Niruta Publications
  • Home
  • About Us
    • Ramesha's Profile
  • List Your Book for Free
  • Publication With Us
  • Niruta Prints
    • Our Services
    • Designer Profile
  • Our Services
  • Leaders Talk
  • Social Work Blog
  • HR Blog
    • Blog
  • Books / Online Store
  • Media Mentions
    • Photos
  • Join Our Online Groups
  • Contact Us
  • Home
  • About Us
    • Ramesha's Profile
  • List Your Book for Free
  • Publication With Us
  • Niruta Prints
    • Our Services
    • Designer Profile
  • Our Services
  • Leaders Talk
  • Social Work Blog
  • HR Blog
    • Blog
  • Books / Online Store
  • Media Mentions
    • Photos
  • Join Our Online Groups
  • Contact Us
Niruta Publications

ಇ.ಎಸ್.ಐ. ಮಾರ್ಗದರ್ಶಿ

12/19/2018

1 Comment

 
Picture
ಲೇಖಕರು : ಎಚ್.ಎನ್. ಯಾದವಾಡ
ಪುಟ : 84
Buy

ಪ್ರಶ್ನೆ: ನೀವೇ ಹೇಳಿದಂತೆ ಜನವರಿ 2017 ರಿಂದ ಇ.ಎಸ್.ಐ ವೇತನದ ಮಿತಿಯನ್ನು ಮಾಸಿಕ 21000-00 ರೂಪಾಯಿಗೆ ಹೆಚ್ಚಿಸಿದೆ. ಇಲ್ಲೊಂದು ಉಪ ಪ್ರಶ್ನೆ ನೌಕರನೊಬ್ಬ ಪಡೆಯುತ್ತಿರುವ ವೇತನವು ವೇತನ ವೃದ್ಧಿ, ಬೋನಸ್, ಅಧಿಕ ಕಾರ್ಯ ನಿರ್ವಹಿಸಿದುದಕ್ಕಾಗಿ ಪಡೆದ ಹಣವೂ ಸೇರಿ ತಿಂಗಳ ಒಂದರಲ್ಲಿ 21000-00 ರೂಪಾಯಿಗಿಂತ ಹೆಚ್ಚಾಗಿ ಬಿಟ್ಟರೆ, ಅಂತಹ ಸಂದರ್ಭದಲ್ಲಿ ವಿಮಾದಾರ ನೌಕರರು ಇ.ಎಸ್.ಐ ವ್ಯಾಪ್ತಿಯಿಂದ ಹೊರಗೆ ಉಳಿಯುತ್ತಾರೆಯೆ?
​

