Niruta Publications
  • Home
  • About Us
    • Ramesha's Profile
  • List Your Book for Free
  • Publication With Us
  • Niruta Prints
    • Our Services
    • Designer Profile
  • Our Services
  • Leaders Talk
  • Social Work Blog
  • HR Blog
    • Blog
  • Books / Online Store
  • Media Mentions
    • Photos
  • Join Our Online Groups
  • Contact Us
  • Home
  • About Us
    • Ramesha's Profile
  • List Your Book for Free
  • Publication With Us
  • Niruta Prints
    • Our Services
    • Designer Profile
  • Our Services
  • Leaders Talk
  • Social Work Blog
  • HR Blog
    • Blog
  • Books / Online Store
  • Media Mentions
    • Photos
  • Join Our Online Groups
  • Contact Us
Niruta Publications

ಬದುಕು ಬದಲಾಯಿಸಿದ ಕಥನಗಳು

12/19/2018

0 Comments

 
Picture
ಲೇಖಕರು : ಶೇಖರ್ ಗಣಗಲೂರು
ಪುಟ : 151
Buy
ಪರಿವಿಡಿ
  1. ​ಮನದ ಕದ ತಟ್ಟಿದ ಪತ್ರ
  2. ಲೋಕಾತೀತಪುರುಷ!
  3. ನಂಬಿಕೆ...ದಾರಿ ಬೆಳಕು
  4. ನಮ್ಮ ಜೀವನ, ನಮ್ಮ ಆಯ್ಕೆ
  5. ನಮ್ಮತನ
  6. ಇತರರ ಬೆಳಕು
  7. ನಮ್ಮಲ್ಲಿರುವುದು ಮಹತ್ವವಾದದ್ದು...
  8. ಅಪ್ಪನ 25 ಪೈಸೆಯ ಮಿಠಾಯಿ
  9. ವ್ಯಕ್ತಿತ್ವ...ವ್ಯಕ್ತಿತ್ವದೊಂದಿಗೆ...
  10. ತುಸು ಹೆಚ್ಚಿನ ಶ್ರಮ...
  11. ಉತ್ಕಟವಾದ ಆಯ್ಕೆಗಳು
  12. ಮಂಗಳಮುಖಿ...
  13. ಉಚಿತ ಊಟವಿಲ್ಲ...
  14. ಹಸಿರು ಮಾಯವಾಯಿತು...
  15. ಕೊಂಚ ಜಾಸ್ತಿ ಬೇಕು...
  16. ನಕಾರಾತ್ಮಕತೆಯಲ್ಲಿಯೂ ಸಕಾರಾತ್ಮಕತೆಯಿದೆ...
  17. ಅಮ್ಮನ ವಿಮಾನದ ಆಸೆ...
  18. ನಾವು ನೋಯಿಸುವುದರಲ್ಲಿ ನಿಸ್ಸೀಮರು...? 
  19. ನನ್ನ ಸೂಪರ್ ಹೀರೋ...
  20. ಆ ವ್ಯಕ್ತಿತ್ವಗಳ ಸಾಕ್ಷಾತ್ಕಾರ...
  21. ನೋವಿನಲ್ಲೂ ಸಂಬಂಧಗಳು...
  22. ಬದಲಾವಣೆ ಬದಲಾಯಿಸಬಲ್ಲದು...
  23. ಬದಲಾಯಿಸಿದ ಪ್ರಾಮಾಣಿಕತೆ
  24. ಅಪ್ಪನ ಎರಡನೆಯ ಮಗ...
  25. ಗುರುಗಳಿಗೆ ಅರ್ಪಣೆ...
  26. ಅತ್ತೆ, ಸೊಸೆಯಾಗಬೇಕೆಂಬ ಆಸೆ...
  27. ನಿನ್ನೊಳಗಿನ ಕೌಶಲ್ಯವೇ, ನಿನ್ನ ಶಕ್ತಿ...
  28. ನಾಯಕ, ನಾಯಕನಿಗೆ ತೋರಿಸಿದ ದಾರಿ... 
ಗುರುಗಳ ನಲ್ನುಡಿಗಳು
ಮುನ್ನುಡಿ
ನಮ್ಮ ಪ್ರೀತಿಯ ಹುಡುಗ ಶೇಖರ್ ತಮ್ಮೆಲ್ಲಾ ಕೆಲಸ ಕಾರ್ಯಗಳ ಒತ್ತಡಗಳ ಮಧ್ಯೆ ಸಮಯ ಹೊಂದಿಸಿಕೊಂಡು ಈ ಹೊತ್ತಿಗೆ ಬದುಕು ಬದಲಾಯಿಸಿದ ಕಥನಗಳು ಹೊರತಂದಿರುವುದು ಬಹಳ ಹೆಮ್ಮೆಯ ವಿಚಾರ.
​
ನನ್ನ ಹಾಗೂ ಶೇಖರ್ ರ ಒಡನಾಟದ ಈ 8-10 ವರ್ಷಗಳಲ್ಲಿ ನಾನು ಕಂಡಿದ್ದು ಅವರ ಎರಡು ವಿಭಿನ್ನ ಆದರೆ ಸಹಜ ಪೂರಕ ವ್ಯಕ್ತಿತ್ವಗಳು. ಅವರ ಬಾಹ್ಯ ವ್ಯಕ್ತಿತ್ವ ಕಾರ್ಯನಿಷ್ಠೆ ಮತ್ತು ಕುಶಲತೆಯನ್ನು ವ್ಯಕ್ತಪಡಿಸಿದರೆ, ಆಂತರ್ಯದ ವ್ಯಕ್ತಿತ್ವ ಸೃಜನಶೀಲತೆ ಮತ್ತು ಸಂವೇದನಾಶೀಲತೆಯನ್ನು ತೋರುವಂತಹುದಾಗಿದೆ.

