|
Author: Narasimham Rayadurgam Preface This book on “Vocational Rehabilitation of Disabled in India, Principles & Practice” is an attempt to educate the present and future rehabilitation professionals in the area of vocational rehabilitation.
Vocational Rehabilitation as a concept can be traced back to the First World War (1914 -1918), wherein the entire Europe and United States of America (USA) were involved. Several war veterans were injured but were skilled and available for bringing the country’s economy to keel. The Veterans’ Rehabilitation Act of 1920 of USA was the first in the modern times to utilize the services of the war disabled in reviving the country’s economy. This has been amended in due course to include other disabilities. The Department in the government of United States of America (USA) was named Veterans Rehabilitation Administration, later changed as Social & Rehabilitation Services (SRS) Administration and now known as Rehabilitation Services Administration. Internationally, it is a young profession. Such services are available in U.K., European countries, Japan, Singapore and other African and Asian countries. ಲೇಖಕರು : ಡಾ. ಸಿ.ಆರ್. ಗೋಪಾಲ್ ಯಾವುದೇ ಸಮಾಜ, ರಚನೆ ಮತ್ತು ಕಾರ್ಯಶೀಲತೆಯ ದೃಷ್ಟಿಯಿಂದ, ಸ್ಥಿರವಲ್ಲ ಮತ್ತು ನಿಷ್ಕ್ರಿಯದಲ್ಲ. ಅದು ರಚನೆಯ ದೃಷ್ಟಿಯಿಂದ ಮತ್ತು ಕ್ರಿಯೆಗಳ ದೃಷ್ಟಿಯಿಂದ ಚಲನಶೀಲವಾಗಿರುತ್ತದೆ ಮತ್ತು ಪರಿವರ್ತನಾಶೀಲವಾಗಿರುತ್ತದೆ. ಹಾಗಾಗಿ ಯಾವುದೇ ಸಮಾಜ ನಿರಂತರವಾಗಿ ಬದಲಾಗುತ್ತಿರುತ್ತದೆ. ಅಂತಹ ಬದಲಾವಣೆಗಳಿಗೆ ತೀವ್ರತೆ ಮತ್ತು ವ್ಯಾಪಕತೆ ಇರಬಹುದು, ಇಲ್ಲದಿರಬಹುದು. ಬದಲಾವಣೆ ಗೋಚರಿಸಬಹುದು ಇಲ್ಲವೇ ಗೋಚರಿಸದಿರಬಹುದು. ಇಂದು ಗೋಚರಿಸದೇ ಇದ್ದದ್ದು, ಇನ್ನೆಂದೊ ಗೋಚರಿಸಬಹುದು. ಈ ಬದಲಾವಣೆ ಆರ್ಥಿಕ, ಕೈಗಾರಿಕಾ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಮನರಂಜನಾ, ವೈಜ್ಞಾನಿಕ, ಸಾಂಸ್ಕೃತಿಕ, ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಆಗುತ್ತದೆ. ಇಂತಹ ಬದಲಾವಣೆಗಳನ್ನು, ಸಾಮಾಜಿಕ ಸಂಸ್ಥೆಗಳಾದ ಕುಟುಂಬ, ಸಮೂಹ, ಸಂಘಸಂಸ್ಥೆಗಳು, ಸಮುದಾಯ ಮತ್ತು ಕೊನೆಯದಾಗಿ ಇಡೀ ಸಮಾಜದಲ್ಲಿ ಕಾಣುತ್ತೇವೆ. ಬದಲಾವಣೆ ಈ ಸಂಸ್ಥೆಗೆಳ ರಚನೆಯಲ್ಲಷ್ಟೇ ಆಗದೆ ಕ್ರಿಯೆಗಳಲ್ಲಿಯೂ, ಸಂಬಂಧಗಳಲ್ಲಿಯೂ ಆಗುತ್ತದೆ. ಅದು ಹೊಸ ಸಂಬಂಧಗಳನ್ನು ಸೃಷ್ಟಿಸುವುದಲ್ಲದೆ ಹೊಸ ಕಟ್ಟುಪಾಡುಗಳಿಗೆ, ಹೊಸ ಮೌಲ್ಯಗಳಿಗೆ ದಾರಿ ಮಾಡಿಕೊಡುತ್ತದೆ. ಇದೇ ಸ್ಥಿತಿ ಮುಂದುವರೆದು ನಿಧಾನವಾಗಿ ಸಮಾಜದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಿತ್ರಣವೇ ಬದಲಾಗುತ್ತದೆ.