ಉತ್ತರ: ಅಂದರೆ, ವೇತನ ಮಿತಿಯನ್ನು ಮೀರಿದ ತಕ್ಷಣವೇ ನೌಕರ ವಿಮಾದಾರರು ಇ.ಎಸ್.ಐ ವ್ಯಾಪ್ತಿಯಿಂದ ಹೊರಗೆ ಉಳಿಯುತ್ತಾರೆ ಎಂಬುದು ನಿಮ್ಮ ಅನಿಸಿಕೆ. ಅದು ಹಾಗಲ್ಲ. ಇ.ಎಸ್.ಐ ಕಾನೂನಿನಂತೆ ವಂತಿಗೆ ಅವಧಿಯನ್ನು ವರ್ಷವೊಂದರಲ್ಲಿ ಎರಡು ಭಾಗವಾಗಿ ವಿಂಗಡಿಸಲಾಗಿದೆ. ಏಪ್ರಿಲ್‌ನಿಂದ ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಿಂದ ಮಾರ್ಚ್. ವಿಷಯ ಹೀಗಿರುವಾಗ ವಂತಿಗೆಯ ಅವಧಿಯ ಮಧ್ಯದಲ್ಲಿ ವೇತನವು ಹೆಚ್ಚಾದರೂ ನೌಕರರು ಇ.ಎಸ್.ಐ ವ್ಯಾಪ್ತಿಯಿಂದ ಹೊರಗೆ ಉಳಿಯಲಾರರು. ವಂತಿಗೆಯ ಅವಧಿಯು ಮುಗಿಯುವವರೆಗೆ ಅವರು ಮುಂದುವರೆಯುತ್ತಾರೆ. ಅಷ್ಟೇ ಏಕೆ, ಹೆಚ್ಚಾದ ಮೊತ್ತಕ್ಕೂ ವಂತಿಗೆಯನ್ನು ಸಲ್ಲಿಸಬೇಕಾಗುತ್ತದೆ. ಉದಾಹರಣೆಗೆ: ವಂತಿಗೆಯ ಅವಧಿ ಏಪ್ರಿಲ್‌ನಿಂದ ಸೆಪ್ಟೆಂಬರ್ ಮಧ್ಯೆ ಜೂನ್ ತಿಂಗಳಿನಲ್ಲಿ ವೇತನ ವೃದ್ಧಿಯ ಪರಿಣಾಮವಾಗಿ ನೌಕರನೊಬ್ಬನ ವೇತನ ರೂಪಾಯಿ. 22000-00 ಆಗಿಬಿಟ್ಟರೆ, ವಂತಿಗೆಯನ್ನು 22000-00 ಕ್ಕೆ ಸಲ್ಲಿಸಬೇಕು. ಅದಕ್ಕಾಗಿ ವೇತನ ಮಿತಿಯಾದ ರೂಪಾಯಿ. 22000-00 ಗೆ ಮಾಡಲಾಗದು ಎನ್ನುವುದನ್ನು ಪ್ರಮುಖವಾಗಿ ಇಲ್ಲಿ ಗಮನಿಸಬೇಕು. ಮುಂದೆ ವಂತಿಗೆಯ ಅವಧಿ ಮುಗಿಯುತ್ತಲೆ ಆಗಲೂ 21000-00 ಕ್ಕೆ ಹೆಚ್ಚಾಗಿದ್ದರೆ, ಅನಾಯಾಸವಾಗಿ ಅಂತಹ ವಿಮಾದಾರರು ವ್ಯಾಪ್ತಿಯಿಂದ ಹೊರಗೆ ಉಳಿಯುತ್ತಾರೆ.
ಪ್ರಶ್ನೆ: ಇ.ಎಸ್.ಐ ಅಧಿನಿಯಮದ ಅಡಿಯಲ್ಲಿ ನೋಂದಾಯಿಸಿಕೊಂಡ ಸಂಸ್ಥೆಯು ಆವಧಿಕವಾಗಿ ಯಾವುದಾದರೂ ವಿವರಗಳನ್ನು ಸಲ್ಲಿಸಬೇಕೆ ?
ಉತ್ತರ: ಹೌದು.
  1. ಪ್ರತಿ ವರ್ಷ 31 ನೆಯ ಜನವರಿಯ ಒಳಗೆ ಕಳೆದ ಕ್ಯಾಲೆಂಡರ್ ವರ್ಷದಲ್ಲಿ ಘಟಕದ ವಿಳಾಸ ಬದಲಾವಣೆಯಾಗಿದ್ದರೆ ಅದರ ಉಲ್ಲೇಖದೊಂದಿಗೆ ಪ್ರಪತ್ರ 01 ‘ಎ’ ಭರ್ತಿಮಾಡಿ ಸಂಬಂಧಪಟ್ಟ ಪ್ರಾದೇಶಿಕ ಅಥವಾ ಉಪ ಪ್ರಾದೇಶಿಕ ಕಾರ್ಯಾಲಯಕ್ಕೆ ಕಳುಹಿಸಿ ಕೊಡಬೇಕು.
  2. ವರ್ಷದ 2 ವಂತಿಗೆಯ ಅವಧಿಗಳಾದ ಏಪ್ರಿಲ್‌ನಿಂದ ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಿಂದ ಮಾರ್ಚ್ ಅವಧಿಯ ನಂತರ ಅವಧಿಯು ಮುಕ್ತಾಯವಾದ 42 ದಿನಗಳ ಒಳಗಾಗಿ ಹಣ ಸಂದಾಯ ಮಾಡಿದ ಚಲನ್ ಪ್ರತಿಗಳನ್ನು ಲಗತ್ತಿಸಿ ಸಂಬಂಧಪಟ್ಟ ಶಾಖಾ ಕಛೇರಿಗೆ ಕಳುಹಿಸಿಕೊಡಬೇಕು. ನಿಯಮಗಳು ಹೀಗಿದ್ದರೂ ಇತ್ತೀಚಿನ ದಿನಗಳಲ್ಲಿ ವಂತಿಗೆಯನ್ನು ಆನ್‌ಲೈನ್ ಮುಖಾಂತರ ಸಲ್ಲಿಸುವುದರಿಂದ ಸಂದಾಯದ ವಿವರ ಸಿಸ್ಟಂನಲ್ಲಿ ಗೊತ್ತಾಗಿಬಿಡುತ್ತದೆ. ಹೀಗಾಗಿ ಈ ವ್ಯವಸ್ಥೆ ಈಗ ಮಹತ್ವವನ್ನು ಕಳೆದುಕೊಂಡಿದೆ.
  3. ಇ.ಎಸ್.ಐ ಅಧಿನಿಯಮ 1948 ರ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಘಟಕವು ದುರ್ಘಟನಾ ರಿಜಿಸ್ಟರ್ ಅಂದರೆ ಪ್ರಪತ್ರ 11ನ್ನು ಕಡ್ಡಾಯವಾಗಿ ಇಟ್ಟುಕೊಂಡಿರಬೇಕು. ಘಟಕ ಅಥವಾ ಸಂಸ್ಥೆಯ ಪರಿಸರವೂ ಸೇರಿದಂತೆ ವಿಮಾದಾರರು ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ದುರ್ಘಟನೆಗೆ ತುತ್ತಾದರೆ ಅದರ ವಿವರವನ್ನು ಪ್ರಪತ್ರ 11ರಲ್ಲಿ ಭರ್ತಿಮಾಡಿ 24 ಘಂಟೆಯ ಒಳಗಾಗಿ ಸಂಬಂಧಪಟ್ಟ ಶಾಖಾ ಕಚೇರಿಗೆ ಹಾಗೂ ಅದರ ಒಂದು ಪ್ರತಿಯನ್ನು ಸಂಬಂಧಪಟ್ಟ ಇ.ಎಸ್.ಐ ಚಿಕಿತ್ಸಾಲಯಕ್ಕೂ ಕಳುಹಿಸಿಕೊಡಬೇಕು. ದುರ್ಘಟನೆಯ ವಿವರಗಳನ್ನು ಸುರಕ್ಷಿತವಾಗಿ ಇಟ್ಟುಕೊಂಡಿದ್ದು ಇ.ಎಸ್.ಐ ಇಲಾಖೆಯ ಅಧಿಕಾರಿಗಳು ಪರಿವೀಕ್ಷಣೆಗೆ ಬಂದಾಗ ಪ್ರಸ್ತುತ ಪಡಿಸಬೇಕು. ಅಂದರೆ, ಮುಂದೊಮ್ಮೆ ದುರ್ಘಟನೆಯಿಂದ ವಿಮಾದಾರ ತೀರಿಕೊಂಡರೆ ಅಥವಾ ದುರ್ಘಟನೆಯ ನಂತರ ವಿಕಲಾಂಗನಾದರೆ ಫಲಾನುಭವಗಳಿಗೆ ಈ ದಾಖಲೆಗಳು ಸಹಕಾರಿಯಾಗುತ್ತವೆ. ಇನ್ನೊಂದು ಮಾತಿನಲ್ಲಿ ಹೇಳಬೇಕೆಂದರೆ, ಫಲಾನುಭವಗಳಿಗೆ ಈ ದಾಖಲೆಗಳೇ ಮೂಲ ಆಧಾರಗಳು.
ಈ ವಿವರಗಳನ್ನು ಲಿಖಿತದಲ್ಲಿ ಕಳುಹಿಸಿಕೊಡುವ ಅವಶ್ಯಕತೆ ಇಲ್ಲ. ಯಾಕೆಂದರೆ, ಈಗ ಎಲ್ಲಾ ವಿವರವನ್ನು ಆನ್‌ಲೈನ್ ನಲ್ಲಿ ಕಳುಹಿಸಿಕೊಡುವ ವ್ಯವಸ್ಥೆ ಇದೆ. ಹಾಗೂ ಸಂಪೂರ್ಣ ವಿವರಗಳು ಸಿಸ್ಟಮ್‌ನಲ್ಲಿ ಲಭ್ಯವಿರುವುದರಿಂದ ಮೊದಲಿನಂತೆ ಆವಧಿಕವಾಗಿ ಕಳುಹಿಸಿಕೊಡಲೇಬೇಕು ಎಂಬ ನಿಯಮವಿಲ್ಲ. ಸುಲಭ ಸಂದರ್ಭಕ್ಕಾಗಿ ಇ.ಎಸ್.ಐ. ಇಲಾಖೆಯು ದಾಖಲೆಗಳ ವಿವರಗಳನ್ನು ಪರಿವೀಕ್ಷಿಸಿಕೊಳ್ಳುವುದು.