ಬಾಲ್ಯಾವಸ್ಥೆಯಲ್ಲಿ ಹಳ್ಳಿಯ ವಾತಾವರಣದಲ್ಲಿ, ಸಗಣಿ ಸಾರಿಸಿದ ನೆಲದಲ್ಲಿ, ಹೊಲ, ಪ್ರಾಣಿ, ಪಕ್ಷಿಗಳ ಮಧ್ಯದಲ್ಲಿ ರೂಪುಗೊಂಡ ವ್ಯಕ್ತಿತ್ವ ಮುಂದೆ ಬೆಂಗಳೂರು ನಗರ ಕೊಡುವ ಐಷಾರಾಮದ ಸಕಲ ಆಧುನಿಕ ಸೌಕರ್ಯಗಳ ಬದುಕಿಗೆ ಮಾರ್ಪಾಡಾಗಿರುವ ನೈಜತೆಯನ್ನು ಈ ಹೊತ್ತಿಗೆಯಲ್ಲಿ ಅವರಿಗೆ ಪ್ರದತ್ತವಾದ ಆಡುಭಾಷೆಯ ಸಹಜ ಶೈಲಿಯಲ್ಲಿ ಬಹಳ ಸೊಗಸಾಗಿ ಚಿತ್ರಿಸಿದ್ದಾರೆ.

ಇಂತಹ ಮಹಾ ಮಾರ್ಪಾಡಿನ ಪ್ರಕ್ರಿಯೆಯಲ್ಲಿ ಶೇಖರ್ ತಮಗೆ ಚಿಕ್ಕಂದಿನಲ್ಲಿ ತಂದೆ ತಾಯಿಯರು, ಗುರುಗಳು ಹಾಗೂ ಹಿರಿಯರು ಹಾಕಿಕೊಟ್ಟ ಭದ್ರ ಬುನಾದಿ ಯಾವ ರೀತಿಯಲ್ಲಿ ಈ ಮಟ್ಟ ತಲುಪಲು ಸಾಧ್ಯವಾಯಿತು ಅನ್ನುವುದನ್ನು ಮನಮುಟ್ಟುವಂತೆ ವಿವರಿಸಿದ್ದಾರೆ.

ಶೇಖರ್ ತಮ್ಮ ಈ ಮಾರ್ಪಾಡಿನ ಪ್ರಕ್ರಿಯೆಯ ಪ್ರತಿ ಮಜಲಿನಲ್ಲೂ ಎದುರಿಸಿದ ದ್ವಂದ್ವ ಬಹುಶಃ ನಾವೆಲ್ಲರೂ ಯಾವುದೋ ಒಂದು ಘಟ್ಟದಲ್ಲಿ ಅನುಭವಿಸಿರುವ ದಿನಗಳನ್ನು ನಮಗೆ ನೆನಪಿಸಿಕೊಳ್ಳುವಂತೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಅವರ ಅಂತಃಕರಣದ ನುಡಿಗಳು ನಮಗರಿವಿಲ್ಲದಂತೆ ಅವರೆಡೆಗೆ ನಮ್ಮನ್ನು ಸೆಳೆದುಬಿಡುತ್ತದೆ. ನಮ್ಮ ಒಳಗಿನ ವ್ಯಕ್ತಿತ್ವದ ಆತ್ಮವಿಶ್ವಾಸ ಮತ್ತು ನಮ್ಮ ಬಾಹ್ಯ ವ್ಯಕ್ತಿತ್ವದ ಆತ್ಮವಿಶ್ವಾಸದ ಕೊರತೆ (inferiority complex) ನಡುವಿನ ದ್ವಂದ್ವ ಯುದ್ಧದ ಫಲಿತಾಂಶದ ಮೇಲೆ ನಮ್ಮ ವೈಯಕ್ತಿಕ ಬೆಳವಣಿಗೆ ನಿಂತಿದೆ ಎನ್ನುವುದನ್ನು ಹಲವಾರು ನೈಜ ನಿದರ್ಶನಗಳ ಮೂಲಕ ಬಹಳ ಪರಿಣಾಮಕಾರಿಯಾಗಿ ಮನತಟ್ಟುವಂತೆ ಶೇಖರ್ ಚಿತ್ರಿಸಿದ್ದಾರೆ.

