ಪ್ರಪಂಚದ ಎಲ್ಲಾ ಪಿತೃಪ್ರಧಾನ ವ್ಯವಸ್ಥೆಗಳಲ್ಲಿ ಪುರುಷನ ಮೇಲೆ ಸ್ತ್ರೀಯ ಅವಲಂಬನೆಯು ಅನಿವಾರ್ಯವಾಗಿರುತ್ತದೆ. ಗಂಡನಿಲ್ಲದಿದ್ದರೆ ಜೀವನವೇ ಇಲ್ಲವೆಂದು ಸತಿ-ಸಹಗಮನ ಪದ್ಧತಿ ರೂಢಿಗೆ ಬಂದಂತಹ ನಮ್ಮದೇ ದೇಶದಲ್ಲಿ ಈ ಅನಿವಾರ್ಯತೆಯ ಸ್ವರೂಪ ಇನ್ನಷ್ಟು ಗಂಭೀರವಾಗಿದೆ. ಪ್ರತೀ ಕುಟುಂಬದಲ್ಲೂ ಸ್ತ್ರೀಯರ ಪಾತ್ರ ಎಷ್ಟೇ ಪ್ರಾಮುಖ್ಯವಾಗಿದ್ದರೂ ಅವಳ ಅಂತಸ್ತು ಮಾತ್ರ ಪುರುಷನ ಅಂತಸ್ತಿಗಿಂತಲೂ ಕಡಿಮೆಯೇ ಇರುತ್ತದೆ. ಪತಿಯನ್ನು ಕಳೆದುಕೊಂಡ ಜೀವನ ಸಾಮಾಜಿಕವಾಗಿ ಅವಹೇಳನಕಾರಿಯಲ್ಲದೆ ಆರ್ಥಿಕವಾಗಿ ದುಸ್ತರವೂ ಆಗಿರುವುದರಿಂದ ಸ್ತ್ರೀಯರು ಸಾಮಾನ್ಯವಾಗಿ ಮುತ್ತೈದೆಯ ಸಾವನ್ನು ಬೇಡುತ್ತಾರೆ. ಹೀಗಿದ್ದಾಗಲೂ ಆಕಸ್ಮಿಕವಾಗಿ ಪತಿಯೇ ಮರಣಹೊಂದಿದಾಗ, ಮರುಮದುವೆಗೆ ಅವಕಾಶವಿಲ್ಲದಿದ್ದಾಗ ಎರಡು ಹೊತ್ತು ಊಟಕ್ಕಾದರೂ ತನ್ನ ಕಾಲಮೇಲೆ ತಾನು ನಿಲ್ಲುವ ಅನಿವಾರ್ಯತೆ ಸ್ತ್ರೀಗೆ ಬರುತ್ತದೆ. ಕೆಲವು ಸಲ ಮಕ್ಕಳ ಹಾಗೂ ಇಡೀ ಕುಟುಂಬದ ಭಾರವನ್ನು ಅವರು ಹೊರಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಸಾಮಾನ್ಯವಾಗಿ ಸ್ತ್ರೀಯರು ಮೊರೆಹೋಗುವ ಉದ್ಯೋಗವೆಂದರೆ ತಮ್ಮ ಗಂಡಂದಿರು ಮಾಡುತ್ತಿದ್ದ ಉದ್ಯೋಗ. ಉದಾಹರಣೆಗೆ, ಒಕ್ಕಲುತನ ಮಾಡುತ್ತಿದ್ದವನ ವಿಧವೆ ಒಕ್ಕಲುತನವನ್ನೇ ಮಾಡುತ್ತಾಳೆ. ನೇಕಾರಿಕೆಯನ್ನು ಮಾಡುತ್ತಿದ್ದವನ ವಿಧವೆ ನೇಕಾರಿಕೆಯನ್ನೆ ಮಾಡುತ್ತಾಳೆ. ಈ ಬಗೆಯ ಪರಿಸ್ಥಿತಿ ಕುಶಲಕರ್ಮಿಗಳಿಗೂ ಅನ್ವಯಿಸುತ್ತದೆ. ಇಂತಹ ಕುಶಲಕರ್ಮಿಗಳಲ್ಲಿ ಒಂದು ಅಕ್ಕಸಾಲಿಗ ವೃತ್ತಿ. ಪ್ರಸ್ತುತ ಲೇಖನದಲ್ಲಿ ಅನಿವಾರ್ಯ ಕಾರಣಗಳಿಂದಾಗಿ ಅಕ್ಕಸಾಲಿಗ ಮಹಿಳೆಯರು ಅಕ್ಕಸಾಲಿಗ ವೃತ್ತಿಯನ್ನು ಅವಲಂಬಿಸಿ, ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳುವ ಸಾಧ್ಯತೆಯನ್ನು ಸಮಾಜಶಾಸ್ತ್ರೀಯ ದೃಷ್ಟಿಕೋನದಿಂದ ವಿಶ್ಲೇಷಿಸಲಾಗಿದೆ.
0 Comments
ಭಾರತದ ಅತ್ಯಂತ ಪ್ರಾಚೀನ ಭಾಷೆಗಳಲ್ಲೊಂದಾದ ಸಂಸ್ಕೃತದಲ್ಲಿ ಬಹಳ ಉತ್ತಮವಾದ ಸಾಹಿತ್ಯ ರಚನೆಯಾಗಿದೆ. ವೇದ ಸಾಹಿತ್ಯದಿಂದ ಆರಂಭವಾಗಿ, ಇತಿಹಾಸ-ಪುರಾಣಗಳು, ಸೂತ್ರಗಳು, ಕೋಶಗಳು, ಸ್ಮೃತಿ ಗ್ರಂಥಗಳು, ಶಾಸ್ತ್ರಗ್ರಂಥಗಳು, ಕಾವ್ಯ-ನಾಟಕಗಳು ಹೀಗೆ ಸಂಸ್ಕೃತ ಸಾಹಿತ್ಯ ರಚನೆ ನೂರಾರು ವರ್ಷಗಳು ಅವ್ಯಾಹತವಾಗಿ ನಡೆದು ಬಂದಿದೆ. ಸಂಸ್ಕೃತವು ಭಾರತದ ಹಲವಾರು ಭಾಷೆಗಳ ಉಗಮಕ್ಕೆ ಕಾರಣವಾದುದೇ ಅಲ್ಲದೆ ಕವಿಗಳಿಗೆ ವಿದ್ವಾಂಸರಿಗೆ ಅಗಾಧವಾದ ವಸ್ತುವನ್ನೂ ಸ್ಫೂರ್ತಿಯನ್ನೂ ಒದಗಿಸಿಕೊಟ್ಟಿದೆ. ರಾಮಾಯಣ, ಮಹಾಭಾರತ, ಪುರಾಣಗಳು ಹಾಗೂ ಬೃಹತ್ಕಥೆಯಂತಹ ಗ್ರಂಥಗಳು ಮುಂದಿನ ಕ್ಲಾಸಿಕಲ್ ಎಂದು ಕರೆಸಿಕೊಳ್ಳುವ ಸಂಸ್ಕೃತ ಸಾಹಿತ್ಯಕ್ಕೆ ಮೂಲ ಸಾಮಗ್ರಿಯನ್ನು ಒದಗಿಸಿದೆ.
ನಾಡಿಗೆ ಬೆಳಕು ನೀಡುವ ಬೆಳಕಿನ ಕೇಂದ್ರ, ಅನ್ನದ ನಾಡು, ಚಿನ್ನದ ಬೀಡು, ಬಿಳಿ ಬಂಗಾರ ಬೆಳೆಯುವ ಜಿಲ್ಲೆಯೆಂದು ಪ್ರಸಿದ್ಧವಾಗಿರುವ ರಾಯಚೂರು ತನ್ನ ಉತ್ತರಕ್ಕೆ ಕೃಷ್ಣೆ ಮತ್ತು ದಕ್ಷಿಣಕ್ಕೆ ತುಂಗಭದ್ರೆ ನದಿಗಳನ್ನೊಳಗೊಂಡ `ದೋಆಬ್ ಪ್ರದೇಶ' ಸಮೃದ್ಧವಾದ ಸಂಪತ್ಭರಿತ ನಗರವಾಗಿದ್ದರೂ,`ಬೆಳಕು ನೀಡುವ ದೀಪದ ಸುತ್ತಲೂ ಕತ್ತಲೂ ಎನ್ನುವಂತೆ ಸಕಲ ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ಕತ್ತಲಮಯವಾದ ರಾಯಚೂರಿಗೆ ಜೀವತುಂಬುವ ಜೀವನಾಡಿಯಾಗಿರುವ ತುಂಗಭದ್ರೆಯು ಈ ಭಾಗದ ಜನರ ನೀರಿನ ದಾಹವನ್ನು ನೀಗಿಸುವುದಷ್ಟೇ ಅಲ್ಲದೆ, ನೀರಾವರಿ ಅಭಿವೃದ್ಧಿಯಾಗಲೂ ಸಹಾಯಕವಾಗಿದೆ. ಆದರೆ ಜಿಲ್ಲೆಯ ಹಿರಿಯ ನಾಯಕರ, ರಾಜಕೀಯ ಮುಖಂಡರ, ಹಿರಿಯ ಅಧಿಕಾರಿಗಳ ಹಾಗೂ ಮುತ್ಸದ್ಧಿಗರ, ಹೋರಾಟಗಾರರ ನಿರ್ಲಕ್ಷ್ಯದಿಂದ ಈ ಜಿಲ್ಲೆಯ ಜನತೆಯು (ರೈತರು) ತುಂಗಭದ್ರ ಎಡದಂಡೆ ಕಾಲುವೆಯ ನೀರಿನ ಸಂಪೂರ್ಣ ಸೌಲಭ್ಯವನ್ನು ಉಪಯೋಗಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಹೈದ್ರಾಬಾದ್ ಕರ್ನಾಟಕ (ಈಗ ಕಲ್ಯಾಣಕರ್ನಾಟಕ ಎಂದು ಕರೆಯಲ್ಪಡುತ್ತಿರುವ) ಪ್ರಾಂತ್ಯದಲ್ಲಿ ಪದೇ ಪದೇ ಪ್ರವಾಹ, ನಿರುದ್ಯೋಗ, ಆಹಾರ ಸಮಸ್ಯೆ, ಬರಗಾಲದಂಥ ಆರ್ಥಿಕ ಸಮಸ್ಯೆಯ ಸುಳಿಗೆ ಸಿಲುಕುವಂತಾಗಿದೆ.