ಪ್ರಶ್ನೆ: ವಿಮಾದರ ಎಷ್ಟು ದಿನಗಳ ನಂತರ ವೈದ್ಯಕೀಯ ಸೌಲಭ್ಯ ಪಡೆದುಕೊಳ್ಳಲು ಅರ್ಹನಾಗುತ್ತಾನೆ ?
ಉತ್ತರ: ಇ.ಎಸ್.ಐ ವಿಮಾದಾರನಾಗಿದ್ದು ಕನಿಷ್ಟ 2 ವರ್ಷಗಳವರೆಗೆ ಸೇವೆ ಸಲ್ಲಿಸಿ 156 ದಿನಗಳ ವಂತಿಗೆಯನ್ನು ಸಲ್ಲಿಸಿದ್ದರೆ ಸಾಕು. ಮುಂದುವರೆದ ಕಾಯಿಲೆಯ ನಿಯಮದನ್ವಯ 34 ಕಾಯಿಲೆಗಳಿಗೆ ಗುಣಮುಖವಾಗುವವರೆಗೆ ಅಥವಾ ಗರಿಷ್ಟ 3 ವರ್ಷಗಳವರೆಗೆ ವಿಮಾದಾರರು ಸೇರಿ ಅವಲಂಬಿತ ಕುಟುಂಬದ ಸದಸ್ಯರುಗಳು ವೈದ್ಯಕೀಯ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ. ಆಸ್ಪತ್ರೆಗೆ ದಾಖಲಾಗದೇ ಸಾಮಾನ್ಯ ರೋಗಿಯಾಗಿ ಇ.ಎಸ್.ಐ. ಚಿಕಿತ್ಸಾಲಯ ಹಾಗೂ ಆಸ್ಪತ್ರೆಯಲ್ಲಿ ಔಷಧಿ ಪಡೆಯುವುದು ವಿಮಾದಾರನಾದ ದಿನದಿಂದಲೇ ಆರಂಭವಾಗುತ್ತದೆ. ವಿಶೇಷ ಶುಶ್ರೂಷೆಯ ವೈದ್ಯಕೀಯ ಸೌಲಭ್ಯ ಪಡೆದುಕೊಳ್ಳುವುದಕ್ಕೆ ಮಾತ್ರ ಎರಡು ವರ್ಷ ಕಾಯಬೇಕು.
ESI Margadarshi
File Size: 12035 kb
File Type: pdf
Download File