ಶೇಖರ್ ಎಂಬ ಗಿಡ, ಇಂದು ಒಂದು ವೃಕ್ಷವಾಗಿ ಬೆಳೆಯಲು ಕಾರಣರಾದ ಅವರ ತಂದೆ, ತಾಯಿ, ಕಾಂತಮ್ಮ ಟೀಚರ್, ಗುರು ರಾಘವನಾಥ್, ಸಹೋದ್ಯೋಗಿಗಳು, ಮಡದಿ ಹಾಗೂ ಮಗಳನ್ನು ಬಹಳ ಆತ್ಮೀಯತೆಯಿಂದ ಬೇರೆ ಬೇರೆ ದೃಷ್ಟಾಂತಗಳ ಮೂಲಕ ಸ್ಮರಿಸಿಕೊಂಡಿದ್ದಾರೆ.

ಶೇಖರ್ ಅವರ ಬರವಣಿಗೆಯ ಶೈಲಿ ಅತ್ಯಾಕರ್ಷಕ. ಬರವಣಿಗೆಯ ಬದುಕು ಅವರನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಎಲ್ಲಾ ಸೂಚನೆಗಳನ್ನು ಈ ಕೃತಿಯಲ್ಲಿ ಕಾಣಬಹುದಾಗಿದೆ. ಇಂಗ್ಲಿಷ್ ಮಯವಾಗಿರುವ ಬೆಂಗಳೂರಿನ ಇಂದಿನ ಒತ್ತಡದ ಜೀವನದಲ್ಲಿ ಶೇಖರ್ ರ ಈ ಕನ್ನಡದ ಕೃತಿಯ ತಂಗಾಳಿಯ ತಂಪು ಹಾಗೂ ಕೋಗಿಲೆಯ ಇಂಪನ್ನು ನಾವು ನೀವೆಲ್ಲಾ ಆಸ್ವಾದಿಸುತ್ತಾ ಅವರನ್ನು ಕನ್ನಡ ಸಾರಸ್ವತ ಲೋಕಕ್ಕೆ ತುಂಬುಹೃದಯದಿಂದ ಸ್ವಾಗತಿಸೋಣ.
 
ಬಿ.ಸಿ. ಪ್ರಭಾಕರ್
ಅಧ್ಯಕ್ಷರು - ಕರ್ನಾಟಕ ಮಾಲೀಕರ ಸಂಘ ಮತ್ತು ವಕೀಲರು - ಬಿಸಿಪಿ ಅಸೊಸಿಯೇಟ್ಸ್
Baduku Badalayisida Kathanagalu
File Size: 8622 kb
File Type: pdf
Download File

0 Comments



Leave a Reply.


    Categories

    All
    Academic Books
    Conference Books
    English Books
    HR Books
    Kannada Books
    Social Work Books

    Archives

    July 2022
    January 2022
    August 2020
    June 2020
    May 2020
    December 2019
    December 2018
    August 2018
    July 2018
    January 2018
    August 2017
    July 2017
    January 2017
    December 2016
    November 2016
    June 2016
    December 2015


    Picture
    For more details

    Picture
    For more details

    Picture
    For more details

    Picture
    For more details

    Picture
    For more details

    Picture
    For more details

    HR Books


    Social Work Books


    Niruta Publications

    Social Workers- Karnataka

    Leaders Talk
    Follow me on Academia.edu

    RSS Feed

Niruta Publications Books
File Size: 741 kb
File Type: pdf
Download File

Social Work Books
File Size: 116 kb
File Type: pdf
Download File

HR Books
File Size: 87 kb
File Type: pdf
Download File

General Books
File Size: 195 kb
File Type: pdf
Download File



SITE MAP


Site

  • HOME
  • ABOUT US
  • BLOG​
  • HR BLOG
  • PUBLICATION WITH US
  • NIRUTA PRINTS
  • ONLINE STORE
  • JOIN OUR ONLINE GROUPS
  • VIDEOS​

NIRATHANKA

  • ​CSR
  • TREE PLANTATION PROJECT

POSH

  • OUR ASSOCIATES
  • OUR CLIENTS
  • POSH
  • POSH BLOG​
  • WANT TO BECOME AN EXTERNAL MEMBER FOR AN IC?

OUR OTHER WEBSITES

  • WWW.HRKANCON.COM
  • WWW.MHRSPL.COM
  • WWW.NIRATANKA.ORG​

Subscribe


Picture
For More Details
Picture
More Details

Copyright Niruta Publications 2021,    Website Designing & Developed by: www.mhrspl.com