|
ಲೇಖಕರು : ಡಾ. ಸಿ.ಆರ್. ಗೋಪಾಲ್ ಹಿರಿಯ ಸಾಹಿತಿಗಳು ಹಾಗೂ ವಾಗ್ಮಿ ಡಾ. ಸಿ.ಆರ್. ಗೋಪಾಲ್ ಅವರು ರಚಿಸಿದ ಭಾಷಣ ಕೈಪಿಡಿ ಒಂದು ಸಂಶೋಧನಾ ಗ್ರಂಥವಾಗಿದೆ. ಭಾಷಣ ಒಂದು ಕಲೆ ಎಂದು ಜಗತ್ತಿನಾದ್ಯಂತ ಪರಿಗಣನೆಗೆ ಒಳಗಾಗಿದೆ. ಮಾತನಾಡುವವರೆಲ್ಲ ಭಾಷಣಕಾರರಾಗಲು ಸಾಧ್ಯವಿಲ್ಲ. ಅದೇ ರೀತಿ ಉಪನ್ಯಾಸ ಮಾಡುವವರು ಭಾಷಣಕಾರರಲ್ಲ. ಏಕೆಂದರೆ ಉಪನ್ಯಾಸವೆಂಬುದು ತರಗತಿಯ ಮಿತಿಯಲ್ಲಿ ವಿಷಯದ ನಿರ್ದಿಷ್ಟತೆಯಲ್ಲಿ ಹೇಳುವ ಬೋಧನೆ. ಇದು ಶೈಕ್ಷಣಿಕ ಶಿಸ್ತಿನ ಬೋಧನೆ. ಆದರೆ ಭಾಷಣ ಹಾಗಲ್ಲ, ಅಲ್ಲಿ ಕಲಿಯುವ ಆಸಕ್ತಿಯ ವಿದ್ಯಾರ್ಥಿಗಳಿರುವುದಿಲ್ಲ. ಅದಕ್ಕೆ ಬದಲಾಗಿ ಕೇಳುವ ಕುತೂಹಲದ ಪ್ರೇಕ್ಷಕರಿರುತ್ತಾರೆ. ಜೊತೆಗೆ ಕೇಳುಗರೆಲ್ಲ ಒಂದೇ ಮನೋಧರ್ಮದವರಲ್ಲ, ಒಂದೇ ಮನಸ್ಥಿತಿಯವರೂ ಅಲ್ಲ. ಭಿನ್ನ ಭಿನ್ನ ಅಭಿರುಚಿಯ, ಭಿನ್ನ ಭಿನ್ನ ಆಸಕ್ತಿಗಳ, ಭಿನ್ನ ಸಮುದಾಯಗಳ ಗುಂಪುಗಳು ಅಲ್ಲಿರುತ್ತವೆ. ಹೀಗಾಗಿ ಭಾಷಣ ಆಯಾ ಭಾಷಣಕಾರನ / ಭಾಷಣಕಾರ್ತಿಯ ಕಲಾತ್ಮಕ ಮೆರುಗಿನಿಂದಾಗಿ ಅದು ಸ್ವೀಕಾರ ಅಥವಾ ನಿರಾಕರಣೆಗೆ ಒಳಗಾಗುತ್ತದೆ.