1 Comment
Subramani.c link
6/2/2020 07:13:20 pm

I need kannada ESI book please send what ever charge I will pay

Reply



Leave a Reply.


    Categories

    All
    Academic Books
    Conference Books
    English Books
    HR Books
    Kannada Books
    Social Work Books

    Archives

    July 2022
    January 2022
    August 2020
    June 2020
    May 2020
    December 2019
    December 2018
    August 2018
    July 2018
    January 2018
    August 2017
    July 2017
    January 2017
    December 2016
    November 2016
    June 2016
    December 2015


    Picture
    For more details

    Picture
    For more details

    Picture
    For more details

    Picture
    For more details

    Picture
    For more details

    Picture
    For more details

    HR Books


    Social Work Books


    Niruta Publications

    Social Workers- Karnataka

    Leaders Talk
    Follow me on Academia.edu

    RSS Feed

Niruta Publications Books
File Size: 741 kb
File Type: pdf
Download File

Social Work Books
File Size: 116 kb
File Type: pdf
Download File

HR Books
File Size: 87 kb
File Type: pdf
Download File

General Books
File Size: 195 kb
File Type: pdf
Download File



SITE MAP


Site

  • HOME
  • ABOUT US
  • BLOG​
  • HR BLOG
  • PUBLICATION WITH US
  • NIRUTA PRINTS
  • ONLINE STORE
  • JOIN OUR ONLINE GROUPS
  • VIDEOS​

NIRATHANKA

  • ​CSR
  • TREE PLANTATION PROJECT

POSH

  • OUR ASSOCIATES
  • OUR CLIENTS
  • POSH
  • POSH BLOG​
  • WANT TO BECOME AN EXTERNAL MEMBER FOR AN IC?

OUR OTHER WEBSITES

  • WWW.HRKANCON.COM
  • WWW.MHRSPL.COM
  • WWW.NIRATANKA.ORG​

Subscribe


Picture
For More Details
Picture
More Details

Copyright Niruta Publications 2021,    Website Designing & Developed by: www.mhrspl.com