ಲೇಖಕರು : ಗಂಗಾಧರ ರೆಡ್ಡಿ ಎನ್. ಮತ್ತು ಡಾ. ಲೋಕೇಶ ಎಂ.ಯು ಸಮಾಜಕಾರ್ಯದ ಉದಯೋನ್ಮುಖ ಕ್ಷೇತ್ರವನ್ನು ಪರಿಚಯಿಸುವ ಕೃತಿ 'ವಿಪತ್ತು ನಿರ್ವಹಣೆಯಲ್ಲಿ ಸಮಾಜಕಾರ್ಯ'. ಈ ಪುಸ್ತಕದ ಮೂಲ ಆಶಯ ಗ್ರಾಮೀಣ ಹಾಗೂ ಕನ್ನಡ ಭಾಷಾ ಮಾದ್ಯಮ ಹಿನ್ನೆಲೆ ಹೊಂದಿರುವ ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣಾ ಶಾಸ್ತ್ರದ ಮೂಲ ಪರಿಕಲ್ಪನೆಗಳು ಮತ್ತು ವಿಪತ್ತು ನಿರ್ವಹಣೆಯಲ್ಲಿ ಸಮಾಜಕಾರ್ಯದ ಮಧ್ಯಸ್ಥಿಕೆಯನ್ನು ಅರ್ಥ ಮಾಡಿಸುವುದೇ ಆಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಚನೆಯಾದ ಸದರಿ ಪುಸ್ತಕ ಪ್ರಶಿಕ್ಷಕರಿಗೆ, ಸಂಶೋಧಕರಿಗೆ, ವೃತ್ತಿಪರರಿಗೆ ಹಾಗೂ ಕ್ಷೇತ್ರ ಕಾರ್ಯಕರ್ತರಿಗೆ ಮಾರ್ಗದರ್ಶಿ ಕೈಪಿಡಿಯಾಗಿದೆ. ಇದು ವಿಪತ್ತು ನಿರ್ವಹಣಾ ಶಾಸ್ತ್ರವನ್ನು ಅಧ್ಯಯನ ಮಾಡಬಯಸುವ ಎಲ್ಲಾ ವೃತ್ತಿಪರರಿಗೆ ಕನ್ನಡ ಭಾಷೆಯಲ್ಲಿ ಸಿಗುವ ಪ್ರಾಥಮಿಕ ಮಾಹಿತಿಯ ಮೂಲವೇ ಆಗಿದೆ.
ಸಮಾಜಕಾರ್ಯ ಸಾಹಿತ್ಯ ಕ್ಷೇತ್ರದ ಉದಯೋನ್ಮುಖ ಬರಹಗಾರ ಶ್ರೀಯುತ ಗಂಗಾಧರ ರೆಡ್ಡಿ ಎನ್. ರವರು ಶೈಕ್ಷಣಿಕ ಕ್ಷೇತ್ರದಲ್ಲಿ ಸೇವಾನಿರತರಾದ ಡಾ. ಲೋಕೇಶ ಎಂ.ಯು. ರವರ ಸಹಯೋಗದಲ್ಲಿ ರಚಿಸಿದ ಚೊಚ್ಚಲ ಪುಸ್ತಕವೇ ವಿಪತ್ತು ನಿರ್ವಹಣೆಯಲ್ಲಿ ಸಮಾಜಕಾರ್ಯ. ವ್ಯಕ್ತಿಗತ ಸಮಾಜಕಾರ್ಯ ಪರಿಚಯ ಯುವ ಲೇಖಕ ಗಂಗಾಧರ ರೆಡ್ಡಿ ಎನ್. ರವರು ಸಮಾಜಕಾರ್ಯ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಚೊಚ್ಚಲ ಕಾಣಿಕೆಯಾಗಿದ್ದು, ಪ್ರಶಿಕ್ಷಕ, ವಿದ್ಯಾರ್ಥಿ ಹಾಗೂ ವೃತ್ತಿಪರ ಸಮಾಜಕಾರ್ಯಕರ್ತರಿಂದ ಪ್ರಶಂಸೆಗೊಳಪಟ್ಟ ಪುಸ್ತಕವಾಗಿದೆ. ಸಮಾಜಕಾರ್ಯ ಹಾಗೂ ವಿಪತ್ತು ನಿರ್ವಹಣೆ ವಿಷಯದ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲನ್ನು ನಿರ್ಮಿಸಲಿರುವ ಸದರಿ ಪುಸ್ತಕದಲ್ಲಿ ಬಳಕೆಯಾಗಿರುವ ಭಾಷೆ ಸರಳವಾಗಿದೆ. ಪದಗಳ ಆರಿಸುವಿಕೆ ಮತ್ತು ಪದ ಪ್ರಯೋಗ ಸಮಂಜಸವಾಗಿದ್ದು, ಬರವಣಿಗೆಯಲ್ಲಿ ಸ್ಪಷ್ಟತೆ ಇದೆ. ನಿರೂಪಣೆ ಆತ್ಮೀಯವಾಗಿದ್ದು, ಓದಿಸಿಕೊಂಡು ಹೋಗುತ್ತದೆ. ಬರಹ ಮನಮುಟ್ಟುವಂತಿದ್ದು, ಓದುಗರನ್ನು ಸೆಳೆಯುತ್ತದೆ. ಪುಸ್ತಕದ ಮೂಲ ಓದುಗರಿಗೆ ವಿಷಯಗಳನ್ನು ಸ್ಪಷ್ಟವಾಗಿ ಅರ್ಥ ಮಾಡಿಸುವ ಉದ್ದೇಶದಿಂದ ನೀಡುರುವ ಜೀವಂತ ಉದಾಹರಣೆಗಳು ಸಮರ್ಪಕ ಹಾಗೂ ಸಮಯೋಚಿತವಾಗಿದ್ದು, ಅರ್ಥಗರ್ಭಿತವಾಗಿವೆ. ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಹಂತಗಳಲ್ಲಿ ಸಮಾಜಕಾರ್ಯ ವಿಷಯವನ್ನು ಅಧ್ಯಯನ ಮಾಡುವ ಪ್ರಶಿಕ್ಷಣಾರ್ಥಿಗಳಿಗೆ ಅನುಕೂಲವಾಗಲೆಂದು ಪಠ್ಯಕ್ರಮಕ್ಕೆ ಅನುಗುಣವಾಗಿ ರಚಿಸಲಾಗಿದೆ. ಈ ಎಲ್ಲಾ ವೈಶಿಷ್ಟ್ಯಗಳಿಂದ ಕೂಡಿದ ಪುಸ್ತಕ ಓದುಗ ಸಮುದಾಯದಿಂದ ಪ್ರಶಂಸಿಸಲ್ಪಟ್ಟಿದೆ. Author: Shankar Pathak This book is a selection of my published articles on a common theme. Most of them were written during a period of eight years 1979-1987 (chapters 1 to 4, and 6 and 7). Chapter 8 was written for the ASSWI seminar on poverty, December 1975 and published later in a book edited by R.R. Singh (Concept Publishing Co.). Chapter 5 was part of a special project conceived and executed by Dr. Murli Desai, who was then on the faculty of Tata Institute of Social Sciences and it was published in the Indian Journal of Social Work in April 1997. Chapter 9 was specially written during January-April 2013 for this publication, to provide the readers with an overview of India’s developmental planning of over sixty years, an empirial check on the conceptual-academic discussion of social development/ development in chapters No. 2 and 3. Readers may supplement the data and possibly arrive at a conclusion different than mine. For over six months a wealth of data from a variety of sources were collected-official/semi-official (government and industry) independent academic writers or other prestigius organisational sources like A.D.B. World Bank, O.E.C.D. and R.B.I. Only a small selection of the collected data is used in chapter 9 and some additional data is presented in the Appendix III, Statistical Profile.
ಲೇಖಕರು : ಡಾ. ಸಿ.ಆರ್. ಗೋಪಾಲ್ ಸಾಮಾಜಿಕ ಕ್ರಿಯಾಚರಣೆ ಸಮಾಜಕಾರ್ಯದ ಒಂದು ವಿಧಾನ. ವ್ಯಕ್ತಿಗತ ಸಮಾಜಕಾರ್ಯ, ವೃಂದಗತ ಸಮಾಜಕಾರ್ಯ ಮತ್ತು ಸಮುದಾಯ ಸಂಘಟನೆ, ಸಮಾಜಕಾರ್ಯದ ಮೂಲವಿಧಾನಗಳೆಂದು ಪರಿಗಣಿಸಿದ್ದರೆ, ಸಾಮಾಜಿಕ ಕ್ರಿಯಾಚರಣೆಯನ್ನು ಸಮಾಜಕಾರ್ಯದ ಒಂದು ಪೂರಕವಿಧಾನ ಎಂದು ಪರಾಮರ್ಶಿಸಲಾಗಿದೆ. ಸಾಮಾಜಿಕ ಕ್ರಿಯಾಚರಣೆ ಸಮಾಜಕಾರ್ಯದ ಪ್ರಮುಖ ವಿಧಾನಗಳಲ್ಲಿ ಒಂದು ಎಂದು ವಿಶ್ಲೇಷಣೆ ಮಾಡುವವರೂ ಇದ್ದಾರೆ.
ವ್ಯಕ್ತಿಗತ ಸಮಾಜಕಾರ್ಯ, ವೃಂದಗತ ಸಮಾಜಕಾರ್ಯ ಮತ್ತು ಸಮುದಾಯ ಸಂಘಟನೆ ಅನುಗಾಲ (ಅವಿರತ) ನಡೆಯುವ ಯೋಜನೆ / ಕಾರ್ಯಕ್ರಮಗಳಾಗಿರುವುದರಿಂದ ಅವುಗಳನ್ನು ಮೂಲವಿಧಾನಗಳೆಂದು ಕರೆಯಲಾಗಿದೆ. ಆದರೆ ಸಾಮಾಜಿಕ ಕ್ರಿಯಾಚರಣೆ ಸಮಯ ಸಂದರ್ಭಕ್ಕೆ ಅನುಗುಣವಾಗಿ ಸಂಘಟನೆಗೊಳ್ಳುತ್ತದಾದ್ದರಿಂದ, ಅವನ್ನು ಪೂರಕವಿಧಾನ ಎಂದು ನಿರ್ಣಯಿಸಿರಬೇಕು. ಸಮಾಜದ ಓರೆ-ಕೋರೆಗಳನ್ನು ತಿದ್ದಲು, ದೌರ್ಜನ್ಯಗಳನ್ನು ತಡೆಯಲು, ಕಾನೂನಾತ್ಮಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಮಾಜಿಕ ಕ್ರಿಯಾಚರಣೆ ಪ್ರಸ್ತುತ ಬಳಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಕ್ರಿಯಾಚರಣೆಯೂ ಅತಿ ಅವಶ್ಯಕವಾದ ವಿಧಾನವೇ ಹೌದು. ಸಾಮಾಜಿಕ ಕ್ರಿಯಾಚರಣೆ ಎರಡು ಶಬ್ದಗಳ ಪದಗುಚ್ಚ. ಆಂಗ್ಲ ಭಾಷೆಯ ‘Social Action’ ಎಂಬ ಪದಗುಚ್ಚಕ್ಕೆ ಸಾಮಾಜಿಕ ಪ್ರಚೋದನ ಕ್ರಿಯೆ, ಸಾಮಾಜಿಕ ಕ್ರಿಯೆ ಎಂಬ ಅರ್ಥಗಳಿವೆ. ಸಾಮಾಜಿಕ ಕ್ರಿಯಾಚರಣೆಯಲ್ಲಿ ಪ್ರಚೋದನೆಯ ಅಂಶದ ಹೊರತಾಗಿಯೂ ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಸಾಮಾಜಿಕ ಕ್ರಿಯೆ ಎಂಬ ಪದಗುಚ್ಛ ಹೆಚ್ಚು ಸಮಂಜಸ. ಸಾಮಾಜಿಕ ಕ್ರಿಯಾಚರಣೆ ಬೃಹದಾಕಾರದ ಚಟುವಟಿಕೆ. ಅದನ್ನು ಸಾಧಿಸಲು ಬಹುಜನರ ಭಾಗವಹಿಸುವಿಕೆ ಅವಶ್ಯವಾಗಿರುತ್ತದೆ. ಈ ಬಹುಜನರಲ್ಲಿ ಸಾಮಾಜಿಕ ಕಾರ್ಯಕರ್ತ, ಕ್ರಿಯಾವಾದಿ, ದೌರ್ಜನ್ಯಕ್ಕೆ ಒಳಗಾದವರು, ನಾಯಕರು, ಗುಂಪುಗಳು, ವಿಷಯ ಪರಿಣಿತರು, ಸ್ವಯಂ ಸೇವಕರು, ಮುಂಚೂಣಿ ಕಾರ್ಯಕರ್ತರು, ಪ್ರಚಾರಕರು, ಹೋರಾಟಗಾರರು, ಭಾಷಣಕಾರರು, ಸಂಧಾನಕಾರರು, ವಿಪಕ್ಷದವರು ಮುಂತಾದವರು ಸೇರಿರುತ್ತಾರೆ. ಇವರೆಲ್ಲರೂ ಸಾಮಾಜಿಕ ಕ್ರಿಯಾಚರಣೆಯಲ್ಲಿ ತಮ್ಮ ತಮ್ಮ ಪಾತ್ರವನ್ನು ನಿರ್ವಹಿಸುತ್ತಾರೆ. ಈ ಸಾಮೂಹಿಕ ಸ್ವಭಾವವನ್ನು ಗುರುತಿಸಿ, ಸೋಷಲ್ ಯಾಕ್ಷನ್ಸ್ ಎಂಬ ಪದಗುಚ್ಚಕ್ಕೆ, `ಸಾಮಾಜಿಕ ಕ್ರಿಯಾಚರಣೆ’ ಎಂಬ ಪದಪುಂಜವನ್ನು ಬಳಸಲಾಗಿದೆ. |
Archives
October 2025
Categories
All
Social Work
|
|
|
|
| ||||||||||||||||||||||||
SITE MAP
SiteNIRATHANKA |
POSHOUR OTHER WEBSITESSubscribe |
RSS Feed