ಲೇಖಕರು : ಡಾ. ಸಿ.ಆರ್. ಗೋಪಾಲ್ `ಸಮುದಾಯ ಸಂಘಟನೆ ಕೃತಿಯಲ್ಲಿ ಉಪಯುಕ್ತವಾಗುವ ವಿಷಯ ಸಂಗ್ರಹ ಸಾಕಷ್ಟು ಹೇರಳವಾಗಿದೆ. ಸಮುದಾಯ, ಸಮುದಾಯದ ಪ್ರಕಾರಗಳು, ಸಮುದಾಯದ ಲಕ್ಷಣಗಳು, ಸಮಸ್ಯೆಗಳು, ಸಮುದಾಯ ಸಂಘಟನೆಯ ಇತಿಹಾಸ, ಸಂಘಟನೆ, ಅಭಿವೃದ್ಧಿ, ಸಂಘಟನಾ ಮಾದರಿಗಳು, ಗ್ರಹಿಕೆಗಳು, ವೈಶಿಷ್ಟ್ಯತೆಗಳು, ಧ್ಯೇಯೋದ್ದೇಶಗಳು, ತತ್ತ್ವಗಳು, ಪ್ರಕ್ರಿಯೆಗಳು, ಕಾರ್ಯತಂತ್ರಗಳು ಸಮಾಜಕಾರ್ಯ ಕಾರ್ಯಕರ್ತನ ಪಾತ್ರ, ಇವೇ ಮೊದಲಾದ ಹಲವು ಹತ್ತು ಉಪಯುಕ್ತ ವಿಚಾರಗಳ ಬಗ್ಗೆ ಸಮೃದ್ಧ ಮಾಹಿತಿಗಳನ್ನು ವಿಶೇಷ ರೀತಿಯಲ್ಲಿ ಒದಗಿಸಿದ್ದಾರೆ. ಇವುಗಳ ಜೊತೆಗೆ ಮಹಾತ್ಮಾ ಗಾಂಧೀಜಿಯವರು ಪ್ರತಿಪಾದಿಸಿರುವ ಸರ್ವೋದಯ ಮತ್ತು ಇತರ ವಿಶಿಷ್ಟ ರಚನಾತ್ಮಕ ಕಾರ್ಯಕ್ರಮಗಳ ಬಗ್ಗೆಯೂ ಸಾಕಷ್ಟು ಸಮರ್ಪಕವಾಗಿ ಪರಿಚೈಸಿದ್ದಾರೆ. ಪ್ರತಿಪಾದಿಸಬೇಕಾದ ವಿವಿಧ ವಿಚಾರಗಳನ್ನು ಅಧ್ಯಾಯ, ಉಪ ಅಧ್ಯಾಯ ಹಾಗೂ ಶೀರ್ಷಿಕೆಗಳನ್ನಾಗಿ ವಿಭಾಗಿಸಿಕೊಂಡಿರುವ ಅನುಕ್ರಮ ಸಮಂಜಸವಾಗಿದೆ. ವಿಷಯಗಳನ್ನು ವಿಭಾಗಿಸಿಕೊಂಡಿರುವುದರಲ್ಲಿ ಒಂದು ಸೂಕ್ತ ಕ್ರಮಬದ್ಧತೆ ಇದೆ. ಒಂದು ಬಂಧ ಇದೆ.
ಪರಿವಿಡಿ 1. ಅಧ್ಯಾಯ-ಒಂದು ಪೀಠಿಕೆ, ಸಮುದಾಯ, ವ್ಯಾಖ್ಯೆಗಳು, ಸಮುದಾಯದ ವೈಲಕ್ಷಣಗಳು, ಸಮುದಾಯದ ಬಗ್ಗೆ ಸ್ವಾಭಿಮಾನ, ಐಕ್ಯಭಾವ, ಪರಾವಲಂಬನಾ ಭಾವ, ಪಾತ್ರ ನಿರ್ವಹಣಾ ಭಾವ, ಬದಲಾಗುತ್ತಿರುವ ಪರಿಸ್ಥಿತಿ, ಸಮುದಾಯ-ಸಮಾಜ, ನೆರೆಹೊರೆ, ಸಂಘ, ಸಂಸ್ಥೆ ಇವುಗಳಲ್ಲಿರುವ ವ್ಯತ್ಯಾಸಗಳು. 2. ಅಧ್ಯಾಯ-ಎರಡು ಸಮುದಾಯದ ಪ್ರಕಾರಗಳು :- ಭೌಗೋಲಿಕ ಮತ್ತು ಕ್ರಿಯಾತ್ಮಕ ಸಮುದಾಯಗಳು, ಗ್ರಾಮ ಸಮುದಾಯ, ಗ್ರಾಮ ಸಮುದಾಯದ ವೈಲಕ್ಷಣಗಳು, ಗ್ರಾಮ ಸಮುದಾಯಗಳ ವೈವಿಧ್ಯತೆ, ನಗರ ಸಮುದಾಯ, ಕೆಲವು ಆಯ್ದ ವ್ಯಾಖ್ಯೆಗಳು, ನಗರ ಸಮುದಾಯದ ವೈಲಕ್ಷಣಗಳು, ಬುಡಕಟ್ಟು ಸಮುದಾಯಗಳು, ಬುಡಕಟ್ಟು ಸಮುದಾಯದ ಪ್ರಮುಖ ಲಕ್ಷಣಗಳು. 3. ಅಧ್ಯಾಯ-ಮೂರು, ಭಾಗ-ಒಂದು ಗ್ರಾಮೀಣ ಸಮುದಾಯಗಳ ಸಮಸ್ಯೆಗಳ ಪಕ್ಷಿನೋಟ :- ಕೃಷಿ, ಭೂಮಿ, ಸುಧಾರಿತ ತಳಿಯ ಬೀಜ, ಗೊಬ್ಬರಗಳು, ಔಷಧಗಳು, ಯಾಂತ್ರೀಕರಣ, ಸಣ್ಣ ಹಿಡುವಳಿ, ಅಸ್ಥಿರ ಮಳೆ, ದಾಸ್ತಾನು, ಮಾರುಕಟ್ಟೆ, ಸಾರಿಗೆ-ಸಂಪರ್ಕ, ರೈತರ ಆತ್ಮಹತ್ಯೆ, ಆರ್ಥಿಕ ಸಮಸ್ಯೆಗಳು, ಸಾಮಾಜಿಕ ಸಮಸ್ಯೆಗಳು, ಮೂಢನಂಬಿಕೆ, ಅಸ್ಪೃಶ್ಯತೆ, ಸಾಂಪ್ರದಾಯಿಕತೆ ಮತ್ತು ಪ್ರತಿಗಾಮಿ ಧೋರಣೆ, ಜೀತದಾಳುಗಳ ಸಮಸ್ಯೆ, ಮದ್ಯಪಾನ, ನಿರುದ್ಯೋಗ, ಮಹಿಳಾ ಅಸಮಾನತೆ, ಸ್ತ್ರೀಯರ ಸಮಸ್ಯೆಗಳು, (ಲಿಂಗ ತಾರತಮ್ಯ, ಶಿಕ್ಷಣ, ಉದ್ಯೋಗ, ಆರೋಗ್ಯ, ರಾಜಕೀಯ ಕ್ಷೇತ್ರ,) ನಾಗರೀಕ ಸೌಲಭ್ಯಗಳ ಕೊರತೆ, ನಿರಕ್ಷರತೆ, ಆರೋಗ್ಯ, ವಸತಿ, ಬಾಲಕಾರ್ಮಿಕರು, ಗ್ರಾಮೀಣ ರಸ್ತೆಗಳು, ಜನಸಂಖ್ಯಾ ಏರಿಕೆ, ವೃದ್ಧರ ಸಮಸ್ಯೆಗಳು, ಆರ್ಥಿಕ ಸಮಸ್ಯೆಗಳು, ಸಾಮಾಜಿಕ ಸಮಸ್ಯೆಗಳು, ಆರೋಗ್ಯದ ಸಮಸ್ಯೆಗಳು. |
Archives
February 2026
Categories
All
Social Work
|
|
|
|
| ||||||||||||||||||||||||
SITE MAP
SiteNIRATHANKA |
POSHOUR OTHER WEBSITESSubscribe |
RSS Feed