ಬೇಗ ಊಟ ಮಾಡು. ಇಲ್ಲದಿದ್ದರೆ ಪೊಲೀಸ್ ಬರ್ತಾರೆ ನಮ್ಮ ಸುತ್ತಮುತ್ತಲಲ್ಲಿ ಈಗಲೂ ಈ ಮಾತು ಕೇಳಿ ಬರುತ್ತಿರುವುದು ಪೋಷಕತ್ವದ ವಿಪರ್ಯಾಸ. ಇಂತಹ ಹೆದರಿಕೆಯ ಮಾತಿನ ಮಧ್ಯೆಯೇ ಬೆಳೆದು ಬರುವ ನಮಗೆ ಬೆಳೆದಂತೆ ಪೊಲೀಸರೆಂದರೆ ನಡುಕವುಂಟಾಗುವುದು ಬಹಳ ಸಹಜ. ಪೊಲೀಸರೆಂದರೆ ಯಮ ಸ್ವರೂಪಿಗಳು, ಅವರಿಂದ ಜೋಪಾನವಾಗಿರಿ, ಪೊಲೀಸರ ಕೈಗೆ ಸಿಕ್ಕಿಬಿದ್ದಿರೋ ಮುಗಿಯಿತು ಎಂಬಿವೇ ಎಚ್ಚರಿಕೆಗಳೂ ಇಲ್ಲದಿಲ್ಲ. ಪೊಲೀಸರಿಗೆ ದೊಡ್ಡವರೂ ಒಂದೇ, ಮಕ್ಕಳೂ ಒಂದೇ, ಗಂಡಸರೂ ಹೆಂಗಸರೂ ಎಲ್ಲರನ್ನೂ ಒಂದೇ ತರಹ ಅವರು ನೋಡುವುದು ಎಂದೂ ಹೇಳುವವರು ಇಲ್ಲದಿರಲಿಲ್ಲ.
ದೇಶಕ್ಕೇ ಮಾದರಿಯಾಗುವಂಥ ಸಮರ್ಥ, ದಕ್ಷ ಲೋಕಾಯುಕ್ತ ವ್ಯವಸ್ಥೆ ಹೊಂದಿರುವ ಕರ್ನಾಟಕದಲ್ಲಿ ದಾಳಿ ವೇಳೆ ಭ್ರಷ್ಟರಿಂದ ವಶಪಡಿಸಿಕೊಂಡ ಆಸ್ತಿಯ ವಿಲೇವಾರಿ ಮಾತ್ರ ಸಾಧ್ಯವಾಗುತ್ತಿಲ್ಲ. ಈ ವಿಚಾರದಲ್ಲಿ ಅಧಿಕಾರವಿಲ್ಲದೆ ಕೈಕಟ್ಟಿ ಕುಳಿತಿದೆ ಲೋಕಾಯುಕ್ತ.
ಕಳೆದ 10 ವರ್ಷಗಳಲ್ಲಿ ಭ್ರಷ್ಟ ಅಧಿಕಾರಿಗಳಿಂದ ಕರ್ನಾಟಕ ವಶಪಡಿಸಿಕೊಂಡ 500ಕೋಟಿಗೂ ಅಧಿಕದ ಅಕ್ರಮ ಆಸ್ತಿ ಈಗಲೂ ಮಾಲ್ಖಾನಾದಲ್ಲಿ ಕೊಳೆಯುತ್ತಿದೆ, ಆದರೆ ಬಿಹಾರ ಸರ್ಕಾರದ ಭ್ರಷ್ಟರಿಂದ ಜಫ್ತಿ ಮಾಡಿದ ಆಸ್ತಿಯ ಕ್ಷಿಪ್ರ ವಿಲೇವಾರಿಗೆ ಮಾದರಿ ಎನಿಸುವಂತಹ ಕಾನೂನು ರೂಪಿಸಿದೆ. ಮಾನ್ಯ ಬಂಧುಗಳೆ,
ನನ್ನ ಕೆಲವು ತೌಲನಿಕ ಚಿಂತನೆಗಳನ್ನು ಮಂಡಿಸಲು ಅವಕಾಶವನ್ನು ಕಲ್ಪಿಸಿದ ವ್ಯವಸ್ಥಾಪಕರಿಗೆ ಮತ್ತು ನನ್ನೀ ಚಿಂತನೆಗಳನ್ನು ಆಲಿಸುತ್ತಿರುವ ನಿಮಗೆ ನನ್ನ ಕೃತಜ್ಞತೆಗಳು. ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಆಶ್ರಯದಲ್ಲಿ ನನ್ನೀ ಉಪನ್ಯಾಸವು ನಡೆಯುತ್ತಿದೆ. ಸಮಾಜದಲ್ಲಿನ ಊನಶಕ್ತರಿಗೆ ನೆರವನ್ನು ಉದಾರವಾಗಿ ನೀಡುವ ಧಾರ್ಮಿಕ ಭಾವನೆಯು ಪರಂಪರೆಯಿಂದ ಬಂದಿದ್ದರೂ ವೈಚಾರಿಕ ಮತ್ತು ಲೌಕಿಕ ತಳಹದಿಯ ಮೇಲೆ ಸೇವೆಯನ್ನು ಕೈಗೊಳ್ಳಬೇಕೆಂಬ ಇರಾದೆಯನ್ನು ಹೊಂದಿದ್ದ ಶ್ರೀ ಗೋಪಾಲಕೃಷ್ಣ ಗೋಖಲೆಯವರು 1905ರಲ್ಲಿಯೇ ಸರ್ವೆಂಟ್ಸ್ ಆಫ್ ಇಂಡಿಯಾ ಸೊಸೈಟಿಯನ್ನು ಆರಂಭಿಸಿದ್ದನ್ನು ನಾವು ನೆನೆಯಲೇಬೇಕಾಗಿದೆ. ಯಾಕೆಂದರೆ, ಸಮಾಜಕಾರ್ಯಕ್ಕೆ ಅದು ಸಮರ್ಥ ನೆಲೆಯನ್ನು ಕಲ್ಪಿಸಿತು. ಅಂಥ ಮಹನೀಯರ ಹೆಸರಿನಲ್ಲಿರುವ ಈ ಸಾರ್ವಜನಿಕ ವಿಚಾರ ಸಂಸ್ಥೆಯನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದ ಮಹಾ ಮೇಧಾವಿ, ರಾಷ್ಟ್ರ ಚಿಂತಕ, ಸಾರ್ವಜನಿಕ ಹಿತ ಪ್ರತಿಪಾದಕ ಡಾ.ಡಿ.ವಿ. ಗುಂಡಪ್ಪನವರನ್ನು ನಾನು ಪ್ರಪ್ರಥಮವಾಗಿ ನೆನೆಯುತ್ತೇನೆ. ನನ್ನೀ ಉಪನ್ಯಾಸವು ನ್ಯಾಯಮೂರ್ತಿ ಮತ್ತು ಮಹಾ ಸಾತ್ತ್ವಿಕ ಶ್ರೀ ನಿಟ್ಟೂರು ಶ್ರೀನಿವಾಸ ರಾವ್ ಇವರ ಜ್ಞಾಪಕದಲ್ಲಿ ನಡೆಯುತ್ತಿದೆ. ಆ ದೊಡ್ಡವರನ್ನು ನಾನು ಗೌರವಪೂರ್ವಕವಾಗಿ ನೆನೆಯುತ್ತೇನೆ. ಡಾ. ಗುಂಡಪ್ಪನವರಿಗೂ, ನ್ಯಾಯಮೂರ್ತಿ ನಿಟ್ಟೂರು ಅವರಿಗೂ ಗೋಖಲೆಯವರು ಮತ್ತು ಗಾಂಧಿಯುವರು ಪ್ರಿಯರಾದವರು. ಜೊತೆಗೆ ಆ ಇಬ್ಬರಿಗೂ ಸಮಾಜಕಾರ್ಯದಲ್ಲಿ ಆಸಕ್ತಿ ಇದ್ದದ್ದು ನಮ್ಮೆಲ್ಲರಿಗೂ ಪರಿಚಿತವೇ. ಈ ಸಂರ್ದದಲ್ಲಿ ಈ ನಾಲ್ವರನ್ನು ನಾನು ಹೃತ್ಪೂರ್ವಕ ನೆನೆಯುತ್ತೇನೆ. ಪೀಠಿಕೆ:
ಭಾರತಕ್ಕೆ ಖ್ಯಾತಿ ತಂದಿರುವ ಹಲವಾರು ಹೆಮ್ಮೆಗಳಲ್ಲಿ ಕರ್ನಾಟಕದ ಕೋಲಾರ ಚಿನ್ನದಗಣಿ ಅತ್ಯಂತ ಪ್ರಮುಖವಾದುದು. ಭಾರತದ ಒಟ್ಟಾರೆ ಚಿನ್ನದ ಉತ್ಪಾದನೆಯಲ್ಲಿ ಅತಿ ಹೆಚ್ಚು ಉತ್ಪಾದನೆಯಾಗುತ್ತಿದುದು ಕೋಲಾರದ ಚಿನ್ನದ ಗಣಿಯಿಂದ. ಅಷ್ಟು ಮಾತ್ರವಲ್ಲ ಜಾಗತಿಕ ಮಟ್ಟದಲ್ಲಿ ಸಹ ಕೋಲಾರ ಚಿನ್ನದ ಗಣಿ ಅತ್ಯಂತ ಪ್ರಮುಖವಾದುದ್ದು. ಒಂದು ಘಟನೆ. 1940 ರಲ್ಲಿ ಗಾಂಧೀಜಿ ವೈಯುಕ್ತಿಕ ಸತ್ಯಾಗ್ರಹ ಆರಂಭಿಸಿದ್ದರು. ಕಾಂಗ್ರೆಸ್ನ ಕರ್ನಾಟಕ ಶಾಖೆ ಕಾರ್ಯದರ್ಶಿಯಾಗಿದ್ದ ಶಂಕರ ಕುರ್ತಕೋಟಿಯವರು ರಾಜ್ಯದ ಐದು ನೂರು ಸತ್ಯಾಗ್ರಹಿಗಳ ಪಟ್ಟಿಯೊಂದಿಗೆ ಗಾಂಧೀಜಿಯವರ ಅನುಮತಿ ಪಡೆಯಲು ವಾರ್ಧಾ ಆಶ್ರಮಕ್ಕೆ ತೆರಳಿದ್ದರು. ಹಿಂತಿರುಗುವ ಮುನ್ನ ಗಾಂಧೀಜಿಯವರ ಭೇಟಿ ಸಾಧ್ಯವಾಯಿತು.
ಭಾರತದ ಸಂಸ್ಕೃತಿ ಶ್ರೀಮಂತವಾಗಿತ್ತು, ಸನಾತನ ಧರ್ಮವು ಶ್ರೇಷ್ಠತೆಯಿಂದ ಕೂಡಿತ್ತು. ಭವ್ಯ ಪರಂಪರೆಯ ಹಿನ್ನೆಲೆಯನ್ನು ಹೊಂದಿತ್ತು. ಗುಪ್ತರ ಕಾಲ ಸುವರ್ಣಯುಗವಾಗಿತ್ತು. ವಿಜಯನಗರ ಅರಸರ ಕಾಲದಲ್ಲಿ ಚಿನ್ನ ಬೆಳ್ಳಿ, ಮುತ್ತು ರತ್ನಗಳನ್ನು ಬೀದಿಗಳಲ್ಲಿ ರಾಶಿ ರಾಶಿಯಾಗಿಟ್ಟು ಮಾರಾಟ ಮಾಡುತ್ತಿದ್ದರು, ಎಂಬಿತ್ಯಾದಿ ಇತಿಹಾಸದ ನೆನಪುಗಳ ಅರಿವಿದ್ದವರಿಗೆ ದೇಶದ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಅಸಹ್ಯಮೂಡಿಸದೆ ಇರದು. ಇತಿಹಾಸದ 3000 ವರ್ಷದಲ್ಲಿ ಗ್ರೀಕರು, ಟರ್ಕರು, ಪೋರ್ಚುಗೀಸರು, ಫ್ರೆಂಚರು, ಡಚ್ಚರು ಭಾರತದ ಮೇಲೆ ದಾಳಿ ಮಾಡಿ ಸಂಪತ್ತು ಲೂಟಿಮಾಡಿ ನಮ್ಮನ್ನು ಮಾನಸಿಕವಾಗಿ ಅವರ ಸಂಸ್ಕೃತಿ ಪದ್ಧತಿಗಳ ದಾಸರನ್ನಾಗಿಸಿದರು. ಆ ಸಂಸ್ಕೃತಿಯ ಅಂದಾನುಕರಣೆಯಲ್ಲಿ ನಾವುಗಳು ನಮ್ಮ ನಮ್ಮ ಜವಾಬ್ದಾರಿಗಳನ್ನು ಮರೆತು ವರ್ತಿಸುತಿದ್ದೇವೆ.
ಪಾರಕ್ಕ ಹಾಸಿಗೆ ಹಿಡಿದಾಳಂತೆ ಪಾರವ್ವನ ಕೈ ಕಾಲು ಬಾತಾವಂತೆ ಪಾರಿ ಇನ್ನೇನ ಉಳಿಯಾಂಗ ಕಾಣೂದಿಲ್ಲಂತ ಸುದ್ದಿ ಚಿತ್ರ-ವಿಚಿತ್ರ ರೂಪ ತಳೆದು ಮಣ್ಣೂರಿನ ತುಂಬ ಸುಳಿದಾಡಿತು. ಕಣ್ಣಿಂದ ನೋಡಿದವರಿಗಿಂತ ಹೆಚ್ಚಾಗಿ ವರ್ಣರಂಜಿತವಾಗಿ ಬಣ್ಣಿಸಿ ಮಾತನಾಡಿದರು. ಊರಿನ ಗಂಡು-ಹೆಣ್ಣು ಮಕ್ಕಳೆಲ್ಲ, ಮನಿಷ್ಯಾ ಅಂದಮ್ಯಾಲೆ ಜಡ್ಡು ಜಾಪತ್ರಿ ಬರೂವ. ಹುಟ್ಟಿದವರು ಸಾಯೂವವರ. ಆದರ ಪಾರವ್ವಗ ಜಡ್ಡಾತು ಅಂದರ ನಂಬಾಕ ಆಗಾಕಿಲ್ಲ ಎಂದು ಒಳಗೇ ತಳಮಳಿಸಿದರು ಕೆಲವರು. ಈಟ ದಿನಾ ಮೆರದಾಡಿ ಕಡೀಕ ಬಕಬಾರ್ಲೆ ಬಿದ್ಲಲ್ಲ ಎಂದು ಒಳಗೊಳಗೇ ಹಿಗ್ಗಿ ಹಿರೇಕಾಯಾಗಿ ಹಾಲು ಕುಡಿದವರೂ ಹಲವರಿದ್ದರು ಮಣ್ಣೂರಿನಲ್ಲಿ.
ಕಳೆದ ಕೆಲ ದಶಕಗಳಲ್ಲಿ ಕುಟುಂಬವೆಂಬ ಸಂಸ್ಥೆ, ಅದರ ರಚನೆ ಮತ್ತು ಕಾರ್ಯ ವಿಧಾನಗಳಲ್ಲಿ ಮಹತ್ವದ ಬದಲಾವಣೆಗಳನ್ನು ಕಾಣುತ್ತಾ ಇದೆ. ಅದರ ಬಹುತೇಕ ಪಾರಂಪರಿಕ ಕಾರ್ಯಗಳನ್ನು ಮಕ್ಕಳು ಹೆರುವುದು, ಅವುಗಳನ್ನು ಪಾಲನೆ ಮಾಡುವುದು ಬಿಟ್ಟರೆ ಹೊರಗಣ ಸೇವಾ ಸಂಸ್ಥೆಗಳು ವಹಿಸಿಕೊಂಡಿವೆ. ಉದಾಹರಣಾರ್ಥವಾಗಿ, ಶಾಲೆ, ಮಾರುಕಟ್ಟೆ, ಸಮೂಹ ಮಾಧ್ಯಮಗಳು ಇತ್ಯಾದಿ. ನಗರೀಕರಣ, ಔದ್ಯಮೀಕರಣ ಮುಂತಾದ ಆಧುನಿಕ ಪ್ರಕ್ರಿಯೆಗಳು ಕುಟುಂಬದ ಪಾರಂಪರಿಕ ಸಂಘಟನೆ ಹಾಗೂ ಸ್ಥಿರತೆಯನ್ನು ಬಹುಮಟ್ಟಿಗೆ ಅಸ್ಥಿರಗೊಳಿಸಿವೆ. ತತ್ಪರಿಣಾಮವಾಗಿ, ಕುಟುಂಬವು ಹಲವಾರು ಸಾಮಾಜಿಕ, ಮಾನಸಿಕ ಹಾಗೂ ಆರ್ಥಿಕ ವಿವಾದಾತ್ಮಕ ವಿಷಯಗಳನ್ನು ಹುಟ್ಟು ಹಾಕಿದೆ. ಉದಾಹರಣಾರ್ಥವಾಗಿ, (ಇಂದು) ಮಕ್ಕಳಲ್ಲಿ ಹಾಗೂ ಯುವಕರಲ್ಲಿ ಅಪಮಾರ್ಗದ ಕಡೆಗಿನ ಸೆಳೆತವನ್ನು ಹೆಚ್ಚು ಪ್ರಮಾಣದಲ್ಲಿ ಕಾಣುತ್ತೇವೆ. ತಮ್ಮ ಸ್ವಕೀಯತೆಯನ್ನು ಉದ್ಘೋಷಿಸುವ, ಸ್ಥಾಪಿಸಬಯಸುವ ಪ್ರಯತ್ನದಲ್ಲಿ, ತರುಣ ತರುಣಿಯರು ಕೌಟುಂಬಿಕ ರೂಢಿಗಳನ್ನು, ಸಾಂಪ್ರದಾಯಿಕ ಕಟ್ಟಳೆಗಳನ್ನು ಮೀರುತ್ತಿದ್ದಾರೆ. ಮಾದಕ ಪದಾರ್ಥಗಳ ವ್ಯಸನ, ಮದ್ಯಸೇವನೆ, ದಾಂಪತ್ಯ ಜೀವನದಲ್ಲಿ ಬಿರುಕು, ಗಂಡಹೆಂಡಿರು ಬೇರಾಗುವಿಕೆ, ವಿಮುಖರಾಗುವಿಕೆ ಮತ್ತು ವಿವಾಹ-ವಿಚ್ಛೇದನ, ಪ್ರೇಮವಿವಾಹ, ದಿನನಿತ್ಯದ ಸಂಸಾರದಲ್ಲಿ ನೀಡಲ್ಪಡುವ ಹಿಂಸೆ ಮತ್ತು ವಯೋವೃದ್ಧರ ದುರ್ಲಕ್ಷ್ಯ ಇವುಗಳು ಆಧುನಿಕ ಸಮಾಜದಲ್ಲಿ ಕುಟುಂಬದ ಒಡೆದು ಕಾಣುವ ಲಕ್ಷಣಗಳಾಗುತ್ತವೆ.
ಬಿಡಿಎ ಪ್ಲ್ಯಾನ್ನಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ದೂರು ನೀಡಲಾಗಿ ನಗರ ಯೋಜನಾ ವಿಭಾಗದವರು ಬಿಡಿಎ ಪ್ಲ್ಯಾನ್ನಲ್ಲಿರುವ ಲೋಪದೋಷಗಳನ್ನು ಒಪ್ಪಿಕೊಂಡು ಸರಿಪಡಿಸಲು ಸರ್ವೆ ಪ್ರಾಧಿಕಾರದ ಭೂಮಾಪಕರಿಗೆ ವಹಿಸಿರುತ್ತಾರೆ. ಸುಮಾರು 3 ತಿಂಗಳು ಕಳೆದರೂ ಈ ಕುರಿತು ಯಾವುದೇ ಕ್ರಮ ಭೂಮಾಪಕರು ತೆಗೆದುಕೊಂಡಿರುವುದಿಲ್ಲ. ಇನ್ನು ಎಷ್ಟು ದಿನ ಕಾಯಬೇಕು ? ಇಲ್ಲಿ ಅಧಿಕಾರಿಗಳ ಮಂದಗತಿಯ ಕೆಲಸ ಸಾರ್ವಜನಿಕರಿಗೆ ಆಗುವ ತೊಂದರೆ ಅರ್ಥೈಸಿಕೊಂಡು ಕೆಲಸ ನಿರ್ವಹಿಸಿದರೆ ಒಳಿತು.
ಸಮಾಜಕಾರ್ಯಕರ್ತರು ಸಮುದಾಯಗಳ ರಚನೆ, ಕ್ರಿಯಾಶೀಲತೆ, ಸಮುದಾಯದ ವೈಲಕ್ಷಣಗಳು, ಸಮುದಾಯದ ಪ್ರಕಾರಗಳನ್ನು ತಿಳಿದುಕೊಂಡ ನಂತರ ಸಮುದಾಯಗಳಲ್ಲಿರುವ ಸಮಸ್ಯೆಗಳ ಬಗ್ಗೆಯೂ ಸ್ವಲ್ಪಮಟ್ಟಿಗೆ ತಿಳಿಯುವುದು ಒಳಿತು. ಇಲ್ಲಿ ಪಟ್ಟಿ ಮಾಡಿದ ಸಮಸ್ಯೆಗಳು ಎಲ್ಲಾ ಸಮುದಾಯಗಳಲ್ಲಿ ಇರುತ್ತವೆ ಎಂದು ಹೇಳಲಾಗುವುದಿಲ್ಲ. ಆದರೆ ಅಂತಹ ಸಮಸ್ಯೆಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ಇದ್ದರೆ, ಸಮಾಜಕಾರ್ಯಕರ್ತರು ತಾವು ಕೆಲಸ ಮಾಡುವ ಸಮುದಾಯಗಳಲ್ಲಿ ಸಮಸ್ಯೆ ಎದುರಾದಾಗ, ವಿಚಲಿತಗೊಳ್ಳದೆ, ತಮ್ಮ ಕಾರ್ಯವೈಖರಿಯನ್ನು ರೂಪಿಸಿಕೊಳ್ಳಲು ಸಹಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ, ನಗರ ಮತ್ತು ಬುಡಕಟ್ಟು ಸಮುದಾಯಗಳ ಕೆಲವು ಆಯಾ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಲಾಗಿದೆ.
ಅರ್ಕಾವತಿ ನದಿ ಪುನಶ್ಚೇತನದ ಕನಸಿಗೆ 14 ವರ್ಷಗಳಾದವು. 2003ರ ಏಪ್ರಿಲ್ 22 ರಂದು ಡಾ.ರಾಜೇಂದ್ರ ಸಿಂಗ್ ಅವರ ಕರ್ನಾಟಕ ಜಲಚೇತನ ಯಾತ್ರೆಯ ಭಾಗವಾಗಿ ದೊಡ್ಡಬಳ್ಳಾಪುರದ ರಾಮಾಂಜನೇಯ ಚತ್ರದಲ್ಲೊಂದು ದೊಡ್ಡ ಸಭೆ ನಡೆಯಿತು. ಆಗಲೇ ಜಲ ಸಂರಕ್ಷಣೆಯಲ್ಲಿ, ಕೈಗಾರಿಕಾ ಮಾಲಿನ್ಯ ತಡೆಯುವ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ದೊಡ್ಡಬಳ್ಳಾಪುರದ ಜನತೆಗೆ ಜಲಸಂರಕ್ಷಣೆಯ ಕಾರ್ಯವು ಇಡೀ ನದಿ ಜಲಾನಯನದಲ್ಲಿ ನಡೆಯಬೇಕು, ಮಳೆ ನೀರನ್ನು ಭೂಮಿಗೆ ಇಂಗಿಸಿ ಜಲಚೇತನ ಮಾಡಬೇಕು ಎಂದು ಸಿಂಗ್ ಅವರು ಕರೆ ಕೊಟ್ಟರು. ಅಂದು ಆರಂಭವಾದ ಪುನಶ್ಚೇತನದ ಪ್ರಯತ್ನಕ್ಕೆ ಮುಂದೆ ಸರಕಾರವೂ ಕೂಡ ಸ್ಪಂದಿಸುವಂತೆ ಆಯಿತು. ಆದರೆ ಒಂದು ಹೆಜ್ಜೆ ಮುಂದಿಟ್ಟ ಸರಕಾರ ಎರಡು ಹೆಜ್ಜೆ ಹಿಂದೆ ಇಟ್ಟಿದೆ. ಆದರೆ ನಾಗರೀಕರು ಸುಮ್ಮನಿರುವಂತಿಲ್ಲ. ನದಿ ಪುನಶ್ಚೇತನ ಸಾಧ್ಯ ಎಂಬುದು ಹಲವರ ನಂಬಿಕೆ. ಹಾಗೆ ನಂಬಲೇಬೇಕು. ಯಾಕೆಂದರೆ ಜೀವನಕ್ಕೆ ನೀರು ಬೇಕೆ ಬೇಕು ಎಂದಾದರೆ ಜಲವನ್ನು, ಜಲ ಮೂಲವನ್ನು ಉಳಿಸಲೇಬೇಕಲ್ಲವೇ!
ಭಾರತದಲ್ಲಿ ಸಮಾಜಕಾರ್ಯ ಶಿಕ್ಷಣ ಪ್ರಾರಂಭವಾಗಿ ಎಂಟು ದಶಕಗಳೇ ಸಂದವು. 1936 ಮುಂಬಯಿಯ ಟಾಟಾ ಸಂಸ್ಥೆಯಲ್ಲಿ ಪ್ರಾರಂಭವಾದ ಸಮಾಜಕಾರ್ಯ ಶಿಕ್ಷಣ ಇಂದು ದೇಶದ ಎಲ್ಲಾ ರಾಜ್ಯಗಳಿಗೂ ತಲುಪಿದೆ. ಪ್ರಾರಂಭದ ಹಂತದಲ್ಲಿ ಎಲ್ಲವೂ ವಿದೇಶಿಮಯವಾಗಿತ್ತು ಈ ಸಮಾಜಕಾರ್ಯದ ಶಿಕ್ಷಣ ; ಪಠ್ಯಕ್ರಮ, ಪುಸ್ತಕಗಳು, ರಚನೆ ಮತ್ತು ಸ್ವರೂಪ ಹಾಗೂ ಅಧ್ಯಾಪಕರೂ ಕೂಡಾ. ಈ ಕಳೆದ ಎಂಟು ದಶಕಗಳಲ್ಲಿ ಹಲವಾರು ಪ್ರಗತಿಪರ ಬದಲಾವಣೆಗಳು ಸಮಾಜಕಾರ್ಯ ಶಿಕ್ಷಣದಲ್ಲಿ ಕಾಣಸಿಗುತ್ತಿವೆ. ಆದರೂ ಕೂಡ ಹೇಳಿಕೊಳ್ಳುವಂತಹ ಗುಣಾತ್ಮಕ ಪರಿವರ್ತನೆ ತರುವಲ್ಲಿ ನಾವೆಲ್ಲರೂ ವಿಫಲರಾಗಿದ್ದೇವೆ ಎಂದರೆ ಅತಿಶಯೋಕ್ತಿಯಾಗಲಾರದು.
ಮಕ್ಕಳ ನ್ಯಾಯ ಕಾಯಿದೆ ಈ ಸಮಾಜದ ಪ್ರತಿಯೊಬ್ಬರಿಗೂ ಸಂಬಂಧಿಸಿದ್ದು. ಮಕ್ಕಳೊಡನೆ ನವು ಒಡನಾಡುತ್ತಿದ್ದರೆ ನಿಮಗೆ ಈ ಕಾಯಿದೆಯ ಮೂಲ ಅಂಶಗಳ ಪರಿಚಯವಿರಲೇಬೇಕು. ಮಕ್ಕಳು, ಕುಟುಂಬ, ಮಕ್ಕಳೊಡನೆ ಕೆಲಸ ಮಾಡುವ ಸಂಸ್ಥೆಗಳು, ಸಂಸ್ಥೆಗಳ ದಾಖಲೆ, ಉಸ್ತುವಾರಿ ಮತ್ತು ನಿಯಂತ್ರಣ; ವಿವಿಧ ಹಿನ್ನೆಲೆಯ ಮಕ್ಕಳ ಪೋಷಣೆ, ಆರೈಕೆ, ರಕ್ಷಣೆ, ಅವಶ್ಯಕತೆಗಳ ಪೂರೈಕೆ, ಅನಾಥರು, ಮನೆಯನ್ನು ತೊರೆದವರು, ಓಡಿಸಲ್ಪಟ್ಟವರು, ಹೆತ್ತವರಿಂದ ತೊರೆಯಲ್ಪಟ್ಟವರು, ಕಾನೂನಿನೊಡನೆ ಸಂಘರ್ಷಕ್ಕೆ ಬಿದ್ದ ಮಕ್ಕಳು, ಕಾನೂನಿನ ಸಂಪರ್ಕಕ್ಕೆ ಬಂದ ಮಕ್ಕಳು ಹಾಗೂ ಇತರರಿಂದ ಹಿಂಸೆ, ತೊಂದರೆ, ಶೋಷಣೆ, ಅಪರಾಧಕ್ಕೀಡಾದ ಮಕ್ಕಳು, ಹೀಗೆ ವಿವಿಧ ಪರಿಸ್ಥಿತಿಗಳಿಗೆ ಅನುಗುಣವಾಗಿ 18 ವರ್ಷದೊಳಗಿನ ಮಕ್ಕಳಿಗೆ ಭಾರತ ಸರ್ಕಾರ ನೀಡುವ ಸಾಂವಿಧಾನಿಕ ರಕ್ಷಣೆಯ ಅನಾವರಣ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯಿದೆ 2015. [ಗಮನಿಸಿ: ಈ ಕಾಯಿದೆಯನ್ನು ಹೊರಡಿಸುವ ಮೂಲಕ ಈ ಹಿಂದೆ ಇದ್ದ ಮಕ್ಕಳ ನ್ಯಾಯ ಕಾಯಿದೆಗಳನ್ನು (1986, 2000) ರದ್ದುಪಡಿಸಲಾಗಿದೆ].
ಪ್ರದೇಶದ ಸಮಗ್ರ ಅಭಿವೃದ್ಧಿ ಮತ್ತು ಯೋಜನೆ: ಸಂಸದರ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾದ ಹಾರೋಬೆಳವಾಡಿ ಗ್ರಾಮ.....7/24/2017 (Integrated Area Development and Planning: A Geographical Study of Harobelavadi Gram Panchayath, selected for Sansad Adarsh Gram Yojana (SAGY)) ಪೀಠಿಕೆ:
ಆದರ್ಶ ಗ್ರಾಮದ ಪರಿಕಲ್ಪನೆ ಹೊಸದೇನೂ ಅಲ್ಲ, ಪ್ರಾಚೀನ ಕಾಲದಿಂದಲೂ ಗ್ರಾಮಗಳನ್ನಾಗಲೀ, ರಾಜ್ಯವನ್ನಾಗಲೀ ಆದರ್ಶವಾಗಿಸುವ ಗೀಳು ರಾಜ-ಮಹಾರಾಜರಿಂದ ಸರಪಂಚರವರೆಗೂ ವ್ಯಾಪಿಸಿಕೊಂಡಿದೆ. ಮೌಲ್ಯಾಧಾರಿತ ಸಮಾಜ ಮತ್ತು ವಾತಾವರಣಗಳ ನಿರ್ಮಾಣಕ್ಕಾಗಿ ಮಾನವ ಸಂಪನ್ಮೂಲದ ಬಂಡವಾಳ, ಸಾಮಾಜಿಕ ಬಂಡವಾಳ ಮತ್ತು ಭೌತಿಕ ಬಂಡವಾಳಗಳ ಹೂಡುವಿಕೆ ಅನಿವಾರ್ಯವಾಗುತ್ತದೆ. ಆಯಾ ಕಾಲಮಾನಗಳಲ್ಲಿ ಮಿಂಚಿ ಮಾಯವಾದ ಅನೇಕ ನೇತಾರರು ಈ ಪ್ರಯತ್ನದಲ್ಲಿ ಕೆಲ ಮಟ್ಟಿನ ಸಾಧನೆಗಳನ್ನು ಮಾಡಿ ಹೆಸರುವಾಸಿಯಾದರು, ಇನ್ನು ಕೆಲವರು ಎಲೆಯ ಮರೆಯ ಕಾಯಿಯಂತೆ ತಮ್ಮ ಅಮೋಘ ಕೊಡುಗೆಯನ್ನು ಸಮಾಜಕ್ಕೆ ನೀಡಿದರು. ಕೆಲವರು ಕನಸಿನ ಸೌಧಗಳನ್ನು ಕಟ್ಟಿ ಕಣ್ಮರೆಯಾದರು. ಅಂಥ ನೇತಾರರಲ್ಲಿ ಮಹಾತ್ಮಾ ಗಾಂಧೀಜಿಯೂ ಒಬ್ಬರು. ತಂತ್ರಜ್ಞಾನಗಳ ಆವಿಷ್ಕಾರ ಪ್ರಾರಂಭವಾಗಿದ್ದರೂ ಭಾರತದಲ್ಲಿ ಲಭ್ಯವಿರುವ ಅಗಾಧ ಪ್ರಮಾಣದ ಮಾನವ ಸಂಪನ್ಮೂಲ, ಸಾಂಪ್ರದಾಯಿಕ ವ್ಯವಸಾಯ, ಸಂಪನ್ಮೂಲಗಳಾಧಾರಿತ ಗುಡಿ-ಕೈಗಾರಿಕೆಗಳ ಪ್ರಾಮುಖ್ಯತೆಯನ್ನರಿತೇ ಇರಬೇಕು, ರಾಮ ರಾಜ್ಯದ ಕನಸನ್ನು ಗ್ರಾಮ್ ಸ್ವರಾಜ್ದ ಹೆಸರಿನಲ್ಲಿ ಕಂಡಿದ್ದರು. ಆದರೆ ಅದನ್ನು ನನಸು ಮಾಡಲು ತದನಂತರದ ಎಷ್ಟೋ ರಾಜಕೀಯ ಧುರೀಣರು ಪ್ರಯತ್ನ ಪಟ್ಟು ಅಲ್ಲಲ್ಲಿ ಕೆಲ ಸಣ್ಣ-ಪುಟ್ಟ ಮಾದರಿಗಳನ್ನು ಮೊಳಕೆಯೊಡೆಸಿದರೂ ಪೂರ್ಣ ಪ್ರಮಾಣ ತಲುಪುವಷ್ಟರಲ್ಲಿಯೇ ಪಾಶ್ರ್ವ ಪೀಡಿತವಾಗಿ ಬಿಡುತ್ತವೆ. ಅದಕ್ಕೆ ಕಾರಣ ಹುಡುಕ ಹೋದರೆ ಧುರೀಣರಲ್ಲಿ ಕುಂದಿದ ಆಸಕ್ತಿ, ಸಮುದಾಯದಲ್ಲಿನ ಸಹಕಾರ ಮನೋಭಾವನೆಯ ಕೊರತೆ, ಕಾರ್ಯಾಂಗದ ನಿಷ್ಠೆಯ ಕೊರತೆ, ಆಧುನೀಕರಣದ ತುಡಿತ, ಸಂಪ್ರದಾಯ, ಸಂಸ್ಕೃತಿ, ಸಂಸ್ಕಾರಗಳ ಅನಾದರಣೆ, ಅರ್ಥಕಳೆದುಕೊಂಡಿರುವ ರಾಜಕೀಯದ ಪ್ರವೇಶ ಇತ್ಯಾದಿಗಳು ವೇದ್ಯವಾಗುತ್ತವೆ, ಒಟ್ಟಾರೆ ಮೌಲ್ಯಗಳ ಶಿಥಿಲೀಕರಣವೇ ದೊಡ್ಡ ಸಮಸ್ಯೆಯಾಗಿ ಗೋಚರಿಸುತ್ತದೆ. ರೈತರ ಆತ್ಮಹತ್ಯೆಗಳು: ನಿಯಂತ್ರಣದಲ್ಲಿ ವಿವಿಧ ತಜ್ಞರ ಪಾತ್ರ ಮತ್ತು ಆತ್ಮಹತ್ಯೆ ನಿಯಂತ್ರಣದಲ್ಲಿ ರೈತ ಚೇತನ.....7/24/2017 ತಿರುಳು:
ಭಾರತದಲ್ಲಿ ಆಗುತ್ತಿರುವ ರೈತರ ಆತ್ಮಹತ್ಯೆಗಳು, ಪ್ರಮುಖ ಕಾರಣಗಳು, ಚಿಕಿತ್ಸೆ ಮತ್ತು ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಲ್ಲಿ ವಿವಿಧ ತಜ್ಞರ ಪಾತ್ರಗಳ ಬಗ್ಗೆ ಗಮನಹರಿಸುವ ನಿಟ್ಟಿನಲ್ಲಿ ಈ ಲೇಖನ. ಕೃಷಿ ವಿಶ್ವವಿದ್ಯಾಲಯ, ಧಾರವಾಡ ಮತ್ತು ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್), ಧಾರವಾಡ ಸಹಯೋಗದೊಂದಿಗೆ ಪ್ರಾರಂಭಿಸಿದ ರೈತ ಚೇತನ ಯೋಜನೆ ಯನ್ನು ರೈತರ ಆತ್ಮಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದಿನಾಂಕ 23/07/2015 ರಂದು ಪ್ರಾರಂಭಿಸಲಾಯಿತು. ಕರ್ನಾಟಕದಲ್ಲಿ ಈ ವಿನೂತನ ಯೋಜನೆಯಿಂದ ಅನೇಕ ರೈತರು ಬೆಳೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡರು. ಕೆಲವು ರೈತರ ಆತ್ಮಹತ್ಯೆಗಳನ್ನು ಈ ಯೋಜನೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ತಡೆಗಟ್ಟುವ ನಿಟ್ಟಿನಲ್ಲಿ ಯಶಸ್ವಿಯಾದರು. ಕೆಲವು ರೈತರ ಹಣಕಾಸಿನ ಸಮಸ್ಯೆಗಳಿಗೆ ವಿವಿಧ ಇಲಾಖೆಗಳ ಸಹಕಾರದಿಂದ ಹಣಕಾಸಿನ ನೆರವನ್ನು ನೀಡಲಾಯಿತು. ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಲ್ಲಿ ವಿವಿಧ ತಜ್ಞರ ಪಾತ್ರ ಮುಖ್ಯವಾಗಿರುತ್ತದೆ. ಕೃಷಿ ತಜ್ಞರು, ಮನೋರೋಗ ತಜ್ಞರು, ನೈದಾನಿಕ ಮನಶಾಸ್ತ್ರಜ್ಞರ, ಮನೋವೈದ್ಯಕೀಯ ಸಮಾಜಕಾರ್ಯಕರ್ತರ ಪಾತ್ರ ಮತ್ತು ಕೃಷಿ ಸಂಶೋಧಕರ ಪಾತ್ರ ಬಹುಮುಖ್ಯವಾಗಿರುತ್ತದೆ. ಈ ಎಲ್ಲಾ ತಜ್ಞರ ಸಂಯೋಜನೆಯೊಂದಿಗೆ ರೈತ ಚೇತನ ಯೋಜನೆಯು ಕರ್ನಾಟಕದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವುದರ ಬಗ್ಗೆ ಈ ಲೇಖನದಲ್ಲಿ ವಿವರಿಸಲಾಗಿದೆ. ಆತ್ಮಹತ್ಯೆಗಳ ಬಗ್ಗೆ ವರದಿಯನ್ನು ಮಾಡುವಾಗ ಸುದ್ದಿ ಮತ್ತು ದೃಶ್ಯಮಾಧ್ಯಮದವರ ಪಾತ್ರ ಪ್ರಮುಖವಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳಂತೆ ಆತ್ಮಹತ್ಯೆ ಕುರಿತು ವರದಿಯನ್ನು ಮಾಡುವ ಬಗ್ಗೆ ಇರುವ ಮಾರ್ಗಸೂಚಿಗಳ ಬಗ್ಗೆ ಈ ಲೇಖನದಲ್ಲಿ ವಿವರಿಸಲಾಗಿದೆ. ಸಮುದಾಯ ಎಂದರೆ ಒಂದು ಜನಸಮೂಹ. ಅವರು ಒಂದು ಭೌಗೋಲಿಕ ಪ್ರದೇಶದಲ್ಲಿ ಒಕ್ಕಟ್ಟಾಗಿ ಜೀವಿಸುತ್ತಾರೆ. ಆ ಸಮುದಾಯದ ಎಲ್ಲಾ ಸದಸ್ಯರಿಗೆ ಅನ್ವಯವಾಗುವಂತೆ, ತಮ್ಮದೇ ಆದ ಸಂಸ್ಕೃತಿ ಮತ್ತು ಆಚಾರ-ವಿಚಾರಗಳನ್ನು ಹೊಂದಿದವರಾಗಿರುತ್ತಾರೆ. ಅವುಗಳಿಗೆ ತಕ್ಕಂತೆ ಹಲವಾರು ಪದ್ಧತಿಗಳನ್ನು ಸೃಷ್ಟಿಸಿಕೊಂಡು, ಮೌಲ್ಯಗಳನ್ನು ರೂಢಿಸಿಕೊಂಡು, ಇತರರಿಗಿಂತ ಭಿನ್ನವಾದ ಒಂದು ಜೀವನಪದ್ಧತಿಯನ್ನು ರೂಪಿಸಿಕೊಂಡಿರುತ್ತಾರೆ. ಅವರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಲ್ಲಿ ಒಗ್ಗಟ್ಟನ್ನು ಪ್ರದರ್ಶಿಸುತ್ತಾರೆ. ತಮ್ಮ ಸಾಮೂಹಿಕ ಜೀವನಕ್ಕೆ ಒತ್ತುಕೊಟ್ಟು ಒಂದು ಶಾಶ್ವತತೆ-ಸ್ಥಿರತೆಯನ್ನು ಸ್ಥಾಪಿಸಿಕೊಂಡಿರುತ್ತಾರೆ. ತಮ್ಮ ಜನರ ಮೇಲೆ ಪ್ರತ್ಯಕ್ಷ-ಪರೋಕ್ಷ ನಿಯಂತ್ರಣವನ್ನು ಸಾಧಿಸಿಕೊಂಡಿರುತ್ತಾರೆ. ತಾವೆಲ್ಲಾ ಒಂದೇ ಗುಂಪಿನ, ಒಂದೇ ಜನಾಂಗದ ಸದಸ್ಯರು ಎಂಬ ಭಾವನಾತ್ಮಕ ಸಂಬಂಧವನ್ನು ಅಭಿವೃದ್ಧಿಪಡಿಸಿಕೊಂಡಿರುತ್ತಾರೆ. ಈ ಎಲ್ಲಾ ಅಂಶಗಳನ್ನು ಒಳಗೊಂಡಂತೆ ಒಂದು ರಾಚನಿಕ ವ್ಯವಸ್ಥೆಯನ್ನು ತಮ್ಮದನ್ನಾಗಿಸಿಕೊಂಡಿರುತ್ತಾರೆ. ಇದು ಒಂದು ಸಮುದಾಯದ ಪರಿಕಲ್ಪನೆ.
ನಾವೆಲ್ಲ ಭಾರತ ದೇಶದ ಪ್ರಜೆಗಳು. ಈ ನಮ್ಮ ದೇಶದಲ್ಲಿ ಭ್ರಷ್ಟಾಚಾರ, ಸಾಮಾಜಿಕ ಅನ್ಯಾಯ, ಸಾಮಾಜಿಕ ಅಸಮಾನತೆ. ನಮ್ಮ ಕಣ್ಣ ಮುಂದೆಯೇ ರಾಜರೋಷವಾಗಿ ನಡೆಯುತ್ತಿದ್ದರು ನಮಗೆ ಅದರ ಪರಿವೇ ಇಲ್ಲದೆ ಮೂಕ ಪ್ರೇಕ್ಷರಂತೆ ನೋಡುತ್ತಿರುವುದು ಮೂರ್ಖತನವೇ ಸರಿ. ಇಂದಿನ ಸರ್ಕಾರಿ ಶಾಲೆಯ ಬಗ್ಗೆ, ಸರ್ಕಾರಿ ಶಿಕ್ಷಕರಿಗೆ ಇರುವ ಕಾಳಜಿ ಬಗ್ಗೆ ಹೇಳ ತೀರದಷ್ಟು. ಅಂದರೆ, ಸರ್ಕಾರಿ ಸಂಬಂಳವನ್ನು ಪಡೆದು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡಿಸುವುದು ಸಾಮಾಜಿಕ ನ್ಯಾಯಕ್ಕೆ, ಸಾಮಾಜಿಕ ಸಮಾನತೆಗೆ ಧಕ್ಕೆ ತಂದಂತಲ್ಲವೇ?
ಮುನ್ನುಡಿ:-
ಅರ್ಪಿತಾಳ ಕಥೆಯಲ್ಲಿ ಸಮಾಜದಲ್ಲಿ ತುಂಬಾ ಹಿಂಸೆಗೊಳಪಟ್ಟ ಒಬ್ಬ ತಾಯಿಯ ಮಗನನ್ನು ದಂಪತಿಗಳು ದತ್ತು ತೆಗೆದುಕೊಂಡು ಆ ಮಗುವಿನ ಒಳ್ಳೆಯ ಭವಿಷ್ಯಕ್ಕೆ ದಾರಿಯಾದರು. ಇನ್ನೊಂದು ಮಗುವನ್ನು ದತ್ತು ತೆಗೆದುಕೊಂಡು ಹೆಚ್.ಐ.ವಿ ಇರಬಹುದು ಎಂದು ತಿಳಿದರೂ ಎದೆ ಗುಂದದೆ, ಮಗುವನ್ನು ತಿರಸ್ಕರಿಸದೆ, ಮತ್ತೆ ಒಮ್ಮೆ ಪರೀಕ್ಷೆ ಮಾಡಿಸಿ, ಪ್ರೀತಿಯ ಸೆಲೆ ಹರಿಸಿದರು. ಇದೇ ರೀತಿ ಹೆತ್ತ ತಾಯಂದಿರು ತ್ಯಜಿಸಿದ ಮಕ್ಕಳಿಗೆ ಇಂತಹ ಮನೆಯೇ ತೃಪ್ತಿಕರ. ಕುಟುಂಬದ ಪ್ರೀತಿ ಸಿಕ್ಕಿ ಅನಾಥರಾಗದೆ ಬೆಳೆದರೆ ಎಷ್ಟೋ ಮಕ್ಕಳು ಬೀದಿಯ ಪಾಲಾಗಲಾರರು ಅಲ್ಲವೆ? ಬಳ್ಳಾರಿ ಜಿಲ್ಲೆಯ ಇಂದಿನ ಸ್ಥಿತಿಯನ್ನು ಗಮನಿಸಿದಾಗ (ಈ ಜಿಲ್ಲೆಗೆ ಚಿತ್ರದುರ್ಗ, ತುಮಕೂರು ಜಿಲ್ಲೆಗಳನ್ನೂ ಸೇರಿಸಬಹುದು) ವರಕವಿ ಬೇಂದ್ರೆ ಅವರ ಗಂಗಾವತರಣ ಪದ್ಯದ ಈ ಅಭಿವ್ಯಕ್ತಿಯ ನೆನಪಾಗುತ್ತದೆ: ಅವತಾರವೆಂಬೆ ಅಧಃಪಾತವನ್ನೆ! ಸ್ವರ್ಗದ ಗಂಗೆಯು ತಪ್ಪು ಮಾಡಿ, ಶಾಪಗ್ರಸ್ತಳಾಗಿ ಭೂಮಿಗೆ ಕುಸಿದು ಬೀಳುತ್ತಾಳೆ. ಇದು ಆಕೆಗೆ ಆದ ಅಧಃಪಾತ. ಆದರೆ, ಗಂಗೆಯು ಭೂಮಿಗೆ ಇಳಿದು ಬಂದದ್ದು ಭೂಮಿಗೆ ಒಂದು ವರದಾನ ಒಂದು ಅವತಾರ. ಭಗೀರತನ ಪ್ರಯತ್ನವೂ ಇದರಲ್ಲಿ ಇದೆ ಎಂದು ಪೌರಾಣಿಕ ನಂಬುಗೆ. ತುಂಗಭದ್ರಾ ನದಿಯು ಹಂಪಿಯ ಹೊಳೆಯಾಗಿ ಹರಿಯುತ್ತಿದ್ದಾಳೆ. ಅನೇಕ ಚಿಕ್ಕ ದೊಡ್ಡ ಹಳ್ಳಗಳೂ ಹರಿಯುತ್ತವೆ. ಮಳೆಯು ಯಥೇಚ್ಛವಾಗಿಲ್ಲದಿದ್ದರೂ, ಭೂಮಿಯು ಫಲವತ್ತಾಗಿರುವುದರಿಂದ, ಸುರಿದ ನೀರನ್ನು ಜಾಣ್ಮೆಯಿಂದ ಬಳಸಿಕೊಂಡರೆ ಸಮೃದ್ಧ ಬೆಳೆ ತೆಗೆಯಬಹುದು. ಸೊಂಡೂರು-ಕೂಡ್ಲಿಗಿ ತಾಲ್ಲೂಕುಗಳಲ್ಲಿ ಅರಣ್ಯ ವಿಶಾಲವಾಗಿ ಹರಡಿಕೊಂಡಿದೆ. ಮೇಲ್ಭಾಗದ ಮಣ್ಣು ಫಲವತ್ತಾಗಿದ್ದರೆ, ಭೂಮಿಯ ಆಳದಲ್ಲಿ ಕಬ್ಬಿಣದಂಥ ಖನಿಜ ಸಂಪತ್ತು ಹೇರಳವಾಗಿದೆ. ಇತಿಹಾಸ ಪೂರ್ವದಲ್ಲಿಯೇ ಜನವಸತಿಗೆ ಹೆಸರಾಗಿದ್ದ ಈ ಭೂಪ್ರದೇಶದಲ್ಲಿ ವಿಜಯನಗರದಂಥ ಮಹಾಸಾಮ್ರಜ್ಯವು ಸ್ಥಾಪನೆಯಾಗಿ ಜಗತ್ತಿಗೇ ಪ್ರಸಿದ್ಧವಾಯ್ತು. ಹಂಪಿ, ಬಾಗಳಿ, ಕೋಗಳಿ ಮುಂತಾದ ಕಡೆ ವಾಸ್ತುಶಿಲ್ಪ, ನವುರು ಕೆತ್ತನೆಗಳ ಸುಪ್ರಸಿದ್ಧ ದರ್ಶನೀಯ ಸ್ಥಳಗಳು ವಿಜೃಂಭಿಸಿದವು. ವಿರೂಪಾಕ್ಷ ದೇವನಂತೂ ಜಗತ್ತಿನ ಬೆಳಕೇ ಆಗಿದೆ. ಹರಿಹರ ರಾಘವಾಂಕರಂಥ ಮೇರು ಕವಿಗಳ, ನೂರೊಂದು ವಿರಕ್ತರ ಬೀಡು ಈ ಪ್ರದೇಶವಾಗಿತ್ತು.
ಮದುವೆಗೆ ಗೆಳತಿಯ ಆಮಂತ್ರಣ ಬಂದಿತ್ತು. ಆ ಮದುವೆ ಶುಭದಿನ ಹೊಸ ಜಗತ್ತೊಂದನ್ನು ಚಿತ್ರಪಟದಲ್ಲಿ ಮುದ್ರೆಯೊತ್ತುತ್ತದೆ ಅಂತ ತಿಳಿದಿರಲಿಲ್ಲ. ಜೀವವಿರುವ ಪ್ರತಿಯೊಂದು ಜೀವಿಗೂ ತನ್ನದೇ ಆದ ಕವಚವೊಂದು ಬದ್ಧತೆಯನ್ನು ನಿರ್ಮಿಸಿ ಕೊಡುತ್ತದೆ ಅಂತ ಗೊತ್ತಿತ್ತು. ಅದನ್ನು ಮೀರಿ ಮನುಷ್ಯನ ಮನಸ್ಸಿಗೇ ಸವಾಲೊಡ್ಡುವ ಶಾರೀರಿಕ ತಲ್ಲಣದ ಸನ್ನಿವೇಶಕ್ಕೆ ಎದೆಯನ್ನೊಮ್ಮೆ ಮುಟ್ಟಿ ನೋಡುತ್ತೇನೆ. ಹಸಿವಿನ ಪ್ರಪಂಚದ ನದಿಯ ಪ್ರವಾಹಕ್ಕೆ ಕೊಚ್ಚಿ ಹೋಗುತ್ತೇನೆ. ಈ ಕಡಲ ಅಲೆಗಳಲ್ಲಿ ದಡ ಸೇರಲು ಹವಣಿಸುವ ಪುಟ್ಟ ದೋಣೆಯೆಂದು ಗೊತ್ತಿರಲಿಲ್ಲ. ಅಲೆಗಳು ಹಾಗೇ ಬಡಿಯುತ್ತಲೇ ಇವೆ... ತಡಿಯಲ್ಲಿ ಮೂಡಿಸಿದ ಹೆಜ್ಜೆಗಳ ಅಳಿಸುತ್ತಲೇ ಇವೆ...! ಹೆಜ್ಜೆಗಳು ಮೂಡುತ್ತಲೇ ಇವೆ...
ದಿನಾಂಕ 18 ಸೆಪ್ಟೆಂಬರ್ 2011 ರ ಭಾನುವಾರ ಸಿ.ಎಮ್.ಆರ್ ಕಾಲೇಜಿನ ದ್ವೀತಿಯ ವರ್ಷದ ಸಮಾಜಕಾರ್ಯ ಪ್ರಶಿಕ್ಷಣಾರ್ಥಿಗಳುಆಧುನಿಕತೆಯ ತುಳಿತಕ್ಕೊಳಗಾದ ಸೋಲಿಗೇರಿ ಬುಡಕಟ್ಟು ಸಮುದಾಯದ ಪರಿಸ್ಥಿತಿಯನ್ನು ಅಧ್ಯಯಿಸಲು ಸೋಲಿಗೇರಿ ಗ್ರಾಮಕ್ಕೆಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರಿಗೆ ಆದ ಅನುಭವವನ್ನು ಈ ಲೇಖನದ ಮೂಲಕ ಹಂಚಿಕೊಂಡಿದ್ದಾರೆ. ಈ ಸಮಾಜವೇ ಹೀಗೆ ಅನಿಸುತ್ತೆ. ಕೆಲವರ ಕೂಗಿಗೆ ಇಲ್ಲಿ ಬೆಲೆಯೇ ಇಲ್ಲ. ನೋವಿಗೆ ಸ್ಪಂದನೆಯಂತೂ ಇಲ್ಲವೇ ಇಲ್ಲ. ಆ ಕೂಗು ಅಕ್ಷರಶಃ ಅರಣ್ಯರೋದನ. ಕೂಗು ಕಿವಿಗೆ ಬಿದ್ದರೂ ಜಾಣಕಿವುಡು. ನೋವು ಎದೆ ಹಿಂಡಿದರೂ 'ದಿನಾ ಸಾಯೋರಿಗೆ ಅಳೋರ್ ಯಾರ್ರೀ' ಎಂಬ ತಿರಸ್ಕಾರ ಮನೋಭಾವ. ಈ ಮಾತು ನೂರು ಪ್ರತಿಶಃ ಅನ್ವಯವಾಗುವುದು, ಕನಕಪುರ ತಾಲ್ಲೂಕಿನ ಸಾತನೂರಿನ ದಕ್ಷಿಣಕ್ಕಿರುವ ಕಾಡಂಚಿನ ಗ್ರಾಮ ಸೋಲಿಗೇರಿಗೆ....
ವಿಶ್ವ ಇಂದು ಎಷ್ಟೊಂದು ಪ್ರಭಾವಿ ಮಹಿಳೆಯರನ್ನು ಕಂಡಿದೆ, ಮುಖ್ಯವಾಗಿ ಅಮೇರಿಕದ ಹಿಲರಿ ಕ್ಲಿಂಟನ್, ದಿ|| ಇಂದಿರಾಗಾಂಧಿ, ಜರ್ಮನಿಯ ಚಾನ್ಸುಲರ್ ಏಂಜಲಾ ಮರ್ಕೆಲಾ, ಶ್ರೀಲಂಕಾದ ದಿ|| ಮಾಜಿ ಅಧ್ಯಕ್ಷೆ ಕುಮಾರಿ ಬಂಡಾರಿ ನಾಯಕೆ, ಪೆಪ್ಸಿ-ಕೋಕ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಮುಖ್ಯಸ್ಥೆ ಇಂದಿರಾನೂಯಿ, ಪ್ರಸ್ತುತ ಆಸ್ಟ್ರೇಲಿಯದ ಮೊದಲ ಮಹಿಳಾ ಪ್ರಧಾನಮಂತ್ರಿ ಜೂಲಿಯ್ ಗಿಲಾರ್ಡ್. ಹೀಗೆ ಅನೇಕ ಪ್ರಭಾವಿ ಮಹಿಳೆಯರನ್ನು ಪ್ರಪಂಚವು ಕಂಡಿದೆ, ಆದರೆ ಈ ಮೇಲಿನ ಮಹಿಳಾ ಪ್ರಮುಖರು ಒಂದು ವಂಶಪಾರಂಪರ್ಯವಾಗಿ ಅಧಿಕಾರ ಹೊಂದಿದವರು. ಇನ್ನು ಕೆಲವರು ಹಣಕಾಸಿನ ಪ್ರಾಬಲ್ಯದಿಂದ ಪ್ರಪಂಚದಲ್ಲಿ ತಮ್ಮ ಛಾಪನ್ನು ಮೂಡಿಸಿದವರು. ಈ ದಿನ ನಾವು ಮಾತಾನಾಡುತ್ತಿರುವುದು ಈ ಮೇಲಿನ ಮಹಿಳಾ ಪ್ರಮುಖರ ಬಗ್ಗೆಯಲ್ಲ. ಇವತ್ತು ನಾವು ಪ್ರಪಂಚದ ಕಗ್ಗತ್ತಲೆಯ ನಾಡು ಎಂದು ಕರೆಯುವ ಆಫ್ರಿಕ ಖಂಡದ ಪುಟ್ಟ ಹಾಗೂ ಬಡ ರಾಷ್ಷ್ರವಾದ ಕೀನ್ಯಾ ದೇಶದ ಬಗ್ಗೆ ನಾವೆಲ್ಲಾ ಕೇಳಿದವರು. 21 ನೆಯ ಶತಮಾನದಲ್ಲಿ ಈ ಒಂದು ದೇಶದ ಕತ್ತಲನ್ನು ಹೋಗಲಾಡಿಸಿ ಜ್ಞಾನದ ಜ್ಯೋತಿಯಂತೆ ಉದಯಿಸಿ ಬಂದ ಧೀರ ಮಹಿಳೆಯ ಹೆಸರೆ ಶ್ರೀಮತಿ ವಂಗಾರಿ ಮಾಥಾಯಿ. ಅಷ್ಟಕ್ಕೂ ಈ ವಂಗಾರಿ ಮಾಥಾಯಿ ಯಾರು ಅಂತೀರಾ? ಕೀನ್ಯಾ ದೇಶದಲ್ಲಿ ಜನಿಸಿದ ಸಾಮಾನ್ಯ ಮಹಿಳೆಯಾದವಳು ಇಂದು ಅಸಾಧಾರಣವಾದ ಕೆಲಸ ಮಾಡಿದ್ದಾಳೆ.
|
Categories
All
Social Work Learning AcademyMHR LEARNING ACADEMYGet it on Google Play store
50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |
SITE MAP
SiteTRAININGnIRATHANKA CITIZENS CONNECTJOB |
HR SERVICES
OTHER SERVICES |
NIRATHANKAPOSHOUR OTHER WEBSITESSubscribe |
50,000 HR AND SOCIAL WORK PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
|