ಅಪರಿಮಿತ ಮಾನವ ಸಂಪನ್ಮೂಲವುಳ್ಳ ಭಾರತದಂತಹ ಸಂಪ್ರದಾಯಸ್ಥ ರಾಷ್ಟ್ರದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಡತನದ ಬೇಗೆಯಲ್ಲಿ ಸಿಲುಕಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಮಾತ್ರ ಮರೀಚಿಕೆಯೇ ಆಗಿದೆ. ಇತ್ತೀಚಿಗಷ್ಟೆ ಭಾರತದಲ್ಲಿ ಮಕ್ಕಳ ಅಪೌಷ್ಟಿಕತೆಯ ಸ್ಥಿತಿ ಗತಿ ಕುರಿತು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿರುವ ವರದಿಯನ್ನು ಬಿಡುಗಡೆ ಮಾಡಿದ ಪ್ರಧಾನ ಮಂತ್ರಿಗಳಾದ ಡಾ|| ಮನಮೋಹನ್ ಸಿಂಗ್ ಇದೊಂದು ರಾಷ್ಟ್ರೀಯ ಅಪಮಾನ ಎಂದು ಕರೆದಿದ್ದಾರೆ. ವಿಪರ್ಯಾಸದ ಸಂಗತಿಯೆಂದರೆ ಅವರದೇ ನೇತೃತ್ವದ ಪೌಷ್ಟಿಕತೆಯ ಸವಾಲುಗಳಿಗೆ ಸಂಬಂಧಿಸಿದ ಪ್ರಧಾನಮಂತ್ರಿ ರಾಷ್ಟ್ರೀಯ ಮಂಡಳಿ ಕಳೆದ ಮೂರು ವರ್ಷಗಳಲ್ಲಿ ಸಭೆ ಸೇರಿರುವುದು ಕೇವಲ ಒಂದೇ ಬಾರಿಯಷ್ಟೆ. ರಾಷ್ಟ್ರದಲ್ಲಿ ಐದು ವರ್ಷದೊಳಗಿನ ಶೇ. 42 ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ಈ ವರದಿ ಬಹಿರಂಗ ಪಡಿಸಿದೆ. ಇನ್ನೂ ಕೆಲವು ನಂಬಲರ್ಹ ಸಂಸ್ಥೆಗಳ ಅಂದಾಜಿನ ಪ್ರಕಾರ ಈ ಪ್ರಮಾಣವು ಶೇ.52 ರಿಂದ 54 ರಷ್ಟಿದೆ (ಡಾ||. ಆರ್. ಬಾಲಸುಬ್ರಹ್ಮಣ್ಯಂ 2012).
0 Comments
ಆಧುನಿಕ ಸಮಾಜಕಾರ್ಯವನ್ನು ಒಂದು ವೃತ್ತಿ ಎಂದು ಭಾವಿಸಲಾಗುತ್ತದೆ. ವೃತ್ತಿಗೆ ಇರಬೇಕಾದ ಕೆಲವು ಅತೀ ಮುಖ್ಯವಾದ, ಅನಿವಾರ್ಯವಾದ ಹಾಗೆಯೇ ವಿಶಿಷ್ಟವಾದ ವೈಲಕ್ಷಣ್ಯಗಳು ಇರಬೇಕು. ಬೋಧನೆ, ಅನುಸಂಧಾನ, ಪ್ರಯೋಗ, ವಿಧಾನ-ತಂತ್ರಗಳ, ಮೌಲ್ಯ ಸೂತ್ರಗಳ, ತತ್ತ್ವಾದರ್ಶ-ಸಿದ್ಧಾಂತಗಳ ರೂಪಣಿಕೆ, ಅನುಷ್ಠಾನ ಕ್ಷೇತ್ರಗಳ ನಿರ್ಧಾರ, ಸಮಾಜಕಾರ್ಯದಲ್ಲಿ ತೊಡಗಿರುವವರು-ಪ್ರಶಿಕ್ಷಣಾರ್ಥಿಗಳು, ಪ್ರಶಿಕ್ಷಕರು, ಕಾರ್ಯಕರ್ತರು ಮುಂತಾದವರೆಲ್ಲರೂ ಹೊಂದಿರಲೇಬೇಕಾದ ಸೂಕ್ತ ವ್ಯಕ್ತಿತ್ವ, ಇತ್ಯಾದಿಗಳೆಲ್ಲವುಗಳ ಜೊತೆಗೆ, ಸಮಾಜಕಾರ್ಯದಲ್ಲಿ ನಿರತರಾಗಿರುವವರು ತುಂಬಿದ ಆಸಕ್ತಿಯಿಂದ, ಬದ್ಧನಿಷ್ಠೆಯಿಂದ ನಿರಂತರವಾಗಿ ಭಾಗವಹಿಸಲು ಸೂಕ್ತವಾದ ಪ್ರಯೋಗಶಾಲೆಯು ಅತ್ಯಗತ್ಯ. ಹೋಲಿಕೆ ಅಷ್ಟು ಸರಿಯಲ್ಲ ಎಂಬ ಅಭಿಪ್ರಾಯ ಇದ್ದರೂ ವೈದ್ಯಶಾಸ್ತ್ರದ ಶಾಲೆಗೆ ಹೇಗೆ ಒಂದು ಆಸ್ಪತ್ರೆ ಬೇಕೊ, ಇಂಜಿನಿಯರಿಂಗ್ ಶಾಲೆಗೆ ಹೇಗೆ ಒಂದು ಕಾರ್ಯಾಗಾರ (Workshop) ಬೇಕೊ, ಸಮಾಜಕಾರ್ಯ ಶಾಲೆಗೂ ಒಂದು ಪ್ರಯೋಗಾಲಯ ಬೇಕೇಬೇಕಾಗುತ್ತದೆ.
ಅಭಿವೃದ್ಧಿ ಸಂಬಂಧ ಪ್ರಾದೇಶಿಕ ಅಸಮಾನತೆ ಎಂಬುದು ಕರ್ನಾಟಕವನ್ನು 1956 ರಿಂದಲೂ ಕಾಡುತ್ತಿರುವ ಬಾಲಗ್ರಹ ಪೀಡೆಯಾಗಿದೆ. ಕರ್ನಾಟಕದ ಹುಟ್ಟಿನೊಂದಿಗೆ ಜನ್ಮತಳೆದ ರೋಗ ಇದಾಗಿದೆ. ವಾಸ್ತವವಾಗಿ ಇದು ಕರ್ನಾಟಕಕ್ಕೆ ವಿಶಿಷ್ಟವಾದ ಸಮಸ್ಯೆಯೇನೂ ಅಲ್ಲ. ಆಂದ್ರಪ್ರದೇಶದಲ್ಲಿ (ತೆಲಂಗಾಣ), ಮಹಾರಾಷ್ಟ್ರದಲ್ಲಿ (ಮರಾಠವಾಡ), ಗುಜರಾತ್ ನಲ್ಲಿ (ಕಚ್ ಪ್ರದೇಶ), ಒರಿಸ್ಸಾದಲ್ಲಿ (ಪಶ್ಚಿಮ ಭಾಗ) ಇಂತಹ ಸಮಸ್ಯೆಗಳು ಇರುವುದು ಕಂಡುಬರುತ್ತದೆ. ಕರ್ನಾಟಕದಲ್ಲಿನ ಅಭಿವೃದ್ಧಿ ಸಂಬಂಧ ಪ್ರಾದೇಶಿಕ ಅಸಮಾನತೆಯನ್ನು ಚಾರಿತ್ರಿಕವಾಗಿ ಪರಿಭಾವಿಸಿಕೊಳ್ಳಬೇಕಾಗುತ್ತದೆ. ಇಂದು ನಾವು ಯಾವ ಜಿಲ್ಲೆಗಳನ್ನು ಅತ್ಯಂತ ಹಿಂದುಳಿದವುಗಳೆಂದು ವರ್ಗೀಕರಿಸುತ್ತಿದ್ದೇವೆಯೋ ಅವು ಒಂದು ರೀತಿಯ ಚಾರಿತ್ರಿಕ ವಿಕಲತೆಗೆ ಒಳಗಾಗಿರುವುದು ಸ್ಪಷ್ಟವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ವಸಾಹತುಶಾಹಿ ಆಡಳಿತಕ್ಕೆ ಮತ್ತು ಅಭಿವೃದ್ಧಿಗೆ ಒಳಪಡದಿದ್ದ ಪ್ರದೇಶಗಳೇ ಇಂದು ಹಿಂದುಳಿದಿರುವ ಸ್ಥಿತಿಯಲ್ಲಿವೆ.
ಮುನ್ನುಡಿ
ಭಾರತೀಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಶರಣ ಚಿಂತನೆ ಮತ್ತು ಸಮಾಜಕಾರ್ಯದ ತೌಲನಿಕ ಚೌಕಟ್ಟಿನಲ್ಲಿ ನನ್ನೀ ಪ್ರಸ್ತಾವನೆಯನ್ನು ಮಂಡಿಸಲು ಬಯಸುತ್ತೇನೆ. ಸಕಲ ಜೀವಾತ್ಮರಿಗೆ ಬಯಸುವ ಲೇಸಿನ ಮಾರ್ಗವನ್ನು ಹನ್ನೆರಡನೆಯ ಶತಮಾನದ ಶಿವಶರಣರು ಹಿಡಿದರು. ಹತ್ತೊಂಬತ್ತು-ಇಪ್ಪತ್ತನೆಯ ಶತಮಾನದಲ್ಲಿ ರೂಪುತಳೆದ ಆಧುನಿಕ ಸಮಾಜಕಾರ್ಯವು ಮಾನವರ ಕಲ್ಯಾಣ ಮತ್ತು ಅಭ್ಯುದಯವನ್ನು ತನ್ನ ಗುರಿಯಾಗಿಸಿಕೊಂಡಿತು. ಈ ಎರಡೂ ಮಾರ್ಗಗಳ ಗುರಿಯು, ಒಟ್ಟಿನಲ್ಲಿ, ಲೋಕದಲೇಸು, ಒಳಿತು, ಕಲ್ಯಾಣ ಮತ್ತು ಅಭ್ಯುದಯ. ಈ ಎರಡೂ ಮಾರ್ಗಗಳ ಗುರಿಯಾದ ಲೇಸು ಅಂದರೇನು ಎಂಬುದನ್ನು ನಾವು ನಿರ್ವಚಿಸಬೇಕಾಗಿದೆ. ಜೊತೆಗೆ, ಈ ಲೇಸನ್ನು ಅಳೆಯುವುದು ಹೇಗೆ, ಮತ್ತು ಅಳೆಯುವ ಮಾಪಕಗಳಾವುವು, ಎಂಬುದನ್ನು ನಾವು ನಿರ್ಧರಿಸಬೇಕಾಗಿದೆ. ಇದ್ದಕಿದ್ದ ಹಾಗೆ ಮಾರ್ಚ್ 2012 ರ 4ರಂದು ಭಾನುವಾರ ಡಾ.ಆರ್.ಶಿವಣ್ಣನವರು ನನಗೆ ದೂರವಾಣಿ ಕರೆಮಾಡಿ, ನಿಮ್ಮ ಮನೆಕಡೆ ಬರುತ್ತಿದ್ದೇನೆ; ಇನ್ನು ಹತ್ತು- ಹದಿನೈದು ನಿಮಿಷಗಳಲ್ಲಿ ನಿಮ್ಮಲ್ಲಿರುತ್ತೇನೆ; ಪ್ರೊ.ಎಲ್.ಎಸ್.ಶೇಷಗಿರಿರಾವ್ ಕಡೆಹೋಗಿ, ಅವರನ್ನು ನೋಡಿಕೊಂಡು ಬರೋಣ; ಅವರ ಆರೋಗ್ಯ ಅಷ್ಟೇನೂ ಚೆನ್ನಾಗಿಲ್ಲವಂತೆ ಹೀಗೆ ಹೇಳಿದರು. ನಮ್ಮ ಮನೆಗೆ ತೀರಾ ಹತ್ತಿರದಲ್ಲಿದ್ದರೂ ನನ್ನ ಅದೃಢ ಕಾಲು-ಸೊಂಟಗಳ ಕಾರಣದಿಂದ ನಾನು ಅವರನ್ನು ಕಂಡುಬರಲು ಆಗುತ್ತಲಿಲ್ಲ. ಬೇರೆಯವರ ವಾಹನ-ಹೆಗಲ ನೆರವಿನಿಂದ ಮಾತ್ರ ನಾನು ಹೋಗಿಬರಲು ಸಾಧ್ಯ. ಆದುದರಿಂದ ಬಹಳ ದಿನಗಳಾದ ನಂತರ ಈ ಅವಕಾಶ ದೊರೆಯಿತೆಂದು ನನಗೆ ಸಹಜವಾಗಿಯೇ ಸಂತಸವಾಯ್ತು. ಡಾ.ಶಿವಣ್ಣನವರಿಗೆ ಕಾಯತೊಡಗಿದೆ.
ಬಡತನವನ್ನು ಉಪಶಮನಗೊಳಿಸಿ ಪ್ರಗತಿ ಸಾಧಿಸಲು ನಮ್ಮ ಸರ್ಕಾರವು ಉದ್ಯೋಗಖಾತರಿ ಯೋಜನೆ, ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಕಡಿಮೆ ದರದಲ್ಲಿ ಆಹಾರ ಧಾನ್ಯಗಳ ವಿತರಣಾ ಯೋಜನೆ, ರೈತರ ಸಾಲವನ್ನು ಮನ್ನಾ ಮಾಡುವ ಯೋಜನೆಗಳು ನಿರ್ಗತಿಕ (ಬಡ) ಜನರ ಕಣ್ಣಲ್ಲಿ ನೆಮ್ಮದಿಯನ್ನು ಸೂಚಿಸುತ್ತಿವೆ. ಆದರೆ, ಗ್ರಾಮೀಣ ಪ್ರದೇಶದ ಜನರಿಗೆ ಈ ಯೋಜನೆಗಳು ತಲುಪದೇ ಇರುವುದು ಅಸಮಾಧಾನಕರ ಸಂಗತಿಯೇ ಸರಿ! ಮಾವೋವಾದಿಗಳ ಚಟುವಟಿಕೆಗಳು ಉಲ್ಬಣಗೊಳ್ಳುತ್ತಿವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಅಸಮಾನತೆ.
1. ಹುಚ್ಚು ಕನಸು ಹೊತ್ತು ಬಂದ ದಂಪತಿ
ನಮ್ಮ ಹುಡುಗ ಅಮೆರಿಕಾಕ್ಕೆ ಓದಲು ಹೊರಟಿದ್ದಾನೆ; ನಮ್ಮ ಅಳಿಯನಿಗೆ ಅಮೆರಿಕೆಯಲ್ಲಿ ಕೆಲಸ ಸಿಕ್ಕಿದೆ, ನಮ್ಮ ಮಗಳನ್ನು ಕರೆದುಕೊಂಡು ಮುಂದಿನವಾರವೇ ಹೋಗುತ್ತಿದ್ದಾನೆ; ಇತ್ಯಾದಿಯಾಗಿ ಸಂತಸದಿಂದ ಸುದ್ದಿ ಹಂಚಿಕೊಳ್ಳುವುದು ಈಗ ಸಾಮಾನ್ಯವಾಗಿ ಕೇಳಿಬರುವ ಸಂಗತಿ. ನಮ್ಮಹುಡುಗ ಅಮೆರಿಕಾದಿಂದ ಭಾರತದಲ್ಲೇ ಇರಲು ಬರುತಿದ್ದಾನೆ ಎಂದರೆ, ಪ್ರಸ್ತುತ ಇರುವ ಜಾಗತಿಕ ಆರ್ಥಿಕ ಮುಗ್ಗಟ್ಟಿನ ಪರಿಣಾಮವಾಗಿ ಕೆಲಸ ಕಳೆದುಕೊಂಡಿರಬೇಕು, ಪಾಪ ಎಂದು ಅನುಕಂಪದ ಮಾತನಾಡುವವರು ಅನೇಕರು. ಆದರೆ ಇದ್ದ ಉತ್ತಮ ಗಳಿಕೆಯ ಕೆಲಸವನ್ನು ಬಿಟ್ಟು ಭಾರತರದಲ್ಲಿಯ ಕಡು ಬಡವರ, ಸಾಮಾಜಿಕವಾಗಿ, ಆರ್ಥಿಕವಾಗಿ ಶೋಷಣೆಗೆ ಒಳಗಾಗಿರುವವರ ಬಗೆಗೆ ಕಾಳಜಿ ವಹಿಸಿ, ಅವರನ್ನು ಸಶಕ್ತರನ್ನಾಗಿ ಮಾಡಿ ಸಾಮಾಜಿಕವಾಗಿ-ಆರ್ಥಿಕವಾಗಿ ಅಸಮತೋಲನವನ್ನು ಕಡಿಮೆ ಮಾಡುವ ಕನಸು ಕಟ್ಟಿಕೊಂಡು ಭಾರತಕ್ಕೆ ಬಂದಿದ್ದೇವೆ ಎಂದು ಯಾರಾದರೂ ಹೇಳಿದರೆ, ಅವರಿಗೆ ಹುಚ್ಚು ಹಿಡಿದಿದೆ ಎಂದು ಸಹಜವಾಗಿ ಅನ್ನುವವರು ಸಾಕಷ್ಟು ಜನ ಸಿಕ್ಕುತ್ತಾರೆ. ಇಂತಹ ಹುಚ್ಚುಕನಸುಗಳನ್ನು ಹೊತ್ತುಕೊಂಡು ಅಮೆರಿಕೆಯಿಂದ 1979 ರಲ್ಲಿ ಭಾರತಕ್ಕೆ ಬಂದವರು ಶ್ರೀಮತಿ(ಸುಶ್ರೀ) ಶ್ಯಾಮಲಾ ಹಿರೇಮಠ್ ಹಾಗೂ ಶ್ರೀ ಎಸ್, ಆರ್, ಹಿರೇಮಠ್ ದಂಪತಿ. ಮುಂದಿನ ನೂರು ವರ್ಷಗಳಲ್ಲಿ ಮನುಕುಲ ನಾಶವಾಗಲಿದೆಯೆಂದು ಕೆಲವು ಸಮಯದ ಹಿಂದೆ ಆಸ್ಟ್ರೇಲಿಯಾದ ವಿಜ್ಞಾನಿಯೊಬ್ಬರು ಭವಿಷ್ಯ ನುಡಿದಿದ್ದರು. ಇವರ ಲೆಕ್ಕಾಚಾರದ ಪ್ರಕಾರ ಈ ನಾಶಕ್ಕೆ ಕಾರಣ ಎಗ್ಗಿಲ್ಲದ ಬಳಕೆ, ಅಂದರೆ ಮನುಷ್ಯರ ಅತಿಭೋಗದ ಬದುಕು. ಕೈಗಾರಿಕೀಕರಣದ ಬಳಿಕ ಮಾನವ ಆಂತ್ರೋಪೊಸೀನ್ ಎಂಬ ಅನಧಿಕೃತ ವೈಜ್ಞಾನಿಕ ಕಾಲಘಟ್ಟವನ್ನು ಪ್ರವೇಶಿಸಿದ್ದಾನಂತೆ. ಈ ಕಾಲಘಟ್ಟದಲ್ಲಿ ಮನುಷ್ಯ ಅಗತ್ಯ ಮತ್ತು ಆಸೆ ಗಳಿಗಾಗಿ ನಿಸರ್ಗದ ಸಂಪತ್ತನ್ನು ಕೃತಕ ಸಂಪತ್ತನ್ನಾಗಿ ಪರಿವರ್ತಿಸುತ್ತಾ, ಪರಿಸರವನ್ನು ಮಾಲಿನ್ಯ ಮಾಡುತ್ತಾ, ಅಸಮತೋಲನವನ್ನು ಉಂಟು ಮಾಡುತ್ತಾ ಸಾಗುತ್ತಾನೆ. ಈ ಮಾಲಿನ್ಯ, ಅಸಮತೋಲನದಿಂದ ಮತ್ತೆ ನೈಸರ್ಗಿಕ ಸಂಪನ್ಮೂಲದ ಅಭಾವ, ಆಹಾರದ ಅಭಾವ ಉಂಟಾಗಿ; ಅನೇಕಾನೇಕ ಕಾಯಿಲೆಗಳು ಬಂದು; ಸಾಮಾಜಿಕ ಪ್ರಕ್ಷುಬ್ದತೆಯು ಉಂಟಾಗಿ ಮನುಕುಲದ ನಾಶ ಆಗಬಹುದು ಎಂಬುದನ್ನು ಯಾರಾದರೂ ಊಹಿಸಬಹುದು. ಆದರೆ ಉಂಟಾಗುವ ತೊಂದರೆಗಳು ಮತ್ತು ಅವುಗಳ ಕಾರಣಗಳ ಅರಿವು ಆದಂತೆಲ್ಲಾ ಮತ್ತಷ್ಟು ವೈಜ್ಞಾನಿಕ ಸಂಶೋಧನೆಗಳನ್ನು ಮಾಡಿ, ಪರಿಹಾರ ಹುಡುಕಿಕೊಳ್ಳಬಲ್ಲೆವು ಎಂದು ಜನರು ನಂಬಿಕೊಂಡಿದ್ದಾರೆ. ಇನ್ನು ಕೆಲವು ವಿಜ್ಞಾನಿಗಳು ಮತ್ತು ಇತರ ಜನರು ಪ್ರಕೃತಿಯನ್ನು ಗೆಲ್ಲಬಲ್ಲೆವೆಂಬ ಅಹಂನಿಂದ ಪ್ರಕೃತಿಯೊಂದಿಗೆ ಹೊಂದಾಣಿಕೆಯಿಂದ ಸಾಗದೆ ಅದರ ವಿರುದ್ಧವಾಗಿ ಸಾಗುವುದು ಇನ್ನಷ್ಟು ದುರಂತಕ್ಕೆ ಕಾರಾಣವಾಗಬಹುದು.
ಗಾಂಧೀಜಿಯ ದೃಷ್ಟಿಯಲ್ಲಿ ಸಮಾಜಕಾರ್ಯ ಎಂದರೆ ಸಮಾಜ ಪರಿವರ್ತನೆಯ ಕಾರ್ಯ. ಸಮಾಜದ ಪರಿವರ್ತನೆಯ ಕಾರ್ಯ ಎಂದರೆ ಹೊಸ ಮೌಲ್ಯಗಳ ಸ್ಥಾಪನೆ. ಹಳೆಯ ಕಂದಾಚಾರದ, ಸವಕಲು ಮೌಲ್ಯಗಳನ್ನು ಕಿತ್ತೊಗೆಯುವುದು.
ಮಹಿಳೆಯರನ್ನು ಸಮಾಜ ನಿಕೃಷ್ಟವಾಗಿ ಕಾಣುತ್ತಿತ್ತು. ಆಕೆಯ ಸ್ಥಾನ ಮನೆಯಲ್ಲೇ ಹೊರತು ಸಮಾಜದ ಆಗು ಹೋಗುಗಳಲ್ಲಲ್ಲ ಎಂದು ಅಂದಿನ ಸಮಾಜ ಭಾವಿಸಿತ್ತು. ಮಕ್ಕಳನ್ನು ಪೋಷಿಸುವುದಕ್ಕೆ, ಮನೆಯ ಒಳಗಿನ ವ್ಯವಹಾರಗಳನ್ನು ನೋಡಿಕೊಳ್ಳುವುದಕ್ಕೆ ಮಾತ್ರ ಆಕೆಯನ್ನು ಬಳಸಲಾಗುತ್ತಿತ್ತು. ಆಕೆಗೆ ಮತ ನೀಡುವ ಹಕ್ಕಿರಲಿಲ್ಲ. ಸಾರ್ವಜನಿಕ ಜೀವನದಲ್ಲಿ ಗಂಡನಿಗೆ ಹೊಯಿಕೈಯಾಗಿ ಬೆರೆಯುವುದಕ್ಕೆ ಅವಕಾಶ ಇರಲಿಲ್ಲ. ಸ್ತ್ರೀಯರಿಗೆ ವಿದ್ಯಾಭ್ಯಾಸ ಮಾಡುವ ಅವಕಾಶವಿರಲಿಲ್ಲ. ಬಾಲವಿಧವೆಯರಿಗೆ ತಮ್ಮ ಕಾಲ ಮೇಲೆ ನಿಲ್ಲುವ ಸ್ವಾತಂತ್ರ್ಯವಾಗಲಿ ಅದಕ್ಕೆ ಬೇಕಾದ ಶಿಕ್ಷಣವಾಗಲಿ ದೊರಕುತ್ತಿರಲಿಲ್ಲ. ಬಾಲ್ಯದಲ್ಲಿ ಸ್ತ್ರೀಯರು ತಾಯಿ ತಂದೆಗಳ ಆಶ್ರಯದಲ್ಲಿ, ಮದುವೆಯಾದ ಮೇಲೆ ಗಂಡನ ಆಶ್ರಯದಲ್ಲಿ, ಗಂಡ ಸತ್ತ ಮೇಲೆ ಮಕ್ಕಳ ಆಶ್ರಯದಲ್ಲಿ ಪಂಗುವಿನಂತೆ ಬದುಕಬೇಕು ಎಂಬ ಕಟ್ಟಳೆ ಇತ್ತು. ಈ ಕಟ್ಟಳೆಯನ್ನು ಇತ್ತೀಚಿನವರೆಗೂ ಉಳಿಸಿಕೊಂಡು ಬರಲಾಗುತ್ತಿತ್ತು. ಈಶ್ವರಚಂದ್ರ ವಿದ್ಯಾಸಾಗರರು ವಿಧವಾ ವಿವಾಹವನ್ನು ಜಾರಿಗೆ ತಂದರು. ರಾಜಾರಾಂ ಮೋಹನರಾಯರು ಸತೀ ಪದ್ಧತಿಯನ್ನು ಕಾನೂನಿನ ಮೂಲಕ ನಿಷೇಧಿಸಲು ನೆರವಾದರು. ಫುಲೆ ಮಹಾಶಯರು ಸ್ತ್ರೀಯರಿಗೆ ವಿದ್ಯಾಶಾಲೆಗಳನ್ನ ತೆರೆದು ಉಪಕಾರಮಾಡಿದರು. ಗಾಂಧೀಜಿ, ಮನೆಯಲ್ಲಿ ಬಂಧಿಗಳಾಗಿದ್ದ ಹೆಣ್ಣು ಮಕ್ಕಳನ್ನು ಮಕ್ಕಳ ಶಿಕ್ಷಣ ಕಾರ್ಯಕ್ಕೆ,ಅನಾರೋಗ್ಯದಿಂದ ನರಳುವ ಗ್ರಾಮೀಣ ಜನರಿಗೆ ಆರೋಗ್ಯ, ನೈರ್ಮಲ್ಯ ಇವುಗಳ ಬಗೆಗೆ ಶಿಕ್ಷಣ ನೀಡುವ ಕೆಲಸಕ್ಕೆ, ಗ್ರಾಮೀಣ ರೋಗಿಗಳಿಗೆ ಅವರವರ ಮನೆಗೇ ಹೋಗಿ ಔಷಧೋಪಚಾರ ಮಾಡುವುದಕ್ಕೆ ಬೇಕಾದ ತರಬೇತಿಯನ್ನು ನೀಡಿದರು. ಹೆಣ್ಣು ಮಕ್ಕಳನ್ನು ಪರ ಊರುಗಳಲ್ಲಿ ವೈದ್ಯಕೀಯ ಸೇವೆ ನೀಡಲು ಕರೆತಂದರು. ಮೊದಲು ಗಾಂಧೀಜಿ ತಮ್ಮ ಹೆಂಡತಿ ಕಸ್ತೂರಿ ಬಾ ಅವರಿಗೆ ತರಬೇತಿ ನೀಡಿ ಅವರ ನೇತೃತ್ವದಲ್ಲಿ ಹೆಣ್ಣುಮಕ್ಕಳ ಪಡೆ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಕೆಲಸಗಳನ್ನು ಮಾಡಲು ಅನುಗೊಳಿಸಿದರು. ಭಾರತ ಅಭ್ಯುದಯ ಸೇವಾ ಸಂಸ್ಥೆ (IDS-I) ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಆಯ್ದ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು 1979 ರಲ್ಲಿ ಹಮ್ಮಿಕೊಂಡಿತು. ಈ ಸಂಸ್ಥೆಯ ಒಂದು ವೈಶಿಷ್ಟ್ಯವೆಂದರೆ ಗ್ರಾಮದ ಜನರು ತಮ್ಮ ಅಭಿವೃದ್ಧಿಯನ್ನು ತಾವೇ ಸಾಧಿಸಿಕೊಳ್ಳಲು ಸಹಾಯಕಾರಿ ಆಗುವುದು. ಈ ಸಂಸ್ಥೆಯನ್ನು ಶ್ರೀ ಎಸ್. ಆರ್. ಹಿರೇಮಠ ಹಾಗೂ ಅವರ ಅಮೇರಿಕನ್ ಪತ್ನಿ ಶ್ರೀಮತಿ ಶ್ಯಾಮಲಾ ಹಿರೇಮಠ (ಸುಶ್ರೀ ಮೇವಿಸ್) ಇವರು ಇತರ ಸ್ವಯಂಸೇವಕರ ಸಹಾಯದಿಂದ ಪ್ರಾರಂಭಿಸಿದರು.
|
Categories
All
Social Work Learning AcademyMHR LEARNING ACADEMYGet it on Google Play store
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |
SITE MAP
SiteTRAININGnIRATHANKA CITIZENS CONNECTJOB |
HR SERVICES
OTHER SERVICES |
NIRATHANKAPOSHOUR OTHER WEBSITESSubscribe |
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|