದ್ದರೂ ನನ್ನ ಅದೃಢ ಕಾಲು-ಸೊಂಟಗಳ ಕಾರಣದಿಂದ ನಾನು ಅವರನ್ನು ಕಂಡುಬರಲು ಆಗುತ್ತಲಿಲ್ಲ. ಬೇರೆಯವರ ವಾಹನ-ಹೆಗಲ ನೆರವಿನಿಂದ ಮಾತ್ರ ನಾನು ಹೋಗಿಬರಲು ಸಾಧ್ಯ. ಆದುದರಿಂದ ಬಹಳ ದಿನಗಳಾದ ನಂತರ ಈ ಅವಕಾಶ ದೊರೆಯಿತೆಂದು ನನಗೆ ಸಹಜವಾಗಿಯೇ ಸಂತಸವಾಯ್ತು. ಡಾ.ಶಿವಣ್ಣನವರಿಗೆ ಕಾಯತೊಡಗಿದೆ.
ಬಡತನವನ್ನು ಉಪಶಮನಗೊಳಿಸಿ ಪ್ರಗತಿ ಸಾಧಿಸಲು ನಮ್ಮ ಸರ್ಕಾರವು ಉದ್ಯೋಗಖಾತರಿ ಯೋಜನೆ, ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಕಡಿಮೆ ದರದಲ್ಲಿ ಆಹಾರ ಧಾನ್ಯಗಳ ವಿತರಣಾ ಯೋಜನೆ, ರೈತರ ಸಾಲವನ್ನು ಮನ್ನಾ ಮಾಡುವ ಯೋಜನೆಗಳು ನಿರ್ಗತಿಕ (ಬಡ) ಜನರ ಕಣ್ಣಲ್ಲಿ ನೆಮ್ಮದಿಯನ್ನು ಸೂಚಿಸುತ್ತಿವೆ. ಆದರೆ, ಗ್ರಾಮೀಣ ಪ್ರದೇಶದ ಜನರಿಗೆ ಈ ಯೋಜನೆಗಳು ತಲುಪದೇ ಇರುವುದು ಅಸಮಾಧಾನಕರ ಸಂಗತಿಯೇ ಸರಿ! ಮಾವೋವಾದಿಗಳ ಚಟುವಟಿಕೆಗಳು ಉಲ್ಬಣಗೊಳ್ಳುತ್ತಿವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಅಸಮಾನತೆ.
ಜೀವನದಲ್ಲಿ ಎಷ್ಟೇ ಕಷ್ಟಗಳು, ಸಮಸ್ಯೆಗಳು ಬಂದರೂ, ದುಃಖದೊಳು ಮುಳುಗಿದರೂ, ತನ್ನ ಅಸ್ಥಿತ್ವವನ್ನು ಸ್ಥಾಪಿಸಿಕೊಂಡು ಜೊತೆಗೆ ತನ್ನಂತಹ ಅನೇಕ ವಿಕಲಚೇತನರ ಅಸ್ಥಿತ್ವಕ್ಕಾಗಿ, ಹಕ್ಕುಗಳಿಗಾಗಿ ಮತ್ತು ಅವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವ ಹೋರಾಟಗಾರರು, ಛಲಗಾರರು ತೀರಾ ವಿರಳ. ಹೀಗಿರುವಾಗ ತನ್ನೊಳಗಿನ ದೈಹಿಕ ಅಶಕ್ತತೆಯನ್ನು ಸಂಪೂರ್ಣ ದೂರವಿಟ್ಟು, ಆತ್ಮ ಶಕ್ತಿಯನ್ನು ಮನದೊಳಗಿನ ಧೀಃಶಕ್ತಿಯನ್ನು ಕೇಂದ್ರೀಕರಿಸಿಕೊಂಡು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುವೆನಿಸಿಕೊಂಡಿದ್ದಲ್ಲದೆ ಅರ್ಜುನ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಹೀಗೆ ಇನ್ನೂ ಅನೇಕ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡು ಸಮಾಜಸೇವೆಯ ಕಡೆ ಮುಖಮಾಡಿರುವ ಈ ಅದಮ್ಯ ಚೇತನವೇ ಮಾಲತಿ ಹೊಳ್ಳ.
ವಿಕಲಾಂಗರ ಬಗ್ಗೆ ಹಲವು ಬಾರಿ ನಾವು ಚರ್ಚಿಸಿದ್ದೇವೆ, ಹಲವು ಕಾನೂನು, ಸೌಲಭ್ಯಗಳನ್ನು ಸಮಾಜದಲ್ಲಿ ಕಲ್ಪಿಸಿದ್ದೇವೆ ಆದರೆ ಅವರ ಲೈಂಗಿಕ ಹಕ್ಕುಗಳ ಬಗ್ಗೆ ನಾವು ಎಂದಾದರೂ ಚಿಂತಿಸಿದ್ದೀವಾ? ವೃತ್ತಿಯಲ್ಲಿ ಸಮಾಜಕಾರ್ಯಕರ್ತರಾದ ನಾವು ಈ ರೀತಿಯದಾದ ಸಮಸ್ಯೆಗಳನ್ನು ನಮ್ಮೆದುರು ಬಂದರೆ ವೃತ್ತಿಪರವಾಗಿ ನಾವು ಯಾವ ರೀತಿ ಈ ಸಮಸ್ಯೆಗಳಿಗೆ ಪರಿಹಾರ ನೀಡಬಹುದು ನಮಗೆ ತಿಳಿದಿಲ್ಲ.
ಒಮ್ಮೆ ಹಾಂಗ್ ಸುಂಗ್ ಕಿ ನಿರ್ಮಿಸಿದ ವಿಕಲಾಂಗರ ಲೈಂಗಿಕ ಹಕ್ಕುಗಳ ಕುರಿತ ಚಲನಚಿತ್ರ `ಸೆಕ್ಸ್ ವಾಲೆಂಟಿಯರ್' ಸಮಾಜಕಾರ್ಯ ವೃತ್ತಿಪರರು ನೋಡಿದರೆ ಉಪಯುಕ್ತವಾಗಬಹುದು. ಒಮ್ಮೆ ವೀಕ್ಷಿಸಿ ನಿಮ್ಮಲ್ಲೇನಾದರೂ ಬದಲಾವಣೆಯಾಗುವುದೇ ಪರೀಕ್ಷಿಸಿ. ತಿರುಳು
ಡಾ. ಎಂ. ಬಸವಣ್ಣರವರು ನಿವೃತ್ತ ಮನೋವಿಜ್ಞಾನ ಪ್ರಾಧ್ಯಾಪಕರು ಹಾಗೂ ಕನ್ನಡದಲ್ಲಿ ಪ್ರಸಿದ್ಧ ಬರಹಗಾರರು. ಯುಗಾಂತ ಲೇಖನವು ಮಹಾಭಾರತದಲ್ಲಿನ ಸಾಮಾಜಿಕ ಬದುಕನ್ನು ವಿಶ್ಲೇಷಣೆ ಮಾಡುವ ಒಂದು ಪ್ರಯತ್ನವಾಗಿದೆ. ಪಾತ್ರದಲ್ಲಿರುವ ದೈವತ್ವವನ್ನು ಉತ್ಪ್ರೇಕ್ಷಿಸಿಲ್ಲ. ಪಾತ್ರಗಳನ್ನು ಅವರ ಇಷ್ಟ ಹಾಗೂ ಕಷ್ಟ, ಪ್ರೀತಿ, ದ್ವೇಷ ಮತ್ತು ಮಹತ್ವಾಕಾಂಕ್ಷೆಗಳಿಂದ ಸಾಮಾನ್ಯ ಮಾನವರ ರೀತಿ ಚಿತ್ರಿಸಲಾಗಿದೆ. ಬಾಳೆ ಎಲೆ ಶಿವಕುಮಾರ್ ಅವರ ಬಗ್ಗೆ ಬೆಂಗಳೂರಿನ ಪ್ರತಿಯೊಬ್ಬರಿಗೂ ಬಹುಶಃ ತಿಳಿದಿರಬಹುದು. ಬೆಂಗಳೂರಿನ ಯಾವುದೋ ಒಂದು ಕಲ್ಯಾಣ ಮಂಟಪದಲ್ಲಿ ಅಥವಾ ಇನ್ನಾವುದೋ ಶುಭ ಸಮಾರಂಭದಲ್ಲಿ ಉಳಿದ ಆಹಾರವನ್ನು ಹಸಿದ ಹತ್ತಿರದ ಕೊಳೆಗೇರಿಯ ಜನಗಳಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಉಂಡು ಮಿಕ್ಕಿದ ಆಹಾರವನ್ನು ಹಸಿದ ಹೊಟ್ಟೆಗಳಿಗೆ ತಲುಪಿಸುವ ಮಹತ್ತರವಾದ ಕಾರ್ಯವನ್ನು ಮಾಡುತ್ತಿದ್ದಾರೆ ಶ್ರೀಯುತ ಶಿವಕುಮಾರ್ ಅವರು.
ಮನುಷ್ಯರ ವರ್ತನೆ ವಿಚಿತ್ರ, ವೈವಿಧ್ಯಮಯ. ಹಾಗಾಗಲು ಕಾರಣಗಳು ಹಲವಾರು. ಸಮಾಜವಿಜ್ಞಾನಿಗಳು, ಮನೋವಿಜ್ಞಾನಿಗಳು, ಈ ವೈವಿಧ್ಯಮಯ ವರ್ತನೆಗಳಿಗೆ ಕಾರಣಗಳನ್ನು ಕಂಡುಹಿಡಿಯಲು ಎಂದಿನಿಂದಲೂ ಪ್ರಯತ್ನಿಸುತ್ತಿದ್ದಾರೆ. ಕೆಲವರು ದೈಹಿಕ ಕಾರಣಗಳನ್ನು ಎತ್ತಿ ತೋರಿಸಿದರೆ, ಬೇರೆಯವರು ಸಾಮಾಜಿಕ ಕಾರಣಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತಾರೆ. ಇನ್ನು ಕೆಲವರು ವೈಯಕ್ತಿಕ (ಮಾನಸಿಕ) ಕಾರಣಗಳನ್ನು ಉದಹರಿಸುತ್ತಾರೆ. ವಾಸ್ತವವಾಗಿ ನೋಡಿದರೆ ವರ್ತನೆಯನ್ನು ನಿರ್ಧರಿಸುವಲ್ಲಿ ಇವೆಲ್ಲದರ ಪಾತ್ರವೂ ಇದೆ. ಸಾಮಾಜಿಕ ಪರಿಸರ, ಸಂದರ್ಭ, ಸನ್ನಿವೇಶ, ಸುತ್ತಣ ಜನರ ಒತ್ತಾಯ, ವರ್ತನೆಯಲ್ಲಿ ಹೇಗೆ ಮಾರ್ಪಾಡು ತರುತ್ತದೆ ಎನ್ನುವುದು ಈ ಲೇಖನದ ವಿಷಯ. ಇಲ್ಲಿ ಮನುಷ್ಯರು ಕೆಟ್ಟದಾಗಿ ವರ್ತಿಸಲು ಸಾಮಾಜಿಕ ಪರಿಸರ ಎಷ್ಟರಮಟ್ಟಿಗೆ ಕಾರಣ ಎಂಬುದನ್ನು ಹೇಳಲು ಪ್ರಯತ್ನಿಸಿದೆ. ಮೂಲತಃ ಎಲ್ಲರೂ ಒಳ್ಳೆಯವರೆ, ಆದರೆ ಸಂದರ್ಭ, ಸನ್ನಿವೇಶಗಳು ಜನರನ್ನು ಕೆಟ್ಟವರನ್ನಾಗಿ ಮಾಡುತ್ತದೆ ಎನ್ನುವುದು ಹಳೆಯ ಮಾತು. ಅದನ್ನು ಪ್ರಯೋಗದ ಮೂಲಕ ತೋರಿಸಲು ಜಿ಼ಂಬಾರ್ಡೊ ಎಂಬ ಸಮಾಜಮನೋವಿಜ್ಞಾನಿ ಯತ್ನಿಸಿದ್ದಾರೆ. ಅದರ ವಿವರಣೆ ಇಲ್ಲಿದೆ. ಅವರು ನಡೆಸಿದ ಪ್ರಯೋಗಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು, ಚಿತ್ರಗಳನ್ನು, ವಿಡಿಯೊಗಳನ್ನು ನೀವು ಇಂಟರ್ನೆಟ್ನಲ್ಲಿ ನೋಡಬಹುದು. ಮನುಷ್ಯ ಹಾಳಾಗಲು ಪರಿಸರದ ಒತ್ತಡ ಒಂದೇ ಕಾರಣವಲ್ಲ. ಬೇರೆಯವು ಇರುತ್ತವೆ. ಏನೇ ಒತ್ತಡವಿದ್ದರೂ ಕೆಲವರು ಬದಲಾಗುವುದಿಲ್ಲ ಎಂಬುದನ್ನು ನಾವು ಮರೆಯಬಾರದು. ಹಾಗೆಂದ ಮಾತ್ರಕ್ಕೆ ಪರಿಸರದ ಪ್ರಭಾವವನ್ನು ಕಡೆಗಣಿಸುವಂತಿಲ್ಲ. ಈ ವಿಷಯವನ್ನು ಮನದಟ್ಟು ಮಾಡುವಲ್ಲಿ ಜಿ಼ಂಬಾರ್ಡೊ ಮಾಡಿದ ಪ್ರಯೋಗ ಮನೋವಿಜ್ಞಾನದಲ್ಲಿ ಒಂದು ಮೈಲಿಗಲ್ಲಾಗಿದೆ; ಅಷ್ಟೆ ವಿವಾದಾತ್ಮಕವಾಗಿದೆ ಕೂಡ.
14 ವರ್ಷದ ಆ ಬಾಲೆ ತನ್ನ ಟ್ಯೂಷನ್ ಮುಗಿಸಿ ಸಂಜೆಯ ಮಬ್ಬುಗತ್ತಲಿನಲ್ಲಿ ಮನೆಗೆ ಮರಳುತ್ತಿರುವಾಗ, ಹೆಂಗಸೊಬ್ಬಳು ಹತ್ತಿರ ಬಂದು ಯಾವುದೋ ಚೀಟಿ ತೋರಿಸಿ, ವಿಳಾಸ ಕೇಳುವಂತೆ ನಟಿಸಿದ್ದೊಂದೇ ಗೊತ್ತು. ಮತ್ತೆ ಮೈಮೇಲೆ ಎಚ್ಚರವೇ ಇಲ್ಲ. ಅರೆ ಮಂಪರಿನ ಎಚ್ಚರಾದಾಗ ರೈಲಿನಲ್ಲಿ ಎಲ್ಲಿಗೋ ಪ್ರಯಾಣಿಸುತ್ತಿರುವುದು, ಮಧ್ಯರಾತ್ರಿ ಮೀರಿ ಹೋಗಿರುವುದು ತಾನು ಸೀಟಿನ ಕೆಳಗಡೆ ಮಲಗಿಸಲ್ಪಟ್ಟಿರುವುದು ಅವಳ ಗಮನಕ್ಕೆ ಬಂದಿದೆ. ನಿಧಾನಕ್ಕೆ ಎಚ್ಚೆತ್ತು ಸಹಪ್ರಯಾಣಿಕರ ಗಮನ ಸೆಳೆದು ಅವರು ಈ ಹುಡುಗಿಯನ್ನು ವಿಚಾರಿಸುತ್ತಿರುವಾಗಲೇ ಇವಳನ್ನು ಕದ್ದು ತಂದಿದ್ದ ಹೆಂಗಸು ರೈಲು ನಿಂತ ಮುಂದಿನ ಸ್ಟೇಷನ್ನಲ್ಲಿ ಇಳಿದು ಹೋಗಿದ್ದಾಳೆ. ಅಂತೂ ಹೇಗೋ ಈ ಹುಡುಗಿ ಮನೆ ಸೇರಿದಳಾದರೂ ಪೊಲೀಸ್ಗೆ ದೂರು ನೀಡಿದ್ದರೆ ಆ ಹೆಂಗಸು ಸಿಕ್ಕಿ ಹಾಕಿಕೊಳ್ಳಬಹುದಾದ, ಅವಳ ಹಿಂದೆ ಇರಬಹುದಾದ ಜಾಲವನ್ನು ಪತ್ತೆ ಹಚ್ಚುವ ಎಲ್ಲ ಸಾಧ್ಯತೆಗಳಿದ್ದೂ ಬಾಲ ನ್ಯಾಯಮಂಡಳಿಗೆ ದೂರು ನಡಿ, ಅವರು ಅದನ್ನು ಗಂಭೀರವಾಗಿ ಪರಿಗಣಿಸದೇ ಕೆಲದಿನಗಳಲ್ಲೇ ಕೇಸನ್ನು ಮುಚ್ಚಿಹಾಕಿದರು. ಹಾಗಿದ್ದರೆ ನ್ಯಾಯ ಎಲ್ಲಿದೆ?
ತೀರಾ ಇತ್ತೀಚೆಗೆ ಬೆಂಗಳೂರನ್ನೂ ಒಳಗೊಂಡಂತೆ ರಾಜ್ಯದ ಇತರ ಭಾಗಗಳಲ್ಲಿ ನಡೆದ ಸರಣಿ ಅತ್ಯಾಚಾರಗಳು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿವೆ. ಹಸುಗೂಸುಗಳ ಮೇಲೆ ನಡೆದಂತಹ ಅತ್ಯಾಚಾರಗಳಂತೂ ಸಮಾಜದ ವಿವಿಧ ಸ್ತರಗಳ ಜನರನ್ನು ವ್ಯವಸ್ಥೆಯ ವಿರುದ್ಧ ತಿರುಗಿ ಬೀಳುವಂತೆ ಮಾಡಿವೆ. ಶಾಂತಿ ಸಹಬಾಳ್ವೆಗೆ ಹೆಸರಾದ ಕನ್ನಡ ನಾಡಿನಲ್ಲಿ ನಡೆದ ಅತ್ಯಾಚಾರ ಸರಣಿಗಳು ನಾಗರಿಕನ (ಮನುಷ್ಯನ) ಅನಾಗರಿಕ ವರ್ತನೆಗೆ ಹಿಡಿದಗನ್ನಡಿ. ಈ ರೀತಿ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಹಿಂದೆಯೂ ಸಹ ಈ ರೀತಿಯ ಘಟನೆಗಳು ನಡೆದ ನಿದರ್ಶನಗಳಿವೆ. ಪ್ರಮುಖವಾಗಿ ಮಕ್ಕಳ ಮೇಲೆ ನಡೆದಂತಹ ಅತ್ಯಾಚಾರಗಳನ್ನು ಖಂಡಿಸಿ ಮಾನವ ಹಕ್ಕು, ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರರು ಹಾಗು ಸಂಘಟಣೆಗಳು ರಸ್ತೆಗಿಳಿದು ಪ್ರತಿಭಟಿಸಿದ ಉದಾಹರಣೆಗಳು ನಮ್ಮಲ್ಲಿ ಹೇರಳವಾಗಿ ದೊರಕುತ್ತವೆ. ಆದರೆ ಇದೇ ಮೊದಲು ಬೆಂಗಳೂರಿನ ಹೆಸರಾಂತ ಅಂತರಾಷ್ಟ್ರೀಯ ಶಾಲೆಯ ಆರು ವಯಸ್ಸಿನ ಬಾಲೆಯ ಮೇಲೆ ಅಲ್ಲಿನ ಸಿಬ್ಬಂದಿ (ಶಿಕ್ಷಕ / ಮಾರ್ಗದರ್ಶಕ) ನಡೆಸಿದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಪೋಷಕರು, ಸಮಾಜದ ವಿವಿಧ ಸ್ತರದ ಜನರು ಹೋರಾಟಗಾರರು, ವಿದ್ಯಾರ್ಥಿಗಳನ್ನೊಳಗೊಂಡಂತೆ ಎಲ್ಲ ರೀತಿಯ ಸಂಘಟಣೆಗಳು ಮತ್ತು ಸಂಘಸಂಸ್ಥೆಗಳು ಬೀದಿಗಿಳಿದು ಪ್ರತಿಭಟಿಸಿವೆ. ಇದು ಉತ್ತಮ ನಡೆಯಾದರೂ, ಕೆಲವೇ ದಿನಗಳಲ್ಲಿ ಪೋಷಕರ ಈ ಆಕ್ರೋಶ ತಣ್ಣಗಾಗಿ ಮತ್ತದೇ ಶಾಲೆಗೆ ತಮ್ಮ ಮಕ್ಕಳನ್ನು ಎಂದಿನಂತೆ ಕಳುಹಿಸುತ್ತಿದ್ದಾರೆ. ಸರ್ಕಾರವೂ ಸಹ ಜನರ ಕಣ್ಣೊರೆಸುವ ಪ್ರಯತ್ನ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ. ಇದರ ಜೊತೆಗೆ ಎಲ್ಲ ಸರ್ಕಾರೇತರ ಶಾಲೆಗಳಿಗೆ (ಖಾಸಗಿ) ಕೆಲ ಮಾರ್ಗಸೂಚಿಗಳನ್ನು ನೀಡಿದ ಸರ್ಕಾರ ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕೆಂದು ತಾಕೀತು ಮಾಡಿದೆ. ಇದರ ನಡುವೆ ಬೆಂಗಳೂರಿನ ಶಾಂತಿ ಸುವ್ಯವಸ್ಥೆಯ ಹೊಣೆ ಹೊತ್ತ ಅಧಿಕಾರಿಯನ್ನು ಪದಚ್ಯುತಗೊಳಿಸಿ ಅದೇ ಸ್ಥಾನದಲ್ಲಿ ಬೇರೊಬ್ಬ ಅಧಿಕಾರಿಯನ್ನು ಸರ್ಕಾರ ನೇಮಿಸಿದೆ. ಇಷ್ಟಕ್ಕೆ ಸಮಸ್ಯೆ ತಣ್ಣಗಾಗಿದೆ. ಮಕ್ಕಳು ಎಂದಿನಂತೆ ಶಾಲೆಗೆ ತೆರಳುತ್ತಿದ್ದಾರೆ. ಪೋಷಕರು ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ಮಗ್ನರಾಗಿದ್ದಾರೆ. ಆದರೆ ಈ ಬಗ್ಗೆ ಅಂತರ್ಜಾಲದ ಸಾಮಾಜಿಕ ತಾಣಗಳಲ್ಲಿ ಬಿಸಿಬಿಸಿ ಚರ್ಚೆಗಳು ಇನ್ನೂ ನಡೆಯುತ್ತಿವೆ. ಕೇವಲ ಕೆಲವೇ ಬೆರಳೆಣಿಕೆಯ ದಿನಪತ್ರಿಕೆಗಳು ಈ ವಿಷಯವಾಗಿ ಅನುಪಾಲನೆ ನಡೆಸಿ ವರದಿಗಳನ್ನು ಬಿತ್ತರಿಸುತ್ತಿವೆ.
ನನ್ನ ಸ್ನೇಹಿತ ದಿನೇಶ ನಾಲ್ಕು ವರ್ಷಗಳಿಂದ ಉದ್ಯೋಗನಿಮಿತ್ತವಾಗಿ ಪಂಜಾಬ್ನ ರೂಪಾರ್ (ರೂಪನಗರ್) ಎಂಬಲ್ಲಿ ನೆಲೆಸಿದ್ದಾನೆ. ಅಂದಿನಿಂದಲೇ ಅವನು, ನೀವೊಮ್ಮೆ ಇಲ್ಲಿಗೆ ಬನ್ನಿ. ಕಾಶ್ಮೀರ,ಪಂಜಾಬ್ ಎಲ್ಲಾ ನೋಡಿಕೊಂಡು ಹೋಗಬಹುದು ಎಂದು ಆಹ್ವಾನಿಸುತ್ತಲೇ ಇದ್ದ. ದೂರದ ಪ್ರಯಾಣ, ದುಬಾರಿ ಖರ್ಚುಗಳ ಕಾರಣದಿಂದಾಗಿ ನಾನು ಮುಂದೂಡುತ್ತಲೇ ಇದ್ದೆ. 2011ರಲ್ಲಿ ಒಂದೇ ವಾರದಅಂತರದಲ್ಲಿ ನಾವಿಬ್ಬರೂ ಒಂದೇ ತೆರನಾದ ಕಾರುಗಳನ್ನು ಖರೀದಿಸಿದ್ದೆವು. ಅದಾಗಿ ಆರೇಳು ತಿಂಗಳ ನಂತರ, ದಿನೇಶ ಒಂದು ದಿನ ಪೋನ್ ಮಾಡಿ, ಈಗಲಾದರೂ ಬಂದರೆ, ನನ್ನ ಕಾರಿನಲ್ಲೇ ಕಾಶ್ಮೀರಎಲ್ಲಾ ಸುತ್ತಬಹುದು. ಮುಂದೆ ನನಗೆ ಟ್ರಾನ್ಸ್ಫರ್ ಆದರೆ, ಇಲ್ಲೆಲ್ಲಾ ಸ್ವಂತ ಕಾರಿನಲ್ಲಿ ಸುತ್ತಲು ಆಗುವುದಿಲ್ಲ ಎಂದಿದ್ದ. ಕಾಶ್ಮೀರದ ಕಣಿವೆಗಳಲ್ಲಿ ಕಾರು ಡ್ರೈವ್ ಮಾಡುವ ಮೋಹದಿಂದ ನಾನುತಪ್ಪಿಸಿಕೊಳ್ಳಲಾಗಲಿಲ್ಲ. ಮುಂದಿನ ಎರಡೇ ತಿಂಗಳಲ್ಲಿ ಕಾಶ್ಮೀರ ಪ್ರವಾಸ ನಿರ್ಧಾರವಾಗಿಬಿಟ್ಟಿತ್ತು.
ಪ್ರೀತಿ ಎಂದರೇನು, ಅದು ಎಲ್ಲಿ ಹುಟ್ಟುತ್ತದೆ, ಹೇಗೆ ಹುಟ್ಟುತ್ತದೆ, ಹೇಗೆ ಬೆಳೆಯುತ್ತದೆ ಎನ್ನುವ ಪ್ರಶ್ನೆಗಳಿಗೆ ವೈಜ್ಞಾನಿಕವಾಗಿ ಉತ್ತರಿಸುವುದು ಸುಲಭವಲ್ಲ. ಅದು ಕಲಾವಿದರ, ಕವಿಗಳ, ಕಾದಂಬರಿಕಾರರ ಕೆಲಸ. ಆದರೂ ಪ್ರೀತಿ ಒಂದು ಮಾನಸಿಕ ಸಂಸ್ಥಿತಿಯಾದ್ದರಿಂದ ಹಾಗು ವ್ಯಕ್ತಿಗಳ ನಡುವೆ ಏರ್ಪಡುವ ಅಪೂರ್ವ ಸಂಬಂಧವಾದರಿಂದ, ಮನೋವಿಜ್ಞಾನಿಗಳಿಗೆ ಅದರ ವಿಚಾರವಾಗಿ ಕುತೂಹಲವಿರುವುದು ಸಹಜ. ಸುಮಾರು 1950ರವರೆಗೆ ಪ್ರೀತಿಯಂಥ ವ್ಯಕ್ತಿನಿಷ್ಠ ಅನುಭವವನ್ನು ಪ್ರಯೋಗಾಲಯದಲ್ಲಿ ಅಧ್ಯಯನ ಮಾಡುವ ಸಾಧ್ಯತೆಯನ್ನು ಯಾವ ಮನೋವಿಜ್ಞಾನಿಯೂ ಯೋಚಿಸಿರಲಿಲ್ಲ. ಅಂಥ ಒಂದು ಹುಚ್ಚು ಸಾಹಸಕ್ಕೆ ಕೈ ಹಾಕಿದವರು ವಿಸ್ಕಾನ್ಸಿನ್ ವಿಶ್ವವಿದ್ಯಾಲಯದಲ್ಲಿ ಮನೋವಿಜ್ಞಾನದ ಪ್ರಾಧ್ಯಾಪಕರಾಗಿದ್ದ ಹ್ಯಾರಿ ಹಾರ್ಲೊ (Harry Frederick Harlow, 1905-1981) ಎಂಬುವವರು. ಪ್ರೀತಿಯಂಥ ವ್ಯಕ್ತಿನಿಷ್ಠ (subjective) ಅನುಭವವನ್ನು ವಸ್ತುನಿಷ್ಠವಾಗಿ (objective) ಲೆಬಾರಟರಿಯಲ್ಲಿ ಅಧ್ಯಯನ ಮಾಡಿದ ಹಾರ್ಲೊ ಅವರ ಪ್ರಯತ್ನ ಮೆಚ್ಚತಕ್ಕದ್ದೆ. ಹಾರ್ಲೊ ನಡೆಸಿದ ಪ್ರಯೋಗಗಳು ಮನೋವಿಜ್ಞಾನದ ಇತಿಹಾಸದಲ್ಲಿ ಪ್ರಸಿದ್ಧವಾಗಿರುವುದಷ್ಟೇ ಅಲ್ಲ; ಬಹಳಷ್ಟು ವಿವಾದಗಳನ್ನೂ ಹುಟ್ಟುಹಾಕಿವೆ; ಅದು ಬೇರೆ ವಿಚಾರ.
ಮುಂದಿನ ನೂರು ವರ್ಷಗಳಲ್ಲಿ ಮನುಕುಲ ನಾಶವಾಗಲಿದೆಯೆಂದು ಕೆಲವು ಸಮಯದ ಹಿಂದೆ ಆಸ್ಟ್ರೇಲಿಯಾದ ವಿಜ್ಞಾನಿಯೊಬ್ಬರು ಭವಿಷ್ಯ ನುಡಿದಿದ್ದರು. ಇವರ ಲೆಕ್ಕಾಚಾರದ ಪ್ರಕಾರ ಈ ನಾಶಕ್ಕೆ ಕಾರಣ ಎಗ್ಗಿಲ್ಲದ ಬಳಕೆ, ಅಂದರೆ ಮನುಷ್ಯರ ಅತಿಭೋಗದ ಬದುಕು. ಕೈಗಾರಿಕೀಕರಣದ ಬಳಿಕ ಮಾನವ ಆಂತ್ರೋಪೊಸೀನ್ ಎಂಬ ಅನಧಿಕೃತ ವೈಜ್ಞಾನಿಕ ಕಾಲಘಟ್ಟವನ್ನು ಪ್ರವೇಶಿಸಿದ್ದಾನಂತೆ. ಈ ಕಾಲಘಟ್ಟದಲ್ಲಿ ಮನುಷ್ಯ ಅಗತ್ಯ ಮತ್ತು ಆಸೆ ಗಳಿಗಾಗಿ ನಿಸರ್ಗದ ಸಂಪತ್ತನ್ನು ಕೃತಕ ಸಂಪತ್ತನ್ನಾಗಿ ಪರಿವರ್ತಿಸುತ್ತಾ, ಪರಿಸರವನ್ನು ಮಾಲಿನ್ಯ ಮಾಡುತ್ತಾ, ಅಸಮತೋಲನವನ್ನು ಉಂಟು ಮಾಡುತ್ತಾ ಸಾಗುತ್ತಾನೆ. ಈ ಮಾಲಿನ್ಯ, ಅಸಮತೋಲನದಿಂದ ಮತ್ತೆ ನೈಸರ್ಗಿಕ ಸಂಪನ್ಮೂಲದ ಅಭಾವ, ಆಹಾರದ ಅಭಾವ ಉಂಟಾಗಿ; ಅನೇಕಾನೇಕ ಕಾಯಿಲೆಗಳು ಬಂದು; ಸಾಮಾಜಿಕ ಪ್ರಕ್ಷುಬ್ದತೆಯು ಉಂಟಾಗಿ ಮನುಕುಲದ ನಾಶ ಆಗಬಹುದು ಎಂಬುದನ್ನು ಯಾರಾದರೂ ಊಹಿಸಬಹುದು. ಆದರೆ ಉಂಟಾಗುವ ತೊಂದರೆಗಳು ಮತ್ತು ಅವುಗಳ ಕಾರಣಗಳ ಅರಿವು ಆದಂತೆಲ್ಲಾ ಮತ್ತಷ್ಟು ವೈಜ್ಞಾನಿಕ ಸಂಶೋಧನೆಗಳನ್ನು ಮಾಡಿ, ಪರಿಹಾರ ಹುಡುಕಿಕೊಳ್ಳಬಲ್ಲೆವು ಎಂದು ಜನರು ನಂಬಿಕೊಂಡಿದ್ದಾರೆ. ಇನ್ನು ಕೆಲವು ವಿಜ್ಞಾನಿಗಳು ಮತ್ತು ಇತರ ಜನರು ಪ್ರಕೃತಿಯನ್ನು ಗೆಲ್ಲಬಲ್ಲೆವೆಂಬ ಅಹಂನಿಂದ ಪ್ರಕೃತಿಯೊಂದಿಗೆ ಹೊಂದಾಣಿಕೆಯಿಂದ ಸಾಗದೆ ಅದರ ವಿರುದ್ಧವಾಗಿ ಸಾಗುವುದು ಇನ್ನಷ್ಟು ದುರಂತಕ್ಕೆ ಕಾರಾಣವಾಗಬಹುದು.
ಸಾರಾಂಶ
ಜನರ ಅದರಲ್ಲೂ ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಅವರ ಆದಾಯದ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಕೃಷಿಯೊಂದಿಗೆ ಪಶು ಸಂಗೋಪಣೆ, ಮೀನು ಸಾಕಾಣಿಕೆ, ಜೇನು ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆಯಂಥ ಕೃಷಿ ಸಂಬಂಧೀ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೈನುಗಾರಿಕೆಯು ಸಣ್ಣ, ಅತೀ ಸಣ್ಣ ರೈತರು ಮತ್ತು ಭೂ ರಹಿತರಿಗೆ ಅದರಲ್ಲೂ ಮಹಿಳೆಯರಿಗೆ ಕಡಿಮೆ ದರದ ಆಹಾರ ಮತ್ತು ಪೋಷಕಾಂಶ ಒದಗಿಸುವುದರ ಜೊತೆಗೆ ಅತೀ ಮುಖ್ಯವಾಗಿ ಸಹಾಯಕಾರಿಯಾಗಿದೆ. ಹೈನುಗಾರಿಕೆಯು ವರ್ಕೋಡು ಗ್ರಾಮದ ಸಣ್ಣ ಮತ್ತು ಅತಿ ಸಣ್ಣ ರೈತರ ಉಪ-ಆದಾಯದ ಮುಖ್ಯವಾದ ಮೂಲವಾಗಿದೆ. `ನಿವೃತ್ತ್ ಹೆಸರಿನ ಸ್ವಯಂ ಸೇವಾ ಸಂಸ್ಥೆಯು ಅಲ್ಲಿಯ ಜನರನ್ನು ಸಬಲೀಕರಿಸಿ, ಸಹಾಯ-ಸಹಕಾರಗಳನ್ನೊದಗಿಸಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲಾಗಿದೆ; ಜನರೂ ಸಂಸ್ಥೆಯನ್ನು ನಂಬಿ, ಅನುಸರಿಸಿದರು, ಹಾಗೂ ಈಗ ಅದರ ಪ್ರತಿಫಲವನ್ನು ಸವಿಯುತ್ತಿದ್ದಾರೆ. ಪ್ರಸಕ್ತ ಲೇಖನದಲ್ಲಿ ಹೈನುಗಾರಿಕೆಯ ಉಪಯೋಗಗಳು ಮತ್ತು ಪರಿಣಾಮಗಳನ್ನು ಹೊರತೆಗೆಯುವುದರೊಂದಿಗೆ ಸಾಮಾಜಿಕ-ಆರ್ಥಿಕ ಪರಿಸ್ಥಿತಿ, ಒಳಗೊಂಡಿರುವ ಸವಾಲುಗಳು ಹಾಗೂ ಸಂಸ್ಥೆಯ ವಹಿಸಿರುವ ಪಾತ್ರಗಳನ್ನು ಕುರಿತು ವಿಶ್ಲೇಷಿಸುವ ಪ್ರಯತ್ನ ಮಾಡಲಾಗಿದೆ. ಅಧ್ಯಯನದ ಸಮಸ್ಯೆಯನ್ನು ಶೋಧಿಸಲು ಸಂಖ್ಯಾತ್ಮಕ ಮತ್ತು ಗುಣಾತ್ಮಕ ದತ್ತಾಂಶಗಳೆರಡನ್ನೂ ಮೇಳೈಸಿಕೊಂಡಿರುವ ಮಾಹಿತಿಯನ್ನು ಬಳಸಲಾಗಿದೆ. ಸಂಖ್ಯಾತ್ಮಕ ಹಾಗೂ ಗುಣಾತ್ಮಕಗಳೆರಡೂ ಪ್ರಕಾರದ ದತ್ತಾಂಶಗಳನ್ನು ಸಂಗ್ರಹಿಸಲು ಮನೆ-ಮನೆ ಸಮೀಕ್ಷೆ ಮತ್ತು ಸಹಭಾಗಿತ್ವದ ಚರ್ಚಾ ಪದ್ಧತಿಗಳನ್ನು ಬಳಸಲಾಗಿತ್ತು. ಸಾಧನೆ ಮತ್ತು ಫಲಿತಗಳನ್ನು ಇಲ್ಲಿ ಶೇಕಡಾವಾರು ತೋರಿಸಲಾಗಿದೆ. `ರೈತರು ತಮಗಿರುವ ಜಮೀನಿನ ಸ್ವಲ್ಪ ಭಾಗವನ್ನು ಮೇವು ಬೆಳೆಯಲು ಬಳಸಿ, ಹೈನುಗಾರಿಕೆಯನ್ನು ಮಾಡಿದರೆ ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬಹುದು ಎಂಬುದನ್ನು ಈ ಅಧ್ಯಯನದಿಂದ ಕಂಡುಕೊಳ್ಳಲಾಗಿದೆ. ಆದರೆ ಸಮಸ್ಯೆಯೆಂದರೆ ಅದರಲ್ಲಿ ಕೆಲವರಿಗೆ ಭೂಮಿಯೇ ಇಲ್ಲಾ, ಆದಾಗ್ಯೂ ಅವರು ಹೈನುಗಾರಿಕೆಯನ್ನು ನಿರ್ವಹಿಸುತ್ತಿರುವುದೇ ವಾಸ್ತವ ಸೌಂದರ್ಯಯುತ ಸತ್ಯ. ಹೈನುಗಾರಿಕೆಯು ವರ್ಕೋಡು ಗ್ರಾಮಸ್ಥರ ಜೀವನವನ್ನು ಉನ್ನತೀಕರಿಸಿದೆ. ಭಾರತ ಅಭ್ಯುದಯ ಸೇವಾ ಸಂಸ್ಥೆ (IDS-I) ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಆಯ್ದ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು 1979 ರಲ್ಲಿ ಹಮ್ಮಿಕೊಂಡಿತು. ಈ ಸಂಸ್ಥೆಯ ಒಂದು ವೈಶಿಷ್ಟ್ಯವೆಂದರೆ ಗ್ರಾಮದ ಜನರು ತಮ್ಮ ಅಭಿವೃದ್ಧಿಯನ್ನು ತಾವೇ ಸಾಧಿಸಿಕೊಳ್ಳಲು ಸಹಾಯಕಾರಿ ಆಗುವುದು. ಈ ಸಂಸ್ಥೆಯನ್ನು ಶ್ರೀ ಎಸ್. ಆರ್. ಹಿರೇಮಠ ಹಾಗೂ ಅವರ ಅಮೇರಿಕನ್ ಪತ್ನಿ ಶ್ರೀಮತಿ ಶ್ಯಾಮಲಾ ಹಿರೇಮಠ (ಸುಶ್ರೀ ಮೇವಿಸ್) ಇವರು ಇತರ ಸ್ವಯಂಸೇವಕರ ಸಹಾಯದಿಂದ ಪ್ರಾರಂಭಿಸಿದರು.
ಅವರು ದೇವಜೀಭಾಯಿ ಗೋವಿಂದಭಾಯಿ ಫತೇಪಾರ. ಲೋಕಸಭೆಯಲ್ಲಿ ಗುಜರಾತಿನ ಸುರೇಂದ್ರ ನಗರವನ್ನು ಪ್ರತಿನಿಧಿಸುತ್ತಾರೆ. ಮೊದಲ ಸಲ ಆರಿಸಿ ಬಂದವರು.
ಇತ್ತೀಚೆಗೆ ಲೋಕಸಭೆಯಲ್ಲಿ ಅವರೊಂದು ಪ್ರಶ್ನೆ ಕೇಳಿದ್ದರು. ತಾವು ಕೇಳುತ್ತಿರುವ ಪ್ರಶ್ನೆಯ ಹಿಂದೆ ತಮಗೇ ತಿಳಿಯದ ರಾಜಕಾರಣ ಅಡಗಿದೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ಈ ರಾಜಕಾರಣ ತಮ್ಮದೇ ಗುಜರಾತಿನ ಸರ್ಕಾರವನ್ನು ಮತ್ತು ಇತ್ತೀಚಿನ ತನಕ ಆ ಸರ್ಕಾರದ ಮುಖ್ಯಮಂತ್ರಿಯಾಗಿದ್ದು ಇದೀಗ ಪ್ರಧಾನಿ ಆಗಿರುವ ಪ್ರಚಂಡ ನಾಯಕನನ್ನು ಅಪರಾಧಿಯ ಕಟಕಟೆಯಲ್ಲಿ ನಿಲ್ಲಿಸುತ್ತದೆ ಎಂಬುದನ್ನು ಅರಿಯದಷ್ಟು ಅಮಾಯಕರು ಅವರು. ಒಂದು ದೇಶ ಸಮೃದ್ಧವಾಗಿ ಬೆಳೆದು, ಅಲ್ಲಿಯ ಜನಮನದಲ್ಲಿ ಹಚ್ಚಹಸಿರಾಗಿ ನೆಲೆಯೂರಬೇಕಾದರೆ, ಅಲ್ಲಿ ಸತ್ಯ, ನ್ಯಾಯ, ನೀತಿ, ಪ್ರೀತಿಗಳು ತಳಹದಿಯಾಗಿರಬೇಕು. ಅಂಥ ಗೌರವಕ್ಕೆ ಪಾತ್ರವಾದದ್ದು ಆಷ್ಟ್ರೇಲಿಯಾ ದೇಶವೆನ್ನಬಹುದು. ಸತ್ಯವೇ ದೇವರೆಂದು ಬಗೆಯುವ ಉದಾತ್ತ ಭಾವನೆ ಅಲ್ಲಿಯ ಜನತೆಯದು. ಆ ದೇಶದ ಜನಜೀವನಕ್ಕೆ ಸುಖ-ಶಾಂತಿಯೇ ಪ್ರಧಾನವಾಗಿದೆ. ಅದರಂತೆ ಅನ್ಯದೇಶಿಯರೂ ಪ್ರೀತಿ-ಸ್ನೇಹಗಳನ್ನು ಬೆಳೆಸಿಕೊಂಡು ಹೋಗಬೇಕೆಂಬುದೇ ಅವರ ತತ್ವವೂ, ಸಂಕಲ್ಪವೂ ಆಗಿದೆ.
|
Categories
All
Social Work Learning AcademyMHR LEARNING ACADEMYGet it on Google Play store
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |
SITE MAP
SiteTRAININGnIRATHANKA CITIZENS CONNECTJOB |
HR SERVICES
OTHER SERVICES |
NIRATHANKAPOSHOUR OTHER WEBSITESSubscribe |